AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಷ್ಯನ್ಸ್ ಜೊತೆ..’; ಮಂಜು ಡ್ರೀಮ್ ಏನು ಎಂಬುದನ್ನು ರಿವೀಲ್ ಮಾಡಿದ ಸುದೀಪ್

ಬಿಗ್ ಬಾಸ್ ಕನ್ನಡದಲ್ಲಿ ಮಂಜು ಅವರ ಆಟ ಮತ್ತು ಸುದೀಪ್ ಅವರೊಂದಿಗಿನ ಸಂಬಂಧವನ್ನು ಚರ್ಚಿಸಲಾಗಿದೆ. ಐಶ್ವರ್ಯಾ ರಷ್ಯನ್ ಡ್ಯಾನ್ಸರ್‌ಗಳೊಂದಿಗೆ ಪಾರ್ಟಿ ಮಾಡುವ ಬಗ್ಗೆ ಮಾತನಾಡಿದರು. ಆಗ ಮಂಜು ಅವರ ಏನು ಎಂಬುದನ್ನು ಸುದೀಪ್ ಬಹಿರಂಗಪಡಿಸಿದರು. ವೀಕೆಂಡ್​ನಲ್ಲಿ ಈ ವಿಚಾರ ಸಾಕಷ್ಟು ಚರ್ಚೆಯನ್ನು ಹುಟ್ಟುಹಾಕಿದೆ.

‘ರಷ್ಯನ್ಸ್ ಜೊತೆ..’; ಮಂಜು ಡ್ರೀಮ್ ಏನು ಎಂಬುದನ್ನು ರಿವೀಲ್ ಮಾಡಿದ ಸುದೀಪ್
ಮಂಜು-ಸುದೀಪ್
ರಾಜೇಶ್ ದುಗ್ಗುಮನೆ
|

Updated on:Dec 30, 2024 | 11:50 AM

Share

ಬಿಗ್ ಬಾಸ್ ಮನೆಯಲ್ಲಿ ಉಗ್ರಂ ಮಂಜು ಅವರು ಉತ್ತಮವಾಗಿ ಆಟ ಆಡುತ್ತಿದ್ದಾರೆ. ಇತ್ತೀಚೆಗೆ ಅವರು ಡಲ್ ಹೊಡೆದ ಬಗ್ಗೆಯೂ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ಸುದೀಪ್ ಅವರು ನೇರ ಮಾತುಗಳಲ್ಲಿ ಅವರ ವಿರುದ್ಧ ಸಿಡಿದೆದ್ದಿದ್ದರು. ಆ ಬಳಿಕ ಮಂಜು ಅವರು ತಮ್ಮ ತಪ್ಪನ್ನು ತಿದ್ದಿಕೊಳ್ಳುವ ಪ್ರಯತ್ನದಲ್ಲಿ ಇದ್ದರು. ಈಗ ಸುದೀಪ್ ಅವರು ಮಂಜು ಅವರ ಕನಸು ಏನು ಎಂಬುದನ್ನು ರಿವೀಲ್ ಮಾಡಿದ್ದಾರೆ. ಈ ವಿಚಾರ ಕೇಳಿ ಮನೆ ಮಂದಿ ಶಾಕ್ ಆಗಿದ್ದಾರೆ.

ಹೊಸ ವರ್ಷ ಬಂದಿದೆ. ಸದ್ಯ ದೊಡ್ಮನೆಯಲ್ಲಿ 9 ಜನರು ಇದ್ದಾರೆ. ಈಗಿರುವ ಎಲ್ಲಾ ಸ್ಪರ್ಧಿಗಳಿಗೆ ಹೊಸ ವರ್ಷ ಬಿಗ್ ಬಾಸ್ ಮನೆಯಲ್ಲೇ ನಡೆಯಲಿದೆ. ಅವರು ದೊಡ್ಮನೆಯಿಂದ ಹೊರ ಬಂದ ಬಳಿಕವೇ ಪಾರ್ಟಿ ಮಾಡಬೇಕು. ಅದಕ್ಕೂ ಮೊದಲು ಸುದೀಪ್ ಅವರು ‘ಕಳೆದ ವರ್ಷ ಏನು ಮಾಡಿದ್ರಿ, ನಿಮ್ಮ ಪಾರ್ಟಿ ಹೇಗಿರುತ್ತದೆ’ ಎಂದು ಸ್ಪರ್ಧಿಗಳಿಗೆ ಕೇಳುತ್ತಾ ಬಂದರು.

ಇದಕ್ಕೆ ಉತ್ತರಿಸಿದ ಐಶ್ವರ್ಯಾ ಅವರು, ‘ಬೆಂಗಳೂರಲ್ಲಿ ಪಾರ್ಟಿ ಮಾಡುತ್ತೇವೆ. ರಷ್ಯನ್ ಡ್ಯಾನ್ಸರ್ ಇರ್ತಾರೆ’ ಎಂದರು ಐಶ್ವರ್ಯಾ. ಈ ಮಾತನ್ನು ಕೇಳಿ ಸುದೀಪ್​ಗೆ ಶಾಕ್ ಆಯಿತು. ‘ಆ ಪಾರ್ಟಿಯಲ್ಲಿ ಮಂಜು ಇರಲಿಲ್ಲವಾ? ಅದು ಅವರ ಕನಸು. ಪಾರ್ಟಿ ಮಾಡಬೇಕು ಅಲ್ಲಿ ರಷ್ಯನ್ ಡ್ಯಾನ್ಸರ್ ಇರಬೇಕು. ಇದು ಅವರ ದೊಡ್ಡ ಡ್ರೀಮ್. ಮುಂದಿನ ವರ್ಷ ಮಂಜು ಆ ಪಾರ್ಟಿ ಸೇರಿಕೊಳ್ಳಿ’ ಎಂದರು ಸುದೀಪ್. ಈ ಮಾತನ್ನು ಕೇಳಿ ಎಲ್ಲರಿಗೂ ಅಚ್ಚರಿ ಆಯಿತು.

ಸುದೀಪ್ ಹಾಗೂ ಮಂಜು ಮಧ್ಯೆ ಒಳ್ಳೆಯ ಬಾಂಧವ್ಯ ಇದೆ. ಇಬ್ಬರೂ ‘ಮ್ಯಾಕ್ಸ್’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದಾರೆ. ಅಲ್ಲದೆ, ಇವರು ಸಾಕಷ್ಟು ಪಾರ್ಟಿಗಳನ್ನು ಒಟ್ಟಾಗಿ ಮಾಡಿದ್ದಾರೆ. ಹೀಗಾಗಿ, ಸುದೀಪ್ ಅವರು ಮಂಜು ಬಗ್ಗೆ ವಿಶೇಷ ಕಾಳಜಿ ತೋರಿಸುತ್ತಾರೆ. ಅವರು ದಾರಿ ತಪ್ಪಿದಾಗ ಹೆಚ್ಚು ಕಿವಿಮಾತು ಹೇಳಿದ್ದು ಇದೇ ಸುದೀಪ್.

ಇದನ್ನೂ ಓದಿ: ತ್ರಿವಿಕ್ರಂನೇ ಭವ್ಯಾಗೆ ಗಿಫ್ಟ್ ಆಗಿ ಕೊಟ್ಟ ಸುದೀಪ್; ಜೊತೆಗೆ ಸಿಕ್ತು ಒಂದು ಎಚ್ಚರಿಕೆ

ಮಂಜು ಅವರು ‘ಮ್ಯಾಕ್ಸ್’ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಅವರು ದೊಡ್ಮನೆ ಒಳಗೆ ಇರುವಾಗಲೇ ಈ ಸಿನಿಮಾ ರಿಲೀಸ್ ಆಗಿ ಯಶಸ್ಸು ಕಂಡಿದೆ. ಈ ಬಗ್ಗೆ ಅವರಿಗೆ ಖುಷಿಯೂ ಇದೆ, ಬೇಸರವೂ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:49 am, Mon, 30 December 24

ಖಾಸಗಿ ಬಸ್​​ಗಳ ನಡುವೆ ರೇಸ್​​: ಕೂದಲೆಳೆ ಅಂತರದಲ್ಲಿ ತಪ್ಪಿದ ದೊಡ್ಡ ಅನಾಹುತ
ಖಾಸಗಿ ಬಸ್​​ಗಳ ನಡುವೆ ರೇಸ್​​: ಕೂದಲೆಳೆ ಅಂತರದಲ್ಲಿ ತಪ್ಪಿದ ದೊಡ್ಡ ಅನಾಹುತ
ಕೇರಳ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಡಿಸಿಎಂ ಡಿಕೆ ಶಿವಕುಮಾರ್
ಕೇರಳ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಡಿಸಿಎಂ ಡಿಕೆ ಶಿವಕುಮಾರ್
ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ತೆಲಂಗಾಣದ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯ ಮೇಲೆ ವಾರ್ಡನ್ ದರ್ಪ
ತೆಲಂಗಾಣದ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯ ಮೇಲೆ ವಾರ್ಡನ್ ದರ್ಪ
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?