ಬಿಗ್ ಬಾಸ್ ನಿರೂಪಣೆಗೆ ಸುದೀಪ್ ಗೈರು; ಈ ವಾರದ ಎಲಿಮಿನೇಷನ್ ಗತಿ ಏನು?

ತಾಯಿಯ ನಿಧನದಿಂದಾಗಿ ಕಿಚ್ಚ ಸುದೀಪ್ ಅವರು ಬಿಗ್ ಬಾಸ್ ಕನ್ನಡಕ್ಕೆ ಈ ವಾರ ಅವರು ಹಾಜರಾಗುತ್ತಿಲ್ಲ. ಆದರೂ, ಎಲಿಮಿನೇಷನ್ ಪ್ರಕ್ರಿಯೆ ಮುಂದುವರಿಯುವ ಸಾಧ್ಯತೆ ಇದೆ. ಈ ವಾರದ ಎಪಿಸೋಡ್‌ನಲ್ಲಿ ವಿಭಿನ್ನ ಚಟುವಟಿಕೆಗಳ ಮೂಲಕ ಎಲಿಮಿನೇಷನ್ ಮಾಡಲಾಗುವುದು ಎಂದು ನಿರೀಕ್ಷಿಸಲಾಗಿದೆ.

ಬಿಗ್ ಬಾಸ್ ನಿರೂಪಣೆಗೆ ಸುದೀಪ್ ಗೈರು; ಈ ವಾರದ ಎಲಿಮಿನೇಷನ್ ಗತಿ ಏನು?
ಸುದೀಪ್

Updated on: Oct 26, 2024 | 4:51 PM

ಕಿಚ್ಚ ಸುದೀಪ್ ಅವರಿಗೆ ಇತ್ತೀಚೆಗೆ ಮಾತೃವಿಯೋಗ ಆಗಿದೆ. ಅವರ ತಾಯಿ ಸರೋಜಾ ಅವರು ವಯೋ ಸಹಜ ಕಾಯಿಲೆಯಿಂದ ನಿಧನ ಹೊಂದಿದ್ದಾರೆ. ಈ ನೋವಿನಿಂದ ಕಿಚ್ಚ ಸುದೀಪ್ ಅವರು ಇನ್ನೂ ಹೊರ ಬಂದಿಲ್ಲ. ಕಳೆದ ಭಾನುವಾರದ ಎಪಿಸೋಡ್​ ಶೂಟ್ ಆಗಿರಲಿಲ್ಲ. ಈ ಕಾರಣಕ್ಕೆ ಶನಿವಾರ ಶೂಟ್ ಆದ ಎಪಿಸೋಡ್​ನ ಭಾನುವಾರವೂ ಪ್ರಸಾರ ಮಾಡಲಾಗಿತ್ತು. ಈ ವಾರ ಸುದೀಪ್ ಬರುತ್ತಿಲ್ಲ. ಹಾಗಾದರೆ ಎಲಿಮಿನೇಷನ್ ನಡೆಯುವುದಿಲ್ಲವೇ? ಅದಕ್ಕೆ ಈ ಸ್ಟೋರಿಯಲ್ಲಿದೆ ಉತ್ತರ.

ಸುದೀಪ್ ಅವರು ಬಿಗ್ ಬಾಸ್ ಎಪಿಸೋಡ್​ನ ತಪ್ಪಿಸಿದ್ದು ತುಂಬಾನೇ ಕಡಿಮೆ. ಕೊವಿಡ್ ಸಂದರ್ಭದಲ್ಲಿ ಅವರಿಗೆ ಅನಾರೋಗ್ಯ ಆದಾಗ ಅವರು ಬಿಗ್ ಬಾಸ್ ನಿರೂಪಣೆ ಮಿಸ್ ಮಾಡಿಕೊಂಡಿದ್ದರು. ಕಳೆದ ವರ್ಷವೂ ಅನಿವಾರ್ಯವಾಗಿ ಅವರು ಎಪಿಸೋಡ್​ನ ಮಿಸ್ ಮಾಡಿಕೊಳ್ಳಬೇಕಾಯಿತು. ಆ ಸಂದರ್ಭದಲ್ಲಿ ಬೇರೆ ಕಲಾವಿದರನ್ನು ಬಿಗ್ ಬಾಸ್​ಗೆ ಕಳುಹಿಸಿ ಎಪಿಸೋಡ್ ನಡೆಸಿಕೊಡಲಾಗಿತ್ತು.

ಈ ಬಾರಿ ಯೋಗರಾಜ್ ಭಟ್ ಬಂದಿದ್ದಾರೆ. ಅದೇ ರೀತಿ ಸೃಜನ್ ಲೋಕೇಶ್ ಕೂಡ ಅತಿಥಿಯಾಗಿ ದೊಡ್ಮನೆಗೆ ಬರುತ್ತಾರೆ ಎಂದು ಹೇಳಲಾಗುತ್ತಿದೆ. ಈ ಎಪಿಸೋಡ್ ಭಾನುವಾರ ಪ್ರಸಾರ ಕಾಣುವ ಸಾಧ್ಯತೆ ಇದೆ. ಸದ್ಯ ಯೋಗರಾಜ್ ಭಟ್ ಅವರು ದೊಡ್ಮನೆಯಲ್ಲಿ ಸಖತ್ ಮನರಂಜನೆ ನೀಡುತ್ತಿದ್ದಾರೆ. ಇದಕ್ಕೆ ಸಂಬಂಧಿಸಿದ ಪ್ರೋಮೋಗಳನ್ನು ರಿಲೀಸ್ ಮಾಡಲಾಗುತ್ತಿದೆ.

‘ಬಿಗ್ ಬಾಸ್​’ನಲ್ಲಿ ಪ್ರತಿ ವಾರವೂ ಎಲಿಮಿನೇಷನ್ ನಡೆದೇ ನಡೆಯುತ್ತದೆ. ಕೆಲವೇ ಕೆಲವು ಸಂದರ್ಭಗಳನ್ನು ಹೊರತಪಡಿಸಿ ಪ್ರತಿ ವಾರವೂ ಎಲಿಮಿನೇಷನ್ ಇರುತ್ತದೆ. ಈ ವಾರ ಸುದೀಪ್ ಬರದೇ ಇದ್ದರೂ ಎಲಿಮಿನೇಷನ್ ನಡೆಯುತ್ತದೆ ಎನ್ನಲಾಗಿದೆ. ಇದಕ್ಕೆ ಕಾರಣವೂ ಇದೆ.

ಇದನ್ನೂ ಓದಿ: ಬಿಗ್ ಬಾಸ್ ಮನೆಯಲ್ಲಿ ನಿಷ್ಪ್ರಯೋಜಕ ವ್ಯಕ್ತಿ ಯಾರು? ಕೇಳಿಬಂತು ಐಶ್ವರ್ಯಾ, ಮಾನಸಾ ಹೆಸರು

ಬಿಗ್ ಬಾಸ್ ಆರಂಭ ಆಗಿ ತಿಂಗಳು ಕಳೆದರೂ ಸರಿಯಾಗಿ ಎಲಿಮಿನೇಷನ್ ಪ್ರಕ್ರಿಯೆ ನಡೆದಿದ್ದು ಒಂದು ಬಾರಿ ಮಾತ್ರ. ಯಮುನಾ ಶ್ರೀನಿಧಿ ಅವರು ಎಲಿಮಿನೇಟ್ ಆದರು. ಆ ಬಳಿಕ ಜಗದೀಶ್ ಹಾಗೂ ರಂಜಿತ್ ಕಿರಿಕ್ ಮಾಡಿಕೊಂಡು ಎಲಿಮಿನೇಟ್ ಆದರು. ಈ ವಾರ ನಾನಾ ರೀತಿಯ ಚಟುವಟಿಕೆ ನೀಡಿ ಎಲಿಮಿನೇಷನ್ ಪ್ರಕ್ರಿಯೆ ನಡೆಸಬಹುದು ಎನ್ನಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us