AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಕ್ಷಕ್​ ಅವರನ್ನು ದೇವರು ಚೆನ್ನಾಗಿ ಇಟ್ಟಿರಲಿ’: ಸುದೀಪ್​ ಖಡಕ್​ ತಿರುಗೇಟು

ಬಿಗ್​ ಬಾಸ್​ ಮನೆಯೊಳಗೆ ಮತ್ತು ಹೊರಗೆ ರಕ್ಷಕ್​ ಅವರು ಇಲ್ಲಸಲ್ಲದ ಹೇಳಿಕೆಗಳನ್ನು ನೀಡಿರುವುದು ಸುದೀಪ್​ ಅವರ ಅಭಿಮಾನಿಗಳ ಕೋಪಕ್ಕೆ ಕಾರಣ ಆಗಿತ್ತು. ಬಿಗ್​ ಬಾಸ್ ಕಾರ್ಯಕ್ರಮದ ಕೊನೇ ವಾರದ ಪಂಚಾಯ್ತಿಯಲ್ಲಿ ಕಿಚ್ಚ ಸುದೀಪ್​ ಅವರು ರಕ್ಷಕ್​ಗೆ ಖಡಕ್​ ತಿರುಗೇಟು ನೀಡಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ ನೋಡಿ..

‘ರಕ್ಷಕ್​ ಅವರನ್ನು ದೇವರು ಚೆನ್ನಾಗಿ ಇಟ್ಟಿರಲಿ’: ಸುದೀಪ್​ ಖಡಕ್​ ತಿರುಗೇಟು
ರಕ್ಷಕ್​, ಕಿಚ್ಚ ಸುದೀಪ್​
ಮದನ್​ ಕುಮಾರ್​
|

Updated on: Jan 20, 2024 | 5:44 PM

Share

ಬುಲೆಟ್​ ಪ್ರಕಾಶ್​ ಅವರ ಪುತ್ರ ರಕ್ಷಕ್​ ‘ಬಿಗ್​ ಬಾಸ್​ ಕನ್ನಡ ಸೀಸನ್​ 10’ (Bigg Boss Kannada) ರಿಯಾಲಿಟಿ ಶೋನಲ್ಲಿ ಭಾಗವಹಿಸಿ ಖ್ಯಾತಿ ಗಳಿಸಿದ್ದಾರೆ. ಆದರೆ ಬಿಗ್​ ಬಾಸ್​ನಿಂದ ಎಲಿಮಿನೇಟ್​ ಆಗಿ ಬಂದ ಬಳಿಕ ಅವರು ಕೆಲವು ಕಡೆಗಳಲ್ಲಿ ನೀಡಿದ ಸಂದರ್ಶನದಲ್ಲಿ ಆಡಿದ ಮಾತುಗಳು ಟೀಕೆಗೆ ಒಳಗಾಗಿವೆ. ಅದರಲ್ಲೂ ಕಿಚ್ಚ ಸುದೀಪ್​ ಬಗ್ಗೆ ರಕ್ಷಕ್​ (Rakshak Bullet) ನೀಡಿದ ಹೇಳಿಕೆಗಳಿಗೆ ಅಭಿಮಾನಿಗಳಿಂದ ಆಕ್ಷೇಪ ವ್ಯಕ್ತವಾಗಿತ್ತು. ಅದಕ್ಕೆ ಸೋಶಿಯಲ್​ ಮೀಡಿಯಾ ಮೂಲಕ ರಕ್ಷಕ್​ ಕ್ಷಮೆ ಕೂಡ ಕೇಳಿದ್ದರು. ಹಾಗಂತ ಈ ಕಿರಿಕ್​ ಇಷ್ಟಕ್ಕೇ ನಿಂತಿಲ್ಲ. ಬಿಗ್​ ಬಾಸ್ ಕಾರ್ಯಕ್ರಮದ ಕೊನೇ ವಾರದ ಪಂಚಾಯ್ತಿಯಲ್ಲಿ ಕಿಚ್ಚ ಸುದೀಪ್​ (Kichcha Sudeep) ಅವರು ಖಡಕ್​ ತಿರುಗೇಟು ನೀಡಿದ್ದಾರೆ.

ಸೀಸನ್​ 10ರಲ್ಲಿ ಈಗಾಗಲೇ ಎಲಿಮಿನೇಟ್​ ಆದ ಸ್ಪರ್ಧಿಗಳಿಗೆ ಮತ್ತೊಮ್ಮೆ ಅತಿಥಿಗಳಾಗಿ ಬಿಗ್​ ಬಾಸ್​ ಮನೆಗೆ ಕಾಲಿಡಲು ಅವಕಾಶ ನೀಡಲಾಗಿತ್ತು. ರಕ್ಷಕ್​​, ಈಶಾನಿ, ಸಿರಿ, ಮೈಕಲ್​ ಅಜಯ್​, ಸ್ನೇಹಿತ್ ಮುಂತಾದವರು ಈ ವಾರ ದೊಡ್ಮನೆಗೆ ಬಂದು ಹೋಗಿದ್ದಾರೆ. ಆದರೆ ತಮಗೆ ಸಿಕ್ಕ ಈ ಒಂದು ಅವಕಾಶವನ್ನು ರಕ್ಷಕ್​ ಮತ್ತು ಈಶಾನಿ ಸರಿಯಾಗಿ ಬಳಕೆ ಮಾಡಿಕೊಂಡಿಲ್ಲ. ಬಿಗ್​ ಬಾಸ್​ ಮನೆಯೊಳಗೆ ಬಂದ ಅವರು ಇಲ್ಲಸಲ್ಲದ ಹೇಳಿಕೆಗಳನ್ನು ನೀಡಿರುವುದು ಸುದೀಪ್​ ಅವರ ಕೋಪಕ್ಕೆ ಕಾರಣ ಆಗಿದೆ.

ಇದನ್ನೂ ಓದಿ: ಪ್ರತಾಪ್​ಗೆ ಕಾಗೆ ಅಂದಿದ್ದ ಈಶಾನಿಗೆ ಕಿಚ್ಚನ ಕ್ಲಾಸ್​; ಎಲಿಮಿನೇಟ್​ ಬಳಿಕವೂ ಕಿರಿಕ್​

‘ಎಲಿಮಿನೇಟ್​ ಆದವರ ಬೆಡ್​ಶೀಟ್​ಗಳು ವಿನಯ್​ ಅವರ ಬೆಡ್​ ಸೇರುತ್ತಿವೆ’ ಎಂದು ಡ್ರೋನ್​ ಪ್ರತಾಪ್​ ಈ ಮೊದಲು ನೀಡಿದ್ದ ಹೇಳಿಕೆಯನ್ನು ಇಟ್ಟುಕೊಂಡು ರಕ್ಷಕ್​ ಅವರು ಮಾತಿನ ದಾಳಿಗೆ ಮುಂದಾಗಿದ್ದರು. ಅದರಿಂದ ಡ್ರೋನ್​ ಪ್ರತಾಪ್​ ಅವರಿಗೆ ಕಿರಿಕಿರಿ ಆಗಿತ್ತು. ಅಲ್ಲದೇ, ಈಶಾನಿ ಅವರು ಡ್ರೋನ್​ ಪ್ರತಾಪ್​ ಅವರನ್ನು ಕಾಗೆ ಎಂದು ಕರೆದಿದ್ದರು. ಈಗ ಇವರಿಬ್ಬರಿಗೂ ಕಿಚ್ಚ ಸುದೀಪ್​ ಕ್ಲಾಸ್​ ತೆಗೆದುಕೊಂಡಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ.

‘ಆ ಸ್ಪರ್ಧಿ ಹೆಸರು ರಕ್ಷಕ್​ ಅಲ್ವಾ? ರಕ್ಷಕ್​ ಅವರಿಂದ ಇನ್ನೊಂದು ಬ್ಲಾಂಕೆಟ್​ ಬರತ್ತೆ. ರಕ್ಷಕ್​ ಅವರೇ.. ದೇವರು ನಿಮ್ಮನ್ನು ಚೆನ್ನಾಗಿ ಇಟ್ಟಿರಲಿ’ ಎಂದು ಸುದೀಪ್​ ಗರಂ ಆಗಿದ್ದಾರೆ. ಈಶಾನಿಯ ಮಾತುಗಳನ್ನು ಕೂಡ ಸುದೀಪ್​ ಖಂಡಿಸಿದ್ದಾರೆ. ‘ಯಾವ ಆ್ಯಂಗಲ್​ನಲ್ಲಿ ನೀವು ಸೋತು ಹೊರಗಡೆ ಹೋಗಿ, ಕಲಿತು ಒಳಗೆ ಬಂದ್ರಿ ಅಂತ ನಿಮಗೆ ಅನಿಸುತ್ತೆ ಹೇಳಿ..’ ಎಂದು ಸುದೀಪ್​ ಚಾಟಿ ಬೀಸಿದ್ದಾರೆ. ಅದೇ ರೀತಿ, ನಮ್ರತಾ ಕುರಿತು ಸ್ನೇಹಿತ್​ ಆಡಿದ ಮಾತುಗಳ ಬಗ್ಗೆಯೂ ಕಿಚ್ಚ ಸುದೀಪ್​ ತಕರಾರು ತೆಗೆದಿದ್ದಾರೆ. ಈ ಸಂಚಿಕೆ ಜನವರಿ 20ರಂದು ರಾತ್ರಿ 9 ಗಂಟೆಗೆ ‘ಕಲರ್ಸ್​ ಕನ್ನಡ’ ಹಾಗೂ ‘ಜಿಯೋ ಸಿನಿಮಾ’ದಲ್ಲಿ ಪ್ರಸಾರ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು