Sign In

By signing in or creating an account, you agree with Associated Broadcasting Company's Terms & Conditions and Privacy Policy.

KBC 14: ‘ನಿಮ್ಮದು ಕೆಟ್ಟ ಸಿನಿಮಾವಂತೆ’: ಅಭಿಮಾನಿ​ಯ ನೇರ ಮಾತಿಗೆ ಅಮಿತಾಭ್​​ ನೀಡಿದ ಪ್ರತಿಕ್ರಿಯೆ ಏನು?

Amitabh Bachchan: ‘ಕೌನ್​ ಬನೇಗಾ ಕರೋಡ್​ಪತಿ’ ಕಾರ್ಯಕ್ರಮಕ್ಕೆ ಬಂದ ಸ್ಪರ್ಧಿಯೊಬ್ಬರು ನೇರವಾಗಿ ಇಂಥ ಮಾತು ಹೇಳಿದ್ದಾರೆ. ಇದನ್ನು ಕೇಳಿಸಿಕೊಂಡು ಅಮಿತಾಭ್​ ಬಚ್ಚನ್​ ಅವರಿಗೆ ಶಾಕ್​ ಆಗಿದೆ.

KBC 14: ‘ನಿಮ್ಮದು ಕೆಟ್ಟ ಸಿನಿಮಾವಂತೆ’: ಅಭಿಮಾನಿ​ಯ ನೇರ ಮಾತಿಗೆ ಅಮಿತಾಭ್​​ ನೀಡಿದ ಪ್ರತಿಕ್ರಿಯೆ ಏನು?
ಅಮಿತಾಭ್ ಬಚ್ಚನ್
Follow us
TV9 Web
| Updated By: ಮದನ್​ ಕುಮಾರ್​

Updated on:Sep 07, 2022 | 8:26 AM

ಲೆಜೆಂಡರಿ ನಟ ಅಮಿತಾಭ್​ ಬಚ್ಚನ್​ (Amitabh Bachchan) ಅವರು ನಿರೂಪಕನಾಗಿಯೂ ತಮ್ಮ ಛಾಪು ಮೂಡಿಸಿದ್ದಾರೆ. ಅವರು ನಡೆಸಿಕೊಡುವ ‘ಕೌನ್​ ಬನೇಗಾ ಕರೋಡ್​ಪತಿ’ (Kaun Banega Crorepati) ಕಾರ್ಯಕ್ರಮವನ್ನು ಕೋಟ್ಯಂತರ ಮಂದಿ ನೋಡುತ್ತಾರೆ. ಅಮಿತಾಭ್​ ಬಚ್ಚನ್​ ಅವರು ಕಾರ್ಯಕ್ರಮ ನಡೆಸಿಕೊಡುವ ರೀತಿಗೆ ಎಲ್ಲರೂ ಫಿದಾ ಆಗಿದ್ದಾರೆ. ಸದ್ಯ ಈ ಕಾರ್ಯಕ್ರಮದ 14ನೇ ಸೀಸನ್​ (KBC 14) ನಡೆಯುತ್ತಿದೆ. ಇದರಲ್ಲಿ ಭಾಗವಹಿಸುವ ಸ್ಪರ್ಧಿಗಳ ಜೊತೆ ಬಿಗ್​ ಬಿ​ ಅವರು ತುಂಬ ಸ್ನೇಹಪೂರ್ವಕವಾಗಿ ನಡೆದುಕೊಳ್ಳುತ್ತಾರೆ. ಈಗ ಅಮಿತಾಭ್​ ಬಚ್ಚನ್​ ಅವರ ಅಭಿಮಾನಿಯೊಬ್ಬರು ‘ಕೌನ್​ ಬನೇಗಾ ಕರೋಡ್​ಪತಿ’ ಕಾರ್ಯಕ್ರಮದ ಹಾಟ್​ ಸೀಟ್​ನಲ್ಲಿ ಕುಳಿತು ‘ನಿಮ್ಮದು ಕೆಟ್ಟ ಸಿನಿಮಾವಂತೆ’ ಎಂದು ನೇರವಾಗಿ ಹೇಳಿದ್ದಾರೆ. ಅದಕ್ಕೆ ಅಮಿತಾಭ್​ ಬಚ್ಚನ್​ ಅವರು ತಮ್ಮದೇ ರೀತಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

‘ಕೌನ್​ ಬನೇಗಾ ಕರೋಡ್​ಪತಿ’ ಕಾರ್ಯಕ್ರಮಕ್ಕೆ ದೇಶದ ಮೂಲೆಮೂಲೆಯಿಂದ ಹಲವು ವ್ಯಕ್ತಿಗಳು ಬರುತ್ತಾರೆ. ಈ ವಾರ ಕೃಷ್ಣ ದಾಸ್​ ಎಂಬುವವರು ಬಂದಿದ್ದಾರೆ. ಅವರ ಜೊತೆ ಅಮಿತಾಭ್​ ನಡೆಸಿದ ಮಾತುಕಥೆ ಸಖತ್​ ಫನ್ನಿ ಆಗಿದೆ. ಅದರ ಪ್ರೋಮೋವನ್ನು ಸೋನಿ ವಾಹಿನಿ ಹಂಚಿಕೊಂಡಿದ್ದು, ಸಿಕ್ಕಾಪಟ್ಟೆ ವೈರಲ್​ ಆಗಿದೆ.

ಇದನ್ನೂ ಓದಿ
Image
ಸಿದ್ದಗಂಗಾ ಶ್ರೀಗಳ ಪಾತ್ರದಲ್ಲಿ ಅಮಿತಾಭ್ ಬಚ್ಚನ್​?; ಸಿದ್ಧವಾಗುತ್ತಿದೆ ಮಿನಿ ಸಿನಿ ಸೀರಿಸ್​
Image
ಅಮಿತಾಭ್​ ಬಚ್ಚನ್​ ಸಿನಿಮಾಗೆ ತಡೆಕೋರಿ ಅರ್ಜಿ ಸಲ್ಲಿಸಿದ ವ್ಯಕ್ತಿಗೆ 10 ಲಕ್ಷ ರೂಪಾಯಿ ದಂಡ ವಿಧಿಸಿದ ಕೋರ್ಟ್​
Image
79ರ ಪ್ರಾಯದ ಅಮಿತಾಭ್​ ಆರೋಗ್ಯದ ಬಗ್ಗೆ ಮೂಡಿದೆ ಆತಂಕ; ಒಂದೇ ಟ್ವೀಟ್​ನಿಂದ ಗಾಬರಿಗೊಳಿಸಿದ ಬಿಗ್​ ಬಿ
Image
ಅಮಿತಾಭ್​ ಬಚ್ಚನ್​ ವ್ಯಕ್ತಿತ್ವ ಎಂಥದ್ದು? ಇಂಚಿಂಚು ವಿವರಿಸಿದ ರಶ್ಮಿಕಾ ಮಂದಣ್ಣ

‘ನನ್ನ ಪತ್ನಿ ನನ್ನನ್ನು ಪ್ರೀತಿ ಮಾಡುವುದಿಲ್ಲ ಎನಿಸುತ್ತದೆ’ ಎಂದು ಕೃಷ್ಣ ದಾಸ್​ ಹೇಳಿದರು. ‘ಹಾಗೆ ಯಾಕೆ ಅಂದುಕೊಳ್ಳುತ್ತೀರಿ’ ಅಂತ ಅಮಿತಾಭ್​ ಪ್ರಶ್ನೆ ಮಾಡಿದರು. ‘ಯಾಕೆಂದರೆ, ನಾನು ನಿಮ್ಮ ಸಿನಿಮಾಗಳನ್ನು ನೋಡುವಾಗಲೆಲ್ಲ ನನ್ನ ಹೆಂಡತಿ ಬಂದು ಅಂದೆಂಥ ಕೆಟ್ಟ ಸಿನಿಮಾ ನೋಡ್ತಿದ್ದೀರಿ ಅಂತ ಕೇಳ್ತಾಳೆ’ ಎಂದು ಕೃಷ್ಣ ದಾಸ್​ ಹೇಳಿದರು. ಈ ಮಾತು ಕೇಳಿ ಅಮಿತಾಭ್​ ಬಚ್ಚನ್​ ಅವರಿಗೆ ಶಾಕ್​ ಆಗಿದೆ.

‘ಮೊದಲು ನನಗೆ ಈ ನಿಮ್ಮ ಮಾತನ್ನು ಅರಗಿಸಿಕೊಳ್ಳಲು ಬಿಡಿ. ನಾನು ಕೆಟ್ಟ ಸಿನಿಮಾ ಮಾಡ್ತೇನಾ’ ಎಂದು ತಮಗೆ ತಾವೇ ಪ್ರಶ್ನೆ ಮಾಡಿಕೊಂಡ ಅಮಿತಾಭ್​ ಬಚ್ಚನ್​ ಅವರು ಹಣೆ ಚಚ್ಚಿಕೊಂಡರು. ಇವರಿಬ್ಬರ ನಡುವಿನ ಸಂಭಾಷಣೆ ಕೇಳಿ ವೀಕ್ಷಕರೆಲ್ಲರೂ ಬಿದ್ದು ಬಿದ್ದು ನಕ್ಕರು. ಸದ್ಯ ಸೋಶಿಯಲ್​ ಮೀಡಿಯಾದಲ್ಲಿ ಈ ವಿಡಿಯೋ ಸಖತ್​ ವೈರಲ್​ ಆಗಿದೆ.

ಅಮಿತಾಭ್​ ಬಚ್ಚನ್​ ಅವರಿಗೆ ಈಗ 79 ವರ್ಷ ವಯಸ್ಸು. ಅಕ್ಟೋಬರ್​ 11ರಂದು ಅವರು 80ನೇ ವಯಸ್ಸಿಗೆ ಕಾಲಿಡಲಿದ್ದಾರೆ. ಈ ಪ್ರಾಯದಲ್ಲೂ ಅವರು ದಣಿವರಿಯದ ಯುವಕನಂತೆ ಕೆಲಸ ಮಾಡುತ್ತಿದ್ದಾರೆ. ಅನೇಕ ಸಿನಿಮಾಗಳು ಅವರ ಕೈಯಲ್ಲಿವೆ. ಅವರು ನಟಿಸಿರುವ ‘ಬ್ರಹ್ಮಾಸ್ತ್ರ’, ‘ಗುಡ್​ಬೈ’ ಮುಂತಾದ ಸಿನಿಮಾಗಳು ಬಿಡುಗಡೆಗೆ ಸಜ್ಜಾಗಿವೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 8:26 am, Wed, 7 September 22

ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ