AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಕ್ಷಿತಾ ಶೆಟ್ಟಿಗೆ ವಿಶೇಷ ಅಧಿಕಾರ ಕೊಟ್ಟ ಸುದೀಪ್

ಕಿಚ್ಚ ಸುದೀಪ್ ಅವರು ಈ ವಾರ ಬರುತ್ತಿದ್ದಂತೆ ಸುಧಿ ಬಳಿ ಮಾತನಾಡಿದರು. ‘ಇಡೀ ಮನೆಯ ಶಾಂತಿಯನ್ನು ಯಾರು ಹಾಳು ಮಾಡುತ್ತಿದ್ದಾರೆ’ ಎಂದು ಸುದೀಪ್ ಕೇಳಿದರು. ಇದಕ್ಕೆ ಉತ್ತರಿಸಿದ ಸುಧಿ ಅವರು, ‘ಅಶ್ವಿನಿ, ರಿಷಾ’ ಹೆಸರು ತೆಗೆದುಕೊಂಡರು. ವಾರವಿಡೀ ರಕ್ಷಿತಾ ಹೆಸರು ತೆಗೆದುಕೊಳ್ಳುತ್ತಿದ್ದ ಸುಧಿ ಅವರು ಸುದೀಪ್ ಎದುರು ಸೈಲೆಂಟ್ ಆದರು.

ರಕ್ಷಿತಾ ಶೆಟ್ಟಿಗೆ ವಿಶೇಷ ಅಧಿಕಾರ ಕೊಟ್ಟ ಸುದೀಪ್
ರಕ್ಷಿತಾ-ಸುದೀಪ್
 ಶ್ರೀಲಕ್ಷ್ಮೀ ಎಚ್
| Updated By: ಮಂಜುನಾಥ ಸಿ.|

Updated on: Nov 08, 2025 | 10:57 PM

Share

ಬಿಗ್ ಬಾಸ್ ಮನೆಯಲ್ಲಿ ಮಂಗಳೂರಿನ ರಕ್ಷಿತಾ ಶೆಟ್ಟಿ (Rakshitha Shetty) ಅವರು ಉತ್ತಮವಾಗಿ ಆಟ ಆಡುತ್ತಿದ್ದಾರೆ. ಅವರ ಆಟ ಗಮನ ಸೆಳೆಯುವ ರೀತಿಯಲ್ಲಿ ಇದೆ. ಅವರನ್ನು ಮನೆಯಲ್ಲಿ ಪದೇ ಪದೇ ಟಾರ್ಗೆಟ್ ಮಾಡಲಾಗುತ್ತಾ ಇದೆ. ರಕ್ಷಿತಾನ ವಿರುದ್ಧ ಸುಳ್ಳು ಆರೋಪಗಳು ಕೇಳಿ ಬಂದಾಗ ಪ್ರತಿ ವಾರ ಸುದೀಪ್ ಅವರು ಬೆಂಬಲಿಸುತ್ತಾ ಬಂದಿದ್ದಾರೆ. ಈ ವಾರವೂ ಅದನ್ನು ಮುಂದುವರಿಸಿದ್ದಾರೆ ಸುದೀಪ್. ಪದೇ ಪದೇ ರಕ್ಷಿತಾನ ಟಾರ್ಗೆಟ್ ಮಾಡುತ್ತಿದ್ದ ಸುಧಿಗೆ ಪಾಠ ಕಲಿಸಿದ್ದಾರೆ ಕಿಚ್ಚ.

ಕಿಚ್ಚ ಸುದೀಪ್ ಅವರು ಈ ವಾರ ಬರುತ್ತಿದ್ದಂತೆ ಸುಧಿ ಬಳಿ ಮಾತನಾಡಿದರು. ‘ಇಡೀ ಮನೆಯ ಶಾಂತಿಯನ್ನು ಯಾರು ಹಾಳು ಮಾಡುತ್ತಿದ್ದಾರೆ’ ಎಂದು ಸುದೀಪ್ ಕೇಳಿದರು. ಇದಕ್ಕೆ ಉತ್ತರಿಸಿದ ಸುಧಿ ಅವರು, ‘ಅಶ್ವಿನಿ, ರಿಷಾ’ ಹೆಸರು ತೆಗೆದುಕೊಂಡರು. ವಾರವಿಡೀ ರಕ್ಷಿತಾ ಹೆಸರು ತೆಗೆದುಕೊಳ್ಳುತ್ತಿದ್ದ ಸುಧಿ ಅವರು ಸುದೀಪ್ ಎದುರು ಸೈಲೆಂಟ್ ಆದರು. ಆ ಬಳಿಕ ರಕ್ಷಿತಾ, ಹೆಸರು ಬಿಟ್ರಲ್ಲ ಎಂದು ಸುದೀಪ್ ಅವರು ಪರೋಕ್ಷವಾಗಿ ಕೇಳಿದರು.

ಆ ಬಳಿಕ ಸುಧಿ ಮಾಡಿದ ತಪ್ಪನ್ನು ಎತ್ತಿ ತೋರಿಸಿದರು ಸುದೀಪ್. ಸುಧಿ ಅವರು ಹಸಿದಾಗ, ರಕ್ಷಿತಾ ಶೆಟ್ಟಿ ಅವರ ಪೇರಲೆ ಹಣ್ಣನ್ನು ಕದ್ದು ತಿಂದಿದ್ದರು. ಈ ವಿಡಿಯೋನ ಸುದೀಪ್ ತೋರಿಸಿದರು. ಆ ಬಳಿಕ ರಕ್ಷಿತಾಗೆ ಶಾಕ್ ಆಯಿತು. ಈ ವಿಡಿಯೋ ತೋರಿಸದ ಬಳಿಕ ಸುದೀಪ್ ಅವರು ರಕ್ಷಿತಾ ಅವರಿಗೆ ವಿಶೇಷ ಅಧಿಕಾರ ನೀಡಿದರು.

ಇದನ್ನೂ ಓದಿ: ‘ನನ್ನ ಮತ್ತು ಅವರ ಮಧ್ಯೆ ಯಾರೂ ಬರಬೇಡಿ’; ಅಶ್ವಿನಿಗೆ ಎಚ್ಚರಿಸಿದ ರಕ್ಷಿತಾ ಶೆಟ್ಟಿ

ಮೂರನೇ ವಾರದಲ್ಲಿ ನಡೆದ ಮೊದಲ ಫಿನಾಲೆಯಲ್ಲಿ ಸುಧಿ ಗೆದ್ದಿದ್ದಾರೆ. ಈ ಕಾರಣಕ್ಕೆ ಅವರಿಗೆ ವಿಶೇಷ ಅಧಿಕಾರ ನೀಡಲಾಗಿದೆ. ಇದರ ಪ್ರಕಾರ ಅವರಿಗೆ ಒಂದು ಚೈನ್ ಕೊಡಲಾಗಿದೆ. ಇದನ್ನು ಬಳಸಿಕೊಂಡು ಅವರು ಯಾವಾಗ ಬೇಕಿದ್ದರೂ ನಾಮಿನೇಷನ್​ನಿಂದ ಬಚಾವ್ ಆಗಬಹುದಾಗಿದೆ. ಈ ಚೈನ್​ನ ಕದ್ದುಕೊಂಡರೆ ಆ ವಿಶೇಷ ಪವರ್ ರಕ್ಷಿತಾ ಪಾಲಾಗುತ್ತದೆ ಎಂದರು ಸುದೀಪ್. ಈ ವಿಶೇಷ ಅಧಿಕಾರ ರಕ್ಷಿತಾಗೆ ಮಾತ್ರ ಇರೋದಾಗಿ ಸುದೀಪ್ ಅವರು ಹೇಳಿದರು. ಇದನ್ನು ಕೇಳಿ ಸುಧಿ ಅವರು ಬೇಡ ಅಣ್ಣ, ಬೇಡ ಅಣ್ಣ ಎಂದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ