AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳಾ ಸ್ಪರ್ಧಿಗಳ ಜೊತೆ ಮಿಂಗಲ್ ಆಗುವ ರೂಪೇಶ್ ಶೆಟ್ಟಿಯ ಕಾಲೆಳೆದ ಸುದೀಪ್

ಬಿಗ್ ಬಾಸ್ ಮನೆಯಲ್ಲಿ ಸಾನ್ಯಾ ಐಯ್ಯರ್ ಜತೆ ರೂಪೇಶ್ ಶೆಟ್ಟಿ ಕ್ಲೋಸ್ ಆಗಿದ್ದಾರೆ. ಒಟಿಟಿ ಸೀಸನ್​ನಿಂದ ಇವರ ಕೆಮಿಸ್ಟ್ರಿ ಸಖತ್ ಆಗಿ ವರ್ಕೌಟ್ ಆಗಿದೆ. ಈ ಜೋಡಿಗೆ ರಾಜ್ಯಾದ್ಯಂತ ಅಭಿಮಾನಿಗಳು ಹುಟ್ಟಿಕೊಂಡಿದ್ದಾರೆ.

ಮಹಿಳಾ ಸ್ಪರ್ಧಿಗಳ ಜೊತೆ ಮಿಂಗಲ್ ಆಗುವ ರೂಪೇಶ್ ಶೆಟ್ಟಿಯ ಕಾಲೆಳೆದ ಸುದೀಪ್
ಸಾನ್ಯಾ-ರೂಪೇಶ್-ಸುದೀಪ್
TV9 Web
| Edited By: |

Updated on:Oct 08, 2022 | 10:39 PM

Share

ರೂಪೇಶ್ ಶೆಟ್ಟಿ (Roopesh Shetty) ಅವರು ಬಿಗ್ ಬಾಸ್ ಮನೆಯಲ್ಲಿ ಎಲ್ಲಾ ಸ್ಪರ್ಧಿಗಳ ಜತೆ ಮಿಂಗಲ್ ಆಗುತ್ತಾರೆ. ಅದರಲ್ಲೂ ಮಹಿಳಾ ಸ್ಪರ್ಧಿಗಳ ಜತೆ ಅವರು ಹೆಚ್ಚು ಕ್ಲೋಸ್ ಆಗಿದ್ದಾರೆ. ಈ ವಿಚಾರ ಪ್ರತಿ ಬಾರಿ ವೀಕೆಂಡ್​ನಲ್ಲಿ ಹೈಲೈಟ್ ಆಗುತ್ತದೆ. ಕಿಚ್ಚ ಸುದೀಪ್ (Kichcha Sudeep) ಅವರು ಈ ವಿಚಾರದಲ್ಲಿ ಸದಾ ಕಾಲೆಳೆಯುತ್ತಲೇ ಬರುತ್ತಿದ್ದಾರೆ. ಈ ವಾರ ಸುದೀಪ್ ಒಂದು ಹೆಜ್ಜೆ ಮುಂದೆ ಹೋಗಿದ್ದಾರೆ. ರೂಪೇಶ್ ಶೆಟ್ಟಿಗೆ ಸುದೀಪ್ ಅವರು ಫನ್ನಿ ಆಗಿಯೇ ಕಾಲೆಳೆದಿದ್ದಾರೆ. ಇದನ್ನು ಕೇಳಿ ಮನೆ ಮಂದಿ ನಕ್ಕಿದ್ದಾರೆ.

ಬಿಗ್ ಬಾಸ್ ಮನೆಯಲ್ಲಿ ಸಾನ್ಯಾ ಐಯ್ಯರ್ ಜತೆ ರೂಪೇಶ್ ಶೆಟ್ಟಿ ಕ್ಲೋಸ್ ಆಗಿದ್ದಾರೆ. ಒಟಿಟಿ ಸೀಸನ್​ನಿಂದ ಇವರ ಕೆಮಿಸ್ಟ್ರಿ ಸಖತ್ ಆಗಿ ವರ್ಕೌಟ್ ಆಗಿದೆ. ಈ ಜೋಡಿಗೆ ರಾಜ್ಯಾದ್ಯಂತ ಅಭಿಮಾನಿಗಳು ಹುಟ್ಟಿಕೊಂಡಿದ್ದಾರೆ. ‘ನಮ್ಮ ಮಧ್ಯೆ ಇರೋದು ಫ್ರೆಂಡ್​ಶಿಪ್ ಮಾತ್ರ’ ಎಂದು ರೂಪೇಶ್ ಶೆಟ್ಟಿ ಆಗಾಗ ಸ್ಪಷ್ಟನೆ ನೀಡುತ್ತಲೇ ಇರುತ್ತಾರೆ. ಟಿವಿ ಸೀಸನ್​ನಲ್ಲಿ ರೂಪೇಶ್ ಶೆಟ್ಟಿ ಅವರು ಸಾನ್ಯಾ ಜತೆಗೆ ಅನೇಕ ಮಹಿಳಾ ಸ್ಪರ್ಧಿಗಳ ಜತೆ ಕ್ಲೋಸ್ ಆಗಿದ್ದಾರೆ. ಈ ವಿಚಾರದಲ್ಲಿ ಸುದೀಪ್ ಅವರು ಕಾಲೆಳೆದಿದ್ದಾರೆ.

‘ರೂಪೇಶ್ ಅವರೇ ನೀವು ಬಿಗ್ ಬಾಸ್ ಮನೆಯ ಯೂನಿವರ್ಸಿಟಿ’ ಎಂದರು ಸುದೀಪ್. ಇದು ಏಕೆ ಎಂದು ರೂಪೇಶ್ ಶೆಟ್ಟಿ ಪ್ರಶ್ನೆ ಮಾಡಿದರು. ಅದಕ್ಕೆ ಸುದೀಪ್ ನಗುತ್ತಲೇ ಉತ್ತರ ನೀಡಿದರು. ‘ರೂಪೇಶ್ ಅವರು ಈ ಬಾರಿ ಎಲ್ಲರ ಜತೆ ಕ್ಲೋಸ್ ಆಗಿದ್ದಾರೆ. ಅಡುಗೆ ಮನೆಯಲ್ಲಿ ಯಾರ ಜತೆ ಮಾತನಾಡಬೇಕು, ಬಾತ್​ರೂಂನಲ್ಲಿದ್ದಾಗ ಯಾರ ಜತೆ ಮಾತನಾಡಬೇಕು, ಲೈಟ್ ಆಫ್ ಆದಾಗ ಯಾರ ಜತೆ ಮಾತನಾಡಬೇಕು ಎಂಬುದು ಅವರಿಗೆ ಗೊತ್ತಿದೆ’ ಎಂದು ಸುದೀಪ್ ಹೇಳಿದರು. ಇದನ್ನು ಕೇಳಿದ ರೂಪೇಶ್ ಆ ರೀತಿ ಇಲ್ಲ ಎಂದು ನಕ್ಕರು.

ಇದನ್ನೂ ಓದಿ: ‘ಬಿಗ್ ಬಾಸ್ ಶುರುವಾದಾಗ ನಾನು ಬಂದು ಪ್ರೀತಿ ಮಾಡಿ ಅಂತ ಹೇಳಿದ್ನಾ?’; ಸುದೀಪ್ ಪ್ರಶ್ನೆಗೆ ಕಂಗಾಲಾದ ರೂಪೇಶ್

‘ನಾನು ಎಲ್ಲರ ಜತೆ ಕ್ಲೋಸ್ ಇದ್ದೀನಿ. ಎಲ್ಲರ ಜತೆಯೂ ಫ್ರೆಂಡ್​ಶಿಪ್ ಅಷ್ಟೇ ಇರೋದು’ ಎಂದು ರೂಪೇಶ್​ ಹೇಳಿದರು. ‘ನೀವು ಫ್ರೆಂಡ್​ಶಿಪ್​ನೇ ಮಾಡಿಕೊಂಡಿರೋದು’ ಎಂದು ಸುದೀಪ್ ಹೇಳಿದ್ದಾರೆ.

Published On - 10:18 pm, Sat, 8 October 22

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ