AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳಾ ಆಯೋಗದ ಆರೋಪಕ್ಕೆ ಬಿಗ್ ಬಾಸ್ ಸ್ಪರ್ಧಿಗಳಿಂದಲೇ ಉತ್ತರ ಕೊಡಿಸಿದ ಸುದೀಪ್

ಮಹಿಳಾ ಸ್ಪರ್ಧಿಗಳನ್ನು ನರಕದಲ್ಲಿ ಇಟ್ಟಿದ್ದಕ್ಕೆ ಕೆಲವರಿಂದ ವಿರೋಧ ವ್ಯಕ್ತವಾಗಿತ್ತು. ಈ ವಿಚಾರಕ್ಕೆ ಸಂಬಂಧಿಸಿದಂತೆ ಮಹಿಳಾ ಆಯೋಗಕ್ಕೆ ದೂರು ನೀಡಲಾಗಿತ್ತು. ಈಗ ನರಕವನ್ನು ತೆಗೆದುಹಾಕಲಾಗಿದೆ. ಆದರೆ ‘ಬಿಗ್​ ಬಾಸ್​ ಕನ್ನಡ ಸೀಸನ್​ 11’ ಕಾರ್ಯಕ್ರಮದ ಮೇಲೆ ಕೇಳಿಬಂದ ಆರೋಪಕ್ಕೆ ಮಹಿಳಾ ಸ್ಪರ್ಧಿಗಳಿಂದಲೇ ಸುದೀಪ್​ ಅವರು ಸ್ಪಷ್ಟನೆ ಕೊಡಿಸಿದ್ದಾರೆ.

ಮಹಿಳಾ ಆಯೋಗದ ಆರೋಪಕ್ಕೆ ಬಿಗ್ ಬಾಸ್ ಸ್ಪರ್ಧಿಗಳಿಂದಲೇ ಉತ್ತರ ಕೊಡಿಸಿದ ಸುದೀಪ್
ಬಿಗ್​ ಬಾಸ್​ ಕನ್ನಡ ಸೀಸನ್​ 11
ಮದನ್​ ಕುಮಾರ್​
|

Updated on: Oct 13, 2024 | 10:02 PM

Share

‘ಬಿಗ್​ ಬಾಸ್​ ಕನ್ನಡ ಸೀಸನ್​ 11’ ಶೋನಲ್ಲಿ ಸ್ವರ್ಗ ಮತ್ತು ನರಕ ಎಂಬ ಕಾನ್ಸೆಪ್ಟ್​ ಪರಿಚಯಿಸಲಾಗಿತ್ತು. ನರಕದಲ್ಲಿ ಇದ್ದ ಮಹಿಳಾ ಸ್ಪರ್ಧಿಗಳಿಗೆ ಶೌಚಾಲಯ, ಕುಡಿಯುವ ನೀರು ಸೇರಿದಂತೆ ಕೆಲವು ಬೇಸಿಕ್​ ಸೌಕರ್ಯಗಳನ್ನು ನೀಡಿಲ್ಲ ಎಂಬ ಆರೋಪ ಕೆಲವರಿಂದ ಕೇಳಿಬಂದಿತ್ತು. ಅಲ್ಲದೇ, ಈ ಬಗ್ಗೆ ಮಹಿಳಾ ಆಯೋಗಕ್ಕೂ ದೂರು ನೀಡಲಾಗಿತ್ತು. ಬಿಗ್​ ಬಾಸ್​ ಕಾರ್ಯಕ್ರಮದ ಮೇಲೆ ಕೇಳಿಬಂದ ಈ ಆರೋಪದ ಬಗ್ಗೆ ಭಾನುವಾರದ (ಅ.13) ಎಪಿಸೋಡ್​ನಲ್ಲಿ ನಿರೂಪಕ ಕಿಚ್ಚ ಸುದೀಪ್​ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಅಲ್ಲದೇ, ಮಹಿಳಾ ಸ್ಪರ್ಧಿಗಳಿಂದಲೂ ಅವರು ಉತ್ತರ ಕೊಡಿಸಿದ್ದಾರೆ.

‘ಸೂಪರ್​ ಸಂಡೇ ವಿತ್ ಸುದೀಪ’ ಸಂಚಿಕೆಯನ್ನು ಆರಂಭಿಸುವಾಗಲೇ ಸುದೀಪ್ ಅವರು ಒಂದು ಪ್ರಶ್ನೆ ಕೇಳಿದರು. ‘ನರಕದಲ್ಲಿ ಇದ್ದಾಗ ಎಷ್ಟು ಖುಷಿ ಇತ್ತು? ಇದು ತುಂಬ ಮುಖ್ಯವಾದ ಪ್ರಶ್ನೆ. ಮಹಿಳಾ ಆಯೋಗದವರು ಆರೋಪ ಮಾಡಿದ್ದಾರೆ. ಅನ್ಯಾಯ, ಅನಾನುಕೂಲ ಆಗಿದೆ ಅಂತ ಹೇಳಿದ್ದಾರೆ. ಈ ಬಗ್ಗೆ ಉತ್ತರ ನೀವು ನೀಡಿ’ ಎಂದು ಕಿಚ್ಚ ಸುದೀಪ್​ ಹೇಳಿದ್ದಾರೆ.

ಬಿಗ್​ ಬಾಸ್​ ಮನೆಗೆ ಕಾಲಿಟ್ಟ ಮಹಿಳಾ ಸ್ಪರ್ಧಿಗಳ ಪೈಕಿ ಚೈತ್ರಾ ಕುಂದಾಪುರ, ಮಾಸನಾ, ಮೋಕ್ಷಿತಾ ಪೈ, ಅನುಷಾ ರೈ, ಐಶ್ವರ್ಯಾ ಸಿಂಧೋಗಿ ಅವರು ನರಕವಾಸ ಅನುಭವಿಸಿದ್ದರು. ಅವರೆಲ್ಲ ಈ ಪ್ರಶ್ನೆಗೆ ಉತ್ತರ ನೀಡಿದ್ದಾರೆ. ‘ಊಟದ್ದು ಬಿಟ್ಟರೆ ಬೇರೆ ಏನೂ ಸಮಸ್ಯೆ ಇರಲಿಲ್ಲ’ ಎಂದು ಮಾನಸಾ ಹೇಳಿದರು. ‘ದೊಡ್ಡ ಸಮಸ್ಯೆ ಏನೂ ಇರಲಿಲ್ಲ’ ಎಂದು ಚೈತ್ರಾ, ಮೋಕ್ಷಿತಾ, ಅನುಷಾ ಹೇಳಿದರು.

ಇದನ್ನೂ ಓದಿ: ‘ಸೋಲೋಕೆ ಬರ್ತೀರಿ, ನಾಚಿಕೆ ಆಗಬೇಕು’: ಬಿಗ್​ ಬಾಸ್​ ಸ್ಪರ್ಧಿಗಳಿಗೆ ಕ್ಲಾಸ್​ ತೆಗೆದುಕೊಂಡ ಜಗದೀಶ್

‘ನಾನು ನರಕದಲ್ಲಿ ತೊಂದರೆ ಅನುಭವಿಸಿಲ್ಲ. ನಮಗೆ ವಾಶ್​ ರೂಮ್​ ಬೇಕು ಎಂದು ಬಿಗ್​ ಬಾಸ್​ ಬಳಿ ಮನವಿ ಮಾಡಿದ ಕೂಡಲೇ ನರಕದ ಹೆಣ್ಮಕ್ಕಳು ಯಾವಾಗ ಬೇಕಿದ್ದರೂ ಸ್ವರ್ಗದ ವಾಶ್​ ರೂಮ್​ ಬಳಸಬಹುದು ಅಂತ ಅನುಮತಿ ಕೊಟ್ಟಿದ್ದರು. ಅಷ್ಟರಮಟ್ಟಿಗೆ ಸೂಕ್ಷ್ಮತೆಯಿಂದ ಸ್ಪಂದಿಸಿದ್ದಾರೆ’ ಎಂದು ಚೈತ್ರಾ ಕುಂದಾಪುರ ಹೇಳಿದ್ದಾರೆ. ಆ ಮೂಲಕ ತಮಗೆ ಯಾವುದೇ ತೊಂದರೆ ಆಗಿಲ್ಲ ಎಂದು ಎಲ್ಲ ಸ್ಪರ್ಧಿಗಳು ಹೇಳಿದ್ದಾರೆ. ‘ನಮ್ಮ ಶೋನಲ್ಲಿ ಇರುವ ಹೆಣ್ಮಕ್ಕಳ ಬಗ್ಗೆ ಕಾಳಜಿ ಇಟ್ಟಿದ್ದಕ್ಕೆ ಮಹಿಳಾ ಆಯೋಗಕ್ಕೆ ಧನ್ಯವಾದಗಳು’ ಎಂದಿದ್ದಾರೆ ಸುದೀಪ್​.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್