AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನನ್ನ ಕೆಲಸ ಕಿತ್ತುಕೊಳ್ಳಬೇಡಿ’; ಮಂಜು ಪಾವಗಡಗೆ ಸುದೀಪ್ ಹೀಗೆ ಹೇಳಿದ್ದೇಕೆ?​

ಬಿಗ್​ ಬಾಸ್​ ಮಿನಿ ಸೀಸನ್​ ಅಂತಿಮ ಹಂತಕ್ಕೆ ಬಂದಿದ್ದು, ಸುದೀಪ್​ ಇದನ್ನು ನಡೆಸಿಕೊಟ್ಟಿದ್ದಾರೆ. ಈ ವೇಳೆ ಕನ್ನಡ ಬಿಗ್​ ಬಾಸ್​ ಸೀಸನ್​ 8ರ ಬಹುತೇಕ ಸ್ಪರ್ಧಿಗಳು ಆಗಮಿಸಿದ್ದರು. ಮಂಜು ಕೂಡ ಹಾಜರಿ ಹಾಕಿದ್ದರು. ಸುದೀಪ್​ ಅವರ ಜತೆ ಮಂಜು ಮಾತುಕತೆ ನಡೆಸಿದ್ದಾರೆ.

‘ನನ್ನ ಕೆಲಸ ಕಿತ್ತುಕೊಳ್ಳಬೇಡಿ’; ಮಂಜು ಪಾವಗಡಗೆ ಸುದೀಪ್ ಹೀಗೆ ಹೇಳಿದ್ದೇಕೆ?​
ಮಂಜು ಪಾವಗಡ, ಕಿಚ್ಚ ಸುದೀಪ್
TV9 Web
| Edited By: |

Updated on: Sep 04, 2021 | 5:22 PM

Share

ಬಿಗ್​ ಬಾಸ್​ ಕನ್ನಡ ಸೀಸನ್​ 8ರಲ್ಲಿ ಸುದೀಪ್​ ಹಾಗೂ ಮಂಜು ಪಾವಗಡ ನಡುವೆ ನಡೆದ ಸಂಭಾಷಣೆ ಸಾಕಷ್ಟು ಗಮನ ಸೆಳೆದಿವೆ. ಇಬ್ಬರ ನಡುವೆ ಒಂದೊಳ್ಳೆಯ ಬಾಂಧವ್ಯ ಬೆಳೆದಿದೆ. ಇದೇ ಕಾರಣಕ್ಕೆ ಸುದೀಪ್​ ಅವರು ಮಂಜು ಕಾಲೆಳೆಯುತ್ತಿರುತ್ತಾರೆ. ಇದು ಅನೇಕ ಬಾರಿ ನಡೆದಿದೆ. ಈಗ ಸುದೀಪ್​ ಮತ್ತು ಮಂಜು ಪಾವಗಡ ಮತ್ತೆ ಬಿಗ್​ ಬಾಸ್​ ವೇದಿಕೆ ಏರಿದ್ದಾರೆ. ಇದಕ್ಕೆ ಕಾರಣವಾಗಿದ್ದು, ಬಿಗ್​ ಬಾಸ್​ ಮಿನಿ ಸೀಸನ್​. ಈ ಕಾರ್ಯಕ್ರಮ ಅಂತಿಮ ಹಂತಕ್ಕೆ ಬಂದಿದ್ದು, ಸುದೀಪ್​ ಇದನ್ನು ನಡೆಸಿಕೊಟ್ಟಿದ್ದಾರೆ. ಈ ವೇಳೆ ಕನ್ನಡ ಬಿಗ್​ ಬಾಸ್​ ಸೀಸನ್​ 8ರ ಬಹುತೇಕ ಸ್ಪರ್ಧಿಗಳು ಆಗಮಿಸಿದ್ದರು. ಮಂಜು ಕೂಡ ಹಾಜರಿ ಹಾಕಿದ್ದರು. ಸುದೀಪ್​ ಅವರ ಜತೆ ಮಂಜು ಮಾತುಕತೆ ನಡೆಸಿದ್ದಾರೆ.

‘ಮಂಜು ಹೇಗಿದ್ದೀರಿ? ಬಿಗ್​ ಬಾಸ್ ಮುಗಿಸಿದ ಒಂದು ವಾರ ಹೇಗಿತ್ತು?’ ಎಂದು ಪ್ರಶ್ನೆ ಮಾಡಿದ್ದಾರೆ ಸುದೀಪ್​. ಇದಕ್ಕೆ ಉತ್ತರಿಸಿದ ಮಂಜು ‘ಹೊಸ ಜಗತ್ತನ್ನೇ ನೋಡಿದಂತಾಗುತ್ತಿದೆ. ಮಾಧ್ಯಮಗಳಿಗೆ ಸಂದರ್ಶನ ಕೊಡುತ್ತಿರುವುದು, ನನಗೆ ಸನ್ಮಾನ ಮಾಡುತ್ತಿರುವುದು ಎಲ್ಲವೂ ಖುಷಿ ನೀಡುತ್ತಿದೆ’ ಎಂದರು. ಈ ವೇಳೆ ಮಂಜು ಕೆಂಪು ಬಣ್ಣದ ಉದ್ದನೆಯ ಕೋಟ್​ ಹಾಕಿ ಬಂದಿದ್ದರು. ಇದು ಎಲ್ಲರ ಗಮನ ಸೆಳೆಯುತ್ತಿತ್ತು. ಸುದೀಪ್​ ಕೂಡ ಇದನ್ನು ಇಷ್ಟಪಟ್ಟರು. ಅಲ್ಲದೆ, ಮಂಜು ಅವರನ್ನು ವೇದಿಕೆ ಮೇಲೆ ಕರೆದರು.

‘ಮುಂದಿನ ಯೋಜನೆಗಳು ಏನು?’ ಎಂದು ಸುದೀಪ್​ ಅವರು ಮಂಜುನ ಕೇಳಿದರು. ಮಂಜು ಸಿನಿಮಾದಲ್ಲಿ ನಟಿಸಬೇಕು ಎಂದುಕೊಂಡವರು. ಈ ಮೊದಲು ಕೂಡ ಆ ಬಗ್ಗೆ ಸಾಕಷ್ಟು ಬಾರಿ ಹೇಳಿಕೊಂಡಿದ್ದಾರೆ. ಇದೇ ಮಾತನ್ನು ಅವರು ವೇದಿಕೆ ಮೇಲೆ ಮತ್ತೆ ಹೇಳಿದ್ದಾರೆ. ಆದರೆ, ಒಂದು ಮಾತನ್ನು ಹೆಚ್ಚಾಗಿ ಸೇರಿಸಿದ್ದಾರೆ. ‘ಸಿನಿಮಾದಲ್ಲಿ ನಟಿಸಬೇಕು ಎನ್ನುವ ಆಸೆ ಇದೆ. ಒಳ್ಳೆಯ ಪಾತ್ರಗಳನ್ನು ಮಾಡಬೇಕು. ನಿಮ್ಮಂಥ ದೊಡ್ಡ ನಟರ ಜತೆ ನಾನು ತೆರೆ ಹಂಚಿಕೊಳ್ಳಬೇಕು’ ಎಂದರು ಮಂಜು​. ಈ ಮಾತನ್ನು ಕೇಳಿದ ಕಿಚ್ಚ​, ‘ನನ್ನ ಬುಡಕ್ಕೆ ಯಾಕೆ ಕೈ ಹಾಕ್ತೀರಾ? ನೀವು ಅಲ್ಲಿ ಬರೋದು, ನನ್ನ ಕೆಲಸ ಹೋಗೋದು ಯಾಕೆ ಬೇಕು? ನಿಮ್ಮ ಡ್ರೆಸ್​ ನೋಡಿದ್ರೆ ಹಾಗೆ ಅನಿಸುತ್ತದೆ’ ಎಂದು ನಕ್ಕರು.

ಇದನ್ನೂ ಓದಿ: ಸುದೀಪ್​ ಇಲ್ಲದ ಬಿಗ್​ ಬಾಸ್ ಊಹಿಸಿಕೊಳ್ಳಲು ಸಾಧ್ಯವೇ? ಹೇಗಿರತ್ತೆ ನೋಡಿ ಸ್ಪರ್ಧಿಗಳ ಪರಿಸ್ಥಿತಿ

Manju Pavagada: ಧರ್ಮಸ್ಥಳ ಮಂಜುನಾಥನ ಆಶೀರ್ವಾದ ಪಡೆದ ಮಂಜು ಪಾವಗಡ

ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ