AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ನಿರೂಪಣೆಗೆ ಸುದೀಪ್ ಗೈರು; ಈ ವಾರದ ಎಲಿಮಿನೇಷನ್ ಗತಿ ಏನು?

ತಾಯಿಯ ನಿಧನದಿಂದಾಗಿ ಕಿಚ್ಚ ಸುದೀಪ್ ಅವರು ಬಿಗ್ ಬಾಸ್ ಕನ್ನಡಕ್ಕೆ ಈ ವಾರ ಅವರು ಹಾಜರಾಗುತ್ತಿಲ್ಲ. ಆದರೂ, ಎಲಿಮಿನೇಷನ್ ಪ್ರಕ್ರಿಯೆ ಮುಂದುವರಿಯುವ ಸಾಧ್ಯತೆ ಇದೆ. ಈ ವಾರದ ಎಪಿಸೋಡ್‌ನಲ್ಲಿ ವಿಭಿನ್ನ ಚಟುವಟಿಕೆಗಳ ಮೂಲಕ ಎಲಿಮಿನೇಷನ್ ಮಾಡಲಾಗುವುದು ಎಂದು ನಿರೀಕ್ಷಿಸಲಾಗಿದೆ.

ಬಿಗ್ ಬಾಸ್ ನಿರೂಪಣೆಗೆ ಸುದೀಪ್ ಗೈರು; ಈ ವಾರದ ಎಲಿಮಿನೇಷನ್ ಗತಿ ಏನು?
ಸುದೀಪ್
ರಾಜೇಶ್ ದುಗ್ಗುಮನೆ
|

Updated on: Oct 26, 2024 | 4:51 PM

Share

ಕಿಚ್ಚ ಸುದೀಪ್ ಅವರಿಗೆ ಇತ್ತೀಚೆಗೆ ಮಾತೃವಿಯೋಗ ಆಗಿದೆ. ಅವರ ತಾಯಿ ಸರೋಜಾ ಅವರು ವಯೋ ಸಹಜ ಕಾಯಿಲೆಯಿಂದ ನಿಧನ ಹೊಂದಿದ್ದಾರೆ. ಈ ನೋವಿನಿಂದ ಕಿಚ್ಚ ಸುದೀಪ್ ಅವರು ಇನ್ನೂ ಹೊರ ಬಂದಿಲ್ಲ. ಕಳೆದ ಭಾನುವಾರದ ಎಪಿಸೋಡ್​ ಶೂಟ್ ಆಗಿರಲಿಲ್ಲ. ಈ ಕಾರಣಕ್ಕೆ ಶನಿವಾರ ಶೂಟ್ ಆದ ಎಪಿಸೋಡ್​ನ ಭಾನುವಾರವೂ ಪ್ರಸಾರ ಮಾಡಲಾಗಿತ್ತು. ಈ ವಾರ ಸುದೀಪ್ ಬರುತ್ತಿಲ್ಲ. ಹಾಗಾದರೆ ಎಲಿಮಿನೇಷನ್ ನಡೆಯುವುದಿಲ್ಲವೇ? ಅದಕ್ಕೆ ಈ ಸ್ಟೋರಿಯಲ್ಲಿದೆ ಉತ್ತರ.

ಸುದೀಪ್ ಅವರು ಬಿಗ್ ಬಾಸ್ ಎಪಿಸೋಡ್​ನ ತಪ್ಪಿಸಿದ್ದು ತುಂಬಾನೇ ಕಡಿಮೆ. ಕೊವಿಡ್ ಸಂದರ್ಭದಲ್ಲಿ ಅವರಿಗೆ ಅನಾರೋಗ್ಯ ಆದಾಗ ಅವರು ಬಿಗ್ ಬಾಸ್ ನಿರೂಪಣೆ ಮಿಸ್ ಮಾಡಿಕೊಂಡಿದ್ದರು. ಕಳೆದ ವರ್ಷವೂ ಅನಿವಾರ್ಯವಾಗಿ ಅವರು ಎಪಿಸೋಡ್​ನ ಮಿಸ್ ಮಾಡಿಕೊಳ್ಳಬೇಕಾಯಿತು. ಆ ಸಂದರ್ಭದಲ್ಲಿ ಬೇರೆ ಕಲಾವಿದರನ್ನು ಬಿಗ್ ಬಾಸ್​ಗೆ ಕಳುಹಿಸಿ ಎಪಿಸೋಡ್ ನಡೆಸಿಕೊಡಲಾಗಿತ್ತು.

ಈ ಬಾರಿ ಯೋಗರಾಜ್ ಭಟ್ ಬಂದಿದ್ದಾರೆ. ಅದೇ ರೀತಿ ಸೃಜನ್ ಲೋಕೇಶ್ ಕೂಡ ಅತಿಥಿಯಾಗಿ ದೊಡ್ಮನೆಗೆ ಬರುತ್ತಾರೆ ಎಂದು ಹೇಳಲಾಗುತ್ತಿದೆ. ಈ ಎಪಿಸೋಡ್ ಭಾನುವಾರ ಪ್ರಸಾರ ಕಾಣುವ ಸಾಧ್ಯತೆ ಇದೆ. ಸದ್ಯ ಯೋಗರಾಜ್ ಭಟ್ ಅವರು ದೊಡ್ಮನೆಯಲ್ಲಿ ಸಖತ್ ಮನರಂಜನೆ ನೀಡುತ್ತಿದ್ದಾರೆ. ಇದಕ್ಕೆ ಸಂಬಂಧಿಸಿದ ಪ್ರೋಮೋಗಳನ್ನು ರಿಲೀಸ್ ಮಾಡಲಾಗುತ್ತಿದೆ.

‘ಬಿಗ್ ಬಾಸ್​’ನಲ್ಲಿ ಪ್ರತಿ ವಾರವೂ ಎಲಿಮಿನೇಷನ್ ನಡೆದೇ ನಡೆಯುತ್ತದೆ. ಕೆಲವೇ ಕೆಲವು ಸಂದರ್ಭಗಳನ್ನು ಹೊರತಪಡಿಸಿ ಪ್ರತಿ ವಾರವೂ ಎಲಿಮಿನೇಷನ್ ಇರುತ್ತದೆ. ಈ ವಾರ ಸುದೀಪ್ ಬರದೇ ಇದ್ದರೂ ಎಲಿಮಿನೇಷನ್ ನಡೆಯುತ್ತದೆ ಎನ್ನಲಾಗಿದೆ. ಇದಕ್ಕೆ ಕಾರಣವೂ ಇದೆ.

ಇದನ್ನೂ ಓದಿ: ಬಿಗ್ ಬಾಸ್ ಮನೆಯಲ್ಲಿ ನಿಷ್ಪ್ರಯೋಜಕ ವ್ಯಕ್ತಿ ಯಾರು? ಕೇಳಿಬಂತು ಐಶ್ವರ್ಯಾ, ಮಾನಸಾ ಹೆಸರು

ಬಿಗ್ ಬಾಸ್ ಆರಂಭ ಆಗಿ ತಿಂಗಳು ಕಳೆದರೂ ಸರಿಯಾಗಿ ಎಲಿಮಿನೇಷನ್ ಪ್ರಕ್ರಿಯೆ ನಡೆದಿದ್ದು ಒಂದು ಬಾರಿ ಮಾತ್ರ. ಯಮುನಾ ಶ್ರೀನಿಧಿ ಅವರು ಎಲಿಮಿನೇಟ್ ಆದರು. ಆ ಬಳಿಕ ಜಗದೀಶ್ ಹಾಗೂ ರಂಜಿತ್ ಕಿರಿಕ್ ಮಾಡಿಕೊಂಡು ಎಲಿಮಿನೇಟ್ ಆದರು. ಈ ವಾರ ನಾನಾ ರೀತಿಯ ಚಟುವಟಿಕೆ ನೀಡಿ ಎಲಿಮಿನೇಷನ್ ಪ್ರಕ್ರಿಯೆ ನಡೆಸಬಹುದು ಎನ್ನಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಾಹುಲ್ ಗಾಂಧಿಗೆ ಕಪ್ಪು ಬಾವುಟ ತೋರಿದ ಬಿಜೆಪಿ ಕಾರ್ಯಕರ್ತರು
ರಾಹುಲ್ ಗಾಂಧಿಗೆ ಕಪ್ಪು ಬಾವುಟ ತೋರಿದ ಬಿಜೆಪಿ ಕಾರ್ಯಕರ್ತರು
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ