Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೊಡ್ಮನೆ ಒಳಗೆ ಬಂದು ಯಾರಿಗೂ ಗೊತ್ತಾಗದ ರೀತಿ ಅಡುಗೆ ಮಾಡಿ ಹೋಗಿದ್ದ ಸುದೀಪ್

‘ಬಿಗ್ ಬಾಸ್ ಕನ್ನಡ ಸೀಸನ್ 6’ ಅನ್ನು ಸುದೀಪ್ ಅವರು ನಡೆಸಿಕೊಟ್ಟಿದ್ದರು. ಈ ಸೀಸನ್ ಗಮನ ಸೆಳೆದಿತ್ತು. ಅನುಪಮಾ ಗೌಡ, ನಿವೇದಿತಾ ಗೌಡ, ಚಂದನ್ ಶೆಟ್ಟಿ, ಜಯರಾಂ ಕಾರ್ತಿಕ್, ದಿವಾಕರ್ ಮೊದಲಾದವರು ಈ ಸೀಸನ್​ನಲ್ಲಿ ಇದ್ದರು. ಈ ಸೀಸನ್​ನಲ್ಲಿ ಸರ್​ಪ್ರೈಸ್ ಕೊಟ್ಟಿದ್ದರು ಸುದೀಪ್.

ದೊಡ್ಮನೆ ಒಳಗೆ ಬಂದು ಯಾರಿಗೂ ಗೊತ್ತಾಗದ ರೀತಿ ಅಡುಗೆ ಮಾಡಿ ಹೋಗಿದ್ದ ಸುದೀಪ್
ಸುದೀಪ್
Follow us
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ

Updated on: Dec 03, 2024 | 7:31 AM

ಕಿಚ್ಚ ಸುದೀಪ್ ಅವರು ‘ಬಿಗ್ ಬಾಸ್’ನ ಹಲವು ವರ್ಷಗಳಿಂದ ನಡೆಸಿಕೊಂಡು ಬರುತ್ತಿದ್ದಾರೆ. ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಸುದೀಪ್ ಬಿಗ್ ಬಾಸ್ ನಡೆಸಿಕೊಡ್ತಾರೆ ಎಂದರೆ ಟಿಆರ್​ಪಿ ಬರೋದು ಪಕ್ಕಾ. ಈ ಮೊದಲು ಸುದೀಪ್ ಅವರು ಬಿಗ್ ಬಾಸ್ ನಡೆಸಿಕೊಡುವಾಗ ದೊಡ್ಮನೆ ಒಳಗೆ ಬಂದು ಅಡುಗೆ ಮಾಡಿ ಹೋಗಿದ್ದರು. ಇದು ವೀಕ್ಷಕರಿಗೆ ಸರ್​ಪ್ರೈಸ್ ಆಗಿತ್ತು. ಆ ಬಗ್ಗೆ ಇಲ್ಲಿದೆ ಮಾಹಿತಿ.

‘ಬಿಗ್ ಬಾಸ್ ಕನ್ನಡ ಸೀಸನ್ 6’ ಅನ್ನು ಸುದೀಪ್ ಅವರು ನಡೆಸಿಕೊಟ್ಟಿದ್ದರು. ಈ ಸೀಸನ್ ಗಮನ ಸೆಳೆದಿತ್ತು. ಅನುಪಮಾ ಗೌಡ, ನಿವೇದಿತಾ ಗೌಡ, ಚಂದನ್ ಶೆಟ್ಟಿ, ಜಯರಾಂ ಕಾರ್ತಿಕ್, ದಿವಾಕರ್ ಮೊದಲಾದವರು ಈ ಸೀಸನ್​ನಲ್ಲಿ ಇದ್ದರು. ಈ ಸೀಸನ್​ನಲ್ಲಿ ಸರ್​ಪ್ರೈಸ್ ಕೊಟ್ಟಿದ್ದರು ಸುದೀಪ್.

ಅಡುಗೆ ಮನೆಗೆ ಬಂದು ಕೆಲವರು ಅಡುಗೆ ಮಾಡಿ ಹೋಗಿದ್ದರು. ಅಲ್ಲಿ ಮುಖ ರಿವೀಲ್ ಆಗಿರಲಿಲ್ಲ. ಎಲ್ಲರೂ ಮುಖಕ್ಕೆ ಏನನ್ನೂ ಹಾಕಿಕೊಂಡು ಬಂದು ಅಡುಗೆ ಮಾಡಿದ್ದರು. ಅಲ್ಲಿ ಅಡುಗೆ ಮಾಡಿದವರು ಯಾರು ಎಂಬುದು ಯಾರಿಗೂ ತಿಳಿದಿರಲಿಲ್ಲ. ಆ ಬಳಿಕ ಹೊರ ಬಂದು ಮುಖವನ್ನು ರಿವೀಲ್ ಮಾಡಲಾಯಿತು.

ಈ ವೇಳೆ ಒಬ್ಬೊಬ್ಬರಾಗಿಯೇ ಮುಖ ರಿವೀಲ್ ಮಾಡುತ್ತಾ ಹೋದರು. ಮೊದಲು ಚಂದನ್ ಕುಮಾರ್ ಅವರು ತಮ್ಮ ಮುಖ ತೋರಿಸಿದರು. ಹೀಗೆ, ಹಲವರು ಮುಖ ರಿವೀಲ್ ಮಾಡಿದರು. ಕೊನೆಯಲ್ಲಿ ಕಿಚ್ಚ ಸುದೀಪ್ ಅವರು ತಮ್ಮ ಮುಖವನ್ನು ತೋರಿಸಿದರು. ಆಗ ಎಲ್ಲರಿಗೂ ಶಾಕ್ ಆಯಿತು. ಅದು ಸುದೀಪ್ ಎನ್ನುವ ವಿಚಾರ ತಿಳಿದು ಅಚ್ಚರಿ ಆಯಿತು. ಆ ಸೀಸನ್​ನಲ್ಲಿ ಚಂದನ್ ಶೆಟ್ಟಿ ಅವರು ಗೆದ್ದಿದ್ದರು.

ಇದನ್ನೂ ಓದಿ: ಬಿಗ್​ಬಾಸ್​ನಿಂದ ಬಂದು ಕಿಚ್ಚ ಸುದೀಪ್​ ಉದ್ದೇಶಿಸಿ ಪೋಸ್ಟ್ ಹಾಕಿದ ಶೋಭಾ ಶೆಟ್ಟಿ

ಸುದೀಪ್ ಅವರು ‘ಬಿಗ್ ಬಾಸ್ ಕನ್ನಡ’ ನಡೆಸಿಕೊಡುವಾಗ ಅನೇಕ ಬಾರಿ ಮನೆಯಿಂದ ಅಡುಗೆ ಮಾಡಿ ಕಳುಹಿಸಿದ್ದು ಇದೆ. ಈ ಬಾರಿಯೂ ಅದನ್ನು ಮುಂದುವರಿಸೋ ಸಾಧ್ಯತೆ ಇದೆ. ಈ ಬಾರಿಯೂ ಕಳೆದ ಸೀಸನ್ ರೀತಿಯೇ ಮನೆ ಒಳಗೆ ಬಂದು ಅಡುಗೆ ಮಾಡಿ ಹೋಗಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ. ಇದು ನಿಜವಾಗಲಿ ಎಂಬುದು ಫ್ಯಾನ್ಸ್ ಕೋರಿಕೆ. ಇನ್ನುಮುಂದೆ ಸುದೀಪ್ ಬಿಗ್ ಬಾಸ್​ನಲ್ಲಿ ಇರುವುದಿಲ್ಲ ಎಂಬ ವಿಚಾರವೇ ಬೇಸರ ಮೂಡಿಸುವಂತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಮತ್ತೆ ಮಾರ್ದನಿಸಿದ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು
ಮತ್ತೆ ಮಾರ್ದನಿಸಿದ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು
ಮಹಾಕುಂಭಮೇಳ ಹೇಗೆ ಅಯೋಜಿಸಲಾಯಿತು ಅಂತ ವಿಚಾರಿಸಿದ್ದೀನಿ: ಶಿವಕುಮಾರ್
ಮಹಾಕುಂಭಮೇಳ ಹೇಗೆ ಅಯೋಜಿಸಲಾಯಿತು ಅಂತ ವಿಚಾರಿಸಿದ್ದೀನಿ: ಶಿವಕುಮಾರ್
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !