AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಕನ್ನಡ 11: ಹೊಸ ಆ್ಯಂಕರ್​ ಬಗ್ಗೆ ಸುಳಿವು ನೀಡಿದ ‘ಕಲರ್ಸ್​ ಕನ್ನಡ’

ಪ್ರೋಮೋದ ಕೊನೆಯಲ್ಲಿ ನಗುವ ಧ್ವನಿ ಇದೆ. ಅದು ರಿಷಬ್​ ಶೆಟ್ಟಿ ಅವರ ಧ್ವನಿ ಎಂದು ಕೆಲವರು ಊಹಿಸಿದ್ದಾರೆ. ‘ಬಿಗ್​ ಬಾಸ್​ ಕನ್ನಡ ಸೀಸನ್​ 11’ಕ್ಕೆ ಆ್ಯಂಕರ್​ ಬದಲಾಗುತ್ತಾರೆ ಎಂಬ ಊಹೆಯ ಬಗ್ಗೆ ಪ್ರೇಕ್ಷಕರು ಹಲವು ರೀತಿಯಲ್ಲಿ ಪ್ರತಿಕ್ರಿಯಿಸಿದ್ದಾರೆ. ಶೀಘ್ರದಲ್ಲೇ ಶೋ ಆರಂಭ ಆಗಲಿದೆ. ಕಂಟೆಸ್ಟೆಂಟ್ಸ್​ ಯಾರು ಎಂಬ ಬಗ್ಗೆಯೂ ಕುತೂಹಲ ಹೆಚ್ಚಾಗಿದೆ.

ಬಿಗ್​ ಬಾಸ್​ ಕನ್ನಡ 11: ಹೊಸ ಆ್ಯಂಕರ್​ ಬಗ್ಗೆ ಸುಳಿವು ನೀಡಿದ ‘ಕಲರ್ಸ್​ ಕನ್ನಡ’
ಬಿಗ್​ ಬಾಸ್​ ಕನ್ನಡ ಸೀಸನ್​ 11
ಮದನ್​ ಕುಮಾರ್​
|

Updated on: Sep 10, 2024 | 9:19 PM

Share

ಇನ್ನೇನು ಕೆಲವೇ ದಿನಗಳಲ್ಲಿ ‘ಬಿಗ್​ ಬಾಸ್​ ಕನ್ನಡ ಸೀಸನ್​ 11’ ಶುರುವಾಗಲಿದೆ. ಈ ಬಾರಿ ಯಾವೆಲ್ಲ ಸ್ಪರ್ಧಿಗಳು ಬರುತ್ತಾರೆ ಎಂಬುದಕ್ಕಿಂತಲೂ ಆ್ಯಂಕರ್​ ಯಾರು ಎಂಬ ಪ್ರಶ್ನೆಯೇ ಎಲ್ಲರ ತಲೆಯಲ್ಲೂ ಕೊರೆಯುತ್ತಿದೆ. ಆ ಪ್ರಶ್ನೆಯನ್ನು ಇನ್ನಷ್ಟು ದೊಡ್ಡದು ಮಾಡುವ ರೀತಿಯಲ್ಲಿ ಹೊಸ ಪ್ರೋಮೋ ಬಿಡುಗಡೆ ಮಾಡಲಾಗಿದೆ. ‘ಕಲರ್ಸ್​ ಕನ್ನಡ’ ವಾಹಿನಿಯ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಈ ಪ್ರೋಮೋ ವೈರಲ್​ ಆಗಿದೆ. ಪ್ರೋಮೋದಲ್ಲಿ ಕಿಚ್ಚ ಸುದೀಪ್​ ಕಾಣಿಸಿಕೊಂಡಿಲ್ಲ. ಅವರಿಗೆ ಸಂಬಂಧಿಸಿದ ಹ್ಯಾಶ್​ ಟ್ಯಾಗ್​ ಕೂಡ ಇಲ್ಲ! ಹಾಗಾಗಿ ವೀಕ್ಷಕರಲ್ಲಿ ಕೌತುಕ ಜಾಸ್ತಿ ಆಗಿದೆ.

ಕಿಚ್ಚ ಸುದೀಪ್​ ಅವರು ಕಳೆದ 10 ಸೀಸನ್​ಗಳಿಗೆ ನಿರೂಪಣೆ ಮಾಡಿ ಸೈ ಎನಿಸಿಕೊಂಡಿದ್ದಾರೆ. ಬಿಗ್ ಬಾಸ್​ ಎಂದರೆ ಸುದೀಪ್​, ಸುದೀಪ್​ ಎಂದರೆ ಬಿಗ್ ಬಾಸ್​ ಎಂಬ ರೀತಿ ಭಾವನೆ ಎಲ್ಲರಲ್ಲೂ ಇದೆ. ಆದರೆ ಈ ಬಾರಿ ಅವರು ಇರುತ್ತಾರೋ ಇಲ್ಲವೋ ಎಂಬ ಪ್ರಶ್ನೆ ಬಲವಾಗಿ ಕಾಡುತ್ತಿದೆ. ಹೊಸ ಸೀಸನ್​ಗೆ ನಿರೂಪಕರ ಬದಲಾವಣೆ ಆಗಲಿದೆ ಎಂಬ ಗಾಸಿಪ್​ ಸಾಕಷ್ಟು ದಿನಗಳಿಂದ ಕೇಳಿಬರುತ್ತಿದೆ.

ಇದನ್ನೂ ಓದಿ: ಚಿತ್ರರಂಗದಿಂದ ದರ್ಶನ್​ ಬ್ಯಾನ್​ ಆಗಬೇಕಾ? ಕಿಚ್ಚ ಸುದೀಪ್​ ಹೇಳಿದ್ದಿಷ್ಟು..

ಹೊಸ ಪ್ರೋಮೋದಲ್ಲಿ ಏನಿದೆ?

‘ಇದು ಬಿಗ್​ ಬಾಸ್​.. ನಮಸ್ಕಾರ ಕರ್ನಾಟಕ, ಹೇಗಿದ್ದೀರ? 10 ವರ್ಷದಿಂದ ನೋಡ್ತಾನೇ ಇದ್ದೀರ. ಇದು ದೊಡ್ಡದಾಗ್ತಾನೇ ಇದೆ. ಈ ಬಾರಿ ಇನ್ನೂ ದೊಡ್ಡದು ಕಾದಿದೆ. ಯಾಕೆಂದರೆ ಇದು ಹೊಸ ದಶಕ, ಹೊಸ ಆಟ, ಹೊಸ ಅಧ್ಯಾಯ’ ಎಂಬ ಬಿಗ್​ ಬಾಸ್​ ಧ್ವನಿ ಕೇಳಿಸಿದೆ. ‘ಹಾಗಾದ್ರೆ ಆ್ಯಂಕರ್​ ಕೂಡ ಹೊಸುಬ್ರ?’ ಎಂಬ ಪ್ರಶ್ನೆಯನ್ನೂ ಕೇಳಲಾಗಿದೆ. ಆ ಪ್ರಶ್ನೆಗೆ ಇನ್ನಷ್ಟೇ ಉತ್ತರ ಸಿಗಬೇಕಿದೆ.

ಈ ಪ್ರೋಮೋಗೆ ಅನೇಕರು ಕಮೆಂಟ್​ ಮಾಡಿದ್ದಾರೆ. ‘ಆ್ಯಂಕರ್​ ಚೇಂಜ್​ ಮಾಡಬೇಡಿ’ ಎಂದು ಕಿಚ್ಚ ಸುದೀಪ್​ ಫ್ಯಾನ್ಸ್​ ಮನವಿ ಮಾಡಿದ್ದಾರೆ. ಸುದೀಪ್​ ಅಲ್ಲದೇ ಬೇರೆ ಯಾರನ್ನೂ ಊಹಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಕೆಲವರು ಕಮೆಂಟ್​ ಮಾಡಿದ್ದಾರೆ. ‘ರಿಷಬ್​ ಶೆಟ್ಟಿ ಅವರು ನಿರೂಪಣೆ ಮಾಡ್ತಾರೆ’ ಎಂದು ಕೆಲವರು ಊಹಿಸಿದ್ದಾರೆ. ರಿಷಬ್ ಶೆಟ್ಟಿ ಅವರನ್ನು ಟ್ಯಾಗ್​ ಮಾಡಿ ಈ ಬಗ್ಗೆ ಪ್ರಶ್ನೆ ಮಾಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ