AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳಾ ಸ್ಪರ್ಧಿಗಳ ಜೊತೆ ಮಿಂಗಲ್ ಆಗುವ ರೂಪೇಶ್ ಶೆಟ್ಟಿಯ ಕಾಲೆಳೆದ ಸುದೀಪ್

ಬಿಗ್ ಬಾಸ್ ಮನೆಯಲ್ಲಿ ಸಾನ್ಯಾ ಐಯ್ಯರ್ ಜತೆ ರೂಪೇಶ್ ಶೆಟ್ಟಿ ಕ್ಲೋಸ್ ಆಗಿದ್ದಾರೆ. ಒಟಿಟಿ ಸೀಸನ್​ನಿಂದ ಇವರ ಕೆಮಿಸ್ಟ್ರಿ ಸಖತ್ ಆಗಿ ವರ್ಕೌಟ್ ಆಗಿದೆ. ಈ ಜೋಡಿಗೆ ರಾಜ್ಯಾದ್ಯಂತ ಅಭಿಮಾನಿಗಳು ಹುಟ್ಟಿಕೊಂಡಿದ್ದಾರೆ.

ಮಹಿಳಾ ಸ್ಪರ್ಧಿಗಳ ಜೊತೆ ಮಿಂಗಲ್ ಆಗುವ ರೂಪೇಶ್ ಶೆಟ್ಟಿಯ ಕಾಲೆಳೆದ ಸುದೀಪ್
ಸಾನ್ಯಾ-ರೂಪೇಶ್-ಸುದೀಪ್
TV9 Web
| Edited By: |

Updated on:Oct 08, 2022 | 10:39 PM

Share

ರೂಪೇಶ್ ಶೆಟ್ಟಿ (Roopesh Shetty) ಅವರು ಬಿಗ್ ಬಾಸ್ ಮನೆಯಲ್ಲಿ ಎಲ್ಲಾ ಸ್ಪರ್ಧಿಗಳ ಜತೆ ಮಿಂಗಲ್ ಆಗುತ್ತಾರೆ. ಅದರಲ್ಲೂ ಮಹಿಳಾ ಸ್ಪರ್ಧಿಗಳ ಜತೆ ಅವರು ಹೆಚ್ಚು ಕ್ಲೋಸ್ ಆಗಿದ್ದಾರೆ. ಈ ವಿಚಾರ ಪ್ರತಿ ಬಾರಿ ವೀಕೆಂಡ್​ನಲ್ಲಿ ಹೈಲೈಟ್ ಆಗುತ್ತದೆ. ಕಿಚ್ಚ ಸುದೀಪ್ (Kichcha Sudeep) ಅವರು ಈ ವಿಚಾರದಲ್ಲಿ ಸದಾ ಕಾಲೆಳೆಯುತ್ತಲೇ ಬರುತ್ತಿದ್ದಾರೆ. ಈ ವಾರ ಸುದೀಪ್ ಒಂದು ಹೆಜ್ಜೆ ಮುಂದೆ ಹೋಗಿದ್ದಾರೆ. ರೂಪೇಶ್ ಶೆಟ್ಟಿಗೆ ಸುದೀಪ್ ಅವರು ಫನ್ನಿ ಆಗಿಯೇ ಕಾಲೆಳೆದಿದ್ದಾರೆ. ಇದನ್ನು ಕೇಳಿ ಮನೆ ಮಂದಿ ನಕ್ಕಿದ್ದಾರೆ.

ಬಿಗ್ ಬಾಸ್ ಮನೆಯಲ್ಲಿ ಸಾನ್ಯಾ ಐಯ್ಯರ್ ಜತೆ ರೂಪೇಶ್ ಶೆಟ್ಟಿ ಕ್ಲೋಸ್ ಆಗಿದ್ದಾರೆ. ಒಟಿಟಿ ಸೀಸನ್​ನಿಂದ ಇವರ ಕೆಮಿಸ್ಟ್ರಿ ಸಖತ್ ಆಗಿ ವರ್ಕೌಟ್ ಆಗಿದೆ. ಈ ಜೋಡಿಗೆ ರಾಜ್ಯಾದ್ಯಂತ ಅಭಿಮಾನಿಗಳು ಹುಟ್ಟಿಕೊಂಡಿದ್ದಾರೆ. ‘ನಮ್ಮ ಮಧ್ಯೆ ಇರೋದು ಫ್ರೆಂಡ್​ಶಿಪ್ ಮಾತ್ರ’ ಎಂದು ರೂಪೇಶ್ ಶೆಟ್ಟಿ ಆಗಾಗ ಸ್ಪಷ್ಟನೆ ನೀಡುತ್ತಲೇ ಇರುತ್ತಾರೆ. ಟಿವಿ ಸೀಸನ್​ನಲ್ಲಿ ರೂಪೇಶ್ ಶೆಟ್ಟಿ ಅವರು ಸಾನ್ಯಾ ಜತೆಗೆ ಅನೇಕ ಮಹಿಳಾ ಸ್ಪರ್ಧಿಗಳ ಜತೆ ಕ್ಲೋಸ್ ಆಗಿದ್ದಾರೆ. ಈ ವಿಚಾರದಲ್ಲಿ ಸುದೀಪ್ ಅವರು ಕಾಲೆಳೆದಿದ್ದಾರೆ.

‘ರೂಪೇಶ್ ಅವರೇ ನೀವು ಬಿಗ್ ಬಾಸ್ ಮನೆಯ ಯೂನಿವರ್ಸಿಟಿ’ ಎಂದರು ಸುದೀಪ್. ಇದು ಏಕೆ ಎಂದು ರೂಪೇಶ್ ಶೆಟ್ಟಿ ಪ್ರಶ್ನೆ ಮಾಡಿದರು. ಅದಕ್ಕೆ ಸುದೀಪ್ ನಗುತ್ತಲೇ ಉತ್ತರ ನೀಡಿದರು. ‘ರೂಪೇಶ್ ಅವರು ಈ ಬಾರಿ ಎಲ್ಲರ ಜತೆ ಕ್ಲೋಸ್ ಆಗಿದ್ದಾರೆ. ಅಡುಗೆ ಮನೆಯಲ್ಲಿ ಯಾರ ಜತೆ ಮಾತನಾಡಬೇಕು, ಬಾತ್​ರೂಂನಲ್ಲಿದ್ದಾಗ ಯಾರ ಜತೆ ಮಾತನಾಡಬೇಕು, ಲೈಟ್ ಆಫ್ ಆದಾಗ ಯಾರ ಜತೆ ಮಾತನಾಡಬೇಕು ಎಂಬುದು ಅವರಿಗೆ ಗೊತ್ತಿದೆ’ ಎಂದು ಸುದೀಪ್ ಹೇಳಿದರು. ಇದನ್ನು ಕೇಳಿದ ರೂಪೇಶ್ ಆ ರೀತಿ ಇಲ್ಲ ಎಂದು ನಕ್ಕರು.

ಇದನ್ನೂ ಓದಿ: ‘ಬಿಗ್ ಬಾಸ್ ಶುರುವಾದಾಗ ನಾನು ಬಂದು ಪ್ರೀತಿ ಮಾಡಿ ಅಂತ ಹೇಳಿದ್ನಾ?’; ಸುದೀಪ್ ಪ್ರಶ್ನೆಗೆ ಕಂಗಾಲಾದ ರೂಪೇಶ್

‘ನಾನು ಎಲ್ಲರ ಜತೆ ಕ್ಲೋಸ್ ಇದ್ದೀನಿ. ಎಲ್ಲರ ಜತೆಯೂ ಫ್ರೆಂಡ್​ಶಿಪ್ ಅಷ್ಟೇ ಇರೋದು’ ಎಂದು ರೂಪೇಶ್​ ಹೇಳಿದರು. ‘ನೀವು ಫ್ರೆಂಡ್​ಶಿಪ್​ನೇ ಮಾಡಿಕೊಂಡಿರೋದು’ ಎಂದು ಸುದೀಪ್ ಹೇಳಿದ್ದಾರೆ.

Published On - 10:18 pm, Sat, 8 October 22

ಚಳಿಯೆಂದು ಹುತಾತ್ಮನಾದ ಸೈನಿಕನ ಪ್ರತಿಮೆಗೆ ಕಂಬಳಿ ಹೊದಿಸಿದ ಅಮ್ಮ
ಚಳಿಯೆಂದು ಹುತಾತ್ಮನಾದ ಸೈನಿಕನ ಪ್ರತಿಮೆಗೆ ಕಂಬಳಿ ಹೊದಿಸಿದ ಅಮ್ಮ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಆರ್​ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಆರ್​ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ