AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ತೊರೆಯಲು ಸುದೀಪ್ ನಿರ್ಧಾರ: ಇದೇ ಕೊನೆಯ ಸೀಸನ್; ಅಧಿಕೃತ ಘೋಷಣೆ

ಸತತ 11 ವರ್ಷಗಳ ಕಾಲ ‘ಬಿಗ್​ ಬಾಸ್​ ಕನ್ನಡ’ ರಿಯಾಲಿಟಿ ಶೋ ನಡೆಸಿಕೊಟ್ಟ ಸುದೀಪ್​ ಅವರು ಈಗ ಗಟ್ಟಿ ನಿರ್ಧಾರ ತೆಗೆದುಕೊಂಡಿದ್ದಾರೆ. ಇದೇ ತಮ್ಮ ಕೊನೆಯ ಸೀಸನ್​ ಎಂದು ಅವರು ಘೋಷಿಸಿದ್ದಾರೆ. ಈ ವಿಷಯ ತಿಳಿದು ಅಭಿಮಾನಿಗಳಿಗೆ ಬೇಸರ ಆಗಿದೆ. ‘ಬಿಗ್​ ಬಾಸ್​ ಕನ್ನಡ ಸೀಸನ್​ 10’ ಕಾರ್ಯಕ್ರಮದ ನಡುವೆಯೂ ಸುದೀಪ್​ ಅವರು ಶಾಕಿಂಗ್ ಸುದ್ದಿ ನೀಡಿದ್ದಾರೆ.

ಬಿಗ್ ಬಾಸ್ ತೊರೆಯಲು ಸುದೀಪ್ ನಿರ್ಧಾರ: ಇದೇ ಕೊನೆಯ ಸೀಸನ್; ಅಧಿಕೃತ ಘೋಷಣೆ
ಕಿಚ್ಚ ಸುದೀಪ್​
ಮದನ್​ ಕುಮಾರ್​
|

Updated on: Oct 13, 2024 | 10:55 PM

Share

ಕಿಚ್ಚ ಸುದೀಪ್​ ಅವರು ‘ಬಿಗ್​ ಬಾಸ್​ ಕನ್ನಡ’ ಕಾರ್ಯಕ್ರಮದ ನಿರೂಪಕನ ಸ್ಥಾನದಿಂದ ಕೆಳಗೆ ಇಳಿಯುತ್ತಿದ್ದಾರೆ. ಇಷ್ಟು ವರ್ಷಗಳ ಕಾಲ ಯಶಸ್ವಿಯಾಗಿ ಕಾರ್ಯಕ್ರಮವನ್ನು ನಡೆಸಿಕೊಟ್ಟ ಅವರು ಈಗ ಶೋ ತೊರೆಯುವ ನಿರ್ಧಾರಕ್ಕೆ ಬಂದಿದ್ದಾರೆ. ಪ್ರಸ್ತುತ ಅವರು ‘ಬಿಗ್​ ಬಾಸ್​ ಕನ್ನಡ ಸೀಸನ್​ 11’ ನಡೆಸಿಕೊಡುತ್ತಿದ್ದಾರೆ. ಆದರೆ ಮುಂದಿನ ಸೀಸನ್​ಗೆ ತಾವು ನಿರೂಪಣೆ ಮಾಡುವುದಿಲ್ಲ ಎಂದು ಹೇಳಿದ್ದಾರೆ. ಸೋಶಿಯಲ್ ಮೀಡಿಯಾ ಮೂಲಕ ಅವರು ಅಧಿಕೃತವಾಗಿಯೇ ಈ ನಿರ್ಧಾರ ತಿಳಿಸಿದ್ದಾರೆ. ಅವರ ಈ ಪೋಸ್ಟ್ ನೋಡಿ ಎಲ್ಲರಿಗೂ ಅಚ್ಚರಿ ಆಗಿದೆ.

‘ಬಿಗ್ ಬಾಸ್ ಕನ್ನಡ 11 ಕಾರ್ಯಕ್ರಮಕ್ಕೆ ಅತ್ಯುತ್ತಮ ಪ್ರತಿಕ್ರಿಯೆ ನೀಡಿದ್ದಕ್ಕೆ ನಿಮಗೆಲ್ಲ ಧನ್ಯವಾಗಳು. ಸಿಕ್ಕಿರುವ ಟಿಆರ್​ಪಿ ನೋಡಿದರೆ ನನ್ನ ಬಗ್ಗೆ ಮತ್ತು ಈ ಶೋ ಬಗ್ಗೆ ನೀವು ತೋರಿಸಿ ಪ್ರೀತಿ ಏನೆಂಬುದು ತಿಳಿಯುತ್ತದೆ. ಈ 10 ಪ್ಲಸ್​ 1 ವರ್ಷ ನಿಮ್ಮೊಂದಿಗೆ ಪಯಣ ಮಾಡಿದ್ದು ಚೆನ್ನಾಗಿತ್ತು. ಈಗ ನಾನು ಬೇರೆ ಕಡೆಗೆ ಗಮನ ಹರಿಸುವ ಸಮಯ ಬಂದಿದೆ’ ಎಂದು ಸುದೀಪ್ ಅವರು ಹೇಳಿದ್ದಾರೆ.

‘ನಿರೂಪಕನಾಗಿ ಇದು ನನ್ನ ಕೊನೆಯ ಬಿಗ್​ ಬಾಸ್​. ಇಷ್ಟು ವರ್ಷಗಳ ಕಾಲ ಬಿಗ್​ ಬಾಸ್​ ಕಾರ್ಯಕ್ರಮವನ್ನು ನೋಡಿ ನೀವು ಮತ್ತು ಕಲರ್ಸ್​ನವರು ನನ್ನ ನಿರ್ಧಾರವನ್ನು ಗೌರವಿಸುತ್ತೀರಿ ಎಂದು ನಂಬಿದ್ದೇನೆ. ಈ ನಿರ್ಧಾರ ಅತ್ಯುತ್ತಮ ಆಗುವಂತೆ ಮಾಡೋಣ. ನಿಮ್ಮೆಲ್ಲರನ್ನೂ ನಿಮ್ಮನ್ನು ಮನರಂಜಿಸುತ್ತೇನೆ’ ಎಂದು ಸುದೀಪ್​ ಅವರು ಶಾಕಿಂಗ್​ ವಿಷಯ ತಿಳಿಸಿದ್ದಾರೆ.

ಇದನ್ನೂ ಓದಿ: ಮಹಿಳಾ ಆಯೋಗದ ಆರೋಪಕ್ಕೆ ಬಿಗ್ ಬಾಸ್ ಸ್ಪರ್ಧಿಗಳಿಂದಲೇ ಉತ್ತರ ಕೊಡಿಸಿದ ಸುದೀಪ್

11ನೇ ಸೀಸನ್​ ಆರಂಭದಲ್ಲೇ ಸುದೀಪ್ ಅವರು ಈ ಬಾರಿ ಬಿಗ್​ ಬಾಸ್​ ನಿರೂಪಣೆ ಮಾಡುವುದು ಅನುಮಾನ ಎಂಬ ವಿಷಯ ಕೇಳಿಬಂದಿತ್ತು. ಆದರೆ ಶೋ ಆಯೋಜಕರು ಸುದೀಪ್​ ಅವರ ಮನ ಒಲಿಸಿದ್ದರಿಂದ ಅವರು ಮುಂದುವರಿದರು. ಆದರೆ ಇದು ಅವರ ಕೊನೆಯ ಸೀಸನ್​ ಆಗುತ್ತಿದೆ. ‘ನೀವು ಇಲ್ಲದೇ ಬಿಗ್ ಬಾಸ್​ ಕಾರ್ಯಕ್ರಮವನ್ನು ಊಹಿಸಿಕೊಳ್ಳಲು ಕೂಡ ಸಾಧ್ಯವಿಲ್ಲ’ ಎಂದು ಅನೇಕರು ಕಮೆಂಟ್​ ಮಾಡುತ್ತಿದ್ದಾರೆ. ‘ಇದು ಸರಿಯಾದ ನಿರ್ಧಾರ’ ಎಂದು ಕೂಡ ಕೆಲವರು ಅಭಿಪ್ರಾಯಪಟ್ಟಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್