AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kichcha Sudeep: ಬಿಗ್ ಬಾಸ್ ಸ್ಪರ್ಧಿಗಳಿಗೆ ಕಿಚ್ಚ ಸುದೀಪ್ ಕಡೆಯಿಂದ ಹೊಸವರ್ಷದ​ ಗಿಫ್ಟ್​​; ಯಾರಿಗೆಲ್ಲ ಸಿಕ್ತು?

ಈ 100 ದಿನಗಳ ಜರ್ನಿಯಲ್ಲಿ ಎಲಿಮಿನೇಟ್ ಆದ 13 ಸ್ಪರ್ಧಿಗಳು ಬಿಗ್ ಬಾಸ್ ಫಿನಾಲೆ ನೋಡಲು ಬಂದಿದ್ದರು. ಅವರಿಗೆ ಮೊದಲು ಸುದೀಪ್ ಗಿಫ್ಟ್ ನೀಡಿದರು.

Kichcha Sudeep: ಬಿಗ್ ಬಾಸ್ ಸ್ಪರ್ಧಿಗಳಿಗೆ ಕಿಚ್ಚ ಸುದೀಪ್ ಕಡೆಯಿಂದ ಹೊಸವರ್ಷದ​ ಗಿಫ್ಟ್​​; ಯಾರಿಗೆಲ್ಲ ಸಿಕ್ತು?
ಸುದೀಪ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Dec 30, 2022 | 10:38 PM

‘ಬಿಗ್ ಬಾಸ್​ ಕನ್ನಡ ಸೀಸನ್​ 9’ರ (BBK 9)  ಫಿನಾಲೆ ನಡೆಯುತ್ತಿದೆ. ಅದ್ದೂರಿಯಾಗಿ ಸೀಸನ್​​ 9ಕ್ಕೆ ತೆರೆಎಳೆಯಲಾಗುತ್ತಿದೆ. ಶನಿವಾರ (ಡಿಸೆಂಬರ್ 31) ಕಪ್ ಗೆಲ್ಲೋದು ಯಾರು ಎಂಬ ಪ್ರಶ್ನೆಗೆ ಉತ್ತರ ಸಿಗಲಿದೆ. ಈಗ ಕಿಚ್ಚ ಸುದೀಪ್  (Kichcha Sudeep) ಅವರು ಬಿಗ್ ಬಾಸ್ ಸ್ಪರ್ಧಿಗೆ ಗಿಫ್ಟ್​ ನೀಡಿದ್ದಾರೆ. ಇದನ್ನು ನೋಡಿ ಮನೆಮಂದಿ ಸಖತ್ ಖುಷಿಪಟ್ಟಿದ್ದಾರೆ. ಫಿನಾಲೆಗೆ ಬಂದ ಸ್ಪರ್ಧಿಗಳಿಗೆ ಸರ್​ಪ್ರೈಸ್ ಸಿಕ್ಕಿದೆ.

‘ಬಿಗ್ ಬಾಸ್ ಕನ್ನಡ ಸೀಸನ್ 9’ಕ್ಕೆ 18 ಸ್ಪರ್ಧಿಗಳು ಬಂದಿದ್ದರು. ಆ ಪೈಕಿ ಫಿನಾಲೆಗೆ ಉಳಿದುಕೊಂಡಿದ್ದು 5 ಸ್ಪರ್ಧಿಗಳು ಮಾತ್ರ. ಈ 100 ದಿನಗಳ ಜರ್ನಿಯಲ್ಲಿ ಎಲಿಮಿನೇಟ್ ಆದ 13 ಸ್ಪರ್ಧಿಗಳು ಬಿಗ್ ಬಾಸ್ ಫಿನಾಲೆ ನೋಡಲು ಬಂದಿದ್ದರು. ಅವರಿಗೆ ಮೊದಲು ಸುದೀಪ್ ಗಿಫ್ಟ್ ನೀಡಿದರು. ನಂತರ ಮನೆ ಒಳಗೆ ಇದ್ದ ಸ್ಪರ್ಧಿಗಳಿಗೂ ಈ ಗಿಫ್ಟ್ ಸಿಕ್ಕಿತು. ಇದನ್ನು ನೋಡಿ ಮನೆ ಮಂದಿ ಖುಷಿಪಟ್ಟರು.

‘ಗಿಫ್ಟ್ ಕೊಟ್ಟಿದ್ದಕ್ಕೆ ಥ್ಯಾಂಕ್ಸ್​’ ಎಂದರು ರೂಪೇಶ್ ಶೆಟ್ಟಿ. ‘ಹೊಸವರ್ಷಕ್ಕೆ ವಿಶ್ ಮಾಡಿದ ಮೊದಲ ವ್ಯಕ್ತಿ ನೀವು’ ಎಂದರು ರೂಪೇಶ್ ರಾಜಣ್ಣ. ಎಲ್ಲಾ ಸ್ಪರ್ಧಿಗಳಿಗೂ ಈ ಗಿಫ್ಟ್ ಸಿಕ್ಕಿದೆ ಅನ್ನೋದು ವಿಶೇಷ. ಉಡುಗೊರೆ ಸ್ವೀಕರಿಸಿದ ಮನೆಮಂದಿ ಸಂತಸ ಹೊರಹಾಕಿದರು.

ಕಿಚ್ಚ ಸುದೀಪ್ ಅವರಿಗೆ ಬಿಗ್ ಬಾಸ್ ಬಗ್ಗೆ ಹಾಗೂ ಬಿಗ್ ಬಾಸ್​ ಸ್ಪರ್ಧಿಗಳ ಕುರಿತು ವಿಶೇಷ ಪ್ರೀತಿ ಇದೆ. ಇದನ್ನು ಅವರು ಆಗಾಗ ವ್ಯಕ್ತಪಡಿಸುತ್ತಲೇ ಇರುತ್ತಾರೆ. ಕಷ್ಟದಲ್ಲಿದ್ದ ಬಿಗ್​ ಬಾಸ್ ಮಾಜಿ ಸ್ಪರ್ಧಿಗಳಿಗೆ ಅವರು ಸಹಾಯ ಮಾಡಿದ್ದು ಇದೆ. ಬಿಗ್ ಬಾಸ್ ಸ್ಪರ್ಧಿಗಳನ್ನು ಮನೆ ಮಂದಿ ರೀತಿ ಟ್ರೀಟ್ ಮಾಡುತ್ತಾರೆ.

ಇದನ್ನೂ ಓದಿ: BBK 9 Finale: ಬಿಗ್​ ಬಾಸ್​ ಫಿನಾಲೆ ನಡೆಸಿಕೊಡಲು ಝಗಮಗಿಸುವ ಡ್ರೆಸ್​ ಧರಿಸಿ ವೇದಿಕೆಗೆ ಬಂದ ಕಿಚ್ಚ ಸುದೀಪ್​

ಪ್ರತಿ ಬಾರಿ ಬಿಗ್ ಬಾಸ್​ನಲ್ಲಿ ಸುದೀಪ್ ಅವರು ಸ್ಪರ್ಧಿಗಳಿಗೆ ವಿಶೇಷ ಅಡುಗೆ ಮಾಡಿ ಕಳುಹಿಸುತ್ತಾರೆ. ಈ ಬಾರಿಯೂ ಸುದೀಪ್ ವಿಶೇಷ ಅಡುಗೆ ತಯಾರಿಸಿ ಮನೆ ಮಂದಿಗೆ ಕಳುಹಿಸಿದ್ದರು. ಈ ಊಟ ಸವಿದು ಮನೆ ಮಂದಿ ಖುಷಿಪಟ್ಟಿದ್ದರು. ಈಗ ಮನೆ ಮಂದಿ ಸುದೀಪ್ ಅವರಿಂದ ಗಿಫ್ಟ್ ತೆಗೆದುಕೊಂಡು ಖುಷಿ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಹರಿಪ್ರಸಾದ್ ಮನೆಯಿಂದಲೇ ಶಾಹುಲ್​ಗೆ ಜಮೀರ್ ಮತ್ತು ನಜೀರ್​ರಿಂದ ಫೋನ್
ಹರಿಪ್ರಸಾದ್ ಮನೆಯಿಂದಲೇ ಶಾಹುಲ್​ಗೆ ಜಮೀರ್ ಮತ್ತು ನಜೀರ್​ರಿಂದ ಫೋನ್
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ಬಂಟ್ವಾಳ್ ರಹಿಮಾನ್ ಹತ್ಯೆ: ರಣಾಂಗಣವಾದ ಮುಸ್ಲಿಂ ಮುಖಂಡರ ಸಭೆ
ಬಂಟ್ವಾಳ್ ರಹಿಮಾನ್ ಹತ್ಯೆ: ರಣಾಂಗಣವಾದ ಮುಸ್ಲಿಂ ಮುಖಂಡರ ಸಭೆ
ದಲಿತರ ಮಾರಣವಾಗುತ್ತಿದ್ದರೂ ದಲಿತ ನಾಯಕರು ಸುಮ್ಮನಿದ್ದಾರೆ: ಚಲವಾದಿ
ದಲಿತರ ಮಾರಣವಾಗುತ್ತಿದ್ದರೂ ದಲಿತ ನಾಯಕರು ಸುಮ್ಮನಿದ್ದಾರೆ: ಚಲವಾದಿ
ತಳಿರು ತೋರಣ ಮತ್ತು ರಂಗೋಲಿಯಿಂದ ಅಲಂಕೃತಗೊಂಡ ಶಾಲೆ ನೋಡಿ ಮಕ್ಕಳು ಖುಷ್
ತಳಿರು ತೋರಣ ಮತ್ತು ರಂಗೋಲಿಯಿಂದ ಅಲಂಕೃತಗೊಂಡ ಶಾಲೆ ನೋಡಿ ಮಕ್ಕಳು ಖುಷ್
ಪಾಕಿಸ್ತಾನಕ್ಕೆ ಇನ್ನೂ ಹೆಚ್ಚಿನದನ್ನೇ ಮಾಡುವ ತಾಕತ್ತು ನಮಗಿತ್ತು
ಪಾಕಿಸ್ತಾನಕ್ಕೆ ಇನ್ನೂ ಹೆಚ್ಚಿನದನ್ನೇ ಮಾಡುವ ತಾಕತ್ತು ನಮಗಿತ್ತು
ಹೆಸರು ಬದಲಾವಣೆಯಿಂದ ಜನಕ್ಕೆ ಅನುಕೂಲವಾಗೋದಾದರೆ ಸಂತೋಷ: ಯೋಗೇಶ್ವರ್
ಹೆಸರು ಬದಲಾವಣೆಯಿಂದ ಜನಕ್ಕೆ ಅನುಕೂಲವಾಗೋದಾದರೆ ಸಂತೋಷ: ಯೋಗೇಶ್ವರ್