AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುದೀಪ್ ಅಭಿಮಾನಿಗಳಿಗೆ ಬಿಗ್ ಸರ್​ಪ್ರೈಸ್: ಜೀ ಕನ್ನಡ ರಿಯಾಲಿಟಿ ಶೋನಲ್ಲಿ ಕಿಚ್ಚ, ಇಲ್ಲಿದೆ ಪ್ರೋಮೋ

ಬಿಗ್ ಬಾಸ್ ಕನ್ನಡ ಸೀಸನ್ 11ನೇ ಸೀಸನ್​ ಈಗಾಗಲೇ ಮೂರು ತಿಂಗಳು ಪೂರ್ಣಗೊಳಿಸಿದೆ. ಸದ್ಯ ದೊಡ್ಮನೆಯಲ್ಲಿ 9 ಮಂದಿ ಇದ್ದಾರೆ. ಫಿನಾಲೆಗೆ ದಿನಾಂಕ ಹತ್ತಿರ ಆಗುತ್ತಿರುವಾಗಲೇ ಸುದೀಪ್ ಕಡೆಯಿಂದ ಅಭಿಮಾನಿಗಳಿಗೆ ಸರ್​ಪ್ರೈಸ್ ಸಿಕ್ಕಿದೆ. ಅವರು ಜೀ ಕನ್ನಡ ರಿಯಾಲಿಟಿ ಶೋಗೆ ಆಗಮಿಸಿದ್ದಾರೆ. ಈ ಪ್ರೋಮೋ ಗಮನ ಸೆಳೆದಿದೆ.

ಸುದೀಪ್ ಅಭಿಮಾನಿಗಳಿಗೆ ಬಿಗ್ ಸರ್​ಪ್ರೈಸ್: ಜೀ ಕನ್ನಡ ರಿಯಾಲಿಟಿ ಶೋನಲ್ಲಿ ಕಿಚ್ಚ, ಇಲ್ಲಿದೆ ಪ್ರೋಮೋ
ಸುದೀಪ್
ರಾಜೇಶ್ ದುಗ್ಗುಮನೆ
|

Updated on: Jan 01, 2025 | 8:44 AM

Share

ಕಿಚ್ಚ ಸುದೀಪ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಹೋಸ್ಟ್ ಆಗಿದ್ದಾರೆ. ಅವರು ಯಶಸ್ವಿಯಾಗಿ ಈ ರಿಯಾಲಿಟಿ ಶೋನ ನಡೆಸಿಕೊಡುತ್ತಿದ್ದಾರೆ. ಇದು ಕೊನೆಯ ಸೀಸನ್ ಎಂದು ಅವರ ಹೇಳಿದ್ದಾರೆ. ಹೀಗಿರುವಾಗಲೇ ಸುದೀಪ್ ಅವರು ಅಭಿಮಾನಿಗಳಿಗೆ ಬಿಗ್ ಸರ್​ಪ್ರೈಸ್ ಕೊಟ್ಟಿದ್ದಾರೆ. ಜೀ ಕನ್ನಡ ರಿಯಾಲಿಟಿ ಶೋಗೆ ಅವರ ಆಗಮನ ಆಗಿದೆ. ಇದರ ಪ್ರೋಮೋ ವೈರಲ್ ಆಗಿದೆ. ಈ ಎಪಿಸೋಡ್ ನೋಡಲು ಫ್ಯಾನ್ಸ್ ಕಾದಿದ್ದಾರೆ.

ಜೀ ಕನ್ನಡದಲ್ಲಿ ‘ಸರಿಗಮಪ’ ಶೋ ಪ್ರಸಾರ ಕಾಣುತ್ತಿದೆ. ಇದು ಉತ್ತಮ ಟಿಆರ್​ಪಿ ಕೂಡ ಪಡೆದುಕೊಂಡಿದೆ. ಈ ರಿಯಾಲಿಟಿ ಶೋಗೆ ಸುದೀಪ್ ಆಗಮಿಸಿದ್ದಾರೆ. ಕೇವಲ ಅವರು ಮಾತ್ರವಲ್ಲ ಅವರ ಪತ್ನಿ ಪ್ರಿಯಾ, ಮಗಳು ಸಾನ್ವಿ ಕೂಡ ವೇದಿಕೆ ಏರಿದ್ದಾರೆ. ಈ ವಾರಂತ್ಯದಲ್ಲಿ ಈ ಎಪಿಸೋಡ್ ಪ್ರಸಾರ ಕಾಣಲಿದೆ. ಇದರ ಪ್ರೋಮೋ ಗಮನ ಸೆಳೆದಿದೆ.

‘ಮ್ಯಾಕ್ಸ್’ ಯಶಸ್ಸು ಕಂಡಿದೆ. ಈ ಚಿತ್ರದ ಸೆಟಲೈಟ್ ಹಕ್ಕನ್ನು ಖರೀದಿ ಮಾಡಿದ್ದು ಜೀ ಕನ್ನಡ. ಅವರು ವೇದಿಕೆ ಏರಲು ಇದೂ ಒಂದು ಕಾರಣ ಇರಬಹುದು. ಈ ವೇದಿಕೆ ಮೇಲೆ ‘ಮ್ಯಾಕ್ಸ್’ ಪ್ರಮೋಷನ್ ಕೂಡ ಮಾಡಲಾಗಿದೆ. ಸುದೀಪ್ ಅವರು ಈ ರಿಯಾಲಿಟಿ ಶೋಗೆ ಬಂದಿದ್ದು ಫ್ಯಾನ್ಸ್ ಖುಷಿ ಹೆಚ್ಚಿಸಿದೆ.

View this post on Instagram

A post shared by Zee Kannada (@zeekannada)

ಇದನ್ನೂ ಓದಿ: ಸುದೀಪ್​ಗೆ ನಡೆದಿತ್ತು ಎರಡನೇ ಮದುವೆ? ಶಾಕಿಂಗ್ ವಿಚಾರ ರಿವೀಲ್ ಮಾಡಿದ ಕಿಚ್ಚ

ಸುದೀಪ್ ಅವರು ವೇದಿಕೆ ಮೇಲೆ ‘ಸರಿಗಮಪ’ ರಿಯಾಲಿಟಿ ಶೋ ಬಗ್ಗೆ ಬಗ್ಗೆ ಮೆಚ್ಚುಗೆ ಸೂಚಿಸಿದ್ದಾರೆ. ಈ ವೇಳೆ ಸುದೀಪ್ ಅವರು ಹಾಡನ್ನು ಹಾಡಿದ್ದಾರೆ. ಸಾನ್ವಿ ಕಂಠದಲ್ಲೂ ಹಾಡು ಮೂಡಿ ಬಂದಿದೆ. ಇನ್ನು, ಈ ಎಪಿಸೋಡ್ ಭಾವನಾತ್ಮಕವಾಗಿಯೂ ಸೆಳೆದುಕೊಳ್ಳಲಿದೆ. ಏಕೆಂದರೆ ಸುದೀಪ್ ಅವರ ತಾಯಿಯ ಮೂರ್ತಿ ಮಾಡಿ ತರಲಾಗಿದ್ದು, ಸುದೀಪ್​ಗೆ ನೀಡಲಾಗಿದೆ. ಈ ವೇಳೆ ಸುದೀಪ್ ಭಾವುಕರಾದರು. ಸುದೀಪ್ ಅವರು ಇತ್ತೀಚೆಗಷ್ಟೇ ತಾಯಿಯನ್ನು ಕಳೆದುಕೊಂಡರು. ಈ ನೋವಿನಿಂದ ಅವರು ಹೊರ ಬಂದಿಲ್ಲ. ಅನೇಕ ವೇದಿಕೆ ಮೇಲೆ ಸುದೀಪ್ ಅವರು ತಾಯಿಯನ್ನು ನೆನಪಿಸಿಕೊಳ್ಳುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಸಚಿವ ಸಂಪುಟದಲ್ಲಿ 2-3 ಮಹಿಳಾ ಶಾಸಕರಿಗೆ ಸ್ಥಾನ ನೀಡಬೇಕಿತ್ತು: ರಮ್ಯಾ
ಸಚಿವ ಸಂಪುಟದಲ್ಲಿ 2-3 ಮಹಿಳಾ ಶಾಸಕರಿಗೆ ಸ್ಥಾನ ನೀಡಬೇಕಿತ್ತು: ರಮ್ಯಾ
ಬರಿದಾದ ತುಂಗಭದ್ರಾ ನದಿ: ಮಂತ್ರಾಲಯದಲ್ಲಿ ಪುಣ್ಯ ಸ್ನಾನಕ್ಕೂ ಭಕ್ತರ ಪರದಾಟ
ಬರಿದಾದ ತುಂಗಭದ್ರಾ ನದಿ: ಮಂತ್ರಾಲಯದಲ್ಲಿ ಪುಣ್ಯ ಸ್ನಾನಕ್ಕೂ ಭಕ್ತರ ಪರದಾಟ
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು
ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್​​
ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್​​
ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್
ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್
‘ಅಯೋಗ್ಯ 2’ ತಂಡದ ಭರ್ಜರಿ ಭೋಜನ, ವಿಡಿಯೋ ನೋಡಿ
‘ಅಯೋಗ್ಯ 2’ ತಂಡದ ಭರ್ಜರಿ ಭೋಜನ, ವಿಡಿಯೋ ನೋಡಿ
ಮಳೆ ಆರ್ಭಟ: ಉಕ್ಕಿ ಹರಿಯುತ್ತಿರುವ ಮಲಪ್ರಭೆ; ಗಂಗಾಂಬಿಕಾ ಐಕ್ಯ ಸ್ಥಳ ಜಲಾವೃತ
ಮಳೆ ಆರ್ಭಟ: ಉಕ್ಕಿ ಹರಿಯುತ್ತಿರುವ ಮಲಪ್ರಭೆ; ಗಂಗಾಂಬಿಕಾ ಐಕ್ಯ ಸ್ಥಳ ಜಲಾವೃತ
ಸಿದ್ದರಾಮಯ್ಯ ಮುನಿಸಿಕೊಂಡಿದ್ದಾರಾ?: ಅಸಲಿ ಸತ್ಯ ಬಿಚ್ಚಿಟ್ಟ ಶಿವಲಿಂಗೇಗೌಡ
ಸಿದ್ದರಾಮಯ್ಯ ಮುನಿಸಿಕೊಂಡಿದ್ದಾರಾ?: ಅಸಲಿ ಸತ್ಯ ಬಿಚ್ಚಿಟ್ಟ ಶಿವಲಿಂಗೇಗೌಡ
3 ವರ್ಷಗಳಲ್ಲಿ 1,000 ರೋಬೋಟಿಕ್ ಸರ್ಜರಿ ಯಶಸ್ವಿ
3 ವರ್ಷಗಳಲ್ಲಿ 1,000 ರೋಬೋಟಿಕ್ ಸರ್ಜರಿ ಯಶಸ್ವಿ
ದಿನೇಶ್ ಗುಂಡೂರಾವ್​​ಗೆ ಕೈತಪ್ಪಿದ ಸಚಿವ ಸ್ಥಾನ: ಬೆಂಬಲಿಗರಿಂದ ಪ್ರತಿಭಟನೆ
ದಿನೇಶ್ ಗುಂಡೂರಾವ್​​ಗೆ ಕೈತಪ್ಪಿದ ಸಚಿವ ಸ್ಥಾನ: ಬೆಂಬಲಿಗರಿಂದ ಪ್ರತಿಭಟನೆ