AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನನ್ನ ಕೆಲಸ ಕಿತ್ತುಕೊಳ್ಳಬೇಡಿ’; ಮಂಜು ಪಾವಗಡಗೆ ಸುದೀಪ್ ಹೀಗೆ ಹೇಳಿದ್ದೇಕೆ?​

ಬಿಗ್​ ಬಾಸ್​ ಮಿನಿ ಸೀಸನ್​ ಅಂತಿಮ ಹಂತಕ್ಕೆ ಬಂದಿದ್ದು, ಸುದೀಪ್​ ಇದನ್ನು ನಡೆಸಿಕೊಟ್ಟಿದ್ದಾರೆ. ಈ ವೇಳೆ ಕನ್ನಡ ಬಿಗ್​ ಬಾಸ್​ ಸೀಸನ್​ 8ರ ಬಹುತೇಕ ಸ್ಪರ್ಧಿಗಳು ಆಗಮಿಸಿದ್ದರು. ಮಂಜು ಕೂಡ ಹಾಜರಿ ಹಾಕಿದ್ದರು. ಸುದೀಪ್​ ಅವರ ಜತೆ ಮಂಜು ಮಾತುಕತೆ ನಡೆಸಿದ್ದಾರೆ.

‘ನನ್ನ ಕೆಲಸ ಕಿತ್ತುಕೊಳ್ಳಬೇಡಿ’; ಮಂಜು ಪಾವಗಡಗೆ ಸುದೀಪ್ ಹೀಗೆ ಹೇಳಿದ್ದೇಕೆ?​
ಮಂಜು ಪಾವಗಡ, ಕಿಚ್ಚ ಸುದೀಪ್
TV9 Web
| Edited By: |

Updated on: Sep 04, 2021 | 5:22 PM

Share

ಬಿಗ್​ ಬಾಸ್​ ಕನ್ನಡ ಸೀಸನ್​ 8ರಲ್ಲಿ ಸುದೀಪ್​ ಹಾಗೂ ಮಂಜು ಪಾವಗಡ ನಡುವೆ ನಡೆದ ಸಂಭಾಷಣೆ ಸಾಕಷ್ಟು ಗಮನ ಸೆಳೆದಿವೆ. ಇಬ್ಬರ ನಡುವೆ ಒಂದೊಳ್ಳೆಯ ಬಾಂಧವ್ಯ ಬೆಳೆದಿದೆ. ಇದೇ ಕಾರಣಕ್ಕೆ ಸುದೀಪ್​ ಅವರು ಮಂಜು ಕಾಲೆಳೆಯುತ್ತಿರುತ್ತಾರೆ. ಇದು ಅನೇಕ ಬಾರಿ ನಡೆದಿದೆ. ಈಗ ಸುದೀಪ್​ ಮತ್ತು ಮಂಜು ಪಾವಗಡ ಮತ್ತೆ ಬಿಗ್​ ಬಾಸ್​ ವೇದಿಕೆ ಏರಿದ್ದಾರೆ. ಇದಕ್ಕೆ ಕಾರಣವಾಗಿದ್ದು, ಬಿಗ್​ ಬಾಸ್​ ಮಿನಿ ಸೀಸನ್​. ಈ ಕಾರ್ಯಕ್ರಮ ಅಂತಿಮ ಹಂತಕ್ಕೆ ಬಂದಿದ್ದು, ಸುದೀಪ್​ ಇದನ್ನು ನಡೆಸಿಕೊಟ್ಟಿದ್ದಾರೆ. ಈ ವೇಳೆ ಕನ್ನಡ ಬಿಗ್​ ಬಾಸ್​ ಸೀಸನ್​ 8ರ ಬಹುತೇಕ ಸ್ಪರ್ಧಿಗಳು ಆಗಮಿಸಿದ್ದರು. ಮಂಜು ಕೂಡ ಹಾಜರಿ ಹಾಕಿದ್ದರು. ಸುದೀಪ್​ ಅವರ ಜತೆ ಮಂಜು ಮಾತುಕತೆ ನಡೆಸಿದ್ದಾರೆ.

‘ಮಂಜು ಹೇಗಿದ್ದೀರಿ? ಬಿಗ್​ ಬಾಸ್ ಮುಗಿಸಿದ ಒಂದು ವಾರ ಹೇಗಿತ್ತು?’ ಎಂದು ಪ್ರಶ್ನೆ ಮಾಡಿದ್ದಾರೆ ಸುದೀಪ್​. ಇದಕ್ಕೆ ಉತ್ತರಿಸಿದ ಮಂಜು ‘ಹೊಸ ಜಗತ್ತನ್ನೇ ನೋಡಿದಂತಾಗುತ್ತಿದೆ. ಮಾಧ್ಯಮಗಳಿಗೆ ಸಂದರ್ಶನ ಕೊಡುತ್ತಿರುವುದು, ನನಗೆ ಸನ್ಮಾನ ಮಾಡುತ್ತಿರುವುದು ಎಲ್ಲವೂ ಖುಷಿ ನೀಡುತ್ತಿದೆ’ ಎಂದರು. ಈ ವೇಳೆ ಮಂಜು ಕೆಂಪು ಬಣ್ಣದ ಉದ್ದನೆಯ ಕೋಟ್​ ಹಾಕಿ ಬಂದಿದ್ದರು. ಇದು ಎಲ್ಲರ ಗಮನ ಸೆಳೆಯುತ್ತಿತ್ತು. ಸುದೀಪ್​ ಕೂಡ ಇದನ್ನು ಇಷ್ಟಪಟ್ಟರು. ಅಲ್ಲದೆ, ಮಂಜು ಅವರನ್ನು ವೇದಿಕೆ ಮೇಲೆ ಕರೆದರು.

‘ಮುಂದಿನ ಯೋಜನೆಗಳು ಏನು?’ ಎಂದು ಸುದೀಪ್​ ಅವರು ಮಂಜುನ ಕೇಳಿದರು. ಮಂಜು ಸಿನಿಮಾದಲ್ಲಿ ನಟಿಸಬೇಕು ಎಂದುಕೊಂಡವರು. ಈ ಮೊದಲು ಕೂಡ ಆ ಬಗ್ಗೆ ಸಾಕಷ್ಟು ಬಾರಿ ಹೇಳಿಕೊಂಡಿದ್ದಾರೆ. ಇದೇ ಮಾತನ್ನು ಅವರು ವೇದಿಕೆ ಮೇಲೆ ಮತ್ತೆ ಹೇಳಿದ್ದಾರೆ. ಆದರೆ, ಒಂದು ಮಾತನ್ನು ಹೆಚ್ಚಾಗಿ ಸೇರಿಸಿದ್ದಾರೆ. ‘ಸಿನಿಮಾದಲ್ಲಿ ನಟಿಸಬೇಕು ಎನ್ನುವ ಆಸೆ ಇದೆ. ಒಳ್ಳೆಯ ಪಾತ್ರಗಳನ್ನು ಮಾಡಬೇಕು. ನಿಮ್ಮಂಥ ದೊಡ್ಡ ನಟರ ಜತೆ ನಾನು ತೆರೆ ಹಂಚಿಕೊಳ್ಳಬೇಕು’ ಎಂದರು ಮಂಜು​. ಈ ಮಾತನ್ನು ಕೇಳಿದ ಕಿಚ್ಚ​, ‘ನನ್ನ ಬುಡಕ್ಕೆ ಯಾಕೆ ಕೈ ಹಾಕ್ತೀರಾ? ನೀವು ಅಲ್ಲಿ ಬರೋದು, ನನ್ನ ಕೆಲಸ ಹೋಗೋದು ಯಾಕೆ ಬೇಕು? ನಿಮ್ಮ ಡ್ರೆಸ್​ ನೋಡಿದ್ರೆ ಹಾಗೆ ಅನಿಸುತ್ತದೆ’ ಎಂದು ನಕ್ಕರು.

ಇದನ್ನೂ ಓದಿ: ಸುದೀಪ್​ ಇಲ್ಲದ ಬಿಗ್​ ಬಾಸ್ ಊಹಿಸಿಕೊಳ್ಳಲು ಸಾಧ್ಯವೇ? ಹೇಗಿರತ್ತೆ ನೋಡಿ ಸ್ಪರ್ಧಿಗಳ ಪರಿಸ್ಥಿತಿ

Manju Pavagada: ಧರ್ಮಸ್ಥಳ ಮಂಜುನಾಥನ ಆಶೀರ್ವಾದ ಪಡೆದ ಮಂಜು ಪಾವಗಡ

Follow Us
Web contact
Web contact

TV9 Kannada

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು