AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬನಿಯನ್ ಹಾಕಿದರೂ ರಾಜನಂತೆ ಬಾಳುತ್ತಿರುವ ಗಿಲ್ಲಿ ನಟ: ಗೆಲುವಿನ ಸೂಚನೆ ಕೊಟ್ಟ ಸುದೀಪ್

ಬಿಗ್ ಬಾಸ್ ವಿನ್ನರ್ ಆದ ಪ್ರಥಮ್ ಮತ್ತು ಹನುಮಂತನ ರೀತಿ ಗಿಲ್ಲಿ ನಟ ಅವರು ಕೂಡ ಆಡುತ್ತಿದ್ದಾರೆ. ಅದನ್ನು ಕಿಚ್ಚ ಸುದೀಪ್ ಅವರು ಗಮನಿಸಿ ಹೇಳಿದ್ದಾರೆ. ಆ ಮೂಲಕ ಅವರು ದೊಡ್ಡ ಸೂಚನೆ ಕೊಟ್ಟಿದ್ದಾರೆ. ಈ ಹಿಂದಿನ ಎಲ್ಲ ಸೀಸನ್ ಸಂಚಿಕೆಗಳನ್ನು ನೋಡಿಕೊಂಡು ಬಂದು ಗಿಲ್ಲಿ ನಟ ಅವರು ಚೆನ್ನಾಗಿ ಆಟ ಆಡುತ್ತಿದ್ದಾರೆ.

ಬನಿಯನ್ ಹಾಕಿದರೂ ರಾಜನಂತೆ ಬಾಳುತ್ತಿರುವ ಗಿಲ್ಲಿ ನಟ: ಗೆಲುವಿನ ಸೂಚನೆ ಕೊಟ್ಟ ಸುದೀಪ್
Gilli Nata, Kichcha Sudeep
ಮದನ್​ ಕುಮಾರ್​
|

Updated on: Jan 04, 2026 | 10:43 AM

Share

ಈ ಬಾರಿ ಗಿಲ್ಲಿ ನಟ ಅವರೇ ಬಿಗ್ ಬಾಸ್ (Bigg Boss Kannada Season 12) ಟ್ರೋಫಿ ಗೆಲ್ಲುತ್ತಾರೆ ಎಂಬ ಅಭಿಪ್ರಾಯ ಬಹುತೇಕರಿಗೆ ಇದೆ. ಆ ಅಭಿಪ್ರಾಯಕ್ಕೆ ತಕ್ಕಂತೆಯೇ ಗಿಲ್ಲಿ ಅವರು ಆಟ ಆಡುತ್ತಿದ್ದಾರೆ. ಅನೇಕ ಸೆಲೆಬ್ರಿಟಿಗಳು ಕೂಡ ಈಗಾಗಲೇ ಗಿಲ್ಲಿ (Gilli Nata) ಅವರ ಆಟವನ್ನು ಮೆಚ್ಚಿಕೊಂಡಿದ್ದಾರೆ. ಬಿಗ್ ಬಾಸ್ ಮಾಜಿ ಸ್ಪರ್ಧಿಗಳಿಗೂ ಗಿಲ್ಲಿ ಆಟ ಇಷ್ಟ ಆಗುತ್ತಿದೆ. ಇನ್ನೇನು ಕೆಲವೇ ದಿನಗಳಲ್ಲಿ ‘ಬಿಗ್​ ಬಾಸ್ ಕನ್ನಡ ಸೀಸನ್ 12’ ಫಿನಾಲೆ ಬರಲಿದೆ. ಗಿಲ್ಲಿಯೇ ಗೆಲ್ಲಬಹುದು ಎಂಬ ಸೂಚನೆಯನ್ನು ಕಿಚ್ಚ ಸುದೀಪ್ (Kichcha Sudeep) ಅವರು ಪರೋಕ್ಷವಾಗಿ ನೀಡಿದ್ದಾರೆ. ಶನಿವಾರದ (ಜನವರಿ 3) ಬಿಗ್ ಬಾಸ್ ಸಂಚಿಕೆಯಲ್ಲಿ ಈ ರೀತಿಯ ಮಾತುಕತೆ ನಡೆದಿದೆ.

ಕಳೆದ ವಾರ ಗಿಲ್ಲಿ ನಟ ಅವರು ಕ್ಯಾಪ್ಟನ್ ಆಗಿದ್ದರು. ಅವರು ಕ್ಯಾಪ್ಟೆನ್ಸಿ ಮಾಡಿದ್ದು ಸರಿ ಇಲ್ಲ ಎಂದು ಇಡೀ ಮನೆಯ ಸದಸ್ಯರು ಆರೋಪ ಮಾಡಿದ್ದರು. ಆದರೆ ವಾರಾಂತ್ಯದ ಕಿಚ್ಚನ ಪಂಚಾಯ್ತಿಯಲ್ಲಿ ಬೇರೆಯದೇ ಆಯಾಮ ಬಂತು. ಗಿಲ್ಲಿ ಹೇಳುವುದಕ್ಕೂ ಮುನ್ನವೇ ಎಲ್ಲ ಸ್ಪರ್ಧಿಗಳು ಬಿಗ್ ಬಾಸ್ ಮನೆಯ ಕೆಲಸವನ್ನು ಮಾಡಿ ಮುಗಿಸಿದ್ದರು. ಅದರಿಂದ ಗಿಲ್ಲಿಗೆ ಪ್ಲಸ್ ಆಯಿತು. ಬೇರೆ ಎಲ್ಲರಿಗಿಂತ ಗಿಲ್ಲಿ ಅವರೇ ಬಿಗ್ ಬಾಸ್ ಆಟವನ್ನು ಚೆನ್ನಾಗಿ ಅರ್ಥ ಮಾಡಿಕೊಂಡಿದ್ದಾರೆ ಎಂಬುದನ್ನು ಸುದೀಪ್ ಒತ್ತಿ ಹೇಳಿದರು.

ಈ ಹಿಂದೆ ಪ್ರಥಮ್ ಮತ್ತು ಹನುಮಂತ ಅವರು ‘ಬಿಗ್ ಬಾಸ್’ ಟ್ರೋಫಿ ಗೆದ್ದಿದ್ದರು. ಈಗ ಗಿಲ್ಲಿ ನಟ ಆಡುತ್ತಿರುವ ಆಟದಲ್ಲಿ ಕೂಡ ಪ್ರಥಮ್ ಮತ್ತು ಹನುಮಂತ ಅವರ ಛಾಯೆ ಕಾಣುತ್ತಿದೆ. ಅದನ್ನು ಕಿಚ್ಚ ಸುದೀಪ್ ಅವರು ಗಮನಿಸಿದ್ದಾರೆ. ‘ಗಿಲ್ಲಿ ನಟ ಬಿಗ್ ಬಾಸ್ ಅರ್ಥ ಮಾಡಿಕೊಂಡಷ್ಟು ಚೆನ್ನಾಗಿ ಬೇರೆ ಯಾರೂ ಅರ್ಥ ಮಾಡಿಕೊಂಡಿಲ್ಲ’ ಎಂದು ಸುದೀಪ್ ಅವರು ಹೇಳಿದ್ದಾರೆ.

ಗಿಲ್ಲಿ ನಟ ಅವರು ಈ ಹಿಂದಿನ ಎಲ್ಲ ಬಿಗ್ ಬಾಸ್ ಸೀಸನ್​​ಗಳನ್ನು ನೋಡಿಕೊಂಡು ಬಂದಿದ್ದಾರೆ. ಪ್ರಥಮ್ ಮತ್ತು ಹನುಮಂತ ವಿನ್ ಆದ ಸೀಸನ್​​ಗಳನ್ನು ಹೆಚ್ಚು ಗಮನಿಸಿಕೊಂಡು ಬಂದಿದ್ದಾರೆ. ಯಾವುದನ್ನು ಮಾಡಬೇಕು, ಯಾವುದನ್ನು ಮಾಡಬಾರದು ಎಂಬುದನ್ನು ತಿಳಿದುಕೊಂಡು ಬಂದಿದ್ದಾರೆ. ಈ ಎಲ್ಲ ವಿಷಯವನ್ನು ಅವರು ಸುದೀಪ್ ಎದುರು ಬಾಯಿಬಿಟ್ಟಿದ್ದಾರೆ.

ಇದನ್ನೂ ಓದಿ: ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಫೀಲಿಂಗ್ಸ್: ಓಪನ್ ಆಗಿ ಹೇಳಿದ ಕಿಚ್ಚ ಸುದೀಪ್

‘ಗಿಲ್ಲಿ ಪಾತ್ರದಲ್ಲಿ ಒಂದು ಸ್ವಲ್ಪ ಹನುಮಂತ, ಒಂದು ಸ್ವಲ್ಪ ಪ್ರಥಮ್ ಇದ್ದಾರೆ. ಎಷ್ಟು ಸಲ ನಾನು ಈ ಸುಳಿವನ್ನು ಪರೋಕ್ಷವಾಗಿ ಕೊಟ್ಟಿದ್ದೆ. ಗಿಲ್ಲಿ ರೀತಿ ತಯಾರಿ ಮಾಡಿಕೊಂಡು ಬರುವುದು ಖಂಡಿತಾ ತಪ್ಪಲ್ಲ. ಎಲ್ಲ ಸೀಸನ್ ನೋಡಿಕೊಂಡು ಬಂದಿದ್ದಾರೆ. ಗಿಲ್ಲಿ ಹಾಕಿರುವುದು ಬನಿಯನ್ ಇರಬಹುದು. ಆದರೆ ಬಾಳುತ್ತಿರುವ ಬಾಳು ರಾಜಂದು’ ಎಂದು ಸುದೀಪ್ ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!