AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕ್ಕಳ ಲೋಕದಲ್ಲಿ ಹೇಗಿದೆ ‘ಕೆಜಿಎಫ್​ 2’ ಕ್ರೇಜ್​? ಯಶ್​ ರೀತಿಯೇ ‘ಐ ಕಾಂಟ್​ ಅವಾಯ್ಡ್​..’ ಎಂದ ಪುಟಾಣಿ ಪ್ರತಿಭೆ

KGF Chapter 2: ಪ್ರತಿ ವೀಕೆಂಡ್​ನಲ್ಲಿ ‘ಡ್ರಾಮಾ ಜ್ಯೂನಿಯರ್ಸ್​’ ಮಕ್ಕಳು ಭರ್ಜರಿ ಮನರಂಜನೆ ನೀಡುತ್ತಾರೆ. ಈ ಬಾರಿ ‘ಕೆಜಿಎಫ್​: ಚಾಪ್ಟರ್​ 2’ ಥೀಮ್​ನಲ್ಲಿ ಸ್ಕಿಟ್​ ಮಾಡಲಿದ್ದಾರೆ.

ಮಕ್ಕಳ ಲೋಕದಲ್ಲಿ ಹೇಗಿದೆ ‘ಕೆಜಿಎಫ್​ 2’ ಕ್ರೇಜ್​? ಯಶ್​ ರೀತಿಯೇ ‘ಐ ಕಾಂಟ್​ ಅವಾಯ್ಡ್​..’ ಎಂದ ಪುಟಾಣಿ ಪ್ರತಿಭೆ
ಡ್ರಾಮಾ ಜ್ಯೂನಿಯರ್ಸ್
Follow us
TV9 Web
| Updated By: ಮದನ್​ ಕುಮಾರ್​

Updated on: Apr 13, 2022 | 9:05 AM

ಬಹುನಿರೀಕ್ಷಿತ ‘ಕೆಜಿಎಫ್​: ಚಾಪ್ಟರ್​ 2’ (KGF Chapter 2) ಸಿನಿಮಾದ ಬಿಡುಗಡೆಗೆ ಕ್ಷಣಗಣನೆ ಶುರುವಾಗಿದೆ. ದೇಶಾದ್ಯಂತ ಸಾವಿರಾರು ಚಿತ್ರಮಂದಿರಗಳಲ್ಲಿ ಅಬ್ಬರಿಸಲು ಈ ಸಿನಿಮಾ ಸಜ್ಜಾಗಿದೆ. ಯಶ್​ (Yash) ನಟನೆ, ಆ್ಯಕ್ಷನ್​ ನೋಡಲು ಅಭಿಮಾನಿಗಳು ತುದಿಗಾಲಿನಲ್ಲಿ ನಿಂತು ಕಾಯುತ್ತಿದ್ದಾರೆ. ಈಗಾಗಲೇ ಮೊದಲ ದಿನದ ಎಲ್ಲ ಟಿಕೆಟ್​ಗಳು ಸೋಲ್ಡ್​ ಔಲ್ಡ್​ ಆಗಿವೆ. ಕರ್ನಾಟಕದಲ್ಲಿ ಮಾತ್ರವಲ್ಲದೇ ಪರರಾಜ್ಯಗಳಲ್ಲೂ ‘ಕೆಜಿಎಫ್​ 2’ ಸಿನಿಮಾ ಧೂಳೆಬ್ಬಿಸುವುದು ಖಚಿತವಾಗಿದೆ. ಪ್ರಶಾಂತ್​ ನೀಲ್​ ಅವರು ಈ ಬಾರಿ ಯಾವ ರೀತಿ ಮೋಡಿ ಮಾಡಲಿದ್ದಾರೆ ಎಂಬುದನ್ನು ತಿಳಿದುಕೊಳ್ಳುವ ಸಮಯ ಹತ್ತಿರವಾಗಿದೆ. ಉತ್ತರ ಭಾರತದಲ್ಲೂ ಈ ಚಿತ್ರಕ್ಕೆ ಅತ್ಯುತ್ತಮ ಓಪನಿಂಗ್​ ಸಿಗಲಿದೆ. ಇಷ್ಟೆಲ್ಲ ಕ್ರೇಜ್​ ಸೃಷ್ಟಿ ಮಾಡಿರುವ ಸಿನಿಮಾ ಬಗ್ಗೆ ಮಕ್ಕಳು ಕೂಡ ಗುಂಗು ಹತ್ತಿಸಿಕೊಂಡಿದ್ದಾರೆ. ನಟ ಯಶ್​ ಅವರಿಗೆ ಎಲ್ಲ ವಯೋಮಾನದ ಅಭಿಮಾನಿಗಳು ಇದ್ದಾರೆ. ಚಿಕ್ಕ ಮಕ್ಕಳು ಕೂಡ ಅವರನ್ನು ಇಷ್ಟಪಡುತ್ತಾರೆ. ಈಗ ‘ಡ್ರಾಮಾ ಜ್ಯೂನಿಯರ್ಸ್​’ (Drama Juniors 4) ವೇದಿಕೆಯಲ್ಲಿ ‘ಕೆಜಿಎಫ್​: ಚಾಪ್ಟರ್​ 2’ ರೀತಿ ಸ್ಕಿಟ್​ ಮಾಡಲಾಗಿದೆ. ಅದನ್ನು ಕಂಡು ಜಡ್ಜ್​ಗಳಾದ ರವಿಚಂದ್ರನ್​, ರಚಿತಾ ರಾಮ್​, ಲಕ್ಷ್ಮೀ ಅವರು ಬಿದ್ದು ಬಿದ್ದು ನಕ್ಕಿದ್ದಾರೆ.

ಜೀ ಕನ್ನಡ ವಾಹಿನಿಯಲ್ಲಿ ‘ಡ್ರಾಮಾ ಜ್ಯೂನಿಯರ್ಸ್​’ ನಾಲ್ಕನೇ ಸೀಸನ್​ ಆರಂಭ ಆಗಿದೆ. ಪ್ರತಿ ವೀಕೆಂಡ್​ನಲ್ಲಿ ಭರ್ಜರಿ ಮನರಂಜನೆ ನೀಡಲು ಮಕ್ಕಳು ಒಂದಕ್ಕಿಂತ ಒಂದು ಸೂಪರ್​ ಆದ ಸ್ಕಿಟ್​ಗಳ ಮೂಲಕ ವೇದಿಕೆ ಏರುತ್ತಿದ್ದಾರೆ. ಈ ಬಾರಿ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದ ಟ್ರೇಲರ್​ ಥೀಮ್​ನಲ್ಲಿ ಮಕ್ಕಳು ಅಭಿನಯಿಸಿದ್ದಾರೆ. ಆದರಲ್ಲಿ ಒಂದು ಟ್ವಿಸ್ಟ್​ ಇದೆ. ಯಶ್​ ನಟನೆಯ ‘ಕೆಜಿಎಫ್​ 2’ ಟ್ರೇಲರ್​ ಗಂಭೀರವಾಗಿ ಮೂಡಿಬಂದಿದೆ. ಆದರೆ ‘ಡ್ರಾಮಾ ಜ್ಯೂನಿಯರ್ಸ್​’ ಪುಟಾಣಿಗಳು ಕಾಮಿಡಿ ರೀತಿಯಲ್ಲಿ ಅದನ್ನು ಅಳವಡಿಸಿಕೊಂಡಿದ್ದಾರೆ.

‘ವಾಯ್ಲೆನ್ಸ್​.. ವಾಯ್ಲೆನ್ಸ್​.. ವಾಯ್ಲೆನ್ಸ್​..’ ಎಂದು ‘ಕೆಜಿಎಫ್​ 2’ ಟ್ರೇಲರ್​ನಲ್ಲಿ ಯಶ್​ ಹೊಡೆದಿರುವ ಡೈಲಾಗ್​ ಸಖತ್​ ಟ್ರೆಂಡ್​ ಆಗಿದೆ. ಅದಕ್ಕೆ ಹಾಸ್ಯದ ಸ್ಪರ್ಶ ನೀಡಿದ್ದಾರೆ ‘ಡ್ರಾಮಾ ಜ್ಯೂನಿಯರ್ಸ್​’ ಮಕ್ಕಳು. ‘ಕಾಮಿಡಿ ಕಾಮಿಡಿ ಕಾಮಿಡಿ.. ಐ ಡೋಂಟ್​ ಲೈಕ್​ ಇಟ್​. ಐ ಅವಾಯ್ಡ್​.. ಬಟ್​ ಕಾಮಿಡಿ ಲೈಕ್ಸ್​ ಮಿ.. ಐ ಕಾಂಟ್​ ಅವಾಯ್ಡ್​’ ಎಂದು ಪುಟಾಣಿ ಪ್ರತಿಭೆಗಳು ಡೈಲಾಗ್ ಹೊಡೆದಿರುವುದು ಕಂಡು ರವಿಚಂದ್ರನ್​, ಲಕ್ಷ್ಮೀ, ರಚಿತಾ ರಾಮ್​ ಸಖತ್​ ಎಂಜಾಯ್​ ಮಾಡಿದ್ದಾರೆ. ಜೀ ಕನ್ನಡ ವಾಹಿನಿಯು ಈ ಕಾರ್ಯಕ್ರಮದ ಪ್ರೋಮೋ ಹಂಚಿಕೊಂಡಿದ್ದು, ವೀಕ್ಷಕರಲ್ಲಿ ನಿರೀಕ್ಷೆ ಹುಟ್ಟುಹಾಕಿದೆ. ಶನಿವಾರ ಮತ್ತು ಭಾನುವಾರ ರಾತ್ರಿ 7.30ಕ್ಕೆ ‘ಡ್ರಾಮಾ ಜ್ಯೂನಿಯರ್ಸ್​ 4’ ಪ್ರಸಾರ ಆಗಲಿದೆ. ಈ ಬಾರಿ ಜಡ್ಜ್​ ಸ್ಥಾನಕ್ಕೆ ರವಿಚಂದ್ರನ್​ ಆಗಮಿಸಿರುವುದರಿಂದ ಕಾರ್ಯಕ್ರಮದ ಮೆರುಗು ಹೆಚ್ಚಿದೆ.

View this post on Instagram

A post shared by Zee Kannada (@zeekannada)

‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದ ವಿಚಾರಕ್ಕೆ ಬರೋದಾದರೆ, ಏ.14ರಂದು ಈ ಚಿತ್ರ ವಿಶ್ವಾದ್ಯಂತ ತೆರೆಕಾಣಲಿದೆ. ಯಶ್​, ಶ್ರೀನಿಧಿ ಶೆಟ್ಟಿ, ಪ್ರಕಾಶ್​ ರಾಜ್​, ಸಂಜಯ್​ ದತ್​, ರವೀನಾ ಟಂಡನ್​, ರಾವ್​ ರಮೇಶ್​, ಅರ್ಚನಾ ಜೋಯಿಸ್​ ಮುಂತಾದ ಕಲಾವಿದರ ನಟನೆಯನ್ನು ನೋಡಲು ಫ್ಯಾನ್ಸ್​ ಕಾತರದಿಂದ ಕಾಯುತ್ತಿದ್ದಾರೆ. ಹಿಂದಿ ಮಾರುಕಟ್ಟೆಯಲ್ಲಿ ಈ ಚಿತ್ರ ಬ್ಲಾಕ್​ಬಸ್ಟರ್​ ಹಿಟ್​ ಆಗಲಿದೆ ಎಂಬ ನಿರೀಕ್ಷೆ ಇದೆ. ‘ಕೆಜಿಎಫ್​ 2’ ಎದುರು ಪೈಪೋಟಿ ನೀಡಲು ಬಾಲಿವುಡ್​ನ ‘ಜೆರ್ಸಿ’ ಸಿನಿಮಾ ಸಿದ್ಧವಾಗಿತ್ತು. ಆದರೆ ಕೊನೇ ಕ್ಷಣದಲ್ಲಿ ಯಶ್​ ಹವಾ ಕಂಡು ‘ಜೆರ್ಸಿ’ ಸೈಲೆಂಟ್​ ಆಗಿದೆ. ಶಾಹಿದ್​ ಕಪೂರ್​ ನಟನೆಯ ಆ ಸಿನಿಮಾವನ್ನು ಒಂದು ವಾರ ತಡವಾಗಿ ರಿಲೀಸ್​ ಮಾಡಲು ಚಿತ್ರತಂಡ ನಿರ್ಧರಿಸಿದೆ.

ಇದನ್ನೂ ಓದಿ:

‘ಕೆಜಿಎಫ್​: ಚಾಪ್ಟರ್​ 2’ ಬಿಡುಗಡೆಗೂ ಮುನ್ನ ಯಶ್​ ಅಭಿಮಾನಿಗಳೇ ಮಾಡಿದ್ರು ದಾಖಲೆ; ಇಲ್ಲಿದೆ ವಿಡಿಯೋ

‘ಕೆಜಿಎಫ್​: ಚಾಪ್ಟರ್​ 2’ ರಿಲೀಸ್​ ಹೊಸ್ತಿಲಲ್ಲಿ ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿ ದೇವರ ದರ್ಶನ ಪಡೆದ ಯಶ್​

ಹೇಳಿಕೆ ಮೂಲಕ ಮುತ್ಸದ್ದಿತನದ ಪರಿಚಯ ನೀಡಿದ ಮಾಜಿ ಪ್ರಧಾನಿ ದೇವೇಗೌಡ
ಹೇಳಿಕೆ ಮೂಲಕ ಮುತ್ಸದ್ದಿತನದ ಪರಿಚಯ ನೀಡಿದ ಮಾಜಿ ಪ್ರಧಾನಿ ದೇವೇಗೌಡ
ಅಮೆರಿಕದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಹೆಸರಲ್ಲಿ ಅಣ್ಣಾಮಲೈ ಪೂಜೆ
ಅಮೆರಿಕದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಹೆಸರಲ್ಲಿ ಅಣ್ಣಾಮಲೈ ಪೂಜೆ
ತಾಯಿಯ ತ್ಯಾಗ... ತಂದೆಯ ಪರಿಶ್ರಮ: ನನ್ನೆಲ್ಲಾ ಸಾಧನೆಗೆ ಹೆತ್ತವರೇ ಕಾರಣ..!
ತಾಯಿಯ ತ್ಯಾಗ... ತಂದೆಯ ಪರಿಶ್ರಮ: ನನ್ನೆಲ್ಲಾ ಸಾಧನೆಗೆ ಹೆತ್ತವರೇ ಕಾರಣ..!
ಯುದ್ಧ ಬೇಡವೆಂಬ ತಮ್ಮ ಮಾತನ್ನು ಮಾಡಿಫೈ ಮಾಡಿ ಹೇಳಿದ ತಿಮ್ಮಾಪುರ
ಯುದ್ಧ ಬೇಡವೆಂಬ ತಮ್ಮ ಮಾತನ್ನು ಮಾಡಿಫೈ ಮಾಡಿ ಹೇಳಿದ ತಿಮ್ಮಾಪುರ
ಸಿಎಂ ಸಿದ್ದರಾಮಯ್ಯ ಯಾವತ್ತೂ ತಾಳ್ಮೆ ಕಳೆದುಕೊಳ್ಳಲ್ಲ: ಸಚಿವ ತಂಗಡಿಗಿ
ಸಿಎಂ ಸಿದ್ದರಾಮಯ್ಯ ಯಾವತ್ತೂ ತಾಳ್ಮೆ ಕಳೆದುಕೊಳ್ಳಲ್ಲ: ಸಚಿವ ತಂಗಡಿಗಿ
ಪಾಕ್ ಪರ ಘೋಷಣೆ ಕೂಗುವವರ ನಿರ್ನಾಮಕ್ಕಾಗಿ ಹೋಮ ಯಜ್ಞ: ಮುತಾಲಿಕ್
ಪಾಕ್ ಪರ ಘೋಷಣೆ ಕೂಗುವವರ ನಿರ್ನಾಮಕ್ಕಾಗಿ ಹೋಮ ಯಜ್ಞ: ಮುತಾಲಿಕ್
ಮಹಿಳೆಯರು ಬಿಜೆಪಿ ಶಾಲು ಹೊದ್ದಿದ್ದರೆ ಭದ್ರತಾ ಲೋಪ ಗೊತ್ತಾಗುತಿತ್ತು: ಸಚಿವ
ಮಹಿಳೆಯರು ಬಿಜೆಪಿ ಶಾಲು ಹೊದ್ದಿದ್ದರೆ ಭದ್ರತಾ ಲೋಪ ಗೊತ್ತಾಗುತಿತ್ತು: ಸಚಿವ
ವ್ಯಾನಿಟಿ ಬ್ಯಾಗ್​ನಲ್ಲಿ ಚೂರಿ ಇರಲಿ: ಕಲ್ಲಡ್ಕ ಪ್ರಭಾಕರ ಭಟ್
ವ್ಯಾನಿಟಿ ಬ್ಯಾಗ್​ನಲ್ಲಿ ಚೂರಿ ಇರಲಿ: ಕಲ್ಲಡ್ಕ ಪ್ರಭಾಕರ ಭಟ್
ಸಿದ್ದರಾಮಯ್ಯ ಏನು ಮಾಡುತ್ತಾರೋ ಎಂಬ ಭಯವಂತೂ ಇದೆ: ನಾಡಗೌಡ
ಸಿದ್ದರಾಮಯ್ಯ ಏನು ಮಾಡುತ್ತಾರೋ ಎಂಬ ಭಯವಂತೂ ಇದೆ: ನಾಡಗೌಡ
ದೆವ್ವದ ಹಾಡಿಗೆ ಭಯಬಿದ್ದ ಸರಿಗಮಪ ಮನೋಜ್; ಇಲ್ಲಿದೆ ಫನ್ನಿ ವಿಡಿಯೋ
ದೆವ್ವದ ಹಾಡಿಗೆ ಭಯಬಿದ್ದ ಸರಿಗಮಪ ಮನೋಜ್; ಇಲ್ಲಿದೆ ಫನ್ನಿ ವಿಡಿಯೋ