AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೀರ್ತಿ ಸುರೇಶ್​ನ ದೋಸೆ ಎಂದು ಹೀಯಾಳಿಸಿದ ಬಾಲಿವುಡ್ ಮಂದಿ; ನಟಿಯ ಉತ್ತರ ಏನು?

Keerthy Suresh: ಬಾಲಿವುಡ್​ನಲ್ಲಿ ಪಾಪರಾಜಿಗಳು ಕೀರ್ತಿ ಸುರೇಶ್ ಅವರನ್ನು ಅವಮಾನಿಸಿದ ಆರೋಪ ಕೇಳಿಬಂದಿದೆ. ಅವರನ್ನು ‘ಕೃತಿ’ ಮತ್ತು ‘ದೋಸೆ’ ಎಂದು ಕರೆದ ಘಟನೆ ವಿವಾದಕ್ಕೆ ಕಾರಣವಾಗಿದೆ. ಕೀರ್ತಿ ಅವರು ಈ ಅವಮಾನವನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಕೀರ್ತಿ ಸುರೇಶ್​ನ ದೋಸೆ ಎಂದು ಹೀಯಾಳಿಸಿದ ಬಾಲಿವುಡ್ ಮಂದಿ; ನಟಿಯ ಉತ್ತರ ಏನು?
ಕೀರ್ತಿ
 ಶ್ರೀಲಕ್ಷ್ಮೀ ಎಚ್
| Edited By: |

Updated on:Dec 30, 2024 | 7:52 AM

Share

ದಕ್ಷಿಣ ಭಾರತದ ಸಿನಿಮಾ ಹಾಗೂ ಬಾಲಿವುಡ್ ಎಂಬ ಬಗ್ಗೆ ಚರ್ಚೆ ನಿರಂತರವಾಗಿ ನಡೆಯುತ್ತಲೇ ಇರುತ್ತದೆ. ಇವುಗಳ ಮಧ್ಯೆಯೂ ದಕ್ಷಿಣದ ಹೀರೋ ಹಾಗೂ ಹೀರೋಯಿನ್​ಗಳು ಬಾಲಿವುಡ್​ಗೆ ಹೋಗಿ ಮಿಂಚಿದರೆ, ಅಲ್ಲಿನ ಕಲಾವಿದರು ದಕ್ಷಿಣಕ್ಕೆ ಬಂದ ಉದಾಹರಣೆ ಸಾಕಷ್ಟಿದೆ. ಈಗ ನಟಿ ಕೀರ್ತಿ ಸುರೇಶ್ ಅವರು ಬಾಲಿವುಡ್​ಗೆ ಹಾರಿದ್ದಾರೆ. ‘ಬೇಬಿ ಜಾನ್’ ಸಿನಿಮಾದಲ್ಲಿ ನಟಿಸಿ ಬಾಲಿವುಡ್​ನಲ್ಲಿ ಹೆಸರು ಮಾಡಿದ್ದಾರೆ. ಹೀಗಿರುವಾಗಲೇ ಅವರಿಗೆ ಬಾಲಿವುಡ್​ನಲ್ಲಿ ಅವಮಾನ ಆಗಿರುವ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಚರ್ಚೆಗಳು ನಡೆಯುತ್ತಿವೆ.

ಬಾಲಿವುಡ್​ನಲ್ಲಿ ಪಾಪರಾಜಿ ಸಂಸ್ಕೃತಿ ವಿಶಾಲವಾಗಿದೆ. ದಕ್ಷಿಣದ ಸ್ಟಾರ್​ಗಳು ಅಲ್ಲಿಗೆ ತೆರಳಿದರೂ ಸಾಕಷ್ಟು ಮಂದಿ ಅವರನ್ನು ಮುತ್ತಿಕೊಂಡು ವಿಡಿಯೋ ಹಾಗೂ ಫೋಟೋಗಳನ್ನು ಕ್ಲಿಕ್ಕಿಸಿಕೊಳ್ಳುತ್ತಾರೆ. ಇತ್ತೀಚೆಗೆ ಪಾಪರಾಜಿಗಳು ಕೀರ್ತಿ ಸುರೇಶ್ ಅವರ ವಿಡಿಯೋ ಸೆರೆ ಹಿಡಿದ್ದಾರೆ. ಈ ವೇಳೆ ಪಾಪರಾಜಿಗಳು ನಡೆದುಕೊಂಡ ರೀತಿ ಸರಿ ಇರಲಿಲ್ಲ ಎಂದು ಅನೇಕರು ಅಭಿಪ್ರಾಯ ಹೊರಹಾಕಿದ್ದಾರೆ. ಅಷ್ಟಕ್ಕೂ ಅವರು ಮಾಡಿದ್ದು ಏಂಬುದನ್ನು ನೋಡೋಣ.

ಇತ್ತೀಚೆಗೆ ಕೀರ್ತಿ ಸುರೇಶ್ ಅವರು ರೆಸ್ಟೋರೆಂಟ್ ಒಂದರಲ್ಲಿ ಕಾಣಿಸಿಕೊಂಡರು. ಆಗ ಪಾಪರಾಜಿಗಳು ಕೀರ್ತಿ ಸುರೇಶ್ ಅವರ ಫೋಟೋಗಳನ್ನು ಸೆರೆಹಿಡಿದರು. ಈ ವೇಳೆ ಅಲ್ಲಿದ್ದ ವ್ಯಕ್ತಿಯೊಬ್ಬ ಕೀರ್ತಿ ಸುರೇಶ್ ಹೆಸರನ್ನು ಕೃತಿ..ಕೃತಿ ಎಂದು ಕರೆದಿದ್ದಾನೆ. ಕೃತಿ ಸನೋನ್ ಬಾಲಿವುಡ್​ನಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ. ಈ ಕಾರಣಕ್ಕೆ ಹೆಸರನ್ನು ಗೊಂದಲ ಮಾಡಿಕೊಂಡ ಆ ವ್ಯಕ್ತಿ ಹೀಗೆ ಕರೆದಿರಬಹುದು ಎಂದಿಟ್ಟುಕೊಳ್ಳೋಣ.

ಆದರೆ, ಮತ್ತೋರ್ವ ಪಾಪರಾಜಿ ಕೀರ್ತಿ ಅವರನ್ನು ‘ದೋಸೆ’ ಎಂದು ಕರೆದಿದ್ದಾನೆ. ದೋಸೆ ದಕ್ಷಿಣ ಭಾರತದ ತಿಂಡಿ. ಅಲ್ಲದೆ, ಈ ಮೊದಲು ಕೀರ್ತಿ ಅವರು ದೋಸೆ ಎಂದರೆ ನಮಗೆ ಸಖತ್ ಇಷ್ಟ ಎಂದು ಹೇಳಿದ್ದರು. ಈ ಕಾರಣಕ್ಕೋ ಏನೋ ಕೀರ್ತಿ ಅವರನ್ನು ದೋಸೆ ಎಂದು ಕರೆದು ಹೀಯಾಳಿಸಿದ್ದಾನೆ. ಆದರೆ, ಕೀರ್ತಿ ಅವರು ಇದಕ್ಕೆ ಬೇಸರ ಮಾಡಿಕೊಂಡಿಲ್ಲ. ಬದಲಿಗೆ ಸರಿಯಾದ ಉತ್ತ ನೀಡಿದ್ದಾರೆ.

ಇದನ್ನೂ ಓದಿ: ಸಮಂತಾ ಜೊತೆ ಹೋಲಿಕೆಗೊಳಗಾಗಿ ಟ್ರೋಲ್ ಆದ ಕೀರ್ತಿ ಸುರೇಶ್

‘ಕೀರ್ತಿ ದೋಸೆ ಅಲ್ಲ, ಕೀರ್ತಿ ಸುರೇಶ್. ಆದರೆ, ದೋಸೆ ಎಂದರೆ ನಂಗೆ ಇಷ್ಟ’ ಎಂದು ಕೀರ್ತಿ ಸುರೇಶ್ ಅವರು ಹೇಳಿದ್ದಾರೆ. ಸದ್ಯ ‘ಬೇಬಿ ಜಾನ್’ ಸಿನಿಮಾ ಜನರನ್ನು ಇಂಪ್ರೆಸ್ ಮಾಡಲು ವಿಫಲವಾಗಿದೆ. ಈ ಚಿತ್ರ ಐದು ದಿನಕ್ಕೆ ಕೇವಲ 28 ಕೋಟಿ ರೂಪಾಯಿ ಗಳಿಕೆ ಮಾಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:46 am, Mon, 30 December 24

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ