AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಮನೆಯ ಸ್ಪರ್ಧಿಗಳಿಗೆ ಸಿಕ್ಕಿದೆ ಕಿಚ್ಚ ಸುದೀಪ್ ಮಾಡಿದ ಅಡುಗೆ

ಸುದೀಪ್ ಅವರು ಬಿಗ್ ಬಾಸ್ ಸ್ಪರ್ಧಿಗಳಿಗೂ ತಮ್ಮ ಕೈರುಚಿ ತೋರಿಸಿದ್ದಾರೆ. ಈ ಮೊದಲು ಹಲವು ಸೀಸನ್​ಗಳಲ್ಲಿ ಅವರು ಸ್ಪರ್ಧಿಗಳಿಗೆ ಅಡುಗೆ ಮಾಡಿ ಕೊಟ್ಟಿದ್ದರು.

ಬಿಗ್ ಬಾಸ್ ಮನೆಯ ಸ್ಪರ್ಧಿಗಳಿಗೆ ಸಿಕ್ಕಿದೆ ಕಿಚ್ಚ ಸುದೀಪ್ ಮಾಡಿದ ಅಡುಗೆ
ಸುದೀಪ್
ರಾಜೇಶ್ ದುಗ್ಗುಮನೆ
|

Updated on: Dec 15, 2023 | 11:02 AM

Share

ಬಿಗ್ ಬಾಸ್ ಸ್ಪರ್ಧಿಗಳನ್ನು ಕಿಚ್ಚ ಸುದೀಪ್ (Kichcha Sudeep) ಅವರು ಮನೆಯವರಂತೆ ಪರಿಗಣಿಸುತ್ತಾರೆ. ಪ್ರತಿ ಹಂತದಲ್ಲೂ ಅವರ ಬಗ್ಗೆ ಕೇರ್ ಮಾಡುತ್ತಾರೆ. ಬಿಗ್​ ಬಾಸ್​ನ ಪ್ರತಿ ಸೀಸನ್​ನಲ್ಲಿ ಕಿಚ್ಚ ಸುದೀಪ್ ಅವರು ಸ್ಪರ್ಧಿಗಳಿಗೆ ಅಡುಗೆ ಮಾಡಿ ಕಳುಹಿಸುತ್ತಾರೆ. ಈ ಬಾರಿಯೂ ಅದು ಮುಂದುವರಿದಿದೆ. ಸುದೀಪ್ ಮಾಡಿದ ಅಡುಗೆ ಬಿಗ್ ಬಾಸ್ ಮನೆ ಸೇರಿದೆ ಎಂದು ವರದಿ ಆಗಿದೆ. ಇಂದಿನ (ಡಿಸೆಂಬರ್ 15) ಎಪಿಸೋಡ್​ನಲ್ಲಿ ಇದು ಪ್ರಸಾರ ಆಗುವ ಸಾಧ್ಯತೆ ಇದೆ.

ಬಿಗ್ ಬಾಸ್​ನಲ್ಲಿ ಇಂದು ಪ್ರೋಮೋ ಒಂದನ್ನು ಬಿಡುಗಡೆ ಮಾಡಲಾಗಿದೆ. ಪ್ರತಾಪ್ ಅವರು ಮಧ್ಯಾಹ್ನಕ್ಕೆ ಮುದ್ದೆ ಮಾಡಿದ್ದರು. ಆದರೆ ರಾತ್ರಿಗೆ ಗ್ಯಾಸ್ ಬರಲೇ ಇಲ್ಲ. ಇದು ಪ್ರತಾಪ್ ಅವರದ್ದೇ ತಪ್ಪು ಎಂದು ಎಲ್ಲರೂ ಕೂಗಾಡಿದ್ದಾರೆ. ಆದರೆ, ಅಲ್ಲಿ ಅಸಲಿ ಕಥೆ ಬೇರೆಯದೇ ಇದೆ ಎನ್ನಲಾಗುತ್ತಿದೆ. ಸುದೀಪ್ ಮಾಡಿರೋ ಅಡುಗೆ ಬರುವುದರಲ್ಲಿದೆ. ಹೀಗಾಗಿ, ಗ್ಯಾಸ್ ಹಚ್ಚೋಕೆ ಬಿಗ್ ಬಾಸ್ ಅವಕಾಶ ನೀಡಿಲ್ಲ.

ಸುದೀಪ್ ಅವರು ನಟನೆಯ ಜೊತೆಗೆ ಕ್ರಿಕೆಟ್ ಹಾಗೂ ಅಡುಗೆಯ ಬಗ್ಗೆ ಆಸಕ್ತಿ ಹೊಂದಿದ್ದಾರೆ. ತಮ್ಮ ಮನೆಯ ಟೆರೇಸ್​ನಲ್ಲಿ ವಿಶೇಷ ಕಿಚನ್​​ನ ಅವರು ಹೊಂದಿದ್ದಾರೆ. ಮನೆಗೆ ಬರುವ ಗೆಳೆಯರಿಗೆ, ಆಪ್ತರಿಗೆ ಅವರು ಅಡುಗೆ ಮಾಡಿ ಬಡಿಸುತ್ತಾರೆ. ಈಗ ಅವರು ಬಿಗ್ ಬಾಸ್ ಸ್ಪರ್ಧಿಗಳಿಗೂ ತಮ್ಮ ಕೈರುಚಿ ತೋರಿಸಿದ್ದಾರೆ. ಈ ಮೊದಲು ಹಲವು ಸೀಸನ್​ಗಳಲ್ಲಿ ಅವರು ಸ್ಪರ್ಧಿಗಳಿಗೆ ಅಡುಗೆ ಮಾಡಿ ಕೊಟ್ಟಿದ್ದರು.

ಇದನ್ನೂ ಓದಿ: ಬಿಗ್ ಬಾಸ್​ನಲ್ಲಿ ನಡೆಯುತ್ತಿದೆ ಬ್ರೋ ಕೋಡ್​; ವಿನಯ್​ನ ಸೇವ್​ ಮಾಡೋದೇ ಉದ್ದೇಶ?

ಕನ್ನಡ ಬಿಗ್ ಬಾಸ್ ಟಿವಿ ಸೀಸನ್, ಒಟಿಟಿ ಸೀಸನ್ ಹಾಗೂ ಒಂದು ಮಿನಿ ಸೀಸನ್​ನ ಸುದೀಪ್ ನಡೆಸಿಕೊಟ್ಟಿದ್ದಾರೆ. ಸದ್ಯ 10ನೇ ಸೀಸನ್​ ಅವರ ನಿರೂಪಣೆಯಲ್ಲೇ ಮೂಡಿಬರುತ್ತಿದೆ.. ಪ್ರತಿ ಪರಿಸ್ಥಿತಿಯನ್ನು ಅವರು ಸಮರ್ಥವಾಗಿ ನಿರ್ವಹಿಸುತ್ತಾರೆ. ಈ ಕಾರಣಕ್ಕೆ ಸುದೀಪ್ ಅನೇಕರಿಗೆ ಇಷ್ಟ ಆಗುತ್ತಾರೆ. ಈ ಬಾರಿಯ ಬಿಗ್ ಬಾಸ್ ಜಿಯೋ ಸಿನಿಮಾ ಹಾಗೂ ಕಲರ್ಸ್ ಕನ್ನಡದಲ್ಲಿ ಪ್ರಸಾರ ಆಗುತ್ತಿದೆ. 24 ಗಂಟೆ ಜಿಯೋ ಸಿನಿಮಾದಲ್ಲಿ ಉಚಿತವಾಗಿ ಲೈವ್ ನೋಡಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು