AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಸ್ಪರ್ಧಿಗಳಿಗಾಗಿ ಪ್ರೀತಿಯಿಂದ ಅಡುಗೆ ಮಾಡಿದ ಸುದೀಪ್; ವೈರಲ್ ಆಯ್ತು ವಿಡಿಯೋ

ಕೆಲವರಿಗೆ ಅಡುಗೆ ಮನೆ ಎಂದರೆ ಸಖತ್ ಇಷ್ಟ, ಕೆಲವರಿಗೆ ಅಡುಗೆ ಮನೆ ಎಂದರೆ ಅಲರ್ಜಿ. ಈ ವಾರ ಟಾಸ್ಕ್​ ಆಡಿ ದಣಿದಿದ್ದರಿಂದ ಸ್ಪರ್ಧಿಗಳಿಗೆ ಸುದೀಪ್ ಅವರು ಪ್ರೀತಿಯಿಂದ ಅಡುಗೆ ಮಾಡಿ ಕಳುಹಿಸಿದ್ದಾರೆ.

ಬಿಗ್ ಬಾಸ್ ಸ್ಪರ್ಧಿಗಳಿಗಾಗಿ ಪ್ರೀತಿಯಿಂದ ಅಡುಗೆ ಮಾಡಿದ ಸುದೀಪ್; ವೈರಲ್ ಆಯ್ತು ವಿಡಿಯೋ
ಕಿಚ್ಚ ಸುದೀಪ್
TV9 Web
| Edited By: |

Updated on: Nov 19, 2022 | 2:23 PM

Share

ಕನ್ನಡದಲ್ಲಿ ಬಿಗ್ ಬಾಸ್ (Bigg Boss) ಆರಂಭ ಆದಾಗಿನಿಂದ ಕಿಚ್ಚ ಸುದೀಪ್ ಅವರೇ ಸಾರಥ್ಯ ವಹಿಸಿಕೊಂಡಿದ್ದಾರೆ. ಸ್ಪರ್ಧಿಗಳನ್ನು ಅವರು ಮನೆ ಸದಸ್ಯರಂತೆ ನೋಡುತ್ತಾರೆ. ಬಿಗ್ ಬಾಸ್​ನಿಂದ ಹೊರ ಬಂದ ನಂತರವೂ ಸ್ಪರ್ಧಿಗಳ ಜತೆ ಒಳ್ಳೆಯ ಬಾಂಧವ್ಯವನ್ನು ಅವರು ಮುಂದುವರಿಸುತ್ತಾರೆ. ಕೆಲ ಸೀಸನ್​ಗಳಲ್ಲಿ ಕಿಚ್ಚ ಸುದೀಪ್ (Kichcha Sudeep) ಅವರು ಸ್ಪರ್ಧಿಗಳಿಗೆ ಅಡುಗೆ ಮಾಡಿ ಕೊಟ್ಟಿದ್ದರು. ಈ ಬಾರಿಯೂ ಅದು ಮುಂದುವರಿದೆ. ಈ ಬಾರಿ ಅವರು ಸ್ಪರ್ಧಿಗಳಿಗೆ ವಿವಿಧ ಬಗೆಯ ಅಡುಗೆ ಮಾಡಿ ಕಳುಹಿಸಿದ್ದಾರೆ.

‘ಕನ್ನಡ ಬಿಗ್ ಬಾಸ್ ಸೀಸನ್ 9’ ಸಾಕಷ್ಟು ಕುತೂಹಲ ಮೂಡಿಸಿದೆ. ಹಳೆಯ ಸ್ಪರ್ಧಿಗಳ ಜತೆ ಹೊಸ ಸ್ಪರ್ಧಿಗಳು ಬೆರೆತಿದ್ದಾರೆ. ಮನೆ ಆಗಾಗ ರಣರಂಗವಾದ ಉದಾಹರಣೆಯೂ ಇದೆ. ಅಡುಗೆ ವಿಚಾರದಲ್ಲಿ ಮನೆಯಲ್ಲಿ ಸಾಕಷ್ಟು ಬಾರಿ ಕಿತ್ತಾಟ ನಡೆದಿದೆ. ಕೆಲವರಿಗೆ ಅಡುಗೆ ಮನೆ ಎಂದರೆ ಸಖತ್ ಇಷ್ಟ, ಕೆಲವರಿಗೆ ಅಡುಗೆ ಮನೆ ಎಂದರೆ ಅಲರ್ಜಿ. ಈ ವಾರ ಟಾಸ್ಕ್​ ಆಡಿ ದಣಿದಿದ್ದರಿಂದ ಸ್ಪರ್ಧಿಗಳಿಗೆ ಸುದೀಪ್ ಅವರು ಪ್ರೀತಿಯಿಂದ ಅಡುಗೆ ಮಾಡಿ ಕಳುಹಿಸಿದ್ದಾರೆ.

ಇದನ್ನೂ ಓದಿ
Image
Bigg Boss Elimination: ಬಿಗ್​ ಬಾಸ್​ನಲ್ಲಿ ದರ್ಶ್​ ಆಟ ಅಂತ್ಯ; 3ನೇ ವಾರದ ಎಲಿಮಿನೇಷನ್​ನಲ್ಲಿ ಮಯೂರಿ ಸೇಫ್​
Image
BBK9: ಬಿಗ್​ ಬಾಸ್​ ಮೇಲೆ ಮ್ಯಾಚ್​ ಫಿಕ್ಸಿಂಗ್​ ಆರೋಪ; ಗುರೂಜಿ ವಿರುದ್ಧ ಗುಡುಗಿದ ಸುದೀಪ್​
Image
BBK9: ಬಿಗ್​ ಬಾಸ್​ 2ನೇ ವಾರ ನವಾಜ್​ ಎಲಿಮಿನೇಟ್​; ದೊಡ್ಮನೆಯಲ್ಲಿ ನಡೆಯಲಿಲ್ಲ ಪ್ರಾಸದ ಆಟ
Image
BBK9: ಬಿಗ್​ ಬಾಸ್​ನಿಂದ ಐಶ್ವರ್ಯಾ ಪಿಸ್ಸೆ ಎಲಿಮಿನೇಟ್​; ಒಂದೇ ವಾರಕ್ಕೆ ಮುಗಿಯಿತು ದೊಡ್ಮನೆ ಆಟ

ಕಿಚ್ಚ ಸುದೀಪ್ ಅವರು ಕಿಚನ್​ನಲ್ಲಿ ಅಡುಗೆ ಮಾಡುತ್ತಿರುವುದು, ಮಾಡಿದ ಅಡುಗೆಯನ್ನು ಮನೆಯವರಿಗೆ ಕಳುಹಿಸಿದ್ದು, ಮನೆ ಮಂದಿ ಅದನ್ನು ಸವಿದು ರಿಯಾಕ್ಷನ್ ನೀಡಿದ ಪ್ರೋಮೋವನ್ನು ಕಲರ್ಸ್ ಕನ್ನಡ ವಾಹಿನಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ. ಇದಕ್ಕೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಸ್ಪರ್ಧಿಗಳಂತೂ ಕಿಚ್ಚನ ಕೈರುಚಿ ಸವಿದು ಸಖತ್ ಖುಷಿಪಟ್ಟಿದ್ದಾರೆ.

ಈ ವಾರ ಗೊಂಬೆ ಮಾಡುವ ಟಾಸ್ಕ್ ನೀಡಲಾಗಿತ್ತು. ಈ ಆಟದಿಂದ ಎಲ್ಲರೂ ದಣಿದಿದ್ದಾರೆ. ಅಲ್ಲದೆ, ಮನೆಯಲ್ಲಿ ದಿನಸಿ ಕಡಿಮೆ ಇತ್ತು. ಇದು ಸ್ಪರ್ಧಿಗಳ ಚಿಂತೆ ಹೆಚ್ಚಿಸಿತ್ತು. ವಾರಾಂತ್ಯಕ್ಕೆ ಉಪವಾಸ ಇರುವ ಪರಿಸ್ಥಿತಿ ಬಂದೊದಗಬಹುದು ಎಂದು ಎಲ್ಲರೂ ಭಾವಿಸಿದ್ದರು. ಆದರೆ, ಹಾಗಾಗಿಲ್ಲ. ಕಿಚ್ಚ ಸುದೀಪ್ ಅವರ ಕೈರುಚಿ ಸವಿಯುವ ಅವಕಾಶ ಸ್ಪರ್ಧಿಗಳಿಗೆ ಸಿಕ್ಕಿದೆ.

ಇದನ್ನೂ ಓದಿ: ಬಿಗ್ ಬಾಸ್​ ಮನೆಯಲ್ಲಿ ಒಪ್ಪಂದಗಳಿಗಿಲ್ಲ ಬೆಲೆ; ವೀಕೆಂಡ್​ನಲ್ಲಿ ಕಿಚ್ಚ ಸುದೀಪ್ ತೆಗೆದುಕೊಳ್ಳಲಿದ್ದಾರೆ ಕ್ಲಾಸ್?

ಕಳೆದ ವರ್ಷ ಬಿಗ್ ಬಾಸ್ ವೇಳೆ ಸ್ಪರ್ಧಿಗಳಿಗೆ ಇದೇ ರೀತಿಯ ಸದಾವಕಾಶ ಸಿಕ್ಕಿತ್ತು. ಸ್ಪರ್ಧಿಗಳಿಗೋಸ್ಕರ ಕಿಚ್ಚ ಸುದೀಪ್ ಅವರು ಅಡುಗೆ ಮಾಡಿ ಕಳುಹಿಸಿದ್ದರು. ಈ ವಾರ ಮನೆಯಲ್ಲಿ ಬಹುತೇಕರು ನಾಮಿನೇಟ್ ಆಗಿದ್ದಾರೆ. ಆ ಪೈಕಿ ಒಬ್ಬರು ಎಲಿಮಿನೇಟ್ ಆಗಲಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ