AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುದೀಪ್ ಅಭಿಮಾನಿಗಳಿಗೆ ಬಿಗ್ ಸರ್​ಪ್ರೈಸ್: ಜೀ ಕನ್ನಡ ರಿಯಾಲಿಟಿ ಶೋನಲ್ಲಿ ಕಿಚ್ಚ, ಇಲ್ಲಿದೆ ಪ್ರೋಮೋ

ಬಿಗ್ ಬಾಸ್ ಕನ್ನಡ ಸೀಸನ್ 11ನೇ ಸೀಸನ್​ ಈಗಾಗಲೇ ಮೂರು ತಿಂಗಳು ಪೂರ್ಣಗೊಳಿಸಿದೆ. ಸದ್ಯ ದೊಡ್ಮನೆಯಲ್ಲಿ 9 ಮಂದಿ ಇದ್ದಾರೆ. ಫಿನಾಲೆಗೆ ದಿನಾಂಕ ಹತ್ತಿರ ಆಗುತ್ತಿರುವಾಗಲೇ ಸುದೀಪ್ ಕಡೆಯಿಂದ ಅಭಿಮಾನಿಗಳಿಗೆ ಸರ್​ಪ್ರೈಸ್ ಸಿಕ್ಕಿದೆ. ಅವರು ಜೀ ಕನ್ನಡ ರಿಯಾಲಿಟಿ ಶೋಗೆ ಆಗಮಿಸಿದ್ದಾರೆ. ಈ ಪ್ರೋಮೋ ಗಮನ ಸೆಳೆದಿದೆ.

ಸುದೀಪ್ ಅಭಿಮಾನಿಗಳಿಗೆ ಬಿಗ್ ಸರ್​ಪ್ರೈಸ್: ಜೀ ಕನ್ನಡ ರಿಯಾಲಿಟಿ ಶೋನಲ್ಲಿ ಕಿಚ್ಚ, ಇಲ್ಲಿದೆ ಪ್ರೋಮೋ
ಸುದೀಪ್
ರಾಜೇಶ್ ದುಗ್ಗುಮನೆ
|

Updated on: Jan 01, 2025 | 8:44 AM

Share

ಕಿಚ್ಚ ಸುದೀಪ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಹೋಸ್ಟ್ ಆಗಿದ್ದಾರೆ. ಅವರು ಯಶಸ್ವಿಯಾಗಿ ಈ ರಿಯಾಲಿಟಿ ಶೋನ ನಡೆಸಿಕೊಡುತ್ತಿದ್ದಾರೆ. ಇದು ಕೊನೆಯ ಸೀಸನ್ ಎಂದು ಅವರ ಹೇಳಿದ್ದಾರೆ. ಹೀಗಿರುವಾಗಲೇ ಸುದೀಪ್ ಅವರು ಅಭಿಮಾನಿಗಳಿಗೆ ಬಿಗ್ ಸರ್​ಪ್ರೈಸ್ ಕೊಟ್ಟಿದ್ದಾರೆ. ಜೀ ಕನ್ನಡ ರಿಯಾಲಿಟಿ ಶೋಗೆ ಅವರ ಆಗಮನ ಆಗಿದೆ. ಇದರ ಪ್ರೋಮೋ ವೈರಲ್ ಆಗಿದೆ. ಈ ಎಪಿಸೋಡ್ ನೋಡಲು ಫ್ಯಾನ್ಸ್ ಕಾದಿದ್ದಾರೆ.

ಜೀ ಕನ್ನಡದಲ್ಲಿ ‘ಸರಿಗಮಪ’ ಶೋ ಪ್ರಸಾರ ಕಾಣುತ್ತಿದೆ. ಇದು ಉತ್ತಮ ಟಿಆರ್​ಪಿ ಕೂಡ ಪಡೆದುಕೊಂಡಿದೆ. ಈ ರಿಯಾಲಿಟಿ ಶೋಗೆ ಸುದೀಪ್ ಆಗಮಿಸಿದ್ದಾರೆ. ಕೇವಲ ಅವರು ಮಾತ್ರವಲ್ಲ ಅವರ ಪತ್ನಿ ಪ್ರಿಯಾ, ಮಗಳು ಸಾನ್ವಿ ಕೂಡ ವೇದಿಕೆ ಏರಿದ್ದಾರೆ. ಈ ವಾರಂತ್ಯದಲ್ಲಿ ಈ ಎಪಿಸೋಡ್ ಪ್ರಸಾರ ಕಾಣಲಿದೆ. ಇದರ ಪ್ರೋಮೋ ಗಮನ ಸೆಳೆದಿದೆ.

‘ಮ್ಯಾಕ್ಸ್’ ಯಶಸ್ಸು ಕಂಡಿದೆ. ಈ ಚಿತ್ರದ ಸೆಟಲೈಟ್ ಹಕ್ಕನ್ನು ಖರೀದಿ ಮಾಡಿದ್ದು ಜೀ ಕನ್ನಡ. ಅವರು ವೇದಿಕೆ ಏರಲು ಇದೂ ಒಂದು ಕಾರಣ ಇರಬಹುದು. ಈ ವೇದಿಕೆ ಮೇಲೆ ‘ಮ್ಯಾಕ್ಸ್’ ಪ್ರಮೋಷನ್ ಕೂಡ ಮಾಡಲಾಗಿದೆ. ಸುದೀಪ್ ಅವರು ಈ ರಿಯಾಲಿಟಿ ಶೋಗೆ ಬಂದಿದ್ದು ಫ್ಯಾನ್ಸ್ ಖುಷಿ ಹೆಚ್ಚಿಸಿದೆ.

View this post on Instagram

A post shared by Zee Kannada (@zeekannada)

ಇದನ್ನೂ ಓದಿ: ಸುದೀಪ್​ಗೆ ನಡೆದಿತ್ತು ಎರಡನೇ ಮದುವೆ? ಶಾಕಿಂಗ್ ವಿಚಾರ ರಿವೀಲ್ ಮಾಡಿದ ಕಿಚ್ಚ

ಸುದೀಪ್ ಅವರು ವೇದಿಕೆ ಮೇಲೆ ‘ಸರಿಗಮಪ’ ರಿಯಾಲಿಟಿ ಶೋ ಬಗ್ಗೆ ಬಗ್ಗೆ ಮೆಚ್ಚುಗೆ ಸೂಚಿಸಿದ್ದಾರೆ. ಈ ವೇಳೆ ಸುದೀಪ್ ಅವರು ಹಾಡನ್ನು ಹಾಡಿದ್ದಾರೆ. ಸಾನ್ವಿ ಕಂಠದಲ್ಲೂ ಹಾಡು ಮೂಡಿ ಬಂದಿದೆ. ಇನ್ನು, ಈ ಎಪಿಸೋಡ್ ಭಾವನಾತ್ಮಕವಾಗಿಯೂ ಸೆಳೆದುಕೊಳ್ಳಲಿದೆ. ಏಕೆಂದರೆ ಸುದೀಪ್ ಅವರ ತಾಯಿಯ ಮೂರ್ತಿ ಮಾಡಿ ತರಲಾಗಿದ್ದು, ಸುದೀಪ್​ಗೆ ನೀಡಲಾಗಿದೆ. ಈ ವೇಳೆ ಸುದೀಪ್ ಭಾವುಕರಾದರು. ಸುದೀಪ್ ಅವರು ಇತ್ತೀಚೆಗಷ್ಟೇ ತಾಯಿಯನ್ನು ಕಳೆದುಕೊಂಡರು. ಈ ನೋವಿನಿಂದ ಅವರು ಹೊರ ಬಂದಿಲ್ಲ. ಅನೇಕ ವೇದಿಕೆ ಮೇಲೆ ಸುದೀಪ್ ಅವರು ತಾಯಿಯನ್ನು ನೆನಪಿಸಿಕೊಳ್ಳುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್