AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kichcha Sudeep: ಫಿನಾಲೆ ವೇದಿಕೆಯಲ್ಲಿ ಕಣ್ಣೀರು ಹಾಕಿದ ಸುದೀಪ್​; ಬಿಗ್​ ಬಾಸ್​ ಶೋನಲ್ಲಿ ಅಂಥದ್ದೇನಾಯ್ತು?

Bigg Boss Kannada Season 9 | BBK 9 Finale: ಬಿಗ್​ ಬಾಸ್​ ಫಿನಾಲೆ ನಡೆಯುವಾಗ ಕಿಚ್ಚ ಸುದೀಪ್​ ಅವರು ಭಾವುಕರಾಗಿ ಕಣ್ಣೀರು ಸುರಿಸಿದರು. ಆ ಅಪರೂಪದ ಕ್ಷಣಕ್ಕೆ ಎಲ್ಲರೂ ಸಾಕ್ಷಿಯಾದರು.

Kichcha Sudeep: ಫಿನಾಲೆ ವೇದಿಕೆಯಲ್ಲಿ ಕಣ್ಣೀರು ಹಾಕಿದ ಸುದೀಪ್​; ಬಿಗ್​ ಬಾಸ್​ ಶೋನಲ್ಲಿ ಅಂಥದ್ದೇನಾಯ್ತು?
ಕಿಚ್ಚ ಸುದೀಪ್
TV9 Web
| Edited By: |

Updated on: Jan 01, 2023 | 3:28 PM

Share

ನಟ ಸುದೀಪ್​ ಅವರಿಂದ ಬಿಗ್​ ಬಾಸ್ (Bigg Boss Kannada) ಕಾರ್ಯಕ್ರಮಕ್ಕೆ ಸ್ಟಾರ್​ ಮೆರುಗು ಸಿಕ್ಕಿದೆ ಎಂದರೆ ತಪ್ಪಿಲ್ಲ. ಮೊದಲ ಸೀಸನ್​ನಿಂದ 9ನೇ ಸೀಸನ್​ ತನಕ ಅವರು ತುಂಬ ಅಚ್ಚುಕಟ್ಟಾಗಿ ಈ ಶೋ ನಡೆಸಿಕೊಟ್ಟಿದ್ದಾರೆ. ಇದೊಂದು ಕಾಂಟ್ರವರ್ಸಿ ಕಾರ್ಯಕ್ರಮ ಎಂಬ ಅಭಿಪ್ರಾಯ ಬಹುತೇಕರಲ್ಲಿ ಇದೆ. ಕೆಲವೊಮ್ಮೆ ಸ್ಪರ್ಧಿಗಳ ಮಾತು ಮತ್ತು ನಡವಳಿಕೆ ಮಿತಿ ಮೀರುವುದುಂಟು. ಅಂಥ ಸಂದರ್ಭಗಳನ್ನು ಕಿಚ್ಚ ಸುದೀಪ್​ (Kichcha Sudeep) ಅವರು ತುಂಬ ಘನತೆಯಿಂದ ನಿಭಾಯಿಸಿದ್ದುಂಟು. ಡಿಸೆಂಬರ್​ 31ರಂದು ‘ಬಿಗ್ ಬಾಸ್​ ಕನ್ನಡ ಸೀಸನ್​ 9’ಕ್ಕೆ ಫಿನಾಲೆ (Bigg Boss Kannada Finale) ನಡೆಯಿತು. ಈ ವೇದಿಕೆಯಲ್ಲಿ ಸುದೀಪ್​ ಅವರು ಕಣ್ಣೀರು ಹಾಕಿದರು. ಅವರು ಭಾವುಕರಾಗಿದ್ದು ನೋಡಿ ಎಲ್ಲರಿಗೂ ಅಚ್ಚರಿ ಆಯಿತು.

ಬಿಗ್​ ಬಾಸ್​ ಕಾರ್ಯಕ್ರಮದಲ್ಲಿ ಪ್ರತಿಯೊಬ್ಬ ಸ್ಪರ್ಧಿ ಎಲಿಮಿನೇಟ್​ ಆದಾಗ ಅವರ ಜರ್ನಿಯನ್ನು ಮೆಲುಕು ಹಾಕುವಂತಹ ವಿಡಿಯೋ ಬಿತ್ತರ ಮಾಡಲಾಗುತ್ತಿದೆ. ಅದೇ ರೀತಿ, ಕೊನೇ ಸಂಚಿಕೆ ಆದ್ದರಿಂದ ಸುದೀಪ್​ ಅವರ ಬೆಸ್ಟ್​ ಕ್ಷಣಗಳನ್ನು ನೆನಪಿಸುವಂತಹ ವಿಡಿಯೋವನ್ನು ಶನಿವಾರ (ಡಿ.31) ಪ್ರಸಾರ ಮಾಡಲಾಯಿತು. ಅವರ ಬದ್ಧತೆ, ನಾಯಕತ್ವ, ನಿರೂಪಣೆಯ ಶೈಲಿ ಹಾಗೂ ಒಟ್ಟಾರೆ ವ್ಯಕ್ತಿತ್ವವನ್ನು ಅದರಲ್ಲಿ ಕಟ್ಟಿಕೊಡುವ ಪ್ರಯತ್ನ ಮಾಡಲಾಯಿತು. ಆ ವಿಡಿಯೋ ನೋಡಿ ಸುದೀ​ಪ್​ ಎಮೋಷನಲ್​ ಆದರು.

ಇದನ್ನೂ ಓದಿ
Image
Rakesh Adiga: ‘ಬಿಗ್​ ಬಾಸ್​’ ವಿನ್​ ಆಗದಿದ್ರೂ 12 ಲಕ್ಷ ರೂಪಾಯಿಗೂ ಅಧಿಕ ನಗದು ಬಹುಮಾನ ಪಡೆದ ರಾಕೇಶ್​ ಅಡಿಗ
Image
Deepika Das: ದೀಪಿಕಾ ದಾಸ್​ ಬಿಗ್​ ಬಾಸ್​ ಫಿನಾಲೆಗೆ ಬಂದರೂ ಸಿಗಲಿಲ್ಲ ಟ್ರೋಫಿ; ಎಡವಿದ್ದು ಎಲ್ಲಿ?
Image
Bigg Boss Winner Roopesh Shetty: ‘ನಾನು ಗೆದ್ದಿಲ್ಲ, ನೀವು ಗೆಲ್ಲಿಸಿದ್ದೀರಿ’: ಬಿಗ್​ ಬಾಸ್​ ವಿನ್ನರ್​ ರೂಪೇಶ್​ ಶೆಟ್ಟಿ ಮೊದಲ ರಿಯಾಕ್ಷನ್​
Image
Rakesh Adiga: ‘ಬಿಗ್​ ಬಾಸ್​’ ರನ್ನರ್​ ಅಪ್​ ಆದ ರಾಕೇಶ್​ ಅಡಿಗ; ವಿನ್ನರ್​ ಪಟ್ಟ ಜಸ್ಟ್​ ಮಿಸ್​

ಇದನ್ನೂ ಓದಿ: Rakesh Adiga: ‘ಬಿಗ್​ ಬಾಸ್​’ ವಿನ್​ ಆಗದಿದ್ರೂ 12 ಲಕ್ಷ ರೂಪಾಯಿಗೂ ಅಧಿಕ ನಗದು ಬಹುಮಾನ ಪಡೆದ ರಾಕೇಶ್​ ಅಡಿಗ

ಫಿನಾಲೆ ಮಧ್ಯೆ ಈ ರೀತಿ ವಿಡಿಯೋ ಪ್ರದರ್ಶನ ಆಗಿದ್ದು ನೋಡಿ ಸುದೀಪ್​ ಅವರು ಭಾವುಕರಾಗಿ ಕಣ್ಣೀರು ಸುರಿಸಿದರು. ಈ ಅಪರೂಪದ ಕ್ಷಣಕ್ಕೆ ಎಲ್ಲರೂ ಸಾಕ್ಷಿಯಾದರು. ಒಂದೆರಡು ನಿಮಿಷ ಸುಧಾರಿಸಿಕೊಂಡ ಬಳಿಕ ಸುದೀಪ್​ ಮಾತನಾಡಿದರು. ‘ನನಗೆ ಈ ಸ್ಥಾನ ಕೊಟ್ಟಿದ್ದಕ್ಕೆ ಧನ್ಯವಾದಗಳು. ಈ ವಿಡಿಯೋದಲ್ಲಿ ನನಗೆ ನಾನು ಕಾಣಿಸಲಿಲ್ಲ. ನಿಮ್ಮೆಲ್ಲರ ಪ್ರೀತಿ ಕಾಣಿಸಿತು’ ಎಂದು ಅವರು​ ಹೇಳಿದರು.

ಇದನ್ನೂ ಓದಿ: BBK 9 Finale: ಬಿಗ್​ ಬಾಸ್​ ಫಿನಾಲೆ ನಡೆಸಿಕೊಡಲು ಝಗಮಗಿಸುವ ಡ್ರೆಸ್​ ಧರಿಸಿ ವೇದಿಕೆಗೆ ಬಂದ ಕಿಚ್ಚ ಸುದೀಪ್​

‘ಈ ವಿಡಿಯೋದಲ್ಲಿ ಇದ್ದಷ್ಟು ಪರ್ಫೆಕ್ಟ್​ ನಾನಲ್ಲ. ಈ ಸ್ಥಾನಕ್ಕೆ ಬಂದಾಗ ತುಂಬ ಪರ್ಫೆಕ್ಟ್​ ಆಗಿರಬೇಕು, ಎಲ್ಲರೂ ಸರಿಯಾಗಿ ಇರಬೇಕು ಎಂಬ ಒತ್ತಡ ಸೃಷ್ಟಿ ಆಗುತ್ತದೆ. ಆಗ ನಾನು ಕೂಡ ನಿಮ್ಮೆಲ್ಲರ ರೀತಿ ಸಿಂಪಲ್​ ಮ್ಯಾನ್​ ಆಗಿ ಬೆಳಗ್ಗೆ ಎದ್ದೇಳಬೇಕು ಅಂತ ಆಸೆ ಆಗುತ್ತದೆ’ ಎಂದಿದ್ದಾರೆ ಸುದೀಪ್​.

‘ಪಾತ್ರ ಅಲ್ಲದೇ ನಾನು ಸುದೀಪ್​ ಆಗಿ ಇಲ್ಲಿ ಇರುವುದಕ್ಕೆ, ಪ್ರೀತಿಯಿಂದ ನನ್ನನ್ನು ನೀವು ಸ್ವಾಗತಿಸಿದ್ದಕ್ಕೆ, ಗೌರವ ನೀಡಿದ್ದಕ್ಕೆ, ಹೊರಗಡೆ ಜನ ನೀಡಿದ ಪ್ರೀತಿಗೆ ಪ್ರತಿಯಾಗಿ ವಾಪಸ್​ ನೀಡಲು ನನ್ನ ಬಳಿ ಏನೂ ಇಲ್ಲ. ನನ್ನ ಕೈ ಖಾಲಿ ಇದೆ. ಪ್ರತಿ ಸಂಚಿಕೆಯಲ್ಲೂ ನಿಮ್ಮಿಂದ ನಾನು ಕಲಿತಿದ್ದೇನೆ. ಇಡೀ ತಾಂತ್ರಿಕ ವರ್ಗವನ್ನು ನಾನು ಪ್ರೀತಿಸುತ್ತೇನೆ’ ಎಂದು ಸುದೀಪ್​ ಹೇಳಿದಾಗ ಇಡೀ ವಾತಾವರಣ ಭಾವುಕವಾಗಿತ್ತು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಸಚಿವರಿಂದ ಗಣರಾಜ್ಯೋತ್ಸವದ ಧ್ವಜಾರೋಹಣದ ವೇಳೆ ಬಿದ್ದ ಧ್ವಜಸ್ತಂಭ!
ಸಚಿವರಿಂದ ಗಣರಾಜ್ಯೋತ್ಸವದ ಧ್ವಜಾರೋಹಣದ ವೇಳೆ ಬಿದ್ದ ಧ್ವಜಸ್ತಂಭ!
ಆಟೋದಿಂದ ಹಾರಿದ 4 ಗೆಳತಿಯರು; ಒಬ್ಬಳ ದುರಂತ ಸಾವಿಗೆ ಕಾರಣ ಯಾರು?
ಆಟೋದಿಂದ ಹಾರಿದ 4 ಗೆಳತಿಯರು; ಒಬ್ಬಳ ದುರಂತ ಸಾವಿಗೆ ಕಾರಣ ಯಾರು?
ಆರ್​ಸಿಬಿ ವಿರುದ್ಧ ಐತಿಹಾಸಿಕ ಶತಕ ಬಾರಿಸಿದ ನ್ಯಾಟ್ ಸಿವರ್-ಬ್ರಂಟ್
ಆರ್​ಸಿಬಿ ವಿರುದ್ಧ ಐತಿಹಾಸಿಕ ಶತಕ ಬಾರಿಸಿದ ನ್ಯಾಟ್ ಸಿವರ್-ಬ್ರಂಟ್
ಗಣರಾಜ್ಯೋತ್ಸವ ಪರೇಡ್​​ನಲ್ಲಿ ಗಮನ ಸೆಳೆದ ಆಪರೇಷನ್ ಸಿಂಧೂರ್‌ ವಿಜಯೋತ್ಸವ
ಗಣರಾಜ್ಯೋತ್ಸವ ಪರೇಡ್​​ನಲ್ಲಿ ಗಮನ ಸೆಳೆದ ಆಪರೇಷನ್ ಸಿಂಧೂರ್‌ ವಿಜಯೋತ್ಸವ
ವೋಟ್ ಹಾಕಿದ ಪೊಲೀಸರಿಗೂ ಧನ್ಯವಾದ ಹೇಳಿದೆ ಬಿಗ್ ಬಾಸ್ ವಿನ್ನರ್ ಗಿಲ್ಲಿ ನಟ
ವೋಟ್ ಹಾಕಿದ ಪೊಲೀಸರಿಗೂ ಧನ್ಯವಾದ ಹೇಳಿದೆ ಬಿಗ್ ಬಾಸ್ ವಿನ್ನರ್ ಗಿಲ್ಲಿ ನಟ
ಅಟ್ಟಾರಿ-ವಾಘಾ ಗಡಿಯಲ್ಲಿ 'ಬೀಟಿಂಗ್ ರಿಟ್ರೀಟ್'
ಅಟ್ಟಾರಿ-ವಾಘಾ ಗಡಿಯಲ್ಲಿ 'ಬೀಟಿಂಗ್ ರಿಟ್ರೀಟ್'
ಟ್ರಾಫಿಕ್ ಜಾಮ್, ಹಿಮಪಾತದಿಂದ 24 ಗಂಟೆ ಕಾರಲ್ಲೇ ಕುಳಿತ ಮನಾಲಿ ಪ್ರವಾಸಿಗರು!
ಟ್ರಾಫಿಕ್ ಜಾಮ್, ಹಿಮಪಾತದಿಂದ 24 ಗಂಟೆ ಕಾರಲ್ಲೇ ಕುಳಿತ ಮನಾಲಿ ಪ್ರವಾಸಿಗರು!
ಗಿಲ್ಲಿ ಮೇಲಿನ ಅಭಿಮಾನದಿಂದ ವೇದಿಕೆಗೆ ನುಗ್ಗಿದ ಫ್ಯಾನ್ಸ್; ವಿಡಿಯೋ ನೋಡಿ
ಗಿಲ್ಲಿ ಮೇಲಿನ ಅಭಿಮಾನದಿಂದ ವೇದಿಕೆಗೆ ನುಗ್ಗಿದ ಫ್ಯಾನ್ಸ್; ವಿಡಿಯೋ ನೋಡಿ
ಪತಿಯ ಹಣದಾಹಕ್ಕೆ ಪತ್ನಿ ಕಳೆದುಕೊಂಡಳಾ ಜೀವ?: ಯುವತಿ ಕುಟುಂಬಸ್ಥರಿಂದ ಆರೋಪ
ಪತಿಯ ಹಣದಾಹಕ್ಕೆ ಪತ್ನಿ ಕಳೆದುಕೊಂಡಳಾ ಜೀವ?: ಯುವತಿ ಕುಟುಂಬಸ್ಥರಿಂದ ಆರೋಪ
ಮನೆ ಮುಂದೇ ಓಡಾಡ್ತಿತ್ತು ಚಿರತೆ! ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಮನೆ ಮುಂದೇ ಓಡಾಡ್ತಿತ್ತು ಚಿರತೆ! ಸಿಸಿಟಿವಿಯಲ್ಲಿ ದೃಶ್ಯ ಸೆರೆ