AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಕನ್ನಡ 11: ಹೊಸ ಆ್ಯಂಕರ್​ ಬಗ್ಗೆ ಸುಳಿವು ನೀಡಿದ ‘ಕಲರ್ಸ್​ ಕನ್ನಡ’

ಪ್ರೋಮೋದ ಕೊನೆಯಲ್ಲಿ ನಗುವ ಧ್ವನಿ ಇದೆ. ಅದು ರಿಷಬ್​ ಶೆಟ್ಟಿ ಅವರ ಧ್ವನಿ ಎಂದು ಕೆಲವರು ಊಹಿಸಿದ್ದಾರೆ. ‘ಬಿಗ್​ ಬಾಸ್​ ಕನ್ನಡ ಸೀಸನ್​ 11’ಕ್ಕೆ ಆ್ಯಂಕರ್​ ಬದಲಾಗುತ್ತಾರೆ ಎಂಬ ಊಹೆಯ ಬಗ್ಗೆ ಪ್ರೇಕ್ಷಕರು ಹಲವು ರೀತಿಯಲ್ಲಿ ಪ್ರತಿಕ್ರಿಯಿಸಿದ್ದಾರೆ. ಶೀಘ್ರದಲ್ಲೇ ಶೋ ಆರಂಭ ಆಗಲಿದೆ. ಕಂಟೆಸ್ಟೆಂಟ್ಸ್​ ಯಾರು ಎಂಬ ಬಗ್ಗೆಯೂ ಕುತೂಹಲ ಹೆಚ್ಚಾಗಿದೆ.

ಬಿಗ್​ ಬಾಸ್​ ಕನ್ನಡ 11: ಹೊಸ ಆ್ಯಂಕರ್​ ಬಗ್ಗೆ ಸುಳಿವು ನೀಡಿದ ‘ಕಲರ್ಸ್​ ಕನ್ನಡ’
ಬಿಗ್​ ಬಾಸ್​ ಕನ್ನಡ ಸೀಸನ್​ 11
ಮದನ್​ ಕುಮಾರ್​
|

Updated on: Sep 10, 2024 | 9:19 PM

Share

ಇನ್ನೇನು ಕೆಲವೇ ದಿನಗಳಲ್ಲಿ ‘ಬಿಗ್​ ಬಾಸ್​ ಕನ್ನಡ ಸೀಸನ್​ 11’ ಶುರುವಾಗಲಿದೆ. ಈ ಬಾರಿ ಯಾವೆಲ್ಲ ಸ್ಪರ್ಧಿಗಳು ಬರುತ್ತಾರೆ ಎಂಬುದಕ್ಕಿಂತಲೂ ಆ್ಯಂಕರ್​ ಯಾರು ಎಂಬ ಪ್ರಶ್ನೆಯೇ ಎಲ್ಲರ ತಲೆಯಲ್ಲೂ ಕೊರೆಯುತ್ತಿದೆ. ಆ ಪ್ರಶ್ನೆಯನ್ನು ಇನ್ನಷ್ಟು ದೊಡ್ಡದು ಮಾಡುವ ರೀತಿಯಲ್ಲಿ ಹೊಸ ಪ್ರೋಮೋ ಬಿಡುಗಡೆ ಮಾಡಲಾಗಿದೆ. ‘ಕಲರ್ಸ್​ ಕನ್ನಡ’ ವಾಹಿನಿಯ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಈ ಪ್ರೋಮೋ ವೈರಲ್​ ಆಗಿದೆ. ಪ್ರೋಮೋದಲ್ಲಿ ಕಿಚ್ಚ ಸುದೀಪ್​ ಕಾಣಿಸಿಕೊಂಡಿಲ್ಲ. ಅವರಿಗೆ ಸಂಬಂಧಿಸಿದ ಹ್ಯಾಶ್​ ಟ್ಯಾಗ್​ ಕೂಡ ಇಲ್ಲ! ಹಾಗಾಗಿ ವೀಕ್ಷಕರಲ್ಲಿ ಕೌತುಕ ಜಾಸ್ತಿ ಆಗಿದೆ.

ಕಿಚ್ಚ ಸುದೀಪ್​ ಅವರು ಕಳೆದ 10 ಸೀಸನ್​ಗಳಿಗೆ ನಿರೂಪಣೆ ಮಾಡಿ ಸೈ ಎನಿಸಿಕೊಂಡಿದ್ದಾರೆ. ಬಿಗ್ ಬಾಸ್​ ಎಂದರೆ ಸುದೀಪ್​, ಸುದೀಪ್​ ಎಂದರೆ ಬಿಗ್ ಬಾಸ್​ ಎಂಬ ರೀತಿ ಭಾವನೆ ಎಲ್ಲರಲ್ಲೂ ಇದೆ. ಆದರೆ ಈ ಬಾರಿ ಅವರು ಇರುತ್ತಾರೋ ಇಲ್ಲವೋ ಎಂಬ ಪ್ರಶ್ನೆ ಬಲವಾಗಿ ಕಾಡುತ್ತಿದೆ. ಹೊಸ ಸೀಸನ್​ಗೆ ನಿರೂಪಕರ ಬದಲಾವಣೆ ಆಗಲಿದೆ ಎಂಬ ಗಾಸಿಪ್​ ಸಾಕಷ್ಟು ದಿನಗಳಿಂದ ಕೇಳಿಬರುತ್ತಿದೆ.

ಇದನ್ನೂ ಓದಿ: ಚಿತ್ರರಂಗದಿಂದ ದರ್ಶನ್​ ಬ್ಯಾನ್​ ಆಗಬೇಕಾ? ಕಿಚ್ಚ ಸುದೀಪ್​ ಹೇಳಿದ್ದಿಷ್ಟು..

ಹೊಸ ಪ್ರೋಮೋದಲ್ಲಿ ಏನಿದೆ?

‘ಇದು ಬಿಗ್​ ಬಾಸ್​.. ನಮಸ್ಕಾರ ಕರ್ನಾಟಕ, ಹೇಗಿದ್ದೀರ? 10 ವರ್ಷದಿಂದ ನೋಡ್ತಾನೇ ಇದ್ದೀರ. ಇದು ದೊಡ್ಡದಾಗ್ತಾನೇ ಇದೆ. ಈ ಬಾರಿ ಇನ್ನೂ ದೊಡ್ಡದು ಕಾದಿದೆ. ಯಾಕೆಂದರೆ ಇದು ಹೊಸ ದಶಕ, ಹೊಸ ಆಟ, ಹೊಸ ಅಧ್ಯಾಯ’ ಎಂಬ ಬಿಗ್​ ಬಾಸ್​ ಧ್ವನಿ ಕೇಳಿಸಿದೆ. ‘ಹಾಗಾದ್ರೆ ಆ್ಯಂಕರ್​ ಕೂಡ ಹೊಸುಬ್ರ?’ ಎಂಬ ಪ್ರಶ್ನೆಯನ್ನೂ ಕೇಳಲಾಗಿದೆ. ಆ ಪ್ರಶ್ನೆಗೆ ಇನ್ನಷ್ಟೇ ಉತ್ತರ ಸಿಗಬೇಕಿದೆ.

ಈ ಪ್ರೋಮೋಗೆ ಅನೇಕರು ಕಮೆಂಟ್​ ಮಾಡಿದ್ದಾರೆ. ‘ಆ್ಯಂಕರ್​ ಚೇಂಜ್​ ಮಾಡಬೇಡಿ’ ಎಂದು ಕಿಚ್ಚ ಸುದೀಪ್​ ಫ್ಯಾನ್ಸ್​ ಮನವಿ ಮಾಡಿದ್ದಾರೆ. ಸುದೀಪ್​ ಅಲ್ಲದೇ ಬೇರೆ ಯಾರನ್ನೂ ಊಹಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಕೆಲವರು ಕಮೆಂಟ್​ ಮಾಡಿದ್ದಾರೆ. ‘ರಿಷಬ್​ ಶೆಟ್ಟಿ ಅವರು ನಿರೂಪಣೆ ಮಾಡ್ತಾರೆ’ ಎಂದು ಕೆಲವರು ಊಹಿಸಿದ್ದಾರೆ. ರಿಷಬ್ ಶೆಟ್ಟಿ ಅವರನ್ನು ಟ್ಯಾಗ್​ ಮಾಡಿ ಈ ಬಗ್ಗೆ ಪ್ರಶ್ನೆ ಮಾಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ