AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Michael Ajay: ಒಂದೇ ಮಾತಲ್ಲಿ ಸುದೀಪ್ ಮನಸ್ಸು ಗೆದ್ದ ಮೈಕಲ್ ಅಜಯ್

ಮೈಕಲ್ ಅವರ ತಂದೆ ನೈಜೀರಿಯಾ ಮೂಲದವರು. ಹೀಗಾಗಿ, ಮೈಕಲ್​ಗೆ ಸರಿಯಾಗಿ ಕನ್ನಡ ಮಾತನಾಡಲು ಬರುತ್ತಿರಲಿಲ್ಲ. ಆದರೆ, ದೊಡ್ಮನೆ ಒಳಗೆ ಹೋದ ಬಳಿಕ ಅವರು ಕನ್ನಡ ಕಲಿಯಲು ಸಾಕಷ್ಟು ಪ್ರಯತ್ನಿಸಿದರು. ಈಗ ಅವರು ಸುದೀಪ್ ಮನಸ್ಸು ಗೆದ್ದಿದ್ದಾರೆ.

Michael Ajay: ಒಂದೇ ಮಾತಲ್ಲಿ ಸುದೀಪ್ ಮನಸ್ಸು ಗೆದ್ದ ಮೈಕಲ್ ಅಜಯ್
ಮೈಕಲ್-ಸುದೀಪ್
ರಾಜೇಶ್ ದುಗ್ಗುಮನೆ
|

Updated on: Jan 08, 2024 | 7:31 AM

Share

ಮೈಕಲ್ ಅಜಯ್ (Michael Ajay) ಅವರು ‘ಬಿಗ್ ಬಾಸ್​ ಕನ್ನಡ ಸೀಸನ್ 10’ರಿಂದ ಎಲಿಮಿನೇಟ್ ಆಗಿದ್ದಾರೆ. ಕನ್ನಡ ಸರಿಯಾಗಿ ಬರದೇ ಇರುವುದು ಮೈಕಲ್​ಗೆ ಹಿನ್ನಡೆ ಆಗಬಹುದು ಎಂದು ಅನೇಕರು ಭಾವಿಸಿದ್ದರು. ಆದರೆ, ಅಲ್ಲಾಗಿದ್ದೇ ಬೇರೆ. ಕನ್ನಡ ಕಲಿಯಲು ಅವರು ಸಾಕಷ್ಟು ಪ್ರಯತ್ನಿಸಿದ್ದರು. ಒಳ್ಳೆಯ ರೀತಿಯಲ್ಲಿ ಟಾಸ್ಕ್ ಆಡಿದ್ದರು. ಹೀಗಾಗಿ 90 ದಿನಗಳ ಕಾಲ ಅವರು ಬಿಗ್ ಬಾಸ್ ಮನೆಯಲ್ಲಿ ಇದ್ದರು. ಈಗ ಅವರ ಎಲಿಮಿನೇಷನ್ ಅನೇಕರಿಗೆ ಬೇಸರ ತಂದಿದೆ. ಎಲಿಮಿನೇಟ್ ಆದ ಬಳಿಕ ವೇದಿಕೆಗೆ ಬಂದ ಮೈಕಲ್ ಅವರು ಸುದೀಪ್ ಅವರ ಮನಸ್ಸು ಗೆದ್ದಿದ್ದಾರೆ.

ಮೈಕಲ್ ಅವರ ತಂದೆ ನೈಜೀರಿಯಾ ಮೂಲದವರು. ಹೀಗಾಗಿ, ಮೈಕಲ್​ಗೆ ಸರಿಯಾಗಿ ಕನ್ನಡ ಮಾತನಾಡಲು ಬರುತ್ತಿರಲಿಲ್ಲ. ಆದರೆ, ದೊಡ್ಮನೆ ಒಳಗೆ ಹೋದ ಬಳಿಕ ಅವರು ಕನ್ನಡ ಕಲಿಯಲು ಸಾಕಷ್ಟು ಪ್ರಯತ್ನಿಸಿದರು. ಈ ಕಾರಣಕ್ಕೆ ಅವರಿಗೆ ಕಿಚ್ಚನ ಚಪ್ಪಾಳೆ ಕೂಡ ಸಿಕ್ಕಿತ್ತು. ಈಗ ಅವರು ಕಡಿಮೆ ವೋಟ್ ಪಡೆದು ಎಲಿಮಿನೇಟ್ ಆಗಿದ್ದಾರೆ. ಅವರು ಹೊರ ಹೋಗುವಾಗ ಪ್ರತಿಯೊಬ್ಬ ಸ್ಪರ್ಧಿಯೂ ಕಣ್ಣೀರು ಹಾಕಿದ್ದಾರೆ. ಮೈಕಲ್ ಅವರಿಗೂ ದುಃಖ ತಡೆದುಕೊಳ್ಳಲು ಆಗಲಿಲ್ಲ.

ಎಲಿಮಿನೇಟ್ ಆದ ಬಳಿಕ ಮೈಕಲ್ ಅವರು ವೇದಿಕೆ ಮೇಲೆ ಬಂದರು. ಈ ವೇಳೆ ಅವರು ಸುದೀಪ್ ಅವರಿಗೆ ಹಗ್ ಕೊಟ್ಟರು. ಆಗ ಅವರು ಒಂದು ಮಾತನ್ನು ಹೇಳಿದರು. ‘ಸುದೀಪ್ ಅವರನ್ನು ಕಂಡರೆ ಭಯ ಆಗುತ್ತದೆ ಎಂದು ಎಲ್ಲರೂ ಹೇಳುತ್ತಿದ್ದರು. ಆದರೆ, ನನಗೆ ಯಾವಾಗಲೂ ಆ ರೀತಿ ಅನಿಸಲೇ ಇಲ್ಲ. ಯಾವುದೋ ಹಳೆಯ ಗೆಳೆಯನ ಭೇಟಿ ಮಾಡುತ್ತಿದ್ದೇನೆ ಅನಿಸುತ್ತದೆ’ ಎಂದಿದ್ದಾರೆ ಮೈಕಲ್. ಈ ಮಾತನ್ನು ಕೇಳಿ ಸುದೀಪ್​ಗೆ ಖುಷಿ ಆಯಿತು. ಅವರು ಮತ್ತೊಮ್ಮೆ ಮೈಕಲ್​ನ ಖುಷಿಯಿಂದ ತಬ್ಬಿಕೊಂಡರು.

ಇದನ್ನೂ ಓದಿ: ‘ಇನ್ನು ಬಾಕಿ ಉಳಿದಿರೋದು ಒಂದು ಮಾತ್ರ’; ಟಾರ್ಗೆಟ್ ತಿಳಿಸಿದ ಮೈಕಲ್ ಅಜಯ್

‘ಹೋಗುವಾಗ ಕನ್ನಡ ಮಾತನಾಡೋಕೆ ಒದ್ದಾಡುತ್ತಿದ್ದಿರಿ. ಈಗ ಮರಳಿ ಬರುವಾಗ ದೊಡ್ಡ ಅಭಿಮಾನಿ ಬಳಗ ಪಡೆದಿದ್ದೀರಿ. ಮಣ್ಣಿನ ಮಗ ಆಗಿದ್ದೀರಿ’ ಎಂದು ಮೈಕಲ್ ಬಗ್ಗೆ ಸುದೀಪ್ ಮೆಚ್ಚುಗೆ ಸೂಚಿಸಿದರು. ‘ಬಿಗ್ ಬಾಸ್’ ಮನೆಯಲ್ಲಿ ಸದ್ಯ 8 ಮಂದಿ ಇದ್ದಾರೆ. ಇನ್ನು ಕೆಲವೇ ವಾರಗಳಲ್ಲಿ ಫಿನಾಲೆ ನಡೆಯಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ