AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಮಿನಿ ಸೀಸನ್​ ಫಿನಾಲೆಗೆ ಸಿಂಹಾಸನವೇರಿ ಬಂದ ಕಿಚ್ಚ; ಇಲ್ಲಿದೆ ಅದ್ದೂರಿ ವೇದಿಕೆಯ ಝಲಕ್​

ಬಿಗ್​ ಬಾಸ್​ ಮಿನಿ ಸೀಸನ್​ ಫಿನಾಲೆ ವೇದಿಕೆಗೆ ಕಿಚ್ಚ ಸುದೀಪ್​ ನೀಡಿದ ಎಂಟ್ರಿ ಸೂಪರ್​ ಆಗಿದೆ. ಸಿಂಹಾಸನದ ಮೇಲೆ ಕುಳಿತು ಅವರು ಆಗಮಿಸಿದ್ದಾರೆ. ಬಿಗ್​ ಬಾಸ್​ ಮಾಜಿ ಸ್ಪರ್ಧಿಗಳು ಮಸ್ತ್​ ಆಗಿ ಡ್ಯಾನ್ಸ್​ ಮಾಡಿದ್ದಾರೆ.

ಬಿಗ್​ ಬಾಸ್​ ಮಿನಿ ಸೀಸನ್​ ಫಿನಾಲೆಗೆ ಸಿಂಹಾಸನವೇರಿ ಬಂದ ಕಿಚ್ಚ; ಇಲ್ಲಿದೆ ಅದ್ದೂರಿ ವೇದಿಕೆಯ ಝಲಕ್​
ಕಿಚ್ಚ ಸುದೀಪ್
TV9 Web
| Edited By: |

Updated on: Aug 30, 2021 | 10:09 AM

Share

‘ಬಿಗ್​ ಬಾಸ್​ ಕನ್ನಡ ಸೀಸನ್​ 8’ ಮುಗಿದ ಬೆನ್ನಲ್ಲೇ ಶುರುವಾಗಿದ್ದ ‘ಬಿಗ್​ ಬಾಸ್​ ಮಿನಿ ಸೀಸನ್​’ ಕೂಡ ಈಗ ಮುಕ್ತಾಯದ ಹಂತದಲ್ಲಿದೆ. 15 ಸೆಲೆಬ್ರಿಟಿಗಳು ಇಷ್ಟು ದಿನ ಹಲವು ಟಾಸ್ಕ್​ಗಳನ್ನು ನಿಭಾಯಿಸುವ ಮೂಲಕ ಹಣಾಹಣಿ ನಡೆಸಿದ್ದಾರೆ. ಈಗ ಫಿನಾಲೆ ಸಮಯ ಬಂದಿದ್ದು, ಕಿಚ್ಚ ಸುದೀಪ್​ ಅವರು ಆ ವಿಶೇಷ ಎಪಿಸೋಡ್​ ನಡೆಸಿಕೊಟ್ಟಿದ್ದಾರೆ. ಕಳೆದ 8 ಸೀಸನ್​ಗಳಲ್ಲೂ ಕನ್ನಡ ಬಿಗ್​ ಬಾಸ್​ನ ನಿರೂಪಣೆಯನ್ನು ಸುದೀಪ್​ ಯಶಸ್ವಿಯಾಗಿ ನಿಭಾಯಿಸಿದ್ದಾರೆ. ಈಗ ಮಿನಿ ಸೀಸನ್​ ಫಿನಾಲೆ ಕೂಡ ಅವರ ನಿರೂಪಣೆಯಲ್ಲೇ ನಡೆದಿದೆ.

ಶನಿವಾರ (ಸೆ.4) ಮತ್ತು ಭಾನುವಾರ (ಸೆ.5) ಮಧ್ಯಾಹ್ನ ಮೂರು ಗಂಟೆಗೆ ಫಿನಾಲೆ ಪ್ರಸಾರ ಆಗಲಿದೆ. ಈಗಾಗಲೇ ಅದರ ಚಿತ್ರೀಕರಣ ಮುಗಿದಿದೆ. ಅದರ ಒಂದು ಪ್ರೋಮೋವನ್ನು ಕಲರ್ಸ್​ ಕನ್ನಡ ವಾಹಿನಿ ಹಂಚಿಕೊಂಡಿದೆ. ಆ ಮೂಲಕ ಫಿನಾಲೆ ವೇದಿಕೆಯ ಅದ್ದೂರಿತನ​ ಹೇಗಿತ್ತು ಎಂಬುದರ ಝಲಕ್​ ತೋರಿಸಲಾಗಿದೆ. ಬಿಗ್​ ಬಾಸ್ ಮಿನಿ ಸೀಸನ್​​ನಲ್ಲಿ ಭಾಗವಹಿಸಿದ್ದ ಸ್ಪರ್ಧಿಗಳಿಗೆ ಪ್ರಶಸ್ತಿಗಳನ್ನು ನೀಡಲಾಗುತ್ತಿದ್ದು, ‘ಪ್ರಶಸ್ತಿಗಳ ಈ ಸಂಜೆಗೆ ನಿಮ್ಮೆಲ್ಲರಿಗೂ ಸ್ವಾಗತ’ ಎನ್ನುವ ಮೂಲಕ ಕಿಚ್ಚ ಸುದೀಪ್​ ಅವರು ಎಂದಿನ ಖದರ್​​ನಲ್ಲಿ ನಿರೂಪಣೆ ಆರಂಭಿಸಿದ್ದಾರೆ.

ಈ ವೇದಿಕೆಗೆ ಕಿಚ್ಚ ನೀಡಿದ ಎಂಟ್ರಿ ಸೂಪರ್​ ಆಗಿದೆ. ಸಿಂಹಾಸನದ ಮೇಲೆ ಕುಳಿತು ಅವರು ಆಗಮಿಸಿದ್ದಾರೆ. ಬಿಗ್​ ಬಾಸ್​ ಮಾಜಿ ಸ್ಪರ್ಧಿಗಳು ಮಸ್ತ್​ ಆಗಿ ಡ್ಯಾನ್ಸ್​ ಮಾಡಿದ್ದಾರೆ. ಬಿಗ್​ ಬಾಸ್​ ಕನ್ನಡ ಸೀಸನ್ 8ರ ವಿನ್ನರ್​ ಮಂಜು ಪಾವಗಡ ಕೂಡ ಹೆಜ್ಜೆ ಹಾಕಿದ್ದಾರೆ. ಪ್ರಿಯಾಂಕಾ ತಿಮ್ಮೇಶ್​, ದಿವ್ಯಾ ಸುರೇಶ್​, ವಾಸುಕಿ ವೈಭವ್​ ಮುಂತಾದವರು ವೇದಿಕೆಯಲ್ಲಿ ಭರ್ಜರಿ ಮನರಂಜನೆ ನೀಡಿದ್ದಾರೆ.

ಬಿಗ್​ ಬಾಸ್​ ಮಿನಿ ಸೀಸನ್​ ಎಂಬುದು ಕನ್ನಡ ಕಿರುತೆರೆಯಲ್ಲಿ ಒಂದು ಹೊಸ ಪ್ರಯೋಗ. ಕಲರ್ಸ್​ ಕನ್ನಡ ವಾಹಿನಿಯ ಧಾರಾವಾಹಿಗಳ ಹಲವು ಕಲಾವಿದರಿಗೆ 6 ದಿನಗಳ ಕಾಲ ಬಿಗ್​ ಬಾಸ್​ ಮನೆಯಲ್ಲಿ ಇರುವ ಅವಕಾಶ ನೀಡಲಾಗಿತ್ತು. ಗಗನ್​ ಚಿನ್ನಪ್ಪ, ಚಂದನಾ, ಕೌಸ್ತುಭ, ವೈಷ್ಣವಿ, ಅಕುಲ್ ಬಾಲಾಜಿ, ನಿರಂಜನ್ ದೇಶಪಾಂಡೆ, ರಮೋಲಾ, ಕಿರಣ್​ ರಾಜ್​ ಮುಂತಾದವರು ಈ ಮಿನಿ ಸೀಸನ್​ನಲ್ಲಿ ಪಾಲ್ಗೊಳ್ಳುವ ಅವಕಾಶ ಪಡೆದುಕೊಂಡಿದ್ದರು. ಯಾರಿಗೆ ಯಾವ ಪ್ರಶಸ್ತಿಗಳು ಸಿಕ್ಕಿವೆ ಎಂಬುದು ಈ ವಾರಾಂತ್ಯದ ಫಿನಾಲೆ ಎಪಿಸೋಡ್​ನಲ್ಲಿ ಗೊತ್ತಾಗಲಿದೆ.

ಇದನ್ನೂ ಓದಿ:

ಕಿಚ್ಚ ಸುದೀಪ್​ ಕುಟುಂಬದಲ್ಲಿ ​ಮದುವೆ ಸಂಭ್ರಮ; ಇಲ್ಲಿವೆ ಕಲರ್​ಫುಲ್​ ಫ್ಯಾಮಿಲಿ ಫೋಟೋಗಳು

ಹುಟ್ಟುಹಬ್ಬದ ದಿನ ಅಭಿಮಾನಿಗಳನ್ನು ಭೇಟಿ ಆಗಲ್ಲ ಎಂದ ಸುದೀಪ್​; ಮೊದಲೇ ತಿಳಿಸಿ ಕ್ಷಮೆ ಕೇಳಿದ ಕಿಚ್ಚ

ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?
ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ