AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳಾ ಆಯೋಗದ ಆರೋಪಕ್ಕೆ ಬಿಗ್ ಬಾಸ್ ಸ್ಪರ್ಧಿಗಳಿಂದಲೇ ಉತ್ತರ ಕೊಡಿಸಿದ ಸುದೀಪ್

ಮಹಿಳಾ ಸ್ಪರ್ಧಿಗಳನ್ನು ನರಕದಲ್ಲಿ ಇಟ್ಟಿದ್ದಕ್ಕೆ ಕೆಲವರಿಂದ ವಿರೋಧ ವ್ಯಕ್ತವಾಗಿತ್ತು. ಈ ವಿಚಾರಕ್ಕೆ ಸಂಬಂಧಿಸಿದಂತೆ ಮಹಿಳಾ ಆಯೋಗಕ್ಕೆ ದೂರು ನೀಡಲಾಗಿತ್ತು. ಈಗ ನರಕವನ್ನು ತೆಗೆದುಹಾಕಲಾಗಿದೆ. ಆದರೆ ‘ಬಿಗ್​ ಬಾಸ್​ ಕನ್ನಡ ಸೀಸನ್​ 11’ ಕಾರ್ಯಕ್ರಮದ ಮೇಲೆ ಕೇಳಿಬಂದ ಆರೋಪಕ್ಕೆ ಮಹಿಳಾ ಸ್ಪರ್ಧಿಗಳಿಂದಲೇ ಸುದೀಪ್​ ಅವರು ಸ್ಪಷ್ಟನೆ ಕೊಡಿಸಿದ್ದಾರೆ.

ಮಹಿಳಾ ಆಯೋಗದ ಆರೋಪಕ್ಕೆ ಬಿಗ್ ಬಾಸ್ ಸ್ಪರ್ಧಿಗಳಿಂದಲೇ ಉತ್ತರ ಕೊಡಿಸಿದ ಸುದೀಪ್
ಬಿಗ್​ ಬಾಸ್​ ಕನ್ನಡ ಸೀಸನ್​ 11
ಮದನ್​ ಕುಮಾರ್​
|

Updated on: Oct 13, 2024 | 10:02 PM

Share

‘ಬಿಗ್​ ಬಾಸ್​ ಕನ್ನಡ ಸೀಸನ್​ 11’ ಶೋನಲ್ಲಿ ಸ್ವರ್ಗ ಮತ್ತು ನರಕ ಎಂಬ ಕಾನ್ಸೆಪ್ಟ್​ ಪರಿಚಯಿಸಲಾಗಿತ್ತು. ನರಕದಲ್ಲಿ ಇದ್ದ ಮಹಿಳಾ ಸ್ಪರ್ಧಿಗಳಿಗೆ ಶೌಚಾಲಯ, ಕುಡಿಯುವ ನೀರು ಸೇರಿದಂತೆ ಕೆಲವು ಬೇಸಿಕ್​ ಸೌಕರ್ಯಗಳನ್ನು ನೀಡಿಲ್ಲ ಎಂಬ ಆರೋಪ ಕೆಲವರಿಂದ ಕೇಳಿಬಂದಿತ್ತು. ಅಲ್ಲದೇ, ಈ ಬಗ್ಗೆ ಮಹಿಳಾ ಆಯೋಗಕ್ಕೂ ದೂರು ನೀಡಲಾಗಿತ್ತು. ಬಿಗ್​ ಬಾಸ್​ ಕಾರ್ಯಕ್ರಮದ ಮೇಲೆ ಕೇಳಿಬಂದ ಈ ಆರೋಪದ ಬಗ್ಗೆ ಭಾನುವಾರದ (ಅ.13) ಎಪಿಸೋಡ್​ನಲ್ಲಿ ನಿರೂಪಕ ಕಿಚ್ಚ ಸುದೀಪ್​ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಅಲ್ಲದೇ, ಮಹಿಳಾ ಸ್ಪರ್ಧಿಗಳಿಂದಲೂ ಅವರು ಉತ್ತರ ಕೊಡಿಸಿದ್ದಾರೆ.

‘ಸೂಪರ್​ ಸಂಡೇ ವಿತ್ ಸುದೀಪ’ ಸಂಚಿಕೆಯನ್ನು ಆರಂಭಿಸುವಾಗಲೇ ಸುದೀಪ್ ಅವರು ಒಂದು ಪ್ರಶ್ನೆ ಕೇಳಿದರು. ‘ನರಕದಲ್ಲಿ ಇದ್ದಾಗ ಎಷ್ಟು ಖುಷಿ ಇತ್ತು? ಇದು ತುಂಬ ಮುಖ್ಯವಾದ ಪ್ರಶ್ನೆ. ಮಹಿಳಾ ಆಯೋಗದವರು ಆರೋಪ ಮಾಡಿದ್ದಾರೆ. ಅನ್ಯಾಯ, ಅನಾನುಕೂಲ ಆಗಿದೆ ಅಂತ ಹೇಳಿದ್ದಾರೆ. ಈ ಬಗ್ಗೆ ಉತ್ತರ ನೀವು ನೀಡಿ’ ಎಂದು ಕಿಚ್ಚ ಸುದೀಪ್​ ಹೇಳಿದ್ದಾರೆ.

ಬಿಗ್​ ಬಾಸ್​ ಮನೆಗೆ ಕಾಲಿಟ್ಟ ಮಹಿಳಾ ಸ್ಪರ್ಧಿಗಳ ಪೈಕಿ ಚೈತ್ರಾ ಕುಂದಾಪುರ, ಮಾಸನಾ, ಮೋಕ್ಷಿತಾ ಪೈ, ಅನುಷಾ ರೈ, ಐಶ್ವರ್ಯಾ ಸಿಂಧೋಗಿ ಅವರು ನರಕವಾಸ ಅನುಭವಿಸಿದ್ದರು. ಅವರೆಲ್ಲ ಈ ಪ್ರಶ್ನೆಗೆ ಉತ್ತರ ನೀಡಿದ್ದಾರೆ. ‘ಊಟದ್ದು ಬಿಟ್ಟರೆ ಬೇರೆ ಏನೂ ಸಮಸ್ಯೆ ಇರಲಿಲ್ಲ’ ಎಂದು ಮಾನಸಾ ಹೇಳಿದರು. ‘ದೊಡ್ಡ ಸಮಸ್ಯೆ ಏನೂ ಇರಲಿಲ್ಲ’ ಎಂದು ಚೈತ್ರಾ, ಮೋಕ್ಷಿತಾ, ಅನುಷಾ ಹೇಳಿದರು.

ಇದನ್ನೂ ಓದಿ: ‘ಸೋಲೋಕೆ ಬರ್ತೀರಿ, ನಾಚಿಕೆ ಆಗಬೇಕು’: ಬಿಗ್​ ಬಾಸ್​ ಸ್ಪರ್ಧಿಗಳಿಗೆ ಕ್ಲಾಸ್​ ತೆಗೆದುಕೊಂಡ ಜಗದೀಶ್

‘ನಾನು ನರಕದಲ್ಲಿ ತೊಂದರೆ ಅನುಭವಿಸಿಲ್ಲ. ನಮಗೆ ವಾಶ್​ ರೂಮ್​ ಬೇಕು ಎಂದು ಬಿಗ್​ ಬಾಸ್​ ಬಳಿ ಮನವಿ ಮಾಡಿದ ಕೂಡಲೇ ನರಕದ ಹೆಣ್ಮಕ್ಕಳು ಯಾವಾಗ ಬೇಕಿದ್ದರೂ ಸ್ವರ್ಗದ ವಾಶ್​ ರೂಮ್​ ಬಳಸಬಹುದು ಅಂತ ಅನುಮತಿ ಕೊಟ್ಟಿದ್ದರು. ಅಷ್ಟರಮಟ್ಟಿಗೆ ಸೂಕ್ಷ್ಮತೆಯಿಂದ ಸ್ಪಂದಿಸಿದ್ದಾರೆ’ ಎಂದು ಚೈತ್ರಾ ಕುಂದಾಪುರ ಹೇಳಿದ್ದಾರೆ. ಆ ಮೂಲಕ ತಮಗೆ ಯಾವುದೇ ತೊಂದರೆ ಆಗಿಲ್ಲ ಎಂದು ಎಲ್ಲ ಸ್ಪರ್ಧಿಗಳು ಹೇಳಿದ್ದಾರೆ. ‘ನಮ್ಮ ಶೋನಲ್ಲಿ ಇರುವ ಹೆಣ್ಮಕ್ಕಳ ಬಗ್ಗೆ ಕಾಳಜಿ ಇಟ್ಟಿದ್ದಕ್ಕೆ ಮಹಿಳಾ ಆಯೋಗಕ್ಕೆ ಧನ್ಯವಾದಗಳು’ ಎಂದಿದ್ದಾರೆ ಸುದೀಪ್​.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ದಿಢೀರ್​​ ಜಮೀರ್​ ಅಹ್ಮದ್​​ ಭೇಟಿಯಾದ ಡಿ.ಕೆ. ಸುರೇಶ್
ದಿಢೀರ್​​ ಜಮೀರ್​ ಅಹ್ಮದ್​​ ಭೇಟಿಯಾದ ಡಿ.ಕೆ. ಸುರೇಶ್
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್