AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಸ್ಪರ್ಧಿಗಳಿಗಾಗಿ ಪ್ರೀತಿಯಿಂದ ಅಡುಗೆ ಮಾಡಿದ ಸುದೀಪ್; ವೈರಲ್ ಆಯ್ತು ವಿಡಿಯೋ

ಕೆಲವರಿಗೆ ಅಡುಗೆ ಮನೆ ಎಂದರೆ ಸಖತ್ ಇಷ್ಟ, ಕೆಲವರಿಗೆ ಅಡುಗೆ ಮನೆ ಎಂದರೆ ಅಲರ್ಜಿ. ಈ ವಾರ ಟಾಸ್ಕ್​ ಆಡಿ ದಣಿದಿದ್ದರಿಂದ ಸ್ಪರ್ಧಿಗಳಿಗೆ ಸುದೀಪ್ ಅವರು ಪ್ರೀತಿಯಿಂದ ಅಡುಗೆ ಮಾಡಿ ಕಳುಹಿಸಿದ್ದಾರೆ.

ಬಿಗ್ ಬಾಸ್ ಸ್ಪರ್ಧಿಗಳಿಗಾಗಿ ಪ್ರೀತಿಯಿಂದ ಅಡುಗೆ ಮಾಡಿದ ಸುದೀಪ್; ವೈರಲ್ ಆಯ್ತು ವಿಡಿಯೋ
ಕಿಚ್ಚ ಸುದೀಪ್
TV9 Web
| Edited By: |

Updated on: Nov 19, 2022 | 2:23 PM

Share

ಕನ್ನಡದಲ್ಲಿ ಬಿಗ್ ಬಾಸ್ (Bigg Boss) ಆರಂಭ ಆದಾಗಿನಿಂದ ಕಿಚ್ಚ ಸುದೀಪ್ ಅವರೇ ಸಾರಥ್ಯ ವಹಿಸಿಕೊಂಡಿದ್ದಾರೆ. ಸ್ಪರ್ಧಿಗಳನ್ನು ಅವರು ಮನೆ ಸದಸ್ಯರಂತೆ ನೋಡುತ್ತಾರೆ. ಬಿಗ್ ಬಾಸ್​ನಿಂದ ಹೊರ ಬಂದ ನಂತರವೂ ಸ್ಪರ್ಧಿಗಳ ಜತೆ ಒಳ್ಳೆಯ ಬಾಂಧವ್ಯವನ್ನು ಅವರು ಮುಂದುವರಿಸುತ್ತಾರೆ. ಕೆಲ ಸೀಸನ್​ಗಳಲ್ಲಿ ಕಿಚ್ಚ ಸುದೀಪ್ (Kichcha Sudeep) ಅವರು ಸ್ಪರ್ಧಿಗಳಿಗೆ ಅಡುಗೆ ಮಾಡಿ ಕೊಟ್ಟಿದ್ದರು. ಈ ಬಾರಿಯೂ ಅದು ಮುಂದುವರಿದೆ. ಈ ಬಾರಿ ಅವರು ಸ್ಪರ್ಧಿಗಳಿಗೆ ವಿವಿಧ ಬಗೆಯ ಅಡುಗೆ ಮಾಡಿ ಕಳುಹಿಸಿದ್ದಾರೆ.

‘ಕನ್ನಡ ಬಿಗ್ ಬಾಸ್ ಸೀಸನ್ 9’ ಸಾಕಷ್ಟು ಕುತೂಹಲ ಮೂಡಿಸಿದೆ. ಹಳೆಯ ಸ್ಪರ್ಧಿಗಳ ಜತೆ ಹೊಸ ಸ್ಪರ್ಧಿಗಳು ಬೆರೆತಿದ್ದಾರೆ. ಮನೆ ಆಗಾಗ ರಣರಂಗವಾದ ಉದಾಹರಣೆಯೂ ಇದೆ. ಅಡುಗೆ ವಿಚಾರದಲ್ಲಿ ಮನೆಯಲ್ಲಿ ಸಾಕಷ್ಟು ಬಾರಿ ಕಿತ್ತಾಟ ನಡೆದಿದೆ. ಕೆಲವರಿಗೆ ಅಡುಗೆ ಮನೆ ಎಂದರೆ ಸಖತ್ ಇಷ್ಟ, ಕೆಲವರಿಗೆ ಅಡುಗೆ ಮನೆ ಎಂದರೆ ಅಲರ್ಜಿ. ಈ ವಾರ ಟಾಸ್ಕ್​ ಆಡಿ ದಣಿದಿದ್ದರಿಂದ ಸ್ಪರ್ಧಿಗಳಿಗೆ ಸುದೀಪ್ ಅವರು ಪ್ರೀತಿಯಿಂದ ಅಡುಗೆ ಮಾಡಿ ಕಳುಹಿಸಿದ್ದಾರೆ.

ಇದನ್ನೂ ಓದಿ
Image
Bigg Boss Elimination: ಬಿಗ್​ ಬಾಸ್​ನಲ್ಲಿ ದರ್ಶ್​ ಆಟ ಅಂತ್ಯ; 3ನೇ ವಾರದ ಎಲಿಮಿನೇಷನ್​ನಲ್ಲಿ ಮಯೂರಿ ಸೇಫ್​
Image
BBK9: ಬಿಗ್​ ಬಾಸ್​ ಮೇಲೆ ಮ್ಯಾಚ್​ ಫಿಕ್ಸಿಂಗ್​ ಆರೋಪ; ಗುರೂಜಿ ವಿರುದ್ಧ ಗುಡುಗಿದ ಸುದೀಪ್​
Image
BBK9: ಬಿಗ್​ ಬಾಸ್​ 2ನೇ ವಾರ ನವಾಜ್​ ಎಲಿಮಿನೇಟ್​; ದೊಡ್ಮನೆಯಲ್ಲಿ ನಡೆಯಲಿಲ್ಲ ಪ್ರಾಸದ ಆಟ
Image
BBK9: ಬಿಗ್​ ಬಾಸ್​ನಿಂದ ಐಶ್ವರ್ಯಾ ಪಿಸ್ಸೆ ಎಲಿಮಿನೇಟ್​; ಒಂದೇ ವಾರಕ್ಕೆ ಮುಗಿಯಿತು ದೊಡ್ಮನೆ ಆಟ

ಕಿಚ್ಚ ಸುದೀಪ್ ಅವರು ಕಿಚನ್​ನಲ್ಲಿ ಅಡುಗೆ ಮಾಡುತ್ತಿರುವುದು, ಮಾಡಿದ ಅಡುಗೆಯನ್ನು ಮನೆಯವರಿಗೆ ಕಳುಹಿಸಿದ್ದು, ಮನೆ ಮಂದಿ ಅದನ್ನು ಸವಿದು ರಿಯಾಕ್ಷನ್ ನೀಡಿದ ಪ್ರೋಮೋವನ್ನು ಕಲರ್ಸ್ ಕನ್ನಡ ವಾಹಿನಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ. ಇದಕ್ಕೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಸ್ಪರ್ಧಿಗಳಂತೂ ಕಿಚ್ಚನ ಕೈರುಚಿ ಸವಿದು ಸಖತ್ ಖುಷಿಪಟ್ಟಿದ್ದಾರೆ.

ಈ ವಾರ ಗೊಂಬೆ ಮಾಡುವ ಟಾಸ್ಕ್ ನೀಡಲಾಗಿತ್ತು. ಈ ಆಟದಿಂದ ಎಲ್ಲರೂ ದಣಿದಿದ್ದಾರೆ. ಅಲ್ಲದೆ, ಮನೆಯಲ್ಲಿ ದಿನಸಿ ಕಡಿಮೆ ಇತ್ತು. ಇದು ಸ್ಪರ್ಧಿಗಳ ಚಿಂತೆ ಹೆಚ್ಚಿಸಿತ್ತು. ವಾರಾಂತ್ಯಕ್ಕೆ ಉಪವಾಸ ಇರುವ ಪರಿಸ್ಥಿತಿ ಬಂದೊದಗಬಹುದು ಎಂದು ಎಲ್ಲರೂ ಭಾವಿಸಿದ್ದರು. ಆದರೆ, ಹಾಗಾಗಿಲ್ಲ. ಕಿಚ್ಚ ಸುದೀಪ್ ಅವರ ಕೈರುಚಿ ಸವಿಯುವ ಅವಕಾಶ ಸ್ಪರ್ಧಿಗಳಿಗೆ ಸಿಕ್ಕಿದೆ.

ಇದನ್ನೂ ಓದಿ: ಬಿಗ್ ಬಾಸ್​ ಮನೆಯಲ್ಲಿ ಒಪ್ಪಂದಗಳಿಗಿಲ್ಲ ಬೆಲೆ; ವೀಕೆಂಡ್​ನಲ್ಲಿ ಕಿಚ್ಚ ಸುದೀಪ್ ತೆಗೆದುಕೊಳ್ಳಲಿದ್ದಾರೆ ಕ್ಲಾಸ್?

ಕಳೆದ ವರ್ಷ ಬಿಗ್ ಬಾಸ್ ವೇಳೆ ಸ್ಪರ್ಧಿಗಳಿಗೆ ಇದೇ ರೀತಿಯ ಸದಾವಕಾಶ ಸಿಕ್ಕಿತ್ತು. ಸ್ಪರ್ಧಿಗಳಿಗೋಸ್ಕರ ಕಿಚ್ಚ ಸುದೀಪ್ ಅವರು ಅಡುಗೆ ಮಾಡಿ ಕಳುಹಿಸಿದ್ದರು. ಈ ವಾರ ಮನೆಯಲ್ಲಿ ಬಹುತೇಕರು ನಾಮಿನೇಟ್ ಆಗಿದ್ದಾರೆ. ಆ ಪೈಕಿ ಒಬ್ಬರು ಎಲಿಮಿನೇಟ್ ಆಗಲಿದ್ದಾರೆ.

Follow Us
Web contact
Web contact

TV9 Kannada

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?