AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪ್ರತಾಪ್ ಮಾತ್ರ ಇಂಟಲಿಜೆಂಟ್, ನಾನು ಡಂಬ್’; ಸಿಟ್ಟಲ್ಲೇ ಹೇಳಿದ ಕಿಚ್ಚ ಸುದೀಪ್

ಮತ್ತೊಬ್ಬರಿಗೆ ಎಲ್ಲಿ ಬೇಸರ ಆಗಿಬಿಡಬಹುದು ಎನ್ನುವ ಕಾರಣಕ್ಕೆ ಸ್ಪರ್ಧಿಗಳು ಶುಗರ್ ಕೋಟ್ ಹಾಕಿ ಮಾತನಾಡೋಕೆ ಶುರು ಮಾಡಿದರು. ಇದನ್ನು ಸುದೀಪ್ ಅವರು ಖಂಡಿಸಿದ್ದಾರೆ.

‘ಪ್ರತಾಪ್ ಮಾತ್ರ ಇಂಟಲಿಜೆಂಟ್, ನಾನು ಡಂಬ್’; ಸಿಟ್ಟಲ್ಲೇ ಹೇಳಿದ ಕಿಚ್ಚ ಸುದೀಪ್
ಪ್ರತಾಪ್-ಸುದೀಪ್
ರಾಜೇಶ್ ದುಗ್ಗುಮನೆ
|

Updated on: Jan 15, 2024 | 11:50 AM

Share

ಕಿಚ್ಚ ಸುದೀಪ್ (Kichcha Sudeep) ಅವರು ನಿರೂಪಣೆಗೆ ನಿಂತರೆ ಯಾರನ್ನೂ ಲೆಕ್ಕಿಸೋದಿಲ್ಲ. ಅವರಿಗೆ ಸರಿ ಎನಿಸಿದ್ದನ್ನು ನೇರವಾಗಿ ಹೇಳುತ್ತಾರೆ. ಕೂಲ್ ಆಗಿದ್ದರೆ ಅವರು ನಗುತ್ತಲೇ ಉತ್ತರಿಸುತ್ತಾರೆ. ಆದರೆ, ಕೆಲವೊಮ್ಮೆ ಅವರು ಸಿಟ್ಟಾದರೆ ಅವರ ಬಾಯಿಂದ ಖಡಕ್ ಮಾತುಗಳು ಬರುತ್ತವೆ. ಈಗ ಕಿಚ್ಚ ಸುದೀಪ್ ಅವರು ನೇರವಾಗಿ ಪ್ರತಾಪ್​ ಸೇರಿ ಮನೆಯ ಅನೇಕರಿಗೆ ಬೈದಿದ್ದಾರೆ. ಕಲರ್ಸ್ ಕನ್ನಡ ಹಾಗೂ ಜಿಯೋ ಸಿನಿಮಾದಲ್ಲಿ ಜನವರಿ 14ರಂದು ಈ ಎಪಿಸೋಡ್ ಪ್ರಸಾರ ಕಂಡಿದೆ.

ಇಬ್ಬರ ಫ್ರೆಂಡ್​ಶಿಪ್​ನಲ್ಲಿ ಒಬ್ಬರ ಫ್ರೆಂಡ್​ಶಿಪ್​ನ ಆಯ್ಕೆ ಮಾಡಲು ಸ್ಪರ್ಧಿಗಳಿಗೆ ಸುದೀಪ್ ಅವಕಾಶ ನೀಡಿದ್ದರು. ಯಾರ ಜೊತೆಗಿನ ಫ್ರೆಂಡ್​ಶಿಪ್​ನ ಉಳಿಸಿಕೊಳ್ಳುತ್ತೀರಿ, ಯಾರ ಜೊತೆಗಿನ ಫ್ರೆಂಡ್​ಶಿಪ್​ನ ಬಿಟ್ಟು ಹೋಗುತ್ತಿರಿ ಎಂದು ಕೇಳಲಾಯಿತು. ಮತ್ತೊಬ್ಬರಿಗೆ ಎಲ್ಲಿ ಬೇಸರ ಆಗಿಬಿಡಬಹುದು ಎನ್ನುವ ಕಾರಣಕ್ಕೆ ಸ್ಪರ್ಧಿಗಳು ಶುಗರ್ ಕೋಟ್ ಹಾಕಿ ಮಾತನಾಡೋಕೆ ಶುರು ಮಾಡಿದರು. ಇದನ್ನು ಸುದೀಪ್ ಅವರು ಖಂಡಿಸಿದ್ದಾರೆ. ‘ಬಿಗ್ ಬಾಸ್ ಹೇಳಿದರೆ ಅದಕ್ಕೊಂದು ಅರ್ಥ ಇರುತ್ತದೆ’ ಎಂದ ಸುದೀಪ್ ಎಲ್ಲರಿಗೂ ಕ್ಲಾಸ್ ತೆಗೆದುಕೊಂಡಿದ್ದಾರೆ.

ವಿನಯ್ ಹಾಗೂ ಕಾರ್ತಿಕ್​ ಮಧ್ಯೆ ಒಬ್ಬರನ್ನು ಆಯ್ಕೆ ಮಾಡಿಕೊಳ್ಳುವ ಅವಕಾಶ ಸಂಗೀತಾಗೆ ಇತ್ತು. ಆದರೆ ಇಬ್ಬರ ಜೊತೆಗೂ ಫ್ರೆಂಡ್​ಶಿಪ್ ಮುಂದುವರಿಸಲ್ಲ ಎಂದು ಸಂಗೀತಾ ನೇರ ಮಾತುಗಳಲ್ಲಿ ಹೇಳಿದರು. ಸಂಗೀತಾ ಅವರು ಮುಕ್ತವಾಗಿ ಮಾತನಾಡಿದ್ದನ್ನು ಸುದೀಪ್ ಮೆಚ್ಚಿಕೊಂಡರು. ಆದರೆ, ಉಳಿದ ಎಲ್ಲರೂ ಆ ರೀತಿ ಮಾತನಾಡಲಿಲ್ಲ. ಇದು ಸುದೀಪ್ ಸಿಟ್ಟಿಗೆ ಕಾರಣ ಆಗಿದೆ.

ಇದನ್ನೂ ಓದಿ: ಸಂಗೀತಾಗೆ ಪ್ರತಾಪ್ ಮೇಲಿದ್ದ ಒಳ್ಳೆಯ ಅಭಿಪ್ರಾಯವೆಲ್ಲ ಹೋಯ್ತು

‘ಯಾರನ್ನು ಆಯ್ಕೆ ಮಾಡಿಕೊಳ್ಳುತ್ತೀನಿ ಎನ್ನುವಾಗ ಕೊಡುವ ಸ್ಪಷ್ಟತೆ ಯಾಕೆ ರಿಜೆಕ್ಟ್ ಮಾಡ್ತೀನಿ ಎನ್ನುವಾಗ ಕೊಡಲ್ಲ. ಸಂಗೀತಾ ಸರಿಯಾಗಿ ಕೊಟ್ಟರು. ಪ್ರತಾಪ್ ಬಂದು ಶುಗರ್ ಕೋಟ್ ಮಾಡಿ  ಮಾತನಾಡಿದ್ರಿ. ಇಂಟಲಿಜೆಂಟ್ ಪ್ರತಾಪ್​ ಆ್ಯಂಡ್ ಡಂಬ್ ಸುದೀಪ್ ಅಲ್ಲವೇ? ತನಿಷಾ ಬಂದು ನಗುತ್ತಾ ಮ್ಯಾನ್ಯುಪ್ಯುಲೇಟ್ ಮಾಡಿದ್ರಿ. ಬಿಗ್ ಬಾಸ್ ಹೇಳಿದ್ರೆ ಅದಕ್ಕೊಂದು ಅರ್ಥ ಇರುತ್ತದೆ’ ಎಂದರು ಸುದೀಪ್. ನಂತರ ಎಲ್ಲರೂ ಸೈಲೆಂಟ್ ಆದರು. ಆ ಬಳಿಕ ಬಂದು ಎಲ್ಲರೂ ಸರಿಯಾದ ಕಾರಣ ನೀಡಿದರು. ಕಲರ್ಸ್ ಕನ್ನಡದಲ್ಲಿ ಬಿಗ್ ಬಾಸ್ ಎಪಿಸೋಡ್ ಪ್ರಸಾರ ಕಾಣುತ್ತದೆ. ಜಿಯೋ ಸಿನಿಮಾದಲ್ಲಿ ಎಪಿಸೋಡ್ ಜೊತೆ 24 ಗಂಟೆ ಲೈವ್ ನೋಡಲು ಅವಕಾಶ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ