AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರಿಗರ್ ಆಗಿ ಟಾಸ್ಕ್ ಸೋತ ಅಶ್ವಿನಿಗೆ ಸಂಗೀತಾ, ಡ್ರೋನ್ ಉದಾಹರಣೆ ಕೊಟ್ಟ ಸುದೀಪ್

Bigg Boss: 10ನೇ ಸೀಸನ್​ನಲ್ಲಿ ಸಂಗೀತಾ ಹಾಗೂ ಪ್ರತಾಪ್ ಚೇರ್ ಮೇಲೆ ಕುಳಿತುಕೊಳ್ಳಯವ ಟಾಸ್ಕ್ ಇತ್ತು. ಅವರನ್ನು ಮುಟ್ಟದೆಯೇ ಮೇಲಕ್ಕೆ ಎಬ್ಬಿಸಬೇಕಿತ್ತು. ಈ ವೇಳೆ ಸೋಪಿನ ನೀರು ಎರಚಲಾಗಿತ್ತು ಮತ್ತು ಇದರಿಂದ ಅವರಿನ ಕಣ್ಣಿನ ದೃಷ್ಟಿಗೆ ತೊಂದರೆ ಆಗಿತ್ತು. ಇದನ್ನು ಸುದೀಪ್ ನೆನಪಿಸಿಕೊಂಡರು.

ಟ್ರಿಗರ್ ಆಗಿ ಟಾಸ್ಕ್ ಸೋತ ಅಶ್ವಿನಿಗೆ ಸಂಗೀತಾ, ಡ್ರೋನ್ ಉದಾಹರಣೆ ಕೊಟ್ಟ ಸುದೀಪ್
ಬಿಗ್ ಬಾಸ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Nov 22, 2025 | 10:56 PM

Share

ಬಿಗ್ ಬಾಸ್ ಮನೆಯಲ್ಲಿ ಕೆಲವೊಮ್ಮೆ ಟಾಸ್ಕ್​ಗಳು ನಡೆಯುವಾಗ ಅದು ಯಾವ ಹಂತಕ್ಕೆ ಬೇಕಾದರೂ ಹೋಗಬಹುದು. ಆಟವನ್ನು ಗೆಲ್ಲಬೇಕು ಎಂಬ ಭರದಲ್ಲಿ ಸಾಕಷ್ಟು ತಪ್ಪುಗಳು ನಡೆದು ಹೋಗುತ್ತವೆ. ಈ ವಾರವೂ ಕೆಲವು ತಪ್ಪುಗಳು ನಡೆದವು. ಅದನ್ನು ಸುದೀಪ್ ತಿದ್ದಿದ್ದಾರೆ. ಇನ್ನು, ಆಟವನ್ನು ವೈಯಕ್ತಿಕವಾಗಿ ತೆಗೆದುಕೊಂಡ ಅಶ್ವಿನಿ ಗೌಡ ಅವರಿಗೆ ಸುದೀಪ್ ಪಾಠ ಮಾಡಿದರು. 10ನೇ ಸೀಸನ್​ನ ಸಂಗೀತಾ ಹಾಗೂ ಡ್ರೋನ್ ಪ್ರತಾಪ್ ಉದಾಹರಣೆಯನ್ನು ನೀಡಿದರು.

ಬಿಗ್ ಬಾಸ್ ಕನ್ನಡದಲ್ಲಿ ಈ ವಾರ ಒಂದು ಟಾಸ್ಕ್ ನೀಡಲಾಗಿತ್ತು. ಕ್ಯಾಪ್ಟನ್ ರೇಸ್​ ಅಲ್ಲಿ ಕುಳಿತ ಅಶ್ವಿನಿ ಹಾಗೂ ಅಭಿಷೇಕ್ ಅವರನ್ನು ಡಿಸ್ಟ್ರಾಕ್ಟ್ ಮಾಡಬೇಕು. ಗಿಲ್ಲಿ ಅವರು ಅಶ್ವಿನಿ ಅವರ ವೈಯಕ್ತಿಕ ವಿಚಾರ ಇಟ್ಟುಕೊಂಡು ಅವರ ಗಮನ ಬೇರೆಡೆ ಸೆಳೆಯಲು ಪ್ರಯತ್ನಿಸಿದರು. ಈ ಪ್ರಯತ್ನ ಯಶಸ್ಸು ಆಗಿದೆ ಎಂದೇ ಹೇಳಿದರೂ ತಪ್ಪಾಗಲಿಕ್ಕಿಲ್ಲ. ಏಕೆಂದರೆ ಗಿಲ್ಲಿ ಮಾತು ಕೇಳುತ್ತಾ ಕೇಳುತ್ತಾ ಅವರು ತಾವು 12 ನಿಮಿಷಕ್ಕೆ ಬೆಲ್ ಹೊಡೆಯಬೇಕು ಎಂಬುದನ್ನು ಮರೆತಿದ್ದರು.

ತಮ್ಮ ಕೆಲಸವನ್ನು ಅವರು ಸಮರ್ಥಿಸಿಕೊಳ್ಳಲು ಬಂದರು. ‘ಗಿಲ್ಲಿ ಮನಸ್ಸಲ್ಲಿ ಎಷ್ಟು ಕೆಟ್ಟ ಅಂಶಗಳು ಇವೆ ಎಂಬುದನ್ನು ನೋಡಬೇಕಿತ್ತು’ ಎಂದು ಅಶ್ವಿನಿ ಹೇಳಿದರು. ಇದನ್ನು ಸುದೀಪ್ ಒಪ್ಪಲಿಲ್ಲ. ‘10ನೇ ಸೀಸನ್​ನಲ್ಲಿ ಸಂಗೀತಾ ಹಾಗೂ ಪ್ರತಾಪ್ ಟಾಸ್ಕ್ ಆಡುವಾಗ ಸಾಕಷ್ಟು ತೊಂದರೆ ಅನುಭವಿಸಿದರು. ಅವರು ಆಸ್ಪತ್ರೆಗೆ ಕೂಡ ಹೋಗಬೇಕಾಯಿತು. ಅಲ್ಲಿ ಆಟ ಆಡಿ ಗೆಲ್ಲೋದಷ್ಟೇ ಮುಖ್ಯ. ಹಾಗೆ ನೋಡಿದರೆ ಗಿಲ್ಲಿ-ಕಾವ್ಯಾ ಗೆದ್ದರು’ ಎಂದು ಹೇಳಿದರು.

‘ನೀವು ಟ್ರಿಗರ್ ಆಗದೆ 12 ನಿಮಿಷದ ಲೆಕ್ಕಾಚಾರಕ್ಕೆ ಬೆಲ್ ಹೊಡೆದಿದ್ದರೆ ಮೊದಲ ಮಹಿಳಾ ಕ್ಯಾಪ್ಟನ್ ಆಗುತ್ತಿದ್ದಿರಿ ಅಲ್ಲವೇ’ ಎಂದು ಸುದೀಪ್ ಪ್ರಶ್ನೆ ಮಾಡಿದರು. ಆದರೂ ಅಶ್ವಿನಿ ಅವರು ತಾವು ಮಾಡಿದ್ದೇ ಸರಿ ಎಂದು ಸಮರ್ಥಿಸಿಕೊಳ್ಳಲು ಬಂದರು.

ಇದನ್ನೂ ಓದಿ: ಅಶ್ವಿನಿ ಬಳಸಿದ ಕೆಟ್ಟ ಪದಗಳ ಆಡಿಯೋ ಹಾಕಿದ ಸುದೀಪ್; ಕೇಳೋಕೆ ಸಾಧ್ಯವಿಲ್ಲ

10ನೇ ಸೀಸನ್​ನಲ್ಲಿ ಸಂಗೀತಾ ಹಾಗೂ ಪ್ರತಾಪ್ ಚೇರ್ ಮೇಲೆ ಕುಳಿತುಕೊಳ್ಳಯವ ಟಾಸ್ಕ್ ಇತ್ತು. ಅವರನ್ನು ಮುಟ್ಟದೆಯೇ ಮೇಲಕ್ಕೆ ಎಬ್ಬಿಸಬೇಕಿತ್ತು. ಈ ವೇಳೆ ಸೋಪಿನ ನೀರು ಎರಚಲಾಗಿತ್ತು ಮತ್ತು ಇದರಿಂದ ಅವರಿನ ಕಣ್ಣಿನ ದೃಷ್ಟಿಗೆ ತೊಂದರೆ ಆಗಿತ್ತು. ಇದನ್ನು ಸುದೀಪ್ ನೆನಪಿಸಿಕೊಂಡರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ