AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಣಿಗಲ್ ಉತ್ಸವದಲ್ಲಿ ಬಿಗ್ ಬಾಸ್ ವೀಕ್ಷಕರಿಗೆ ಕಿವಿಮಾತು ಹೇಳಿದ ಸುದೀಪ್

ಕಿಚ್ಚ ಸುದೀಪ್ ಇತ್ತೀಚೆಗೆ ಕುಣಿಗಲ್ ಉತ್ಸವದಲ್ಲಿ ಭಾಗವಹಿಸಿ, ಬಿಗ್ ಬಾಸ್ ಕನ್ನಡ ಸೀಸನ್ 12 ಫಿನಾಲೆ ಕುರಿತು ಮಾತನಾಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸ್ಪರ್ಧಿಗಳ ಅಭಿಮಾನಿಗಳ ನಡುವಿನ ಕಿತ್ತಾಟದ ಬಗ್ಗೆ ಸುದೀಪ್ ಪ್ರಸ್ತಾಪಿಸಿದರು. ವೀಕ್ಷಕರಿಗೆ ಅವರು ಕಿವಿಮಾತು ಹೇಳಿದ್ದಾರೆ. ಜನವರಿ 18ಕ್ಕೆ ವಿಜೇತರ ಹೆಸರು ಘೋಷಣೆಯಾಗಲಿದೆ.

ಕುಣಿಗಲ್ ಉತ್ಸವದಲ್ಲಿ ಬಿಗ್ ಬಾಸ್ ವೀಕ್ಷಕರಿಗೆ ಕಿವಿಮಾತು ಹೇಳಿದ ಸುದೀಪ್
ಸುದೀಪ್-ಗಿಲ್ಲಿ ನಟ
ರಾಜೇಶ್ ದುಗ್ಗುಮನೆ
|

Updated on:Jan 13, 2026 | 7:39 AM

Share

ಕಿಚ್ಚ ಸುದೀಪ್ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ ಆಗುತ್ತಾರೆ. ಇತ್ತೀಚೆಗೆ ಅವರು ‘ಕುಣಿಗಲ್ ಉತ್ಸವ’ಕ್ಕೆ ಅತಿಥಿಯಾಗಿ ತೆರಳಿದ್ದರು. ಈ ವೇಳೆ ವೇದಿಕೆ ಮೇಲೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಡಿಕೆ ಸುರೇಶ್ ಸೇರಿದಂತೆ ಅನೇಕರು ಇದ್ದರು. ನಿರಂಜನ್ ದೇಶಪಾಂಡೆ ಅವರು ಕಾರ್ಯಕ್ರಮ ನಡೆಸಿಕೊಟ್ಟಿದ್ದಾರೆ. ಈ ವೇದಿಕೆ ಮೇಲೆ ಸುದೀಪ್ ಮಾತನಾಡುವಾಗ ಅನೇಕರು ಗಿಲ್ಲಿ ಗಿಲ್ಲಿ (Gilli Nata) ಎಂದು ಕೂಗಿದ್ದಾರೆ. ಈ ವೇಳೆ ಸುದೀಪ್ ಕಿವಿಮಾತು ಹೇಳಿದ್ದಾರೆ.

ಈ ವಾರ ‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಫಿನಾಲೆ ನಡೆಯಲಿದೆ. ಶನಿವಾರ ಹಾಗೂ ಭಾನುವಾರ ಎಪಿಸೋಡ್ ಪ್ರಸಾರ ಕಾಣಲಿದೆ. ಇದಕ್ಕೆ ಕೌಂಟ್​ಡೌನ್ ಶುರುವಾಗಿದೆ. ಯಾರು ಗೆಲ್ಲುತ್ತಾರೆ ಎಂಬ ಕುತೂಹಲ ಮೂಡಿದೆ. ಗಿಲ್ಲಿ, ಅಶ್ವಿನಿ ಹಾಗೂ ಇತರ ಸ್ಪರ್ಧಿಗಳು ರೇಸ್​​ನಲ್ಲಿ ಇದ್ದಾರೆ. ಈಗ ಸುದೀಪ್ ಆಡಿದ ಮಾತು ಗಮನ ಸೆಳೆದಿದೆ.

ಇತ್ತೀಚೆಗೆ ಕುಣಿಗಲ್ ಉತ್ಸವ ಅದ್ದೂರಿಯಾಗಿ ನಡೆದಿದೆ. ಹ್ಯಾರಿಸ್ ನಲ್ಪಾಡ್ ಅವರ ಕೋರಿಕೆ ಮೇರೆಗೆ ಸುದೀಪ್ ಈ ಕಾರ್ಯಕ್ರಮಕ್ಕೆ ತೆರಳಿದ್ದರು. ವೇದಿಕೆ ಮೇಲೆ ನಿಂತು ಸಾವಿರಾರು ಜನರನ್ನು ನೋಡುವಾಗ ಸುದೀಪ್ ಅವರಿಗೆ ಖುಷಿ ಆಯಿತು. ಈ ವೇಳೆ ಅವರು ಬಿಗ್ ಬಾಸ್ ಬಗ್ಗೆ ಪ್ರಸ್ತಾಪ ಮಾಡಿದರು. ‘ಬಿಗ್ ಬಾಸ್ ಫಿನಾಲೆ ನೋಡ್ತೀರಾ’ ಎಂದು ಜನರ ಬಳಿ ಪ್ರಶ್ನೆ ಮಾಡಿದಾಗ, ಜನರು ‘ಹೌದು’ ಎಂದು ಕೂಗಿದರು.

‘ನಿಮ್ಮಿಷ್ಟದ ಸ್ಪರ್ಧಿಗಳಿಗೆ ವೋಟ್ ಮಾಡಿ. ಕಿತ್ತಾಡಿಕೊಳ್ಳಬೇಡಿ’ ಎಂದು ಕಿಚ್ಚ ಕಿವಿಮಾತು ಹೇಳಿದರು. ಸೋಶಿಯಲ್ ಮೀಡಿಯಾದಲ್ಲಿ ಇತ್ತೀಚೆಗೆ ಕಿತ್ತಾಟ ಜೋರಾಗಿದೆ. ಸ್ಪರ್ಧಿಗಳ ಅಭಿಮಾನಿಗಳ ಮಧ್ಯೆಯೇ ಕಿತ್ತಾಟ ನಡೆಯುತ್ತದೆ. ಈ ಕಾರಣದಿಂದ ಸುದೀಪ್ ಅವರು ಈ ರೀತಿಯ ಕಿವಿಮಾತು ಹೇಳಿರಬಹುದು ಎನ್ನಲಾಗುತ್ತಿದೆ.

ಇದನ್ನೂ ಓದಿ: ಕಿಚ್ಚ ಸುದೀಪ್ ಮಾತಿಗೂ ಬೆಲೆ ಕೊಡದ ಗಿಲ್ಲಿ; ಅಸಮಾಧಾನ ಹೊರಹಾಕಿದ ಬಿಗ್ ಬಾಸ್ ಬಿಗ್ ಬಾಸ್​ ಅಲ್ಲಿ ಯಾರು ಗೆಲ್ಲುತ್ತಾರೆ,ಯಾರು ಸೋಲುತ್ತಾರೆ ಎಂಬುದು ಜನರ ವೋಟ್​​ಗಳ ಮೇಲೆ ನಿರ್ಧಾರ ಆಗುತ್ತದೆ. ಈ ಬಾರಿ ಯಾರು ವಿನ್ ಆಗುತ್ತಾರೆ ಎಂಬ ಕುತೂಹಲ ಮೂಡಿದೆ. ಜನವರಿ 18ರಂದು ಈ ಪ್ರಶ್ನೆಗೆ ಉತ್ತರ ಸಿಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:37 am, Tue, 13 January 26

Follow Us
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ