AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಕನ್ನಡ 11: ಹೊಸ ಆ್ಯಂಕರ್​ ಬಗ್ಗೆ ಸುಳಿವು ನೀಡಿದ ‘ಕಲರ್ಸ್​ ಕನ್ನಡ’

ಪ್ರೋಮೋದ ಕೊನೆಯಲ್ಲಿ ನಗುವ ಧ್ವನಿ ಇದೆ. ಅದು ರಿಷಬ್​ ಶೆಟ್ಟಿ ಅವರ ಧ್ವನಿ ಎಂದು ಕೆಲವರು ಊಹಿಸಿದ್ದಾರೆ. ‘ಬಿಗ್​ ಬಾಸ್​ ಕನ್ನಡ ಸೀಸನ್​ 11’ಕ್ಕೆ ಆ್ಯಂಕರ್​ ಬದಲಾಗುತ್ತಾರೆ ಎಂಬ ಊಹೆಯ ಬಗ್ಗೆ ಪ್ರೇಕ್ಷಕರು ಹಲವು ರೀತಿಯಲ್ಲಿ ಪ್ರತಿಕ್ರಿಯಿಸಿದ್ದಾರೆ. ಶೀಘ್ರದಲ್ಲೇ ಶೋ ಆರಂಭ ಆಗಲಿದೆ. ಕಂಟೆಸ್ಟೆಂಟ್ಸ್​ ಯಾರು ಎಂಬ ಬಗ್ಗೆಯೂ ಕುತೂಹಲ ಹೆಚ್ಚಾಗಿದೆ.

ಬಿಗ್​ ಬಾಸ್​ ಕನ್ನಡ 11: ಹೊಸ ಆ್ಯಂಕರ್​ ಬಗ್ಗೆ ಸುಳಿವು ನೀಡಿದ ‘ಕಲರ್ಸ್​ ಕನ್ನಡ’
ಬಿಗ್​ ಬಾಸ್​ ಕನ್ನಡ ಸೀಸನ್​ 11
ಮದನ್​ ಕುಮಾರ್​
|

Updated on: Sep 10, 2024 | 9:19 PM

Share

ಇನ್ನೇನು ಕೆಲವೇ ದಿನಗಳಲ್ಲಿ ‘ಬಿಗ್​ ಬಾಸ್​ ಕನ್ನಡ ಸೀಸನ್​ 11’ ಶುರುವಾಗಲಿದೆ. ಈ ಬಾರಿ ಯಾವೆಲ್ಲ ಸ್ಪರ್ಧಿಗಳು ಬರುತ್ತಾರೆ ಎಂಬುದಕ್ಕಿಂತಲೂ ಆ್ಯಂಕರ್​ ಯಾರು ಎಂಬ ಪ್ರಶ್ನೆಯೇ ಎಲ್ಲರ ತಲೆಯಲ್ಲೂ ಕೊರೆಯುತ್ತಿದೆ. ಆ ಪ್ರಶ್ನೆಯನ್ನು ಇನ್ನಷ್ಟು ದೊಡ್ಡದು ಮಾಡುವ ರೀತಿಯಲ್ಲಿ ಹೊಸ ಪ್ರೋಮೋ ಬಿಡುಗಡೆ ಮಾಡಲಾಗಿದೆ. ‘ಕಲರ್ಸ್​ ಕನ್ನಡ’ ವಾಹಿನಿಯ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಈ ಪ್ರೋಮೋ ವೈರಲ್​ ಆಗಿದೆ. ಪ್ರೋಮೋದಲ್ಲಿ ಕಿಚ್ಚ ಸುದೀಪ್​ ಕಾಣಿಸಿಕೊಂಡಿಲ್ಲ. ಅವರಿಗೆ ಸಂಬಂಧಿಸಿದ ಹ್ಯಾಶ್​ ಟ್ಯಾಗ್​ ಕೂಡ ಇಲ್ಲ! ಹಾಗಾಗಿ ವೀಕ್ಷಕರಲ್ಲಿ ಕೌತುಕ ಜಾಸ್ತಿ ಆಗಿದೆ.

ಕಿಚ್ಚ ಸುದೀಪ್​ ಅವರು ಕಳೆದ 10 ಸೀಸನ್​ಗಳಿಗೆ ನಿರೂಪಣೆ ಮಾಡಿ ಸೈ ಎನಿಸಿಕೊಂಡಿದ್ದಾರೆ. ಬಿಗ್ ಬಾಸ್​ ಎಂದರೆ ಸುದೀಪ್​, ಸುದೀಪ್​ ಎಂದರೆ ಬಿಗ್ ಬಾಸ್​ ಎಂಬ ರೀತಿ ಭಾವನೆ ಎಲ್ಲರಲ್ಲೂ ಇದೆ. ಆದರೆ ಈ ಬಾರಿ ಅವರು ಇರುತ್ತಾರೋ ಇಲ್ಲವೋ ಎಂಬ ಪ್ರಶ್ನೆ ಬಲವಾಗಿ ಕಾಡುತ್ತಿದೆ. ಹೊಸ ಸೀಸನ್​ಗೆ ನಿರೂಪಕರ ಬದಲಾವಣೆ ಆಗಲಿದೆ ಎಂಬ ಗಾಸಿಪ್​ ಸಾಕಷ್ಟು ದಿನಗಳಿಂದ ಕೇಳಿಬರುತ್ತಿದೆ.

ಇದನ್ನೂ ಓದಿ: ಚಿತ್ರರಂಗದಿಂದ ದರ್ಶನ್​ ಬ್ಯಾನ್​ ಆಗಬೇಕಾ? ಕಿಚ್ಚ ಸುದೀಪ್​ ಹೇಳಿದ್ದಿಷ್ಟು..

ಹೊಸ ಪ್ರೋಮೋದಲ್ಲಿ ಏನಿದೆ?

‘ಇದು ಬಿಗ್​ ಬಾಸ್​.. ನಮಸ್ಕಾರ ಕರ್ನಾಟಕ, ಹೇಗಿದ್ದೀರ? 10 ವರ್ಷದಿಂದ ನೋಡ್ತಾನೇ ಇದ್ದೀರ. ಇದು ದೊಡ್ಡದಾಗ್ತಾನೇ ಇದೆ. ಈ ಬಾರಿ ಇನ್ನೂ ದೊಡ್ಡದು ಕಾದಿದೆ. ಯಾಕೆಂದರೆ ಇದು ಹೊಸ ದಶಕ, ಹೊಸ ಆಟ, ಹೊಸ ಅಧ್ಯಾಯ’ ಎಂಬ ಬಿಗ್​ ಬಾಸ್​ ಧ್ವನಿ ಕೇಳಿಸಿದೆ. ‘ಹಾಗಾದ್ರೆ ಆ್ಯಂಕರ್​ ಕೂಡ ಹೊಸುಬ್ರ?’ ಎಂಬ ಪ್ರಶ್ನೆಯನ್ನೂ ಕೇಳಲಾಗಿದೆ. ಆ ಪ್ರಶ್ನೆಗೆ ಇನ್ನಷ್ಟೇ ಉತ್ತರ ಸಿಗಬೇಕಿದೆ.

ಈ ಪ್ರೋಮೋಗೆ ಅನೇಕರು ಕಮೆಂಟ್​ ಮಾಡಿದ್ದಾರೆ. ‘ಆ್ಯಂಕರ್​ ಚೇಂಜ್​ ಮಾಡಬೇಡಿ’ ಎಂದು ಕಿಚ್ಚ ಸುದೀಪ್​ ಫ್ಯಾನ್ಸ್​ ಮನವಿ ಮಾಡಿದ್ದಾರೆ. ಸುದೀಪ್​ ಅಲ್ಲದೇ ಬೇರೆ ಯಾರನ್ನೂ ಊಹಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಕೆಲವರು ಕಮೆಂಟ್​ ಮಾಡಿದ್ದಾರೆ. ‘ರಿಷಬ್​ ಶೆಟ್ಟಿ ಅವರು ನಿರೂಪಣೆ ಮಾಡ್ತಾರೆ’ ಎಂದು ಕೆಲವರು ಊಹಿಸಿದ್ದಾರೆ. ರಿಷಬ್ ಶೆಟ್ಟಿ ಅವರನ್ನು ಟ್ಯಾಗ್​ ಮಾಡಿ ಈ ಬಗ್ಗೆ ಪ್ರಶ್ನೆ ಮಾಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಒಂದೇ ದಿನ 15 ಲಕ್ಷ ಸಸಿನೆಟ್ಟು ಗಿನ್ನಿಸ್​​ ದಾಖಲೆ ಬರೆಯಲು ಮುಂದಾದ ಬಿಡಿಎ
ಒಂದೇ ದಿನ 15 ಲಕ್ಷ ಸಸಿನೆಟ್ಟು ಗಿನ್ನಿಸ್​​ ದಾಖಲೆ ಬರೆಯಲು ಮುಂದಾದ ಬಿಡಿಎ
‘ಮೀಸಲಾತಿ ನಂಬಿದ್ರೆ ಶಾಸಕನೇ ಆಗ್ತಿರಲಿಲ್ಲ
‘ಮೀಸಲಾತಿ ನಂಬಿದ್ರೆ ಶಾಸಕನೇ ಆಗ್ತಿರಲಿಲ್ಲ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಬರೋಬ್ಬರಿ 6 ಕಿ.ಮೀ. ಓಡಿದ ದಳಪತಿ ವಿಜಯ್
ಬರೋಬ್ಬರಿ 6 ಕಿ.ಮೀ. ಓಡಿದ ದಳಪತಿ ವಿಜಯ್