AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅವನು ಬರ್ತಿದ್ದಾನೆ, ಅದೂ ಒನ್ ವೇನಲ್ಲಿ’; ಟಿವಿಯಲ್ಲಿ ಪ್ರಸಾರ ಕಾಣೋಕೆ ರೆಡಿ ಆಯ್ತು ‘ಕೆಜಿಎಫ್ 2’  

ಈ ಸಿನಿಮಾ ಹಿಂದಿ ಒಂದರಲ್ಲೇ 430+ ಕೋಟಿ ರೂಪಾಯಿ ಕಲೆಕ್ಷನ್ ಮಾಡಿತು. ಈ ಮೂಲಕ ಚಿತ್ರ ಗೆದ್ದು ಬೀಗಿತು. ಸಿನಿಮಾದ ಒಟ್ಟಾರೆ ಕಲೆಕ್ಷನ್ 1250 ಕೋಟಿ ರೂಪಾಯಿ ಆಗಿದೆ. ಈಗ ಜೀ ಕನ್ನಡ ವಾಹಿನಿ ಈ ಬ್ಲಾಕ್​​ಬಸ್ಟರ್ ಸಿನಿಮಾ ರಿಲೀಸ್ ಮಾಡಲು ರೆಡಿ ಆಗಿದೆ.

‘ಅವನು ಬರ್ತಿದ್ದಾನೆ, ಅದೂ ಒನ್ ವೇನಲ್ಲಿ’; ಟಿವಿಯಲ್ಲಿ ಪ್ರಸಾರ ಕಾಣೋಕೆ ರೆಡಿ ಆಯ್ತು ‘ಕೆಜಿಎಫ್ 2’  
ಯಶ್
TV9 Web
| Updated By: ರಾಜೇಶ್ ದುಗ್ಗುಮನೆ|

Updated on:Aug 12, 2022 | 3:32 PM

Share

‘ಕೆಜಿಎಫ್ ಚಾಪ್ಟರ್ 2’ ಸಿನಿಮಾ (KGF Chapter 2) ಏಪ್ರಿಲ್ 14ರಂದು ತೆರೆಗೆ ಬಂದು ಧೂಳೆಬ್ಬಿಸಿತು. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ 1,250 ಕೋಟಿ ರೂಪಾಯಿ ಗಳಿಕೆ ಮಾಡಿದ್ದು ಚಿತ್ರದ ಹೆಗ್ಗಳಿಕೆ. ಈ ಸಿನಿಮಾದಿಂದ ಕನ್ನಡ ಚಿತ್ರರಂಗಕ್ಕೆ ಮತ್ತಷ್ಟು ಮೈಲೇಜ್ ಸಿಕ್ಕಿದೆ. ಇತ್ತೀಚೆಗೆ ಸಿನಿಮಾ ಒಟಿಟಿಯಲ್ಲಿ ಪ್ರಸಾರ ಕಂಡಿತು. ಈಗ ಟಿವಿಯಲ್ಲಿ ‘ಕೆಜಿಎಫ್ ಚಾಪ್ಟರ್ 2’ ಪ್ರಸಾರ ಆಗೋಕೆ ರೆಡಿ ಆಗಿದೆ. ಈ ಬಗ್ಗೆ ಜೀ ಕನ್ನಡ ವಾಹಿನಿ ಘೋಷಣೆ ಮಾಡಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಖುಷಿ ಪಟ್ಟಿದ್ದಾರೆ.

‘ಕೆಜಿಎಫ್’ ಸಿನಿಮಾ 2018ರಲ್ಲಿ ತೆರೆಗೆ ಬಂತು. ಈ ಚಿತ್ರಕ್ಕೆ ಎರಡನೇ ಚಾಪ್ಟರ್​ ಯಾವಾಗ ಬರಲಿದೆ ಎಂದು ಫ್ಯಾನ್ಸ್ ಕಾದಿದ್ದರು. ಮೊದಲ ಚಾಪ್ಟರ್ ತೆರೆಕಂಡ ನಾಲ್ಕು ವರ್ಷಗಳ ಬಳಿಕ ‘ಕೆಜಿಎಫ್ 2’ ಸಿನಿಮಾ ರಿಲೀಸ್ ಆಯಿತು. ಪ್ರಶಾಂತ್ ನೀಲ್​ ನಿರ್ದೇಶನದ ಈ ಚಿತ್ರದಲ್ಲಿ ಯಶ್, ಸಂಜಯ್ ದತ್​, ರವೀನಾ ಟಂಡನ್, ಶ್ರೀನಿಧಿ ಶೆಟ್ಟಿ ಮೊದಲಾದವರು ನಟಿಸಿದ್ದಾರೆ. ಈ ಚಿತ್ರ ಮೊದಲ ದಿನವೇ ಹಲವು ದಾಖಲೆ ಬರೆಯಿತು. ಈ ಸಿನಿಮಾ ಹಿಂದಿ ಒಂದರಲ್ಲೇ 430+ ಕೋಟಿ ರೂಪಾಯಿ ಕಲೆಕ್ಷನ್ ಮಾಡಿತು. ಈ ಮೂಲಕ ಚಿತ್ರ ಗೆದ್ದು ಬೀಗಿತು. ಸಿನಿಮಾದ ಒಟ್ಟಾರೆ ಕಲೆಕ್ಷನ್ 1250 ಕೋಟಿ ರೂಪಾಯಿ ಆಗಿದೆ. ಈಗ ಜೀ ಕನ್ನಡ ವಾಹಿನಿ ಈ ಬ್ಲಾಕ್​​ಬಸ್ಟರ್ ಸಿನಿಮಾ ರಿಲೀಸ್ ಮಾಡಲು ರೆಡಿ ಆಗಿದೆ.

ಇದನ್ನೂ ಓದಿ
Image
Pushpa 2 Story: ರಾಕಿ ಭಾಯ್​ ರೀತಿ ವಿದೇಶಕ್ಕೆ ಹೋಗ್ತಾನಾ ಪುಷ್ಪರಾಜ್​? ‘ಕೆಜಿಎಫ್​ 2’ ಚಿತ್ರಕ್ಕೆ ‘ಪುಷ್ಪ 2’ ಕಥೆ ಹೋಲಿಕೆ
Image
‘ನಾವು ‘ಕೆಜಿಎಫ್​’ ರೀತಿಯ ಸಿನಿಮಾ ಮಾಡಿದ್ರೆ ಕಟು ಟೀಕೆ ವ್ಯಕ್ತವಾಗುತ್ತಿತ್ತು’: ಕರಣ್​ ಜೋಹರ್​ ಆರೋಪ
Image
‘ಕೆಜಿಎಫ್​’ ಆದ್ಮೇಲೆ 30 ಸಿನಿಮಾದಲ್ಲಿ ನಟಿಸಿದ ಕೃಷ್ಣ ರಾವ್; ‘ಮುದುಕನ ಲವ್​​ಸ್ಟೋರಿ’ ಚಿತ್ರದಲ್ಲಿ ಹೀರೋ ಪಾತ್ರ
Image
‘ಕೆಜಿಎಫ್​ 3’ ಸದ್ಯಕ್ಕಿಲ್ಲ: ಸ್ಪಷ್ಟನೆ ನೀಡಿದ ಹೊಂಬಾಳೆ ಫಿಲ್ಮ್ಸ್​ನ ಕಾರ್ತಿಕ್​ ಗೌಡ; ಅಂತೆ-ಕಂತೆಗಳಿಗೆ ಬ್ರೇಕ್​

ಜೀ ಕನ್ನಡ ವಾಹಿನಿ ‘ಕೆಜಿಎಫ್ 2’ ಚಿತ್ರದ ಕೆಲ ದೃಶ್ಯಗಳ ವಿಡಿಯೋವನ್ನು ಪೋಸ್ಟ್ ಮಾಡಿದೆ. ‘ಅವನು ಬರ್ತಿದ್ದಾನೆ.. ಅದೂ ಒನ್ ವೇಯಲ್ಲಿ. ರಾಕಿಂಗ್ ಸ್ಟೈಲಲ್ಲಿ’ ಎಂದು ಕ್ಯಾಪ್ಶನ್ ನೀಡಲಾಗಿದೆ.   ‘ಅತೀ ಶೀಘ್ರದಲ್ಲಿ ನಿಮ್ಮ ಮುಂದೆ ಕೆಜಿಎಫ್ 2’ ಎಂದು ಬರೆಯಲಾಗಿದೆ.

View this post on Instagram

A post shared by Zee Kannada (@zeekannada)

ಇದನ್ನೂ ಓದಿ: ‘ಕೆಜಿಎಫ್​ ಎರಡು ಪಾರ್ಟ್​ನಲ್ಲಿ ತರುವ ಬಗ್ಗೆ ಮೊದಲೇ ನಿರ್ಧಾರ ಆಗಿತ್ತು, ನಮ್ಮ ಬಳಿ ಸದ್ಯಕ್ಕೆ ಆ ಆಲೋಚನೆ ಇಲ್ಲ’: ಸುದೀಪ್

ಈ ತಿಂಗಳಾಂತ್ಯಕ್ಕೆ ಗಣೇಶ ಚತುರ್ಥಿ ಹಬ್ಬ ಇದೆ. ಹಬ್ಬದ ಸಮಯದಲ್ಲಿ ಹೊಸಹೊಸ ಬ್ಲಾಕ್​ಬಸ್ಟರ್​ ಚಿತ್ರಗಳನ್ನು ಟಿವಿಯಲ್ಲಿ ಪ್ರಸಾರ ಮಾಡಲಾಗುತ್ತದೆ. ಅದೇ ರೀತಿ, ‘ಕೆಜಿಎಫ್ 2’ ಕೂಡ ಗಣೇಶ ಚತುರ್ಥಿ ದಿನದಂದು ಪ್ರಸಾರವಾಗುವ ಸಾಧ್ಯತೆ ಇದೆ ಎಂದು ಫ್ಯಾನ್ಸ್ ಊಹಿಸುತ್ತಿದ್ದಾರೆ. ಈ ಸುದ್ದಿ ಕೇಳಿ ಯಶ್ ಫ್ಯಾನ್ಸ್ ಖುಷಿಯಾಗಿದ್ದಾರೆ. ಹಬ್ಬದ ದಿನ ಈ ಚಿತ್ರ ಪ್ರಸಾರ ಕಂಡರೆ ಒಳ್ಳೆಯ ಟಿಆರ್​ಪಿ ಸಿಗುವುದರಲ್ಲಿ ಯಾವುದೇ ಅನುಮಾನ ಇಲ್ಲ.

Published On - 3:32 pm, Fri, 12 August 22

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ