AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮನೆ ಬಾಡಿಗೆ ಏರಿದಂತೆ..’; ಬಿಗ್ ಬಾಸ್ ಸಂಭಾವನೆ ಬಗ್ಗೆ ಕಿಚ್ಚ ಸುದೀಪ್ ನೇರ ಮಾತು

ಬಿಗ್ ಬಾಸ್ ಕನ್ನಡದ ನಿರೂಪಕ ಕಿಚ್ಚ ಸುದೀಪ್ ಅವರ ಸಂಭಾವನೆಯ ಬಗ್ಗೆ ಚರ್ಚೆ ನಡೆಯುತ್ತಿದೆ. ಅವರು ಮನೆ ಬಾಡಿಗೆ ಹೆಚ್ಚಳದ ಹೋಲಿಕೆಯನ್ನು ಉಲ್ಲೇಖಿಸಿ ತಮ್ಮ ಸಂಭಾವನೆಯನ್ನು ರಹಸ್ಯವಾಗಿಟ್ಟಿದ್ದಾರೆ. ಶೋನ ಬಜೆಟ್, ಸ್ಪರ್ಧಿಗಳ ಸಂಭಾವನೆ ಇವೆಲ್ಲ ನೋಡಿ ಸಂಭಾವನೆ ಪಡೆಯಬೇಕಾಗುತ್ತದೆ ಎಂದು ಹೇಳಿದ್ದಾರೆ.

‘ಮನೆ ಬಾಡಿಗೆ ಏರಿದಂತೆ..’; ಬಿಗ್ ಬಾಸ್ ಸಂಭಾವನೆ ಬಗ್ಗೆ ಕಿಚ್ಚ ಸುದೀಪ್ ನೇರ ಮಾತು
ಸುದೀಪ್
ರಾಜೇಶ್ ದುಗ್ಗುಮನೆ
|

Updated on: Jul 01, 2025 | 7:34 AM

Share

ಕಿಚ್ಚ ಸುದೀಪ್ ಅವರು ಬಿಗ್ ಬಾಸ್​ಗೆ (Bigg Boss) ಎಷ್ಟು ಸಂಭಾವನೆ ಪಡೆಯುತ್ತಾರೆ ಎಂಬ ವಿಚಾರ ಯಾವಾಗಲೂ ರಿವೀಲ್ ಆಗಿಲ್ಲ. ಪ್ರತಿಬಾರಿ ಸುದ್ದಿಗೋಷ್ಠಿ ಆಯೋಜನೆ ಆದಾಗ ಈ ಬಗ್ಗೆ ಪ್ರಶ್ನೆ ಮಾಡಲಾಗುತ್ತದೆ. ಈ ಬಾರಿಯ ಬಿಗ್ ಬಾಸ್ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಪ್ರಶ್ನೆ ಕೇಳಲಾಗಿದೆ. ಸುದೀಪ್ ಅವರು ಇದಕ್ಕೆ ಜಾಣತನದ ಉತ್ತರ ನೀಡಿದ್ದಾರೆ. ಸುದೀಪ್ ಅವರು ಈ ಮೊದಲು ಬಿಗ್ ಬಾಸ್ ನಿರೂಪಣೆ ಮಾಡಲ್ಲ ಎಂದು ಟ್ವೀಟ್ ಮಾಡಿದ್ದರು. ಆದರೆ, ಈಗ ಅವರು ನಿರ್ಧಾರವನ್ನು ಬದಲಿಸಿದ್ದಾರೆ.

ಕಲರ್ಸ್​ ಕನ್ನಡದ ಬ್ಯುಸಿನೆಸ್​ ಹೆಡ್ ಪ್ರಶಾಂತ್ ಅವರಿಗೆ ಈ ಬಗ್ಗೆ ಪ್ರಶ್ನೆ ಮಾಡಲಾಯಿತು. ಆದರೆ, ಅವರು ಇದು ವೈಯಕ್ತಿಕ ಎಂದರು. ಅಲ್ಲದೆ, ಈ ಪ್ರಶ್ನೆ ಉತ್ತರಿಸಲು ಸಾಧ್ಯವಿಲ್ಲ ಎಂದರು. ‘ಮನೆ ಬಾಡಿಗೆಗೆ ಹೋದರೆ 10 ಪರ್ಸೆಂಟ್ ಇನ್​ಕ್ರಿಮೆಂಟ್ ಇರುತ್ತೆ. ನಾನು ಲೀಸ್​ಗೂ ಅಲ್ಲ, ರೆಂಟ್​ಗೂ ಅಲ್ಲ. ನಮ್ಮದೊಂದು ಇರುತ್ತೆ ತಾನೇ’ ಎಂದರು ಸುದೀಪ್.

‘ಟ್ವೀಟ್ ಮಾಡುವಾಗ ಸಂಭಾವನೆ ವಿಚಾರ ತಲೆಯಲ್ಲಿ ಇರಲಿಲ್ಲ. ಟ್ವೀಟ್ ಮಾಡದೆಯೂ ಸಂಭಾವನೆ ಹೆಚ್ಚು ಬೇಕು ಎಂದು ಕೇಳಬಹುದಲ್ಲ. ಅದು ಪಬ್ಲಿಕ್​ನಲ್ಲಿ ಮಾತನಾಡುವ ವಿಚಾರ ಅಲ್ಲ. ಹಣ ಅನ್ನೋದು ಲಾಸ್ಟ್. ನಾನು ಸಿನಿಮಾದಲ್ಲಿ ಎಷ್ಟು ಸಂಭಾವನೆ ಪಡೆಯುತ್ತೇನೆ ಎಂಬ ಸರಿಯಾದ ಲೆಕ್ಕ ಯಾರಿಗೂ ಸಿದಲ್ಲ. ಏಕೆಂದರೆ ಪ್ರತಿ ಚಿತ್ರವೂ ಭಿನ್ನ, ಪ್ರತಿ ಚಿತ್ರದ ಬಜೆಟ್ ಕೂಡ ಬೇರೆ ಬೇರೆ ಇರುತ್ತದೆ’ ಎಂದು ಸುದೀಪ್ ಹೇಳಿದ್ದಾರೆ.

ಇದನ್ನೂ ಓದಿ
Image
‘ಒಳ ಉಡುಪು ಹಾಕಿದ್ದೀನಾ, ಇಲ್ಲವಾ ಎಂಬುದನ್ನು ನೀವು ನೋಡಿದ್ದೀರಾ?’;ಖುಷಿ
Image
ಚಿರಂಜೀವಿ ಅಭಿಮಾನಿಗಳಿಗೆ ಬ್ಯಾಡ್ ನ್ಯೂಸ್; ಅಸಮಾಧಾನ ಹೊರಹಾಕಿದ ಫ್ಯಾನ್ಸ್
Image
ಭಾನುವಾರವೂ ಹೆಚ್ಚಿಲ್ಲ ಕಣ್ಣಪ್ಪ ಕಲೆಕ್ಷನ್; ನೂರಾರು ಕೋಟಿ ರೂ. ನೀರಲ್ಲಿ ಹೋಮ
Image
‘ಸಿತಾರೆ ಜಮೀನ್ ಪರ್​​’: ಆಮಿರ್ ಖಾನ್ ರಿಮೇಕ್ ಮಾಡಿದ್ದೇಕೆ? ಉತ್ತರಿಸಿದ ನಟ

‘ನಾನು ರೇಟ್ ಕಟ್ಟೋಕೆ ಹೋಗಲ್ಲ. ನಾನು ಚೀಪ್ ಅಲ್ಲ. ದೊಡ್ಡ ಬಜೆಟ್ ಸಿನಿಮಾ ಇದ್ದಾಗ ನಾವು ಸ್ವಲ್ಪ ಹೊಂದಾಣಿಕೆ ಮಾಡಿಕೊಳ್ಳಬೇಕು. ಮೊದಲ ಸೀಸನ್​​ನಲ್ಲಿ ಪಡೆದಿದ್ದ ಸಂಭಾವನೆಯನ್ನು ಈಗಲೂ ಪಡೆಯೋಕೆ ಆಗುತ್ತಾ? ಹೆಚ್ಚು ಬೇಕಾಗುತ್ತದೆ. ಪ್ರತಿ ಶೋಗೂ ಅದರದ್ದೇ ಆದ ಬಜೆಟ್ ಇರುತ್ತದೆ. ಸ್ಪರ್ಧಿಗಳಿಗೂ ಸಂಭಾವನೆ ಕೊಡಬೇಕು’ ಎಂದಿದ್ದಾರೆ ಅವರು.

ಇದನ್ನೂ ಓದಿ: ಬಿಗ್ ಬಾಸ್ ಬಗ್ಗೆ ಸುದೀಪ್​ಗೆ ಇದ್ದ ಅಸಮಾಧಾನ ಏನು? ನೇರವಾಗಿ ವಿವರಿಸಿದ ಕಿಚ್ಚ

ಈ ಮೊದಲು ಕಿಚ್ಚ ಸುದೀಪ್ ಅವರು ಬಿಗ್ ಬಾಸ್ ಮಾಡಲ್ಲ ಎಂದು ಟ್ವೀಟ್ ಮಾಡಿದ್ದರು. ಆದರೆ, ಆ ಬಳಿಕ ಅವರು ಮನಸ್ಸು ಬದಲಿಸಿದ್ದಾರೆ. ಶೋನಲ್ಲಿ ಕನ್ನಡಕ್ಕೆ ಹೆಚ್ಚಿನ ಒತ್ತು ಕೊಡಬೇಕು ಎಂದು ಅವರು ಪ್ರತಿಪಾದಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಉಡುಪಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿಯೇ ಮರಗಳ ಮಾರಣಹೋಮ
ಉಡುಪಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿಯೇ ಮರಗಳ ಮಾರಣಹೋಮ
ಫುಲ್​​ ಟೈಟ್​​ ಆಗಿ ಆಸ್ಪತ್ರೆಗೆ ಬಂದ ವೈದ್ಯನಿಗೆ ಸಾರ್ವಜನಿಕರಿಂದ ಧರ್ಮದೇಟು
ಫುಲ್​​ ಟೈಟ್​​ ಆಗಿ ಆಸ್ಪತ್ರೆಗೆ ಬಂದ ವೈದ್ಯನಿಗೆ ಸಾರ್ವಜನಿಕರಿಂದ ಧರ್ಮದೇಟು
ಟಿಟಿಡಿಗೆ ಬಮುಲ್ ಪ್ರತಿನಿತ್ಯ ಎಷ್ಟು ತುಪ್ಪ ಕೊಡುತ್ತೆ ಗೊತ್ತಾ?
ಟಿಟಿಡಿಗೆ ಬಮುಲ್ ಪ್ರತಿನಿತ್ಯ ಎಷ್ಟು ತುಪ್ಪ ಕೊಡುತ್ತೆ ಗೊತ್ತಾ?
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ
ಬಂಗಾಳ ಅಂತಿಮ ಸಮರದಲ್ಲಿ ಆರಂಭಿಕ ವಿಘ್ನ
ಬಂಗಾಳ ಅಂತಿಮ ಸಮರದಲ್ಲಿ ಆರಂಭಿಕ ವಿಘ್ನ
ಸಂಸದ ಸುನಿಲ್ ಬೋಸ್ ಮನೆಯಲ್ಲಿ ಸಚಿವ ಮಹದೇವಪ್ಪ ಡಿನ್ನರ್ ಮೀಟಿಂಗ್
ಸಂಸದ ಸುನಿಲ್ ಬೋಸ್ ಮನೆಯಲ್ಲಿ ಸಚಿವ ಮಹದೇವಪ್ಪ ಡಿನ್ನರ್ ಮೀಟಿಂಗ್
ವಾರಾಣಸಿಯ ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ
ವಾರಾಣಸಿಯ ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ
ಡಿಕೆಶಿ ಬಣಕ್ಕೆ ಮೇ ಕ್ರಾಂತಿ ಕನಸು: ಸಿದ್ದರಾಮಯ್ಯ ಬಣ ಅಹಿಂದ ಕಾರ್ಡ್​ ಪ್ಲೇ!
ಡಿಕೆಶಿ ಬಣಕ್ಕೆ ಮೇ ಕ್ರಾಂತಿ ಕನಸು: ಸಿದ್ದರಾಮಯ್ಯ ಬಣ ಅಹಿಂದ ಕಾರ್ಡ್​ ಪ್ಲೇ!
ಹಾಸನ ಹಲವು ಅವಾಂತರ ಸೃಷ್ಟಿಸಿದ ಮಳೆ: ಧರೆಗುರುಳಿದ ವಿದ್ಯುತ್​ ಕಂಬ, ಮರಗಳು
ಹಾಸನ ಹಲವು ಅವಾಂತರ ಸೃಷ್ಟಿಸಿದ ಮಳೆ: ಧರೆಗುರುಳಿದ ವಿದ್ಯುತ್​ ಕಂಬ, ಮರಗಳು
ಐವಿ ಡ್ರಿಪ್​ ಹಾಕಿಸಿಕೊಂಡು ಕೆಲಸಕ್ಕೆ ಹಾಜರಾದ ಅಂಗನವಾಡಿ ಕಾರ್ಯಕರ್ತೆ
ಐವಿ ಡ್ರಿಪ್​ ಹಾಕಿಸಿಕೊಂಡು ಕೆಲಸಕ್ಕೆ ಹಾಜರಾದ ಅಂಗನವಾಡಿ ಕಾರ್ಯಕರ್ತೆ