AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ಬಾಸ್ ಮನೆ ಸದಸ್ಯರಿಗೆ ಉಡುಗೊರೆ ಕೊಟ್ಟು ಉಪದೇಶ ಮಾಡಿದ ಸುದೀಪ್

Bigg Boss Kannada: ಶನಿವಾರದ ಎಪಿಸೋಡ್​ನಲ್ಲಿ ಬಂದಿದ್ದ ನಟ ಸುದೀಪ್, ಬಿಗ್​ಬಾಸ್ ಮನೆಯ ಸದಸ್ಯರಿಗೆ ಉಡುಗೊರೆಗಳನ್ನು ಹಾಗೂ ಸಂದೇಶಗಳನ್ನು ಕೊಟ್ಟರು.

ಬಿಗ್​ಬಾಸ್ ಮನೆ ಸದಸ್ಯರಿಗೆ ಉಡುಗೊರೆ ಕೊಟ್ಟು ಉಪದೇಶ ಮಾಡಿದ ಸುದೀಪ್
ಬಿಗ್​ಬಾಸ್ ಕನ್ನಡ
ಮಂಜುನಾಥ ಸಿ.
|

Updated on:Oct 28, 2023 | 11:22 PM

Share

ಬಿಗ್​ಬಾಸ್ (Bigg Boss) ಕನ್ನಡ ಸೀಸನ್ 10ರ ಮೂರನೇ ವಾರಾಂತ್ಯದ ಪಂಚಾಯಿತಿಗೆ ಎಂದಿನಂತೆ ಸಖತ್ ಸ್ಟೈಲ್ ಆಗಿ ಬಂದಿದ್ದ ಸುದೀಪ್, ಈ ಹಿಂದಿನ ಶನಿವಾರಗಳಂತೆ ಇರದೆ, ಆರಂಭದಿಂದಲೇ ಬಹಳ ಗಂಭೀರವಾಗಿ ಬಿಗ್​ಬಾಸ್ ಸ್ಪರ್ಧಿಗಳನ್ನು ಎದುರುಗೊಂಡರು. ಈ ವಾರ ನಡೆದ ಟಾಸ್ಕ್, ಉತ್ತಮ ಯಾರು? ಕಳಪೆ ಯಾರು? ಯಾವುದರ ಬಗ್ಗೆಯೂ ಮಾತನಾಡದ ಸುದೀಪ್, ನೇರವಾಗಿ ಬಿಗ್​ಬಾಸ್ ಮನೆ ಸದಸ್ಯರು ಮನೆಯಲ್ಲಿ ತೋರುತ್ತಿರುವ ವ್ಯಕ್ತಿತ್ವದ ಬಗ್ಗೆ ಮಾತನಾಡಿದರು.

ವೀಕ್ಷಕರು ಮನೆಯ ಸದಸ್ಯರಿಗೆ ಕಳಿಸಿರುವ ಉಡುಗೊರೆಗಳನ್ನು ಮನೆಯ ಸದಸ್ಯರಿಗೆ ನೀಡಿದ ಸುದೀಪ್, ಆ ಉಡುಗೊರೆಗಳಲ್ಲಿಯೇ ಅವರ ಹಾಲಿ ವರ್ತನೆ ಹಾಗೂ ಹೇಗೆ ತಮ್ಮನ್ನು ಮುಂದಕ್ಕೆ ಬದಲಾಯಿಸಿಕೊಳ್ಳಬೇಕು ಎಂಬ ಸಂದೇಶವನ್ನು ತುಂಬಿದ್ದರು. ಎಲ್ಲ ಸ್ಪರ್ಧಿಗಳು ಖುಷಿಯಿಂದ ಉಡುಗೊರೆಯನ್ನು ತೆರೆದರಾದರೂ ಅದರ ಅರ್ಥ, ಅದರೊಟ್ಟಿಗಿದ್ದ ಪತ್ರ ನೋಡಿ ಚಿಂತನೆಗೆ ತೊಡಗಿಕೊಂಡರು.

ಕಾರ್ತಿಕ್​ಗೆ ಕತ್ತಿ ಯ ಜೊತೆಗೆ ತರಕಾರಿ ಉಡುಗೊರೆಯಾಗಿ ಬಂದಿತ್ತು. ಯೋಧನಾದವನು ಕತ್ತಿಯನ್ನು ಯುದ್ಧ ಭೂಮಿಯನ್ನು ಸರಿಯಾದ ವಿರೋಧಿಯ ಎದುರು ಬಳಸಬೇಕು, ಅದನ್ನು ತಕಾರಿ ಹೆಚ್ಚಲು ಬಳಸಬಾರದು ಎಂದು ಪತ್ರದಲ್ಲಿ ಬರೆಯಲಾಗಿತ್ತು. ಇನ್ನು ಇಶಾನಿಗೆ ಉಪ್ಪಿನಕಾಯಿಯನ್ನು ಉಡುಗೊರೆಯಾಗಿ ಕಳಿಸಿ, ಊಟಕ್ಕೆ ಉಪ್ಪಿನಕಾಯಿ ಚೆನ್ನಾಗಿರುತ್ತದೆ, ಆದರೆ ಅದು ಇರಲೇ ಬೇಕೆಂದೇನೂ ಇಲ್ಲ. ಸುಮ್ಮನೆ ಉಪ್ಪಿನಕಾಯಿ ಆಗದೆ, ಮುಖ್ಯ ಊಟವೇ ನೀವಾಗಲು ಪ್ರಯತ್ನಿಸಿ ಎಂಬ ಸಂದೇಶವನ್ನು ಅವರಿಗೆ ಕಳಿಸಲಾಗಿತ್ತು.

ಇದನ್ನೂ ಓದಿ:ಮತ್ತೆ ಬಿಗ್​ಬಾಸ್ ಮನೆಗೆ ಹೋಗ್ತಾರಾ ವರ್ತೂರು ಸಂತೋಷ್: ವಕೀಲರು ಹೇಳಿದ್ದೇನು?

ಇನ್ನು ವಿನಯ್​ಗೆ, ಆನೆಯ ಸಣ್ಣ ವಿಗ್ರಹ ಕಳಿಸಿ, ನಾನು ಆನೆ, ನನ್ನ ಸಮಕ್ಕೆ ಯಾರಿಲ್ಲ ಎಂದುಕೊಂಡು ಸಿಕ್ಕ-ಸಿಕ್ಕ ಹಾದಿ ಹಿಡಿದು ದಾರಿತಪ್ಪುವುದು ಬೇಡ ಎಂಬ ಸಂದೇಶವನ್ನು ಅವರಿಗೆ ನೀಡಲಾಯ್ತು. ಇನ್ನು ಸಂಗೀತಾ ಶೇಂಗೇರಿಗೆ, ಮೊದಲ ವಾರ ಕರ್ನಾಟಕದ ಕ್ರಶ್ ಆಗಿದ್ದಿರಿ, ಆದರೆ ನಂತರದ ವಾರಗಳಲ್ಲಿ ನಮ್ಮ ಹೃದಯವನ್ನೇ ಕ್ರಶ್ ಮಾಡಿ ಮುರಿದುಬಿಟ್ಟಿರಿ ಎಂದು ಬರೆಯಲಾಗಿತ್ತು.

ತುಕಾಲಿ ಸಂತುಗೆ ಮೈಖ್ ಒಂದನ್ನು ನೀಡಿ, ಅಭಿಪ್ರಾಯಗಳನ್ನು ಕೆಲವರೆದುರು ಗುಸು-ಗುಸು, ಪಿಸು-ಪಿಸು ಮಾಡುವುದು ಬೇಡ. ಹೇಳುವುದಿದ್ದರೆ ಜೋರಾಗಿ, ಸ್ಪಷ್ಟವಾಗಿ ಧೈರ್ಯವಾಗಿ ಹೇಳಿ ಎಂಬ ಸಂದೇಶ ನೀಡಲಾಯ್ತು. ಸಿರಿ ಅವರಿಗೆ ಆಮೆಯ ಬೊಂಬೆ ಕಳಿಸಿ, ಜಿಂಕೆ, ಚಿರತೆಗಳೊಟ್ಟಿಗೆ ರೇಸ್​ನಲ್ಲಿದ್ದೀರಿ,ಜೋರಾಗಿ ಓಡಿ, ಮೊಲ ಮಲುಗುತ್ತದೆ ನಾನೇ ಗೆಲ್ಲುತ್ತೇನೆ ಎಂಬ ಭ್ರಮೆ ಬೇಡ ಎಂಬ ಸಂದೇಶವಿತ್ತು. ಹೀಗೆ ಎಲ್ಲರಿಗೂ ಮನೆಯಲ್ಲಿ ಅವರು ತೋರಿಸುತ್ತಿರುವ ವ್ಯಕ್ತಿತ್ವದ ಆಧಾರದ ಅನುಸಾರ ಅವರಿಗೆ ಭಿನ್ನ-ಭಿನ್ನ ಉಡುಗೊರೆ ಹಾಗೂ ಸಂದೇಶಗಳು ಬಂದಿದ್ದವು. ನಮ್ರತಾಗೆ ಸ್ಪೂನ್​ ಉಡುಗೊರೆಯಾಗಿ ಬಂದು, ಬೇರೆಯವರ ಚಮಚ ಆಗಬೇಡ ಎಂಬ ಸಂದೇಶ ಬಂದಿತ್ತು.

ಎಲ್ಲರಿಗೂ ಉಡುಗೊರೆ ಹಾಗೂ ಸಂದೇಶಗಳನ್ನು ತಲುಪಿಸಿದ ನಟ ಸುದೀಪ್ ತಮ್ಮ ವಾಕ್ಚಾತುರ್ಯದಿಂದ ಆ ಸಂದೇಶದ ಸ್ಪಷ್ಟ ಅರ್ಥವೇನು? ಇನ್ನು ಮುಂದೆ ಹೇಗಿರಬೇಕೆಂದು ನೋಡುಗರು ನಿರೀಕ್ಷೆ ಮಾಡುತ್ತಿದ್ದಾರೆ ಎಂಬುದನ್ನು ಸೂಚ್ಯವಾಗಿ ತಿಳಿಸಿ ಹೇಳಿದರು. ಬಿಗ್​ಬಾಸ್ ಕನ್ನಡ ಸೀಸನ್ 10 ಕಲರ್ಸ್​ ವಾಹಿನಿಯಲ್ಲಿ 9:30ಕ್ಕೆ ಹಾಗೂ ಜಿಯೋ ಸಿನಿಮಾಸ್​ನಲ್ಲಿ ಪ್ರತಿದಿನ 24 ಗಂಟೆ ಲೈವ್ ಪ್ರಸಾರವಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:21 pm, Sat, 28 October 23

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!