AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳಾ ಆಯೋಗದ ಆರೋಪಕ್ಕೆ ಬಿಗ್ ಬಾಸ್ ಸ್ಪರ್ಧಿಗಳಿಂದಲೇ ಉತ್ತರ ಕೊಡಿಸಿದ ಸುದೀಪ್

ಮಹಿಳಾ ಸ್ಪರ್ಧಿಗಳನ್ನು ನರಕದಲ್ಲಿ ಇಟ್ಟಿದ್ದಕ್ಕೆ ಕೆಲವರಿಂದ ವಿರೋಧ ವ್ಯಕ್ತವಾಗಿತ್ತು. ಈ ವಿಚಾರಕ್ಕೆ ಸಂಬಂಧಿಸಿದಂತೆ ಮಹಿಳಾ ಆಯೋಗಕ್ಕೆ ದೂರು ನೀಡಲಾಗಿತ್ತು. ಈಗ ನರಕವನ್ನು ತೆಗೆದುಹಾಕಲಾಗಿದೆ. ಆದರೆ ‘ಬಿಗ್​ ಬಾಸ್​ ಕನ್ನಡ ಸೀಸನ್​ 11’ ಕಾರ್ಯಕ್ರಮದ ಮೇಲೆ ಕೇಳಿಬಂದ ಆರೋಪಕ್ಕೆ ಮಹಿಳಾ ಸ್ಪರ್ಧಿಗಳಿಂದಲೇ ಸುದೀಪ್​ ಅವರು ಸ್ಪಷ್ಟನೆ ಕೊಡಿಸಿದ್ದಾರೆ.

ಮಹಿಳಾ ಆಯೋಗದ ಆರೋಪಕ್ಕೆ ಬಿಗ್ ಬಾಸ್ ಸ್ಪರ್ಧಿಗಳಿಂದಲೇ ಉತ್ತರ ಕೊಡಿಸಿದ ಸುದೀಪ್
ಬಿಗ್​ ಬಾಸ್​ ಕನ್ನಡ ಸೀಸನ್​ 11
ಮದನ್​ ಕುಮಾರ್​
|

Updated on: Oct 13, 2024 | 10:02 PM

Share

‘ಬಿಗ್​ ಬಾಸ್​ ಕನ್ನಡ ಸೀಸನ್​ 11’ ಶೋನಲ್ಲಿ ಸ್ವರ್ಗ ಮತ್ತು ನರಕ ಎಂಬ ಕಾನ್ಸೆಪ್ಟ್​ ಪರಿಚಯಿಸಲಾಗಿತ್ತು. ನರಕದಲ್ಲಿ ಇದ್ದ ಮಹಿಳಾ ಸ್ಪರ್ಧಿಗಳಿಗೆ ಶೌಚಾಲಯ, ಕುಡಿಯುವ ನೀರು ಸೇರಿದಂತೆ ಕೆಲವು ಬೇಸಿಕ್​ ಸೌಕರ್ಯಗಳನ್ನು ನೀಡಿಲ್ಲ ಎಂಬ ಆರೋಪ ಕೆಲವರಿಂದ ಕೇಳಿಬಂದಿತ್ತು. ಅಲ್ಲದೇ, ಈ ಬಗ್ಗೆ ಮಹಿಳಾ ಆಯೋಗಕ್ಕೂ ದೂರು ನೀಡಲಾಗಿತ್ತು. ಬಿಗ್​ ಬಾಸ್​ ಕಾರ್ಯಕ್ರಮದ ಮೇಲೆ ಕೇಳಿಬಂದ ಈ ಆರೋಪದ ಬಗ್ಗೆ ಭಾನುವಾರದ (ಅ.13) ಎಪಿಸೋಡ್​ನಲ್ಲಿ ನಿರೂಪಕ ಕಿಚ್ಚ ಸುದೀಪ್​ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಅಲ್ಲದೇ, ಮಹಿಳಾ ಸ್ಪರ್ಧಿಗಳಿಂದಲೂ ಅವರು ಉತ್ತರ ಕೊಡಿಸಿದ್ದಾರೆ.

‘ಸೂಪರ್​ ಸಂಡೇ ವಿತ್ ಸುದೀಪ’ ಸಂಚಿಕೆಯನ್ನು ಆರಂಭಿಸುವಾಗಲೇ ಸುದೀಪ್ ಅವರು ಒಂದು ಪ್ರಶ್ನೆ ಕೇಳಿದರು. ‘ನರಕದಲ್ಲಿ ಇದ್ದಾಗ ಎಷ್ಟು ಖುಷಿ ಇತ್ತು? ಇದು ತುಂಬ ಮುಖ್ಯವಾದ ಪ್ರಶ್ನೆ. ಮಹಿಳಾ ಆಯೋಗದವರು ಆರೋಪ ಮಾಡಿದ್ದಾರೆ. ಅನ್ಯಾಯ, ಅನಾನುಕೂಲ ಆಗಿದೆ ಅಂತ ಹೇಳಿದ್ದಾರೆ. ಈ ಬಗ್ಗೆ ಉತ್ತರ ನೀವು ನೀಡಿ’ ಎಂದು ಕಿಚ್ಚ ಸುದೀಪ್​ ಹೇಳಿದ್ದಾರೆ.

ಬಿಗ್​ ಬಾಸ್​ ಮನೆಗೆ ಕಾಲಿಟ್ಟ ಮಹಿಳಾ ಸ್ಪರ್ಧಿಗಳ ಪೈಕಿ ಚೈತ್ರಾ ಕುಂದಾಪುರ, ಮಾಸನಾ, ಮೋಕ್ಷಿತಾ ಪೈ, ಅನುಷಾ ರೈ, ಐಶ್ವರ್ಯಾ ಸಿಂಧೋಗಿ ಅವರು ನರಕವಾಸ ಅನುಭವಿಸಿದ್ದರು. ಅವರೆಲ್ಲ ಈ ಪ್ರಶ್ನೆಗೆ ಉತ್ತರ ನೀಡಿದ್ದಾರೆ. ‘ಊಟದ್ದು ಬಿಟ್ಟರೆ ಬೇರೆ ಏನೂ ಸಮಸ್ಯೆ ಇರಲಿಲ್ಲ’ ಎಂದು ಮಾನಸಾ ಹೇಳಿದರು. ‘ದೊಡ್ಡ ಸಮಸ್ಯೆ ಏನೂ ಇರಲಿಲ್ಲ’ ಎಂದು ಚೈತ್ರಾ, ಮೋಕ್ಷಿತಾ, ಅನುಷಾ ಹೇಳಿದರು.

ಇದನ್ನೂ ಓದಿ: ‘ಸೋಲೋಕೆ ಬರ್ತೀರಿ, ನಾಚಿಕೆ ಆಗಬೇಕು’: ಬಿಗ್​ ಬಾಸ್​ ಸ್ಪರ್ಧಿಗಳಿಗೆ ಕ್ಲಾಸ್​ ತೆಗೆದುಕೊಂಡ ಜಗದೀಶ್

‘ನಾನು ನರಕದಲ್ಲಿ ತೊಂದರೆ ಅನುಭವಿಸಿಲ್ಲ. ನಮಗೆ ವಾಶ್​ ರೂಮ್​ ಬೇಕು ಎಂದು ಬಿಗ್​ ಬಾಸ್​ ಬಳಿ ಮನವಿ ಮಾಡಿದ ಕೂಡಲೇ ನರಕದ ಹೆಣ್ಮಕ್ಕಳು ಯಾವಾಗ ಬೇಕಿದ್ದರೂ ಸ್ವರ್ಗದ ವಾಶ್​ ರೂಮ್​ ಬಳಸಬಹುದು ಅಂತ ಅನುಮತಿ ಕೊಟ್ಟಿದ್ದರು. ಅಷ್ಟರಮಟ್ಟಿಗೆ ಸೂಕ್ಷ್ಮತೆಯಿಂದ ಸ್ಪಂದಿಸಿದ್ದಾರೆ’ ಎಂದು ಚೈತ್ರಾ ಕುಂದಾಪುರ ಹೇಳಿದ್ದಾರೆ. ಆ ಮೂಲಕ ತಮಗೆ ಯಾವುದೇ ತೊಂದರೆ ಆಗಿಲ್ಲ ಎಂದು ಎಲ್ಲ ಸ್ಪರ್ಧಿಗಳು ಹೇಳಿದ್ದಾರೆ. ‘ನಮ್ಮ ಶೋನಲ್ಲಿ ಇರುವ ಹೆಣ್ಮಕ್ಕಳ ಬಗ್ಗೆ ಕಾಳಜಿ ಇಟ್ಟಿದ್ದಕ್ಕೆ ಮಹಿಳಾ ಆಯೋಗಕ್ಕೆ ಧನ್ಯವಾದಗಳು’ ಎಂದಿದ್ದಾರೆ ಸುದೀಪ್​.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?