AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನನ್ನ ಕೆಲಸ ಕಿತ್ತುಕೊಳ್ಳಬೇಡಿ’; ಮಂಜು ಪಾವಗಡಗೆ ಸುದೀಪ್ ಹೀಗೆ ಹೇಳಿದ್ದೇಕೆ?​

ಬಿಗ್​ ಬಾಸ್​ ಮಿನಿ ಸೀಸನ್​ ಅಂತಿಮ ಹಂತಕ್ಕೆ ಬಂದಿದ್ದು, ಸುದೀಪ್​ ಇದನ್ನು ನಡೆಸಿಕೊಟ್ಟಿದ್ದಾರೆ. ಈ ವೇಳೆ ಕನ್ನಡ ಬಿಗ್​ ಬಾಸ್​ ಸೀಸನ್​ 8ರ ಬಹುತೇಕ ಸ್ಪರ್ಧಿಗಳು ಆಗಮಿಸಿದ್ದರು. ಮಂಜು ಕೂಡ ಹಾಜರಿ ಹಾಕಿದ್ದರು. ಸುದೀಪ್​ ಅವರ ಜತೆ ಮಂಜು ಮಾತುಕತೆ ನಡೆಸಿದ್ದಾರೆ.

‘ನನ್ನ ಕೆಲಸ ಕಿತ್ತುಕೊಳ್ಳಬೇಡಿ’; ಮಂಜು ಪಾವಗಡಗೆ ಸುದೀಪ್ ಹೀಗೆ ಹೇಳಿದ್ದೇಕೆ?​
ಮಂಜು ಪಾವಗಡ, ಕಿಚ್ಚ ಸುದೀಪ್
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Sep 04, 2021 | 5:22 PM

Share

ಬಿಗ್​ ಬಾಸ್​ ಕನ್ನಡ ಸೀಸನ್​ 8ರಲ್ಲಿ ಸುದೀಪ್​ ಹಾಗೂ ಮಂಜು ಪಾವಗಡ ನಡುವೆ ನಡೆದ ಸಂಭಾಷಣೆ ಸಾಕಷ್ಟು ಗಮನ ಸೆಳೆದಿವೆ. ಇಬ್ಬರ ನಡುವೆ ಒಂದೊಳ್ಳೆಯ ಬಾಂಧವ್ಯ ಬೆಳೆದಿದೆ. ಇದೇ ಕಾರಣಕ್ಕೆ ಸುದೀಪ್​ ಅವರು ಮಂಜು ಕಾಲೆಳೆಯುತ್ತಿರುತ್ತಾರೆ. ಇದು ಅನೇಕ ಬಾರಿ ನಡೆದಿದೆ. ಈಗ ಸುದೀಪ್​ ಮತ್ತು ಮಂಜು ಪಾವಗಡ ಮತ್ತೆ ಬಿಗ್​ ಬಾಸ್​ ವೇದಿಕೆ ಏರಿದ್ದಾರೆ. ಇದಕ್ಕೆ ಕಾರಣವಾಗಿದ್ದು, ಬಿಗ್​ ಬಾಸ್​ ಮಿನಿ ಸೀಸನ್​. ಈ ಕಾರ್ಯಕ್ರಮ ಅಂತಿಮ ಹಂತಕ್ಕೆ ಬಂದಿದ್ದು, ಸುದೀಪ್​ ಇದನ್ನು ನಡೆಸಿಕೊಟ್ಟಿದ್ದಾರೆ. ಈ ವೇಳೆ ಕನ್ನಡ ಬಿಗ್​ ಬಾಸ್​ ಸೀಸನ್​ 8ರ ಬಹುತೇಕ ಸ್ಪರ್ಧಿಗಳು ಆಗಮಿಸಿದ್ದರು. ಮಂಜು ಕೂಡ ಹಾಜರಿ ಹಾಕಿದ್ದರು. ಸುದೀಪ್​ ಅವರ ಜತೆ ಮಂಜು ಮಾತುಕತೆ ನಡೆಸಿದ್ದಾರೆ.

‘ಮಂಜು ಹೇಗಿದ್ದೀರಿ? ಬಿಗ್​ ಬಾಸ್ ಮುಗಿಸಿದ ಒಂದು ವಾರ ಹೇಗಿತ್ತು?’ ಎಂದು ಪ್ರಶ್ನೆ ಮಾಡಿದ್ದಾರೆ ಸುದೀಪ್​. ಇದಕ್ಕೆ ಉತ್ತರಿಸಿದ ಮಂಜು ‘ಹೊಸ ಜಗತ್ತನ್ನೇ ನೋಡಿದಂತಾಗುತ್ತಿದೆ. ಮಾಧ್ಯಮಗಳಿಗೆ ಸಂದರ್ಶನ ಕೊಡುತ್ತಿರುವುದು, ನನಗೆ ಸನ್ಮಾನ ಮಾಡುತ್ತಿರುವುದು ಎಲ್ಲವೂ ಖುಷಿ ನೀಡುತ್ತಿದೆ’ ಎಂದರು. ಈ ವೇಳೆ ಮಂಜು ಕೆಂಪು ಬಣ್ಣದ ಉದ್ದನೆಯ ಕೋಟ್​ ಹಾಕಿ ಬಂದಿದ್ದರು. ಇದು ಎಲ್ಲರ ಗಮನ ಸೆಳೆಯುತ್ತಿತ್ತು. ಸುದೀಪ್​ ಕೂಡ ಇದನ್ನು ಇಷ್ಟಪಟ್ಟರು. ಅಲ್ಲದೆ, ಮಂಜು ಅವರನ್ನು ವೇದಿಕೆ ಮೇಲೆ ಕರೆದರು.

‘ಮುಂದಿನ ಯೋಜನೆಗಳು ಏನು?’ ಎಂದು ಸುದೀಪ್​ ಅವರು ಮಂಜುನ ಕೇಳಿದರು. ಮಂಜು ಸಿನಿಮಾದಲ್ಲಿ ನಟಿಸಬೇಕು ಎಂದುಕೊಂಡವರು. ಈ ಮೊದಲು ಕೂಡ ಆ ಬಗ್ಗೆ ಸಾಕಷ್ಟು ಬಾರಿ ಹೇಳಿಕೊಂಡಿದ್ದಾರೆ. ಇದೇ ಮಾತನ್ನು ಅವರು ವೇದಿಕೆ ಮೇಲೆ ಮತ್ತೆ ಹೇಳಿದ್ದಾರೆ. ಆದರೆ, ಒಂದು ಮಾತನ್ನು ಹೆಚ್ಚಾಗಿ ಸೇರಿಸಿದ್ದಾರೆ. ‘ಸಿನಿಮಾದಲ್ಲಿ ನಟಿಸಬೇಕು ಎನ್ನುವ ಆಸೆ ಇದೆ. ಒಳ್ಳೆಯ ಪಾತ್ರಗಳನ್ನು ಮಾಡಬೇಕು. ನಿಮ್ಮಂಥ ದೊಡ್ಡ ನಟರ ಜತೆ ನಾನು ತೆರೆ ಹಂಚಿಕೊಳ್ಳಬೇಕು’ ಎಂದರು ಮಂಜು​. ಈ ಮಾತನ್ನು ಕೇಳಿದ ಕಿಚ್ಚ​, ‘ನನ್ನ ಬುಡಕ್ಕೆ ಯಾಕೆ ಕೈ ಹಾಕ್ತೀರಾ? ನೀವು ಅಲ್ಲಿ ಬರೋದು, ನನ್ನ ಕೆಲಸ ಹೋಗೋದು ಯಾಕೆ ಬೇಕು? ನಿಮ್ಮ ಡ್ರೆಸ್​ ನೋಡಿದ್ರೆ ಹಾಗೆ ಅನಿಸುತ್ತದೆ’ ಎಂದು ನಕ್ಕರು.

ಇದನ್ನೂ ಓದಿ: ಸುದೀಪ್​ ಇಲ್ಲದ ಬಿಗ್​ ಬಾಸ್ ಊಹಿಸಿಕೊಳ್ಳಲು ಸಾಧ್ಯವೇ? ಹೇಗಿರತ್ತೆ ನೋಡಿ ಸ್ಪರ್ಧಿಗಳ ಪರಿಸ್ಥಿತಿ

Manju Pavagada: ಧರ್ಮಸ್ಥಳ ಮಂಜುನಾಥನ ಆಶೀರ್ವಾದ ಪಡೆದ ಮಂಜು ಪಾವಗಡ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ