AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBK9: ಮ್ಯಾಚ್​ ಫಿಕ್ಸಿಂಗ್​ ಆರೋಪದ ಮರು ವಾರವೇ ಬಿಗ್ ಬಾಸ್​ ಶೋಗೆ ಸುದೀಪ್​ ಗೈರು; ಮುನಿಸಿಕೊಂಡ್ರಾ ಕಿಚ್ಚ?

Bigg Boss Kannada: ಕಿಚ್ಚ ಸುದೀಪ್​ ಅವರು ಬಿಗ್​ ಬಾಸ್​ ಶೋ ತಪ್ಪಿಸಿಕೊಂಡಿದ್ದು ತೀರಾ ವಿರಳ. ವೀಕೆಂಡ್​ ಸಂಚಿಕೆಗಳಲ್ಲಿ ಅವರು ಇಲ್ಲ ಎಂದರೆ ಕಳೆಯೇ ಇರುವುದಿಲ್ಲ.

BBK9: ಮ್ಯಾಚ್​ ಫಿಕ್ಸಿಂಗ್​ ಆರೋಪದ ಮರು ವಾರವೇ ಬಿಗ್ ಬಾಸ್​ ಶೋಗೆ ಸುದೀಪ್​ ಗೈರು; ಮುನಿಸಿಕೊಂಡ್ರಾ ಕಿಚ್ಚ?
ಕಿಚ್ಚ ಸುದೀಪ್
TV9 Web
| Edited By: |

Updated on:Oct 22, 2022 | 9:40 PM

Share

ಕಳೆದ ವಾರ ‘ಬಿಗ್​ ಬಾಸ್​ ಕನ್ನಡ ಸೀಸನ್​ 9’ (Bigg Boss Kannada Season 9) ಶೋನಲ್ಲಿ ಕಿಚ್ಚ ಸುದೀಪ್​ ಅವರು ತುಂಬ ಕೋಪಗೊಂಡಿದ್ದರು. ಅದಕ್ಕೆ ಕಾರಣ ಆಗಿದ್ದು ಆರ್ಯವರ್ಧನ್​ ಗುರೂಜಿ (Aryavardhan Guruji) ಮಾಡಿದ ಒಂದು ಆರೋಪ. ಬಿಗ್​ ಬಾಸ್​ ಟಾಸ್ಕ್​ನಲ್ಲಿ ಮ್ಯಾಚ್​ ಫಿಕ್ಸಿಂಗ್ ಆಗಿರಬಹುದು ಎಂಬ ಅನುಮಾನ ಇದೆ ಎಂದು ಗುರೂಜಿ ಹೇಳಿದ್ದರು. ಅದನ್ನು ಕೇಳಿದ ಸುದೀಪ್​ಗೆ ಕೋಪ ನೆತ್ತಿಗೇರಿತ್ತು. ಈ ವೇದಿಕೆಗೆ ಇರುವ ಗೌರವ ಕಡಿಮೆ ಆಗಬಾರದು ಎಂದು ಅವರು ಖಡಕ್​ ಎಚ್ಚರಿಕೆ ನೀಡಿದ್ದರು. ಕೂಡಲೇ ಬ್ರೇಕ್​ ತೆಗೆದುಕೊಂಡು ಬಿರುಸಿನ ಮಾತಿಗೆ ಅಂತ್ಯ ಹಾಡಿದ್ದರು. ಕಾಕತಾಳೀಯ ಎಂಬಂತೆ ಈ ವಾರ ಬಿಗ್​ ಬಾಸ್​ ಶೋ ನಡೆಸಿಕೊಡಲು ಕಿಚ್ಚ ಸುದೀಪ್​ (Kichcha Sudeep) ಬಂದಿಲ್ಲ. ಅವರ ಅನುಪಸ್ಥಿತಿಯಲ್ಲೇ ವೀಕೆಂಡ್​ ಸಂಚಿಕೆ ಪ್ರಸಾರ ಆಗಿದೆ.

ಕಿಚ್ಚ ಸುದೀಪ್ ಅವರು ಮೊದಲ ಸೀಸನ್​ನಿಂದಲೂ ಬಿಗ್​ ಬಾಸ್​ ಶೋ ನಡೆಸಿಕೊಡುತ್ತಾ ಬಂದಿದ್ದಾರೆ. ಅವರ ನಿರೂಪಣೆಗೆ ಒಂದು ತೂಕ ಇದೆ. ಹಲವು ಬಗೆಯ ಮನಸ್ಥಿತಿ ಇರುವ ಸ್ಪರ್ಧಿಗಳನ್ನು ಅವರು ಚೆನ್ನಾಗಿ ನಿಭಾಯಿಸುತ್ತಾರೆ. ಎಂಥ ಸಂದರ್ಭ ಬಂದರೂ ಕಾರ್ಯಕ್ರಮ ಹಾದಿ ತಪ್ಪದ ರೀತಿಯಲ್ಲಿ ನೋಡಿಕೊಳ್ಳುತ್ತಾರೆ. ವೀಕೆಂಡ್​ ಸಂಚಿಕೆಗಳಲ್ಲಿ ಅವರು ಇಲ್ಲ ಎಂದರೆ ಕಳೆಯೇ ಇರುವುದಿಲ್ಲ. ‘ಬಿಗ್​ ಬಾಸ್​ ಕನ್ನಡ ಸೀಸನ್​ 9’ರ ನಾಲ್ಕನೇ ವಾರದ ವೀಕೆಂಡ್​ ಸಂಚಿಕೆಯಲ್ಲಿ ಅವರ ಅನುಪಸ್ಥಿತಿ ಕಾಡಿದೆ.

ಸುದೀಪ್​ ಅವರು ಬಿಗ್​ ಬಾಸ್​ ಶೋ ತಪ್ಪಿಸಿಕೊಂಡಿದ್ದು ತೀರಾ ವಿರಳ. ಕಳೆದ ಸೀಸನ್​ನಲ್ಲಿ ಅನಾರೋಗ್ಯದ ಕಾರಣದಿಂದ ಅವರು ಕೆಲವು ಸಂಚಿಕೆಗಳನ್ನು ನಡೆಸಿಕೊಡಲು ಸಾಧ್ಯವಾಗಿರಲಿಲ್ಲ. ಆದರೆ ಈ ಬಾರಿ ಅವರು ಗೈರು ಆಗಿರುವುದಕ್ಕೆ ಕಾರಣ ಏನು ಎಂದು ಅಭಿಮಾನಿಗಳು ತಲೆ ಕೆಡಿಸಿಕೊಂಡಿದ್ದಾರೆ. ಕಳೆದ ವಾರ ಗುರೂಜಿ ಅವರು ಬಿಗ್​ ಬಾಸ್​ ಬಗ್ಗೆ ಮಾಚ್​ ಫಿಕ್ಸಿಂಗ್​ ಆರೋಪ ಮಾಡಿದ್ದಕ್ಕೆ ಸುದೀಪ್​ ಕೋಪ ಮಾಡಿಕೊಂಡಿರಬಹುದೇ ಎಂಬ ಅನುಮಾನ ಕೂಡ ಮೂಡುವುದು ಸಹಜ. ಆದರೆ ಅಸಲಿಯತ್ತು ಬೇರೆಯೇ ಇದೆ.

ಇದನ್ನೂ ಓದಿ
Image
BBK9: ಬಿಗ್​ ಬಾಸ್​ ಮೇಲೆ ಮ್ಯಾಚ್​ ಫಿಕ್ಸಿಂಗ್​ ಆರೋಪ; ಗುರೂಜಿ ವಿರುದ್ಧ ಗುಡುಗಿದ ಸುದೀಪ್​
Image
BBK9: ಬಿಗ್​ ಬಾಸ್​ 2ನೇ ವಾರ ನವಾಜ್​ ಎಲಿಮಿನೇಟ್​; ದೊಡ್ಮನೆಯಲ್ಲಿ ನಡೆಯಲಿಲ್ಲ ಪ್ರಾಸದ ಆಟ
Image
BBK9: ಬಿಗ್​ ಬಾಸ್​ನಿಂದ ಐಶ್ವರ್ಯಾ ಪಿಸ್ಸೆ ಎಲಿಮಿನೇಟ್​; ಒಂದೇ ವಾರಕ್ಕೆ ಮುಗಿಯಿತು ದೊಡ್ಮನೆ ಆಟ
Image
ಆರ್ಯವರ್ಧನ್​ ಗುರೂಜಿ ಕುಟುಂಬದ ಆಸ್ತಿ 5 ಸಾವಿರ ಕೋಟಿ ರೂಪಾಯಿ; ಶಾಕ್​ ಆದ ಸ್ಪರ್ಧಿಗಳು

ಕಿಚ್ಚ ಸುದೀಪ್ ಅವರು ಸಿನಿಮಾದ ಜೊತೆಯಲ್ಲಿ ಕುಟುಂಬಕ್ಕೂ ಹೆಚ್ಚು ಮಹತ್ವ ನೀಡುತ್ತಾರೆ. ಪತ್ನಿ ಪ್ರಿಯಾ ಜೊತೆ ವಿವಾಹ ವಾರ್ಷಿಕೋತ್ಸವ ಆಚರಿಸಲು ಅವರು ವಿದೇಶಕ್ಕೆ ತೆರಳಿದ್ದಾರೆ. ಆ ಕಾರಣದಿಂದ ಈ ವಾರದ ವೀಕೆಂಡ್​ ಸಂಚಿಕೆಯನ್ನು ನಡೆಸಿಕೊಡಲು ಸಾಧ್ಯವಾಗಿಲ್ಲ. ಆದಷ್ಟು ಬೇಗ ಅವರನ್ನು ಬಿಗ್​ ಬಾಸ್​ ವೇದಿಕೆ ಮೇಲೆ ನೋಡಲು ಅಭಿಮಾನಿಗಳು ಕಾದಿದ್ದಾರೆ. ಈ ವಾರ ಯಾರು ಎಲಿಮಿನೇಟ್​ ಆಗುತ್ತಾರೆ ಎಂಬದನ್ನು ತಿಳಿದುಕೊಳ್ಳುವ ಕೌತುಕ ಕೂಡ ಹೆಚ್ಚಾಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 9:40 pm, Sat, 22 October 22

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ