AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮನೆ ಬಾಡಿಗೆ ಏರಿದಂತೆ..’; ಬಿಗ್ ಬಾಸ್ ಸಂಭಾವನೆ ಬಗ್ಗೆ ಕಿಚ್ಚ ಸುದೀಪ್ ನೇರ ಮಾತು

ಬಿಗ್ ಬಾಸ್ ಕನ್ನಡದ ನಿರೂಪಕ ಕಿಚ್ಚ ಸುದೀಪ್ ಅವರ ಸಂಭಾವನೆಯ ಬಗ್ಗೆ ಚರ್ಚೆ ನಡೆಯುತ್ತಿದೆ. ಅವರು ಮನೆ ಬಾಡಿಗೆ ಹೆಚ್ಚಳದ ಹೋಲಿಕೆಯನ್ನು ಉಲ್ಲೇಖಿಸಿ ತಮ್ಮ ಸಂಭಾವನೆಯನ್ನು ರಹಸ್ಯವಾಗಿಟ್ಟಿದ್ದಾರೆ. ಶೋನ ಬಜೆಟ್, ಸ್ಪರ್ಧಿಗಳ ಸಂಭಾವನೆ ಇವೆಲ್ಲ ನೋಡಿ ಸಂಭಾವನೆ ಪಡೆಯಬೇಕಾಗುತ್ತದೆ ಎಂದು ಹೇಳಿದ್ದಾರೆ.

‘ಮನೆ ಬಾಡಿಗೆ ಏರಿದಂತೆ..’; ಬಿಗ್ ಬಾಸ್ ಸಂಭಾವನೆ ಬಗ್ಗೆ ಕಿಚ್ಚ ಸುದೀಪ್ ನೇರ ಮಾತು
ಸುದೀಪ್
ರಾಜೇಶ್ ದುಗ್ಗುಮನೆ
|

Updated on: Jul 01, 2025 | 7:34 AM

Share

ಕಿಚ್ಚ ಸುದೀಪ್ ಅವರು ಬಿಗ್ ಬಾಸ್​ಗೆ (Bigg Boss) ಎಷ್ಟು ಸಂಭಾವನೆ ಪಡೆಯುತ್ತಾರೆ ಎಂಬ ವಿಚಾರ ಯಾವಾಗಲೂ ರಿವೀಲ್ ಆಗಿಲ್ಲ. ಪ್ರತಿಬಾರಿ ಸುದ್ದಿಗೋಷ್ಠಿ ಆಯೋಜನೆ ಆದಾಗ ಈ ಬಗ್ಗೆ ಪ್ರಶ್ನೆ ಮಾಡಲಾಗುತ್ತದೆ. ಈ ಬಾರಿಯ ಬಿಗ್ ಬಾಸ್ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಪ್ರಶ್ನೆ ಕೇಳಲಾಗಿದೆ. ಸುದೀಪ್ ಅವರು ಇದಕ್ಕೆ ಜಾಣತನದ ಉತ್ತರ ನೀಡಿದ್ದಾರೆ. ಸುದೀಪ್ ಅವರು ಈ ಮೊದಲು ಬಿಗ್ ಬಾಸ್ ನಿರೂಪಣೆ ಮಾಡಲ್ಲ ಎಂದು ಟ್ವೀಟ್ ಮಾಡಿದ್ದರು. ಆದರೆ, ಈಗ ಅವರು ನಿರ್ಧಾರವನ್ನು ಬದಲಿಸಿದ್ದಾರೆ.

ಕಲರ್ಸ್​ ಕನ್ನಡದ ಬ್ಯುಸಿನೆಸ್​ ಹೆಡ್ ಪ್ರಶಾಂತ್ ಅವರಿಗೆ ಈ ಬಗ್ಗೆ ಪ್ರಶ್ನೆ ಮಾಡಲಾಯಿತು. ಆದರೆ, ಅವರು ಇದು ವೈಯಕ್ತಿಕ ಎಂದರು. ಅಲ್ಲದೆ, ಈ ಪ್ರಶ್ನೆ ಉತ್ತರಿಸಲು ಸಾಧ್ಯವಿಲ್ಲ ಎಂದರು. ‘ಮನೆ ಬಾಡಿಗೆಗೆ ಹೋದರೆ 10 ಪರ್ಸೆಂಟ್ ಇನ್​ಕ್ರಿಮೆಂಟ್ ಇರುತ್ತೆ. ನಾನು ಲೀಸ್​ಗೂ ಅಲ್ಲ, ರೆಂಟ್​ಗೂ ಅಲ್ಲ. ನಮ್ಮದೊಂದು ಇರುತ್ತೆ ತಾನೇ’ ಎಂದರು ಸುದೀಪ್.

‘ಟ್ವೀಟ್ ಮಾಡುವಾಗ ಸಂಭಾವನೆ ವಿಚಾರ ತಲೆಯಲ್ಲಿ ಇರಲಿಲ್ಲ. ಟ್ವೀಟ್ ಮಾಡದೆಯೂ ಸಂಭಾವನೆ ಹೆಚ್ಚು ಬೇಕು ಎಂದು ಕೇಳಬಹುದಲ್ಲ. ಅದು ಪಬ್ಲಿಕ್​ನಲ್ಲಿ ಮಾತನಾಡುವ ವಿಚಾರ ಅಲ್ಲ. ಹಣ ಅನ್ನೋದು ಲಾಸ್ಟ್. ನಾನು ಸಿನಿಮಾದಲ್ಲಿ ಎಷ್ಟು ಸಂಭಾವನೆ ಪಡೆಯುತ್ತೇನೆ ಎಂಬ ಸರಿಯಾದ ಲೆಕ್ಕ ಯಾರಿಗೂ ಸಿದಲ್ಲ. ಏಕೆಂದರೆ ಪ್ರತಿ ಚಿತ್ರವೂ ಭಿನ್ನ, ಪ್ರತಿ ಚಿತ್ರದ ಬಜೆಟ್ ಕೂಡ ಬೇರೆ ಬೇರೆ ಇರುತ್ತದೆ’ ಎಂದು ಸುದೀಪ್ ಹೇಳಿದ್ದಾರೆ.

ಇದನ್ನೂ ಓದಿ
Image
‘ಒಳ ಉಡುಪು ಹಾಕಿದ್ದೀನಾ, ಇಲ್ಲವಾ ಎಂಬುದನ್ನು ನೀವು ನೋಡಿದ್ದೀರಾ?’;ಖುಷಿ
Image
ಚಿರಂಜೀವಿ ಅಭಿಮಾನಿಗಳಿಗೆ ಬ್ಯಾಡ್ ನ್ಯೂಸ್; ಅಸಮಾಧಾನ ಹೊರಹಾಕಿದ ಫ್ಯಾನ್ಸ್
Image
ಭಾನುವಾರವೂ ಹೆಚ್ಚಿಲ್ಲ ಕಣ್ಣಪ್ಪ ಕಲೆಕ್ಷನ್; ನೂರಾರು ಕೋಟಿ ರೂ. ನೀರಲ್ಲಿ ಹೋಮ
Image
‘ಸಿತಾರೆ ಜಮೀನ್ ಪರ್​​’: ಆಮಿರ್ ಖಾನ್ ರಿಮೇಕ್ ಮಾಡಿದ್ದೇಕೆ? ಉತ್ತರಿಸಿದ ನಟ

‘ನಾನು ರೇಟ್ ಕಟ್ಟೋಕೆ ಹೋಗಲ್ಲ. ನಾನು ಚೀಪ್ ಅಲ್ಲ. ದೊಡ್ಡ ಬಜೆಟ್ ಸಿನಿಮಾ ಇದ್ದಾಗ ನಾವು ಸ್ವಲ್ಪ ಹೊಂದಾಣಿಕೆ ಮಾಡಿಕೊಳ್ಳಬೇಕು. ಮೊದಲ ಸೀಸನ್​​ನಲ್ಲಿ ಪಡೆದಿದ್ದ ಸಂಭಾವನೆಯನ್ನು ಈಗಲೂ ಪಡೆಯೋಕೆ ಆಗುತ್ತಾ? ಹೆಚ್ಚು ಬೇಕಾಗುತ್ತದೆ. ಪ್ರತಿ ಶೋಗೂ ಅದರದ್ದೇ ಆದ ಬಜೆಟ್ ಇರುತ್ತದೆ. ಸ್ಪರ್ಧಿಗಳಿಗೂ ಸಂಭಾವನೆ ಕೊಡಬೇಕು’ ಎಂದಿದ್ದಾರೆ ಅವರು.

ಇದನ್ನೂ ಓದಿ: ಬಿಗ್ ಬಾಸ್ ಬಗ್ಗೆ ಸುದೀಪ್​ಗೆ ಇದ್ದ ಅಸಮಾಧಾನ ಏನು? ನೇರವಾಗಿ ವಿವರಿಸಿದ ಕಿಚ್ಚ

ಈ ಮೊದಲು ಕಿಚ್ಚ ಸುದೀಪ್ ಅವರು ಬಿಗ್ ಬಾಸ್ ಮಾಡಲ್ಲ ಎಂದು ಟ್ವೀಟ್ ಮಾಡಿದ್ದರು. ಆದರೆ, ಆ ಬಳಿಕ ಅವರು ಮನಸ್ಸು ಬದಲಿಸಿದ್ದಾರೆ. ಶೋನಲ್ಲಿ ಕನ್ನಡಕ್ಕೆ ಹೆಚ್ಚಿನ ಒತ್ತು ಕೊಡಬೇಕು ಎಂದು ಅವರು ಪ್ರತಿಪಾದಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!