AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್​ಗೆ ಸುದೀಪ್ ಬರ್ತಾರೆ ಎಂದು ಕಾದು ಕೂತವರಿಗೆ ಶಾಕ್ ಕೊಟ್ಟ ಕಲರ್ಸ್​ ಕನ್ನಡ

‘ಬಿಗ್ ಬಾಸ್ ಕನ್ನಡ ಸೀಸನ್ 10’ ಯಶಸ್ಸು ಕಂಡಿತ್ತು. ನಿರೂಪಕ ಸುದೀಪ್ ಅವರ ಸಿನಿಮಾ ಕೆಲಸಗಳಿಗೆ ಈ ಶೋ ಅಡಚಣೆ ಉಂಟುಮಾಡಿತ್ತು. ಅವರು ಈ ಬಾರಿ ಬಿಗ್ ಬಾಸ್​ನಿಂದ ಹೊರ ಹೋಗುತ್ತಾರೆ ಎಂದು ಹೇಳಲಾಗಿತ್ತು. ಈ ಬೆನ್ನಲ್ಲೇ ಪ್ರೋಮೋದಲ್ಲಿ ಬದಲಾವಣೆ ಮಾಡಲಾಗಿದೆ.

ಬಿಗ್ ಬಾಸ್​ಗೆ ಸುದೀಪ್ ಬರ್ತಾರೆ ಎಂದು ಕಾದು ಕೂತವರಿಗೆ ಶಾಕ್ ಕೊಟ್ಟ ಕಲರ್ಸ್​ ಕನ್ನಡ
ಸುದೀಪ್
ರಾಜೇಶ್ ದುಗ್ಗುಮನೆ
|

Updated on: Sep 10, 2024 | 6:50 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 11’ ನೋಡಲು ವೀಕ್ಷಕರು ಕಾದು ಕೂತಿದ್ದಾರೆ. ಈ ಬಾರಿ ಯಾರು ಬಿಗ್ ಬಾಸ್ ನಡೆಸಿಕೊಡುತ್ತಾರೆ ಎನ್ನುವ ಕುತೂಹಲ ಅಭಿಮಾನಿಗಳನ್ನು ಬಲವಾಗಿ ಕಾಡುತ್ತಿದೆ. ಕಿಚ್ಚ ಸುದೀಪ್ ಅವರು ಅಡ್ಡಗೋಡೆಯ ಮೇಲೆ ದೀಪ ಇಟ್ಟಂತೆ ಮಾತನಾಡಿದ್ದರು. ಇನ್ನೂ ಮಾತುಕತೆ ನಡೆಯುತ್ತಿದೆ ಎಂದಿದ್ದರು. ಸುದೀಪ್ ಬರುತ್ತಾರೆ ಎಂದು ಕಾದು ಕೂತವರಿಗೆ ಕಲರ್ಸ್ ಕನ್ನಡ ಶಾಕ್ ಕೊಟ್ಟಿದೆ. ಸುದೀಪ್ ಬರೋದು ಅನುಮಾನವಾ ಎನ್ನುವ ಪ್ರಶ್ನೆಯನ್ನು ಹುಟ್ಟುಹಾಕಿದೆ.

ವಾರದ ಹಿಂದೆ ‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಪ್ರೋಮೋ ರಿಲೀಸ್ ಆಗಿತ್ತು. ಈ ಪ್ರೋಮೋದಲ್ಲಿ ಕೇವಲ ಲೋಗೋ ಇತ್ತು. ಅಲ್ಲದೆ, ಹೊಸ ಸೀಸನ್ ಶೀಘ್ರವೇ ಆರಂಭ ಆಗಲಿದೆ ಎಂದು ಬರೆಯಲಾಗಿತ್ತು. #KichchaSudeep ಎಂದು ಬರೆಯುವ ಮೂಲಕ ಎಲ್ಲರಿಗೂ ಸರ್​ಪ್ರೈಸ್ ನೀಡಲಾಗಿತ್ತು. ಸುದೀಪ್ ಈ ಸೀಸನ್​ನಲ್ಲಿ ಇರುತ್ತಾರೆ ಅನ್ನೋದು ಬಹುತೇಕ ಖಚಿತವಾಯಿತು. ಆದರೆ, ಈಗ ಈ ಹ್ಯಾಶ್​ಟ್ಯಾಗ್ ತೆಗೆಯಲಾಗಿದೆ.

ಬಿಗ್ ಬಾಸ್ ಪ್ರೋಮೋನ ಕಲರ್ಸ್​ ಕನ್ನಡ ವಾಹಿನಿ ಇನ್​ಸ್ಟ್ರಾಗ್ರಾಮ್​ನಲ್ಲಿ ಪಿನ್ ಮಾಡಿ ಇಟ್ಟಿದೆ. ಈ ವಿಡಿಯೋಗೆ ಬರೋಬ್ಬರಿ 2 ಲಕ್ಷಕ್ಕೂ ಅಧಿಕ ಲೈಕ್ಸ್ ಸಿಕ್ಕಿದೆ. ಈಗ ಒಂದು ದಿನದ ಹಿಂದೆ ಈ ಪ್ರೋಮೋದ ಕ್ಯಾಪ್ಶನ್ ಎಡಿಟ್ ಮಾಡಲಾಗಿದ್ದು, ಸುದೀಪ್ ಹ್ಯಾಶ್​ಟ್ಯಾಗ್ ಕಾಣೆಯಾಗಿದೆ.

ಇದನ್ನೂ ಓದಿ: ‘ನನ್ನ ಹೆಸರಿಗೆ ಫ್ಯಾನ್ಸ್ ಕಳಂಕ ತಂದಿಲ್ಲ’; ಬರ್ತ್​ಡೇ ದಿನ ಸುದೀಪ್ ನೇರಮಾತು

ಸುದೀಪ್ ಅವರು ಬೇರೆ ಬೇರೆ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಒಟ್ಟಿಗೆ ಅವರು ಮೂರ್ನಾಲ್ಕು ಸಿನಿಮಾ ಮಾಡುವ ಭರವಸೆ ನೀಡಿದ್ದಾರೆ. ಇಷ್ಟೊಂದು ಸಿನಿಮಾ ಕೆಲಸಗಳು ಇರುವಾಗ ಅವರಿಗೆ ಬಿಗ್ ಬಾಸ್ ನಿರೂಪಣೆ ಮಾಡಲು ಸಾಧ್ಯವಿಲ್ಲ ಎಂದೆನಿಸಿತೋ ಎನ್ನುವ ಪ್ರಶ್ನೆ ಮೂಡಿದೆ. ಈ ಬಗ್ಗೆ ಕಲರ್ಸ್ ಕನ್ನಡ ವಾಹಿನಿಯಿಂದ ಅಧಿಕೃತ ಮಾಹಿತಿ ಸಿಗಲಿ ಎಂದು ಕಾಯುತ್ತಿದ್ದಾರೆ. ಇತ್ತೀಚೆಗೆ ತಮಿಳು ಬಿಗ್ ಬಾಸ್​ಗೆ ಹೊಸ ನಿರೂಪಕನ ಆಗಮನ ಆಗಿದೆ. ಕಮಲ್ ಹಾಸನ್ ಬದಲು ವಿಜಯ್ ಸೇತುಪತಿ ಅವರು ಆಗಮಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್