AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನನ್ನ ಕೆಲಸ ಕಿತ್ತುಕೊಳ್ಳಬೇಡಿ’; ಮಂಜು ಪಾವಗಡಗೆ ಸುದೀಪ್ ಹೀಗೆ ಹೇಳಿದ್ದೇಕೆ?​

ಬಿಗ್​ ಬಾಸ್​ ಮಿನಿ ಸೀಸನ್​ ಅಂತಿಮ ಹಂತಕ್ಕೆ ಬಂದಿದ್ದು, ಸುದೀಪ್​ ಇದನ್ನು ನಡೆಸಿಕೊಟ್ಟಿದ್ದಾರೆ. ಈ ವೇಳೆ ಕನ್ನಡ ಬಿಗ್​ ಬಾಸ್​ ಸೀಸನ್​ 8ರ ಬಹುತೇಕ ಸ್ಪರ್ಧಿಗಳು ಆಗಮಿಸಿದ್ದರು. ಮಂಜು ಕೂಡ ಹಾಜರಿ ಹಾಕಿದ್ದರು. ಸುದೀಪ್​ ಅವರ ಜತೆ ಮಂಜು ಮಾತುಕತೆ ನಡೆಸಿದ್ದಾರೆ.

‘ನನ್ನ ಕೆಲಸ ಕಿತ್ತುಕೊಳ್ಳಬೇಡಿ’; ಮಂಜು ಪಾವಗಡಗೆ ಸುದೀಪ್ ಹೀಗೆ ಹೇಳಿದ್ದೇಕೆ?​
ಮಂಜು ಪಾವಗಡ, ಕಿಚ್ಚ ಸುದೀಪ್
TV9 Web
| Edited By: |

Updated on: Sep 04, 2021 | 5:22 PM

Share

ಬಿಗ್​ ಬಾಸ್​ ಕನ್ನಡ ಸೀಸನ್​ 8ರಲ್ಲಿ ಸುದೀಪ್​ ಹಾಗೂ ಮಂಜು ಪಾವಗಡ ನಡುವೆ ನಡೆದ ಸಂಭಾಷಣೆ ಸಾಕಷ್ಟು ಗಮನ ಸೆಳೆದಿವೆ. ಇಬ್ಬರ ನಡುವೆ ಒಂದೊಳ್ಳೆಯ ಬಾಂಧವ್ಯ ಬೆಳೆದಿದೆ. ಇದೇ ಕಾರಣಕ್ಕೆ ಸುದೀಪ್​ ಅವರು ಮಂಜು ಕಾಲೆಳೆಯುತ್ತಿರುತ್ತಾರೆ. ಇದು ಅನೇಕ ಬಾರಿ ನಡೆದಿದೆ. ಈಗ ಸುದೀಪ್​ ಮತ್ತು ಮಂಜು ಪಾವಗಡ ಮತ್ತೆ ಬಿಗ್​ ಬಾಸ್​ ವೇದಿಕೆ ಏರಿದ್ದಾರೆ. ಇದಕ್ಕೆ ಕಾರಣವಾಗಿದ್ದು, ಬಿಗ್​ ಬಾಸ್​ ಮಿನಿ ಸೀಸನ್​. ಈ ಕಾರ್ಯಕ್ರಮ ಅಂತಿಮ ಹಂತಕ್ಕೆ ಬಂದಿದ್ದು, ಸುದೀಪ್​ ಇದನ್ನು ನಡೆಸಿಕೊಟ್ಟಿದ್ದಾರೆ. ಈ ವೇಳೆ ಕನ್ನಡ ಬಿಗ್​ ಬಾಸ್​ ಸೀಸನ್​ 8ರ ಬಹುತೇಕ ಸ್ಪರ್ಧಿಗಳು ಆಗಮಿಸಿದ್ದರು. ಮಂಜು ಕೂಡ ಹಾಜರಿ ಹಾಕಿದ್ದರು. ಸುದೀಪ್​ ಅವರ ಜತೆ ಮಂಜು ಮಾತುಕತೆ ನಡೆಸಿದ್ದಾರೆ.

‘ಮಂಜು ಹೇಗಿದ್ದೀರಿ? ಬಿಗ್​ ಬಾಸ್ ಮುಗಿಸಿದ ಒಂದು ವಾರ ಹೇಗಿತ್ತು?’ ಎಂದು ಪ್ರಶ್ನೆ ಮಾಡಿದ್ದಾರೆ ಸುದೀಪ್​. ಇದಕ್ಕೆ ಉತ್ತರಿಸಿದ ಮಂಜು ‘ಹೊಸ ಜಗತ್ತನ್ನೇ ನೋಡಿದಂತಾಗುತ್ತಿದೆ. ಮಾಧ್ಯಮಗಳಿಗೆ ಸಂದರ್ಶನ ಕೊಡುತ್ತಿರುವುದು, ನನಗೆ ಸನ್ಮಾನ ಮಾಡುತ್ತಿರುವುದು ಎಲ್ಲವೂ ಖುಷಿ ನೀಡುತ್ತಿದೆ’ ಎಂದರು. ಈ ವೇಳೆ ಮಂಜು ಕೆಂಪು ಬಣ್ಣದ ಉದ್ದನೆಯ ಕೋಟ್​ ಹಾಕಿ ಬಂದಿದ್ದರು. ಇದು ಎಲ್ಲರ ಗಮನ ಸೆಳೆಯುತ್ತಿತ್ತು. ಸುದೀಪ್​ ಕೂಡ ಇದನ್ನು ಇಷ್ಟಪಟ್ಟರು. ಅಲ್ಲದೆ, ಮಂಜು ಅವರನ್ನು ವೇದಿಕೆ ಮೇಲೆ ಕರೆದರು.

‘ಮುಂದಿನ ಯೋಜನೆಗಳು ಏನು?’ ಎಂದು ಸುದೀಪ್​ ಅವರು ಮಂಜುನ ಕೇಳಿದರು. ಮಂಜು ಸಿನಿಮಾದಲ್ಲಿ ನಟಿಸಬೇಕು ಎಂದುಕೊಂಡವರು. ಈ ಮೊದಲು ಕೂಡ ಆ ಬಗ್ಗೆ ಸಾಕಷ್ಟು ಬಾರಿ ಹೇಳಿಕೊಂಡಿದ್ದಾರೆ. ಇದೇ ಮಾತನ್ನು ಅವರು ವೇದಿಕೆ ಮೇಲೆ ಮತ್ತೆ ಹೇಳಿದ್ದಾರೆ. ಆದರೆ, ಒಂದು ಮಾತನ್ನು ಹೆಚ್ಚಾಗಿ ಸೇರಿಸಿದ್ದಾರೆ. ‘ಸಿನಿಮಾದಲ್ಲಿ ನಟಿಸಬೇಕು ಎನ್ನುವ ಆಸೆ ಇದೆ. ಒಳ್ಳೆಯ ಪಾತ್ರಗಳನ್ನು ಮಾಡಬೇಕು. ನಿಮ್ಮಂಥ ದೊಡ್ಡ ನಟರ ಜತೆ ನಾನು ತೆರೆ ಹಂಚಿಕೊಳ್ಳಬೇಕು’ ಎಂದರು ಮಂಜು​. ಈ ಮಾತನ್ನು ಕೇಳಿದ ಕಿಚ್ಚ​, ‘ನನ್ನ ಬುಡಕ್ಕೆ ಯಾಕೆ ಕೈ ಹಾಕ್ತೀರಾ? ನೀವು ಅಲ್ಲಿ ಬರೋದು, ನನ್ನ ಕೆಲಸ ಹೋಗೋದು ಯಾಕೆ ಬೇಕು? ನಿಮ್ಮ ಡ್ರೆಸ್​ ನೋಡಿದ್ರೆ ಹಾಗೆ ಅನಿಸುತ್ತದೆ’ ಎಂದು ನಕ್ಕರು.

ಇದನ್ನೂ ಓದಿ: ಸುದೀಪ್​ ಇಲ್ಲದ ಬಿಗ್​ ಬಾಸ್ ಊಹಿಸಿಕೊಳ್ಳಲು ಸಾಧ್ಯವೇ? ಹೇಗಿರತ್ತೆ ನೋಡಿ ಸ್ಪರ್ಧಿಗಳ ಪರಿಸ್ಥಿತಿ

Manju Pavagada: ಧರ್ಮಸ್ಥಳ ಮಂಜುನಾಥನ ಆಶೀರ್ವಾದ ಪಡೆದ ಮಂಜು ಪಾವಗಡ

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?