AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮನೆ ಬಾಡಿಗೆ ಏರಿದಂತೆ..’; ಬಿಗ್ ಬಾಸ್ ಸಂಭಾವನೆ ಬಗ್ಗೆ ಕಿಚ್ಚ ಸುದೀಪ್ ನೇರ ಮಾತು

ಬಿಗ್ ಬಾಸ್ ಕನ್ನಡದ ನಿರೂಪಕ ಕಿಚ್ಚ ಸುದೀಪ್ ಅವರ ಸಂಭಾವನೆಯ ಬಗ್ಗೆ ಚರ್ಚೆ ನಡೆಯುತ್ತಿದೆ. ಅವರು ಮನೆ ಬಾಡಿಗೆ ಹೆಚ್ಚಳದ ಹೋಲಿಕೆಯನ್ನು ಉಲ್ಲೇಖಿಸಿ ತಮ್ಮ ಸಂಭಾವನೆಯನ್ನು ರಹಸ್ಯವಾಗಿಟ್ಟಿದ್ದಾರೆ. ಶೋನ ಬಜೆಟ್, ಸ್ಪರ್ಧಿಗಳ ಸಂಭಾವನೆ ಇವೆಲ್ಲ ನೋಡಿ ಸಂಭಾವನೆ ಪಡೆಯಬೇಕಾಗುತ್ತದೆ ಎಂದು ಹೇಳಿದ್ದಾರೆ.

‘ಮನೆ ಬಾಡಿಗೆ ಏರಿದಂತೆ..’; ಬಿಗ್ ಬಾಸ್ ಸಂಭಾವನೆ ಬಗ್ಗೆ ಕಿಚ್ಚ ಸುದೀಪ್ ನೇರ ಮಾತು
ಸುದೀಪ್
ರಾಜೇಶ್ ದುಗ್ಗುಮನೆ
|

Updated on: Jul 01, 2025 | 7:34 AM

Share

ಕಿಚ್ಚ ಸುದೀಪ್ ಅವರು ಬಿಗ್ ಬಾಸ್​ಗೆ (Bigg Boss) ಎಷ್ಟು ಸಂಭಾವನೆ ಪಡೆಯುತ್ತಾರೆ ಎಂಬ ವಿಚಾರ ಯಾವಾಗಲೂ ರಿವೀಲ್ ಆಗಿಲ್ಲ. ಪ್ರತಿಬಾರಿ ಸುದ್ದಿಗೋಷ್ಠಿ ಆಯೋಜನೆ ಆದಾಗ ಈ ಬಗ್ಗೆ ಪ್ರಶ್ನೆ ಮಾಡಲಾಗುತ್ತದೆ. ಈ ಬಾರಿಯ ಬಿಗ್ ಬಾಸ್ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಪ್ರಶ್ನೆ ಕೇಳಲಾಗಿದೆ. ಸುದೀಪ್ ಅವರು ಇದಕ್ಕೆ ಜಾಣತನದ ಉತ್ತರ ನೀಡಿದ್ದಾರೆ. ಸುದೀಪ್ ಅವರು ಈ ಮೊದಲು ಬಿಗ್ ಬಾಸ್ ನಿರೂಪಣೆ ಮಾಡಲ್ಲ ಎಂದು ಟ್ವೀಟ್ ಮಾಡಿದ್ದರು. ಆದರೆ, ಈಗ ಅವರು ನಿರ್ಧಾರವನ್ನು ಬದಲಿಸಿದ್ದಾರೆ.

ಕಲರ್ಸ್​ ಕನ್ನಡದ ಬ್ಯುಸಿನೆಸ್​ ಹೆಡ್ ಪ್ರಶಾಂತ್ ಅವರಿಗೆ ಈ ಬಗ್ಗೆ ಪ್ರಶ್ನೆ ಮಾಡಲಾಯಿತು. ಆದರೆ, ಅವರು ಇದು ವೈಯಕ್ತಿಕ ಎಂದರು. ಅಲ್ಲದೆ, ಈ ಪ್ರಶ್ನೆ ಉತ್ತರಿಸಲು ಸಾಧ್ಯವಿಲ್ಲ ಎಂದರು. ‘ಮನೆ ಬಾಡಿಗೆಗೆ ಹೋದರೆ 10 ಪರ್ಸೆಂಟ್ ಇನ್​ಕ್ರಿಮೆಂಟ್ ಇರುತ್ತೆ. ನಾನು ಲೀಸ್​ಗೂ ಅಲ್ಲ, ರೆಂಟ್​ಗೂ ಅಲ್ಲ. ನಮ್ಮದೊಂದು ಇರುತ್ತೆ ತಾನೇ’ ಎಂದರು ಸುದೀಪ್.

‘ಟ್ವೀಟ್ ಮಾಡುವಾಗ ಸಂಭಾವನೆ ವಿಚಾರ ತಲೆಯಲ್ಲಿ ಇರಲಿಲ್ಲ. ಟ್ವೀಟ್ ಮಾಡದೆಯೂ ಸಂಭಾವನೆ ಹೆಚ್ಚು ಬೇಕು ಎಂದು ಕೇಳಬಹುದಲ್ಲ. ಅದು ಪಬ್ಲಿಕ್​ನಲ್ಲಿ ಮಾತನಾಡುವ ವಿಚಾರ ಅಲ್ಲ. ಹಣ ಅನ್ನೋದು ಲಾಸ್ಟ್. ನಾನು ಸಿನಿಮಾದಲ್ಲಿ ಎಷ್ಟು ಸಂಭಾವನೆ ಪಡೆಯುತ್ತೇನೆ ಎಂಬ ಸರಿಯಾದ ಲೆಕ್ಕ ಯಾರಿಗೂ ಸಿದಲ್ಲ. ಏಕೆಂದರೆ ಪ್ರತಿ ಚಿತ್ರವೂ ಭಿನ್ನ, ಪ್ರತಿ ಚಿತ್ರದ ಬಜೆಟ್ ಕೂಡ ಬೇರೆ ಬೇರೆ ಇರುತ್ತದೆ’ ಎಂದು ಸುದೀಪ್ ಹೇಳಿದ್ದಾರೆ.

ಇದನ್ನೂ ಓದಿ
Image
‘ಒಳ ಉಡುಪು ಹಾಕಿದ್ದೀನಾ, ಇಲ್ಲವಾ ಎಂಬುದನ್ನು ನೀವು ನೋಡಿದ್ದೀರಾ?’;ಖುಷಿ
Image
ಚಿರಂಜೀವಿ ಅಭಿಮಾನಿಗಳಿಗೆ ಬ್ಯಾಡ್ ನ್ಯೂಸ್; ಅಸಮಾಧಾನ ಹೊರಹಾಕಿದ ಫ್ಯಾನ್ಸ್
Image
ಭಾನುವಾರವೂ ಹೆಚ್ಚಿಲ್ಲ ಕಣ್ಣಪ್ಪ ಕಲೆಕ್ಷನ್; ನೂರಾರು ಕೋಟಿ ರೂ. ನೀರಲ್ಲಿ ಹೋಮ
Image
‘ಸಿತಾರೆ ಜಮೀನ್ ಪರ್​​’: ಆಮಿರ್ ಖಾನ್ ರಿಮೇಕ್ ಮಾಡಿದ್ದೇಕೆ? ಉತ್ತರಿಸಿದ ನಟ

‘ನಾನು ರೇಟ್ ಕಟ್ಟೋಕೆ ಹೋಗಲ್ಲ. ನಾನು ಚೀಪ್ ಅಲ್ಲ. ದೊಡ್ಡ ಬಜೆಟ್ ಸಿನಿಮಾ ಇದ್ದಾಗ ನಾವು ಸ್ವಲ್ಪ ಹೊಂದಾಣಿಕೆ ಮಾಡಿಕೊಳ್ಳಬೇಕು. ಮೊದಲ ಸೀಸನ್​​ನಲ್ಲಿ ಪಡೆದಿದ್ದ ಸಂಭಾವನೆಯನ್ನು ಈಗಲೂ ಪಡೆಯೋಕೆ ಆಗುತ್ತಾ? ಹೆಚ್ಚು ಬೇಕಾಗುತ್ತದೆ. ಪ್ರತಿ ಶೋಗೂ ಅದರದ್ದೇ ಆದ ಬಜೆಟ್ ಇರುತ್ತದೆ. ಸ್ಪರ್ಧಿಗಳಿಗೂ ಸಂಭಾವನೆ ಕೊಡಬೇಕು’ ಎಂದಿದ್ದಾರೆ ಅವರು.

ಇದನ್ನೂ ಓದಿ: ಬಿಗ್ ಬಾಸ್ ಬಗ್ಗೆ ಸುದೀಪ್​ಗೆ ಇದ್ದ ಅಸಮಾಧಾನ ಏನು? ನೇರವಾಗಿ ವಿವರಿಸಿದ ಕಿಚ್ಚ

ಈ ಮೊದಲು ಕಿಚ್ಚ ಸುದೀಪ್ ಅವರು ಬಿಗ್ ಬಾಸ್ ಮಾಡಲ್ಲ ಎಂದು ಟ್ವೀಟ್ ಮಾಡಿದ್ದರು. ಆದರೆ, ಆ ಬಳಿಕ ಅವರು ಮನಸ್ಸು ಬದಲಿಸಿದ್ದಾರೆ. ಶೋನಲ್ಲಿ ಕನ್ನಡಕ್ಕೆ ಹೆಚ್ಚಿನ ಒತ್ತು ಕೊಡಬೇಕು ಎಂದು ಅವರು ಪ್ರತಿಪಾದಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರೋಹಿತ್, ಕೊಹ್ಲಿ ಏಕದಿನ ವಿಶ್ವಕಪ್ ಆಡುವ ಬಗ್ಗೆ ಮೌನ ಮುರಿದ ಧೋನಿ
ರೋಹಿತ್, ಕೊಹ್ಲಿ ಏಕದಿನ ವಿಶ್ವಕಪ್ ಆಡುವ ಬಗ್ಗೆ ಮೌನ ಮುರಿದ ಧೋನಿ
ಬೆಂಗಳೂರಿನಲ್ಲಿ ದಿಢೀರ್ ಕುಸಿದು ಬಿದ್ದ ರಸ್ತೆ; ಫುಲ್ ಟ್ರಾಫಿಕ್ ಜಾಮ್!
ಬೆಂಗಳೂರಿನಲ್ಲಿ ದಿಢೀರ್ ಕುಸಿದು ಬಿದ್ದ ರಸ್ತೆ; ಫುಲ್ ಟ್ರಾಫಿಕ್ ಜಾಮ್!
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್