AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್​ಗೆ ಸುದೀಪ್ ಬರ್ತಾರೆ ಎಂದು ಕಾದು ಕೂತವರಿಗೆ ಶಾಕ್ ಕೊಟ್ಟ ಕಲರ್ಸ್​ ಕನ್ನಡ

‘ಬಿಗ್ ಬಾಸ್ ಕನ್ನಡ ಸೀಸನ್ 10’ ಯಶಸ್ಸು ಕಂಡಿತ್ತು. ನಿರೂಪಕ ಸುದೀಪ್ ಅವರ ಸಿನಿಮಾ ಕೆಲಸಗಳಿಗೆ ಈ ಶೋ ಅಡಚಣೆ ಉಂಟುಮಾಡಿತ್ತು. ಅವರು ಈ ಬಾರಿ ಬಿಗ್ ಬಾಸ್​ನಿಂದ ಹೊರ ಹೋಗುತ್ತಾರೆ ಎಂದು ಹೇಳಲಾಗಿತ್ತು. ಈ ಬೆನ್ನಲ್ಲೇ ಪ್ರೋಮೋದಲ್ಲಿ ಬದಲಾವಣೆ ಮಾಡಲಾಗಿದೆ.

ಬಿಗ್ ಬಾಸ್​ಗೆ ಸುದೀಪ್ ಬರ್ತಾರೆ ಎಂದು ಕಾದು ಕೂತವರಿಗೆ ಶಾಕ್ ಕೊಟ್ಟ ಕಲರ್ಸ್​ ಕನ್ನಡ
ಸುದೀಪ್
ರಾಜೇಶ್ ದುಗ್ಗುಮನೆ
|

Updated on: Sep 10, 2024 | 6:50 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 11’ ನೋಡಲು ವೀಕ್ಷಕರು ಕಾದು ಕೂತಿದ್ದಾರೆ. ಈ ಬಾರಿ ಯಾರು ಬಿಗ್ ಬಾಸ್ ನಡೆಸಿಕೊಡುತ್ತಾರೆ ಎನ್ನುವ ಕುತೂಹಲ ಅಭಿಮಾನಿಗಳನ್ನು ಬಲವಾಗಿ ಕಾಡುತ್ತಿದೆ. ಕಿಚ್ಚ ಸುದೀಪ್ ಅವರು ಅಡ್ಡಗೋಡೆಯ ಮೇಲೆ ದೀಪ ಇಟ್ಟಂತೆ ಮಾತನಾಡಿದ್ದರು. ಇನ್ನೂ ಮಾತುಕತೆ ನಡೆಯುತ್ತಿದೆ ಎಂದಿದ್ದರು. ಸುದೀಪ್ ಬರುತ್ತಾರೆ ಎಂದು ಕಾದು ಕೂತವರಿಗೆ ಕಲರ್ಸ್ ಕನ್ನಡ ಶಾಕ್ ಕೊಟ್ಟಿದೆ. ಸುದೀಪ್ ಬರೋದು ಅನುಮಾನವಾ ಎನ್ನುವ ಪ್ರಶ್ನೆಯನ್ನು ಹುಟ್ಟುಹಾಕಿದೆ.

ವಾರದ ಹಿಂದೆ ‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಪ್ರೋಮೋ ರಿಲೀಸ್ ಆಗಿತ್ತು. ಈ ಪ್ರೋಮೋದಲ್ಲಿ ಕೇವಲ ಲೋಗೋ ಇತ್ತು. ಅಲ್ಲದೆ, ಹೊಸ ಸೀಸನ್ ಶೀಘ್ರವೇ ಆರಂಭ ಆಗಲಿದೆ ಎಂದು ಬರೆಯಲಾಗಿತ್ತು. #KichchaSudeep ಎಂದು ಬರೆಯುವ ಮೂಲಕ ಎಲ್ಲರಿಗೂ ಸರ್​ಪ್ರೈಸ್ ನೀಡಲಾಗಿತ್ತು. ಸುದೀಪ್ ಈ ಸೀಸನ್​ನಲ್ಲಿ ಇರುತ್ತಾರೆ ಅನ್ನೋದು ಬಹುತೇಕ ಖಚಿತವಾಯಿತು. ಆದರೆ, ಈಗ ಈ ಹ್ಯಾಶ್​ಟ್ಯಾಗ್ ತೆಗೆಯಲಾಗಿದೆ.

ಬಿಗ್ ಬಾಸ್ ಪ್ರೋಮೋನ ಕಲರ್ಸ್​ ಕನ್ನಡ ವಾಹಿನಿ ಇನ್​ಸ್ಟ್ರಾಗ್ರಾಮ್​ನಲ್ಲಿ ಪಿನ್ ಮಾಡಿ ಇಟ್ಟಿದೆ. ಈ ವಿಡಿಯೋಗೆ ಬರೋಬ್ಬರಿ 2 ಲಕ್ಷಕ್ಕೂ ಅಧಿಕ ಲೈಕ್ಸ್ ಸಿಕ್ಕಿದೆ. ಈಗ ಒಂದು ದಿನದ ಹಿಂದೆ ಈ ಪ್ರೋಮೋದ ಕ್ಯಾಪ್ಶನ್ ಎಡಿಟ್ ಮಾಡಲಾಗಿದ್ದು, ಸುದೀಪ್ ಹ್ಯಾಶ್​ಟ್ಯಾಗ್ ಕಾಣೆಯಾಗಿದೆ.

ಇದನ್ನೂ ಓದಿ: ‘ನನ್ನ ಹೆಸರಿಗೆ ಫ್ಯಾನ್ಸ್ ಕಳಂಕ ತಂದಿಲ್ಲ’; ಬರ್ತ್​ಡೇ ದಿನ ಸುದೀಪ್ ನೇರಮಾತು

ಸುದೀಪ್ ಅವರು ಬೇರೆ ಬೇರೆ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಒಟ್ಟಿಗೆ ಅವರು ಮೂರ್ನಾಲ್ಕು ಸಿನಿಮಾ ಮಾಡುವ ಭರವಸೆ ನೀಡಿದ್ದಾರೆ. ಇಷ್ಟೊಂದು ಸಿನಿಮಾ ಕೆಲಸಗಳು ಇರುವಾಗ ಅವರಿಗೆ ಬಿಗ್ ಬಾಸ್ ನಿರೂಪಣೆ ಮಾಡಲು ಸಾಧ್ಯವಿಲ್ಲ ಎಂದೆನಿಸಿತೋ ಎನ್ನುವ ಪ್ರಶ್ನೆ ಮೂಡಿದೆ. ಈ ಬಗ್ಗೆ ಕಲರ್ಸ್ ಕನ್ನಡ ವಾಹಿನಿಯಿಂದ ಅಧಿಕೃತ ಮಾಹಿತಿ ಸಿಗಲಿ ಎಂದು ಕಾಯುತ್ತಿದ್ದಾರೆ. ಇತ್ತೀಚೆಗೆ ತಮಿಳು ಬಿಗ್ ಬಾಸ್​ಗೆ ಹೊಸ ನಿರೂಪಕನ ಆಗಮನ ಆಗಿದೆ. ಕಮಲ್ ಹಾಸನ್ ಬದಲು ವಿಜಯ್ ಸೇತುಪತಿ ಅವರು ಆಗಮಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ