AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಲ್ಕು ಬಡ ಕುಟುಂಬಗಳ ಬಾಳಿಗೆ ಬೆಳಕಾದ ಕಿಚ್ಚ ಸುದೀಪ್

Kichcha Sudeep social service: ಸುದೀಪ್ ಅವರು ದಶಕಗಳಿಂದಲೂ ಸಾಮಾಜಿಕ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಬಂದಿದ್ದಾರೆ. ಹೆಚ್ಚಿನ ಅಬ್ಬರಗಳಿಲ್ಲದೆ ಸರಳವಾಗಿ, ಅಗತ್ಯವಾದವರಿಗೆ ಅಗತ್ಯ ರೀತಿಯ ನೆರವುಗಳನ್ನು, ಸಾಮಾಜಿಕ ಸೇವೆಯನ್ನು ಸಲ್ಲಿಸುತ್ತಾ ಬರುತ್ತಿದ್ದಾರೆ. ಇದೀಗ ಸುದೀಪ್ ಅವರು ತಮ್ಮ ಅಗಲಿದ ತಾಯಿಯವರ ನೆನಪಿನಲ್ಲಿ ನಾಲ್ಕು ಬಡ ಕುಟುಂಬಗಳ ಬಾಳಿಗೆ ಬೆಳಕಾಗಿದ್ದಾರೆ.

ನಾಲ್ಕು ಬಡ ಕುಟುಂಬಗಳ ಬಾಳಿಗೆ ಬೆಳಕಾದ ಕಿಚ್ಚ ಸುದೀಪ್
Sudeep Social Service1
ಮಂಜುನಾಥ ಸಿ.
|

Updated on:Aug 30, 2026 | 4:09 PM

Share

ಸುದೀಪ್ (Sudeep) ಅವರ ತಾಯಿ ಕಳೆದ ವರ್ಷ ಅಕ್ಟೋಬರ್ ತಿಂಗಳಲ್ಲಿ ನಿಧನ ಹೊಂದಿದ್ದರು. ತಾಯಿಯ ಬಗ್ಗೆ ವಿಶೇಷ ಕಾಳಜಿ, ಗೌರವ ಮತ್ತು ಪ್ರೀತಿಗಳನ್ನು ಸುದೀಪ್ ಹೊಂದಿದ್ದರು. ತಾಯಿ ನಿಧನವಾಗುವ ಕೆಲ ದಿನಗಳ ಮುಂಚೆ ಸಹ ಬಿಗ್​​ಬಾಸ್ ವೇದಿಕೆಯಿಂದಲೇ ತಾಯಿಯೊಟ್ಟಿಗೆ ಮಾತನಾಡಿದ್ದರು. ತಾಯಿ ನಿಧನ ಹೊಂದಿದಾಗ ತೀವ್ರ ಭಾವುಕರಾಗಿದ್ದ ಸುದೀಪ್, ತಾಯಿಯ ಹೆಸರಲ್ಲಿ ಗಿಡಗಳನ್ನು ನೆಡುವ ಕಾರ್ಯ ಸೇರಿದಂತೆ ಇನ್ನಿತರೆ ಕೆಲ ಕಾರ್ಯಗಳನ್ನು ಮಾಡಿದ್ದರು. ಇದೀಗ ಸುದೀಪ್ ಅವರು, ತಮ್ಮ ತಾಯಿಯವರ ಸ್ಮರಣೆಯಲ್ಲಿ ನಾಲ್ಕು ಬಡ ಕುಟುಂಬಗಳಿಗೆ ಬೆಳಕಾಗಿದ್ದಾರೆ.

ಸುದೀಪ್ ಅವರು ನಾಲ್ಕು ಬಡ ಕುಟುಂಬಗಳನ್ನು ಗುರುತಿಸಿ ಅವರ ಜೀವನಾನುಕೂಲಕ್ಕಾಗಿ ಆಟೋಗಳನ್ನು ಉಡುಗೊರೆಯಾಗಿ ನೀಡಿದ್ದಾರೆ. ಕಿಚ್ಚ ಸುದೀಪ್ ಅವರ ಅನುಪಸ್ಥಿತಿಯಲ್ಲಿ ಸುದೀಪ್ ಅವರ ಪತ್ನಿ ಪ್ರಿಯಾ ಸುದೀಪ್ ಮತ್ತು ಅವರ ಅಕ್ಕನ ಮಗ ಸಂಚಿತ್ ಸಂಜೀವ್ ಅವರುಗಳು ಸುದೀಪ್ ಬದಲಿಗೆ ಬಡ ಕುಟುಂಬಗಳಿಗೆ ಆಟೋಗಳ ಕೀ ಹಸ್ತಾಂತರ ಮಾಡುವ ಜೊತೆಗೆ ಉಡುಗೊರೆಗಳನ್ನು ಸಹ ನೀಡಿ ಶುಭ ಹಾರೈಸಿದ್ದಾರೆ. ಈ ಮೂಲಕ ಆರ್ಥಿಕವಾಗಿ ಸಂಕಷ್ಟದಲ್ಲಿದ್ದ ಕುಟುಂಬಗಳು ಸಬಲರಾಗುವ ಅವಕಾಶವನ್ನು ಒದಗಿಸಿಕೊಟ್ಟಿದ್ದಾರೆ.

ಕಿಚ್ಚ ಸುದೀಪ್ ಅವರು ವರ್ಷಗಳಿಂದಲೂ ಇಂಥ ಅರ್ಥಪೂರ್ಣ ಸಾಮಾಜಿಕ ಕಾರ್ಯವನ್ನು ಮಾಡುತ್ತಲೇ ಬಂದಿದ್ದಾರೆ. ಕೋವಿಡ್ ಸಮಯದಲ್ಲಿ ಸಹ ತಮ್ಮ ಅಭಿಮಾನಿ ಸಂಘದ ಮೂಲಕ ಸಾಕಷ್ಟು ಸಾಮಾಜಿಕ ಕಾರ್ಯಗಳನ್ನು ಸುದೀಪ್ ಮಾಡಿದ್ದರು. ಶಾಲೆಯನ್ನು ದತ್ತು ತೆಗೆದುಕೊಳ್ಳುವ ಕಾರ್ಯವನ್ನೂ ಸಹ ಸುದೀಪ್ ಆಗ ಮಾಡಿದ್ದರು. ದಶಕಗಳಿಂದಲೂ ಸಹ ಸುದೀಪ್ ತಮ್ಮ ಸಾಮಾಜಿಕ ಕಾರ್ಯವನ್ನು ಮುಂದುವರೆಸುತ್ತಲೇ ಬಂದಿದ್ದಾರೆ.

ಇದನ್ನೂ ಓದಿ:ಸೆಪ್ಟೆಂಬರ್ 6ರಂದು ‘ಬಿಗ್ ಬಾಸ್ ಕನ್ನಡ 13’ ಶುರು; ಅಧಿಕೃತವಾಗಿ ತಿಳಿಸಿದ ಕಿಚ್ಚ ಸುದೀಪ್

ಸುದೀಪ್ ಹುಟ್ಟುಹಬ್ಬ ಇನ್ನು ಕೆಲವೇ ದಿನಗಳಷ್ಟೆ ಇದೆ. ಈ ಬಾರಿ ಹುಟ್ಟುಹಬ್ಬಕ್ಕೆ ತಾವು ಅಭಿಮಾನಿಗಳ ಕೈಗೆ ಸಿಗುವುದಿಲ್ಲ ಆದರೆ, ಆ ದಿನ ಅಭಿಮಾನಿಗಳು ತಾವಿದ್ದ ಜಾಗದಲ್ಲಿಯೇ ಮಾಡುವ ಸಾಮಾಜಿಕ ಕಾರ್ಯಗಳು ತಮಗೆ ನೀಡಿದ ಆಶೀರ್ವಾದದಂತೆ ಎಂದಿದ್ದಾರೆ. ಆ ಮೂಲಕ ತಮ್ಮ ಅಭಿಮಾನಿಗಳು ಸಹ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಳ್ಳುವಂತೆ ಅವರು ಸಂದೇಶ ನೀಡಿದ್ದಾರೆ. ತಾವು ಸಾಮಾಜಿಕ ಕಾರ್ಯ ಮಾಡುವ ಮೂಲಕ ಅಭಿಮಾನಿಗಳಿಗೆ ಮಾದರಿ ಆಗಿದ್ದು, ಅವರಿಗೆ ಮೇಲ್ಪಂಕ್ತಿ ಹಾಕಿಕೊಟ್ಟಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:51 pm, Sun, 30 August 26

Follow Us
Bigg Boss Kannada: ಬಿಗ್​​ಬಾಸ್ ಕನ್ನಡ ಸೀಸನ್ 13 ಸುದ್ದಿಗೋಷ್ಠಿ ಲೈವ್
Bigg Boss Kannada: ಬಿಗ್​​ಬಾಸ್ ಕನ್ನಡ ಸೀಸನ್ 13 ಸುದ್ದಿಗೋಷ್ಠಿ ಲೈವ್
ಸಿಐಡಿ ಅಧಿಕಾರಿಗಳ ಪ್ರಶ್ನೆಗೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಕಂಗಾಲು
ಸಿಐಡಿ ಅಧಿಕಾರಿಗಳ ಪ್ರಶ್ನೆಗೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಕಂಗಾಲು
ನಾಗೇಂದ್ರ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು ಸಿಎಂ ಡಿಕೆಶಿಗೆ ಪತ್ರ
ನಾಗೇಂದ್ರ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು ಸಿಎಂ ಡಿಕೆಶಿಗೆ ಪತ್ರ
ರಾಯರ ಮಠದಲ್ಲಿ ಗುರುರಾಯರ ಮಧ್ಯಾರಾಧನೆ: ವಿಶೇಷ ಪೂಜಾ ಕೈಂಕರ್ಯಗಳು
ರಾಯರ ಮಠದಲ್ಲಿ ಗುರುರಾಯರ ಮಧ್ಯಾರಾಧನೆ: ವಿಶೇಷ ಪೂಜಾ ಕೈಂಕರ್ಯಗಳು
ಪಾರ್ಕ್​ಗಳ ಜಾಗ ವಾಣಿಜ್ಯ ಉದ್ದೇಶಕ್ಕೆ ಬಳಕೆ ಖಂಡಿಸಿ ಮೈಸೂರಲ್ಲೂ ಪ್ರತಿಭಟನೆ
ಪಾರ್ಕ್​ಗಳ ಜಾಗ ವಾಣಿಜ್ಯ ಉದ್ದೇಶಕ್ಕೆ ಬಳಕೆ ಖಂಡಿಸಿ ಮೈಸೂರಲ್ಲೂ ಪ್ರತಿಭಟನೆ
ಗೃಹಲಕ್ಷ್ಮಿ ಯೋಜನೆಗೆ 3 ವರ್ಷ: ಸಿಎಂ ಡಿಕೆ ಶಿವಕುಮಾರ್​​ ಮಹತ್ವದ ಸಂದೇಶ
ಗೃಹಲಕ್ಷ್ಮಿ ಯೋಜನೆಗೆ 3 ವರ್ಷ: ಸಿಎಂ ಡಿಕೆ ಶಿವಕುಮಾರ್​​ ಮಹತ್ವದ ಸಂದೇಶ
ಗೋಡೆಕೆರೆ ಗೇಟ್‌ ಬಳಿಯ ಅಪಘಾತದಲ್ಲಿ ಸಾವಿಗೀಡಾದವ್ರ ಒಂದೊಂದು ಕಥೆ
ಗೋಡೆಕೆರೆ ಗೇಟ್‌ ಬಳಿಯ ಅಪಘಾತದಲ್ಲಿ ಸಾವಿಗೀಡಾದವ್ರ ಒಂದೊಂದು ಕಥೆ
ನಟ ಚಿಕ್ಕಣ್ಣ ಮದುವೆ: ಡಾಲಿ, ಮಂಡ್ಯ ರಮೇಶ್, ಎ.ಪಿ. ಅರ್ಜುನ್ ಶುಭ ಹಾರೈಕೆ
ನಟ ಚಿಕ್ಕಣ್ಣ ಮದುವೆ: ಡಾಲಿ, ಮಂಡ್ಯ ರಮೇಶ್, ಎ.ಪಿ. ಅರ್ಜುನ್ ಶುಭ ಹಾರೈಕೆ
ಆಗಸ್ಟ್ 31 ರಿಂದ ಸೆಪ್ಟೆಂಬರ್​​ 6 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 31 ರಿಂದ ಸೆಪ್ಟೆಂಬರ್​​ 6 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ನೇಪಾಳ ಪ್ರವಾಹ: ಸಾವಿನ ದವಡೆಯಿಂದ ಪಾರಾಗಿ 54 ಕನ್ನಡಿಗರು ವಾಪಸ್​​
ನೇಪಾಳ ಪ್ರವಾಹ: ಸಾವಿನ ದವಡೆಯಿಂದ ಪಾರಾಗಿ 54 ಕನ್ನಡಿಗರು ವಾಪಸ್​​