ಬಿಗ್​ ಬಾಸ್​ ಕನ್ನಡ 11: ಹೊಸ ಆ್ಯಂಕರ್​ ಬಗ್ಗೆ ಸುಳಿವು ನೀಡಿದ ‘ಕಲರ್ಸ್​ ಕನ್ನಡ’

ಪ್ರೋಮೋದ ಕೊನೆಯಲ್ಲಿ ನಗುವ ಧ್ವನಿ ಇದೆ. ಅದು ರಿಷಬ್​ ಶೆಟ್ಟಿ ಅವರ ಧ್ವನಿ ಎಂದು ಕೆಲವರು ಊಹಿಸಿದ್ದಾರೆ. ‘ಬಿಗ್​ ಬಾಸ್​ ಕನ್ನಡ ಸೀಸನ್​ 11’ಕ್ಕೆ ಆ್ಯಂಕರ್​ ಬದಲಾಗುತ್ತಾರೆ ಎಂಬ ಊಹೆಯ ಬಗ್ಗೆ ಪ್ರೇಕ್ಷಕರು ಹಲವು ರೀತಿಯಲ್ಲಿ ಪ್ರತಿಕ್ರಿಯಿಸಿದ್ದಾರೆ. ಶೀಘ್ರದಲ್ಲೇ ಶೋ ಆರಂಭ ಆಗಲಿದೆ. ಕಂಟೆಸ್ಟೆಂಟ್ಸ್​ ಯಾರು ಎಂಬ ಬಗ್ಗೆಯೂ ಕುತೂಹಲ ಹೆಚ್ಚಾಗಿದೆ.

ಬಿಗ್​ ಬಾಸ್​ ಕನ್ನಡ 11: ಹೊಸ ಆ್ಯಂಕರ್​ ಬಗ್ಗೆ ಸುಳಿವು ನೀಡಿದ ‘ಕಲರ್ಸ್​ ಕನ್ನಡ’
ಬಿಗ್​ ಬಾಸ್​ ಕನ್ನಡ ಸೀಸನ್​ 11
Follow us
|

Updated on: Sep 10, 2024 | 9:19 PM

ಇನ್ನೇನು ಕೆಲವೇ ದಿನಗಳಲ್ಲಿ ‘ಬಿಗ್​ ಬಾಸ್​ ಕನ್ನಡ ಸೀಸನ್​ 11’ ಶುರುವಾಗಲಿದೆ. ಈ ಬಾರಿ ಯಾವೆಲ್ಲ ಸ್ಪರ್ಧಿಗಳು ಬರುತ್ತಾರೆ ಎಂಬುದಕ್ಕಿಂತಲೂ ಆ್ಯಂಕರ್​ ಯಾರು ಎಂಬ ಪ್ರಶ್ನೆಯೇ ಎಲ್ಲರ ತಲೆಯಲ್ಲೂ ಕೊರೆಯುತ್ತಿದೆ. ಆ ಪ್ರಶ್ನೆಯನ್ನು ಇನ್ನಷ್ಟು ದೊಡ್ಡದು ಮಾಡುವ ರೀತಿಯಲ್ಲಿ ಹೊಸ ಪ್ರೋಮೋ ಬಿಡುಗಡೆ ಮಾಡಲಾಗಿದೆ. ‘ಕಲರ್ಸ್​ ಕನ್ನಡ’ ವಾಹಿನಿಯ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಈ ಪ್ರೋಮೋ ವೈರಲ್​ ಆಗಿದೆ. ಪ್ರೋಮೋದಲ್ಲಿ ಕಿಚ್ಚ ಸುದೀಪ್​ ಕಾಣಿಸಿಕೊಂಡಿಲ್ಲ. ಅವರಿಗೆ ಸಂಬಂಧಿಸಿದ ಹ್ಯಾಶ್​ ಟ್ಯಾಗ್​ ಕೂಡ ಇಲ್ಲ! ಹಾಗಾಗಿ ವೀಕ್ಷಕರಲ್ಲಿ ಕೌತುಕ ಜಾಸ್ತಿ ಆಗಿದೆ.

ಕಿಚ್ಚ ಸುದೀಪ್​ ಅವರು ಕಳೆದ 10 ಸೀಸನ್​ಗಳಿಗೆ ನಿರೂಪಣೆ ಮಾಡಿ ಸೈ ಎನಿಸಿಕೊಂಡಿದ್ದಾರೆ. ಬಿಗ್ ಬಾಸ್​ ಎಂದರೆ ಸುದೀಪ್​, ಸುದೀಪ್​ ಎಂದರೆ ಬಿಗ್ ಬಾಸ್​ ಎಂಬ ರೀತಿ ಭಾವನೆ ಎಲ್ಲರಲ್ಲೂ ಇದೆ. ಆದರೆ ಈ ಬಾರಿ ಅವರು ಇರುತ್ತಾರೋ ಇಲ್ಲವೋ ಎಂಬ ಪ್ರಶ್ನೆ ಬಲವಾಗಿ ಕಾಡುತ್ತಿದೆ. ಹೊಸ ಸೀಸನ್​ಗೆ ನಿರೂಪಕರ ಬದಲಾವಣೆ ಆಗಲಿದೆ ಎಂಬ ಗಾಸಿಪ್​ ಸಾಕಷ್ಟು ದಿನಗಳಿಂದ ಕೇಳಿಬರುತ್ತಿದೆ.

ಇದನ್ನೂ ಓದಿ: ಚಿತ್ರರಂಗದಿಂದ ದರ್ಶನ್​ ಬ್ಯಾನ್​ ಆಗಬೇಕಾ? ಕಿಚ್ಚ ಸುದೀಪ್​ ಹೇಳಿದ್ದಿಷ್ಟು..

ಹೊಸ ಪ್ರೋಮೋದಲ್ಲಿ ಏನಿದೆ?

‘ಇದು ಬಿಗ್​ ಬಾಸ್​.. ನಮಸ್ಕಾರ ಕರ್ನಾಟಕ, ಹೇಗಿದ್ದೀರ? 10 ವರ್ಷದಿಂದ ನೋಡ್ತಾನೇ ಇದ್ದೀರ. ಇದು ದೊಡ್ಡದಾಗ್ತಾನೇ ಇದೆ. ಈ ಬಾರಿ ಇನ್ನೂ ದೊಡ್ಡದು ಕಾದಿದೆ. ಯಾಕೆಂದರೆ ಇದು ಹೊಸ ದಶಕ, ಹೊಸ ಆಟ, ಹೊಸ ಅಧ್ಯಾಯ’ ಎಂಬ ಬಿಗ್​ ಬಾಸ್​ ಧ್ವನಿ ಕೇಳಿಸಿದೆ. ‘ಹಾಗಾದ್ರೆ ಆ್ಯಂಕರ್​ ಕೂಡ ಹೊಸುಬ್ರ?’ ಎಂಬ ಪ್ರಶ್ನೆಯನ್ನೂ ಕೇಳಲಾಗಿದೆ. ಆ ಪ್ರಶ್ನೆಗೆ ಇನ್ನಷ್ಟೇ ಉತ್ತರ ಸಿಗಬೇಕಿದೆ.

ಈ ಪ್ರೋಮೋಗೆ ಅನೇಕರು ಕಮೆಂಟ್​ ಮಾಡಿದ್ದಾರೆ. ‘ಆ್ಯಂಕರ್​ ಚೇಂಜ್​ ಮಾಡಬೇಡಿ’ ಎಂದು ಕಿಚ್ಚ ಸುದೀಪ್​ ಫ್ಯಾನ್ಸ್​ ಮನವಿ ಮಾಡಿದ್ದಾರೆ. ಸುದೀಪ್​ ಅಲ್ಲದೇ ಬೇರೆ ಯಾರನ್ನೂ ಊಹಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಕೆಲವರು ಕಮೆಂಟ್​ ಮಾಡಿದ್ದಾರೆ. ‘ರಿಷಬ್​ ಶೆಟ್ಟಿ ಅವರು ನಿರೂಪಣೆ ಮಾಡ್ತಾರೆ’ ಎಂದು ಕೆಲವರು ಊಹಿಸಿದ್ದಾರೆ. ರಿಷಬ್ ಶೆಟ್ಟಿ ಅವರನ್ನು ಟ್ಯಾಗ್​ ಮಾಡಿ ಈ ಬಗ್ಗೆ ಪ್ರಶ್ನೆ ಮಾಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬಿಜೆಪಿ ಕಾರ್ಯಾಲಯದಲ್ಲಿ ರಂಗೋಲಿಯಲ್ಲಿ ಅರಳಿದ ಪ್ರಧಾನಿ ಮೋದಿ ಭಾವಚಿತ್ರ
ಬಿಜೆಪಿ ಕಾರ್ಯಾಲಯದಲ್ಲಿ ರಂಗೋಲಿಯಲ್ಲಿ ಅರಳಿದ ಪ್ರಧಾನಿ ಮೋದಿ ಭಾವಚಿತ್ರ
ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ
ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ