AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಒಬ್ಬ ಅಪ್ಪನಿಗೆ ಹುಟ್ಟಿದ್ರೆ’: ತಾಯಿ ಬಗ್ಗೆ ಕೀಳಾಗಿ ಮಾತಾಡಿದ ಚೈತ್ರಾಗೆ ಗ್ರಹಚಾರ ಬಿಡಿಸಿದ ಕಿಚ್ಚ

ಮಹಾನ್ ಮಾತುಗಾರ್ತಿ ಅಂತ ಜಂಭಕೊಚ್ಚಿಕೊಳ್ಳುವ ಚೈತ್ರಾ ಕುಂದಾಪುರ ಅವರಿಗೆ ಕಿಚ್ಚ ಸುದೀಪ್ ಕ್ಲಾಸ್​ ತೆಗೆದುಕೊಂಡಿದ್ದಾರೆ. ಬಿಗ್ ಬಾಸ್​ ಮನೆಯಲ್ಲಿ ಅಸಭ್ಯವಾದ ಮಾತನಾಡಿದಕ್ಕೆ ಅವರು ಗ್ರಹಚಾರ ಬಿಡಿಸಿದ್ದಾರೆ. ಸುದೀಪ್ ಗರಂ ಆಗುತ್ತಿದ್ದಂತೆಯೇ ಚೈತ್ರಾ ಕುಂದಾಪುರ ಗಪ್​ಚುಪ್ ಆಗಿದ್ದಾರೆ. ಅ.20ರ ರಾತ್ರಿ 9 ಗಂಟೆಗೆ ಈ ಸಂಚಿಕೆ ಪ್ರಸಾರ ಆಗಲಿದೆ.

‘ಒಬ್ಬ ಅಪ್ಪನಿಗೆ ಹುಟ್ಟಿದ್ರೆ’: ತಾಯಿ ಬಗ್ಗೆ ಕೀಳಾಗಿ ಮಾತಾಡಿದ ಚೈತ್ರಾಗೆ ಗ್ರಹಚಾರ ಬಿಡಿಸಿದ ಕಿಚ್ಚ
ಚೈತ್ರಾ ಕುಂದಾಪುರ, ಕಿಚ್ಚ ಸುದೀಪ್
ಮದನ್​ ಕುಮಾರ್​
|

Updated on: Oct 20, 2024 | 4:12 PM

Share

ಭಾರಿ ಚರ್ಚೆ ಹುಟ್ಟುಹಾಕಿರುವ ‘ಬಿಗ್ ಬಾಸ್​ ಕನ್ನಡ ಸೀಸನ್​ 11’ ಕಾರ್ಯಕ್ರಮದಲ್ಲಿ ಕಿಚ್ಚ ಸುದೀಪ್​ ಅವರು ಗುಡುಗಿದ್ದಾರೆ. ಶನಿವಾರದ (ಅ.19) ಸಂಚಿಕೆಯಲ್ಲಿ ಅವರು ಅನೇಕ ಸ್ಪರ್ಧಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು. ಭಾನುವಾರ (ಅಕ್ಟೋಬರ್​ 20) ಕೂಡ ಕಿಚ್ಚನ ಕ್ಲಾಸ್ ಮುಂದುವರಿಯಲಿದೆ. ಈ ವಾರ ಮಾತನಾಡುವ ಭರದಲ್ಲಿ ಚೈತ್ರಾ ಕುಂದಾಪುರ ಅವರ ಅಸಭ್ಯವಾದ ಪದಗಳನ್ನು ಬಳಕೆ ಮಾಡಿದ್ದರು. ‘ಒಬ್ಬ ಅಪ್ಪನಿಗೆ ಹುಟ್ಟಿದವನಾಗಿದ್ದರೆ..’ ಎಂದು ಜಗದೀಶ್​ಗೆ ಚೈತ್ರಾ ಹೇಳಿದ್ದರು. ಅದೇ ವಿಚಾರವನ್ನು ಇಟ್ಟುಕೊಂಡು ಸುದೀಪ್​ ಅವರು ಚೈತ್ರಾಗೆ ಗ್ರಹಚಾರ ಬಿಡಿಸಿದ್ದಾರೆ.

ಲಾಯರ್ ಜಗದೀಶ್ ಅವರು ಬಿಗ್​ ಬಾಸ್​ ಮನೆಯಲ್ಲಿ ಹಂಸಾ ಬಗ್ಗೆ ಮಾತನಾಡುವಾಗ ಅವಾಚ್ಯ ಪದಗಳನ್ನು ಬಳಸಿದ್ದರು. ಅದನ್ನು ಇಡೀ ಮನೆಯೇ ಖಂಡಿಸಿತ್ತು. ರಂಜಿತ್ ಅವರಂತೂ ಈ ವಿಚಾರಕ್ಕೆ ಜಗದೀಶ್ ಮೇಲೆ ಕೈ ಮಾಡಿ ಮನೆಯಿಂದ ಹೊರಬಂದಿದ್ದಾರೆ. ಜಗದೀಶ್ ಮಾಡಿದ ತಪ್ಪಿಗೆ ಅವರನ್ನು ಕೂಡ ಮನೆಯಿಂದ ಹೊರಗೆ ಕಳಿಸಲಾಗಿದೆ. ಜಗದೀಶ್ ಮಾತನಾಡಿದ್ದು ತಪ್ಪು ಎಂಬುದಾದರೆ ಇನ್ನುಳಿದ ಸದಸ್ಯರ ಮಾತು ಮತ್ತು ವರ್ತನೆ ಸರಿಯಿದೆಯಾ ಎಂದು ಸುದೀಪ್ ಅವರು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ನಾನ್ ವೆಜ್ ಊಟ ಕೊಡಲಿಲ್ಲ ಅಂತ ಕಣ್ಣೀರು ಹಾಕಿದ ಬಿಗ್ ಬಾಸ್ ಸ್ಪರ್ಧಿ

‘ಹೆಣ್ಮಕ್ಕಳ ಬಗ್ಗೆ ಆ ರೀತಿ ಮಾತನಾಡಬೇಡಿ ಅಂತ ನೀವು ಹೇಳುತ್ತೀರಿ. ಹೌದಲ್ಲವೇ? ಅದಕ್ಕೆ ನಾನು ತುಂಬಾ ಗೌರವಿಸುತ್ತೇನೆ. ಆದರೆ ಮಹಿಳೆಯರು ಕೂಡ ಪುರುಷರನ್ನು ಗೌರವಿಸಬಾರದಾ? ನಿಮ್ಮಿಂದ ಒಂದು ಮಾತು ಬರುತ್ತದೆ. ಒಬ್ಬ ಅಪ್ಪನಿಗೆ ಹುಟ್ಟಿದ್ರೆ ಅಂತ. ನೀವು ಕೂಡ ಅವರ ತಾಯಿಗೆ ತಾನೇ ಬೈದಿದ್ದು. ಇದು ಹೇಗೆ ಸಾಧ್ಯ? ಒಬ್ಬ ಅಪ್ಪನಿಗೆ ಹುಟ್ಟಿದ್ರೆ ಅಂತ ಹೇಳಿದಾಗ ಯಾವ ನನ್ಮಗನೂ ಅಪ್ಪನಿಗೆ ಬೈಯ್ಯುತ್ತಿಲ್ಲ. ತಾಯಿಗೆ ಬೈಯುತ್ತಾ ಇರೋದು. ಹೆಣ್ಮಕ್ಕಳಿಗೆ ಗೌರವ ಕೊಡಿ ಅಂತ ನೀವು ಹೇಳ್ತೀರಾ?’ ಎಂದು ಸುದೀಪ್ ಅವರು ಖಡಕ್​ ಆಗಿ ಪ್ರಶ್ನಿಸಿದ್ದಾರೆ.

ಜಗದೀಶ್ ಅವರನ್ನು ಕೆಣಕಿದ ಉಗ್ರಂ ಮಂಜು ಅವರನ್ನು ಕೂಡ ಸುದೀಪ್ ಅವರು ಪ್ರಶ್ನೆ ಮಾಡಿದ್ದಾರೆ. ಅಲ್ಲದೇ, ಹಂಸಾ ಮಾಡಿದ ರಾಜಕೀಯವನ್ನು ಸಹ ಕಿಚ್ಚ ಖಂಡಿಸಿದ್ದಾರೆ. ‘ಹಾಗಂತ ನಾನು ಇಲ್ಲಿ ಜಗದೀಶ್ ಅವರನ್ನು ಬೆಂಬಲಿಸುತ್ತಿಲ್ಲ. ನೀವು ಸರಿ ಇದ್ದೀರಾ ಅಂತ ಕೇಳುತ್ತಿದ್ದೇನೆ’ ಎಂದು ಸುದೀಪ್ ಅವರು ಸ್ಪಷ್ಟನೆ ನೀಡಿದ್ದಾರೆ. ಭಾನುವಾರ (ಅ.20) ‘ಕಲರ್ಸ್ ಕನ್ನಡ’ ವಾಹಿನಿ ಮತ್ತು ‘ಜಿಯೋ ಸಿನಿಮಾ’ ಒಟಿಟಿಯಲ್ಲಿ ಈ ಎಪಿಸೋಡ್​ ಪ್ರಸಾರ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ