AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಗಿಯಿತು ಬಿಗ್ ಬಾಸ್ ಕನ್ನಡ ಸೀಸನ್ 12: ಕಿಚ್ಚ ಸುದೀಪ್ ಕೊನೆಯ ಮಾತು ಇದು

ಸತತ 12 ಸೀಸನ್​​ಗಳಲ್ಲಿ ‘ಬಿಗ್ ಬಾಸ್ ಕನ್ನಡ’ ನಿರೂಪಣೆ ಮಾಡಿದ ಖ್ಯಾತಿ ಕಿಚ್ಚ ಸುದೀಪ್ ಅವರಿಗೆ ಸಲ್ಲುತ್ತದೆ. 12ನೇ ಸೀಸನ್ ಮುಕ್ತಾಯ ಆಗುತ್ತಿರುವ ಹೊತ್ತಿನಲ್ಲಿ ಸುದೀಪ್ ಅವರು ಈ ಪೋಸ್ಟ್ ಹಂಚಿಕೊಂಡಿದ್ದಾರೆ. ಎಲ್ಲ ಸ್ಪರ್ಧಿಗಳಿಗೆ ಮತ್ತು ವಿನ್ನರ್​ಗೆ ಸುದೀಪ್ ಅವರು ಅಭಿನಂದನೆ ತಿಳಿಸಿದ್ದಾರೆ. ಅವರ ಪೋಸ್ಟ್ ವೈರಲ್ ಆಗಿದೆ.

ಮುಗಿಯಿತು ಬಿಗ್ ಬಾಸ್ ಕನ್ನಡ ಸೀಸನ್ 12: ಕಿಚ್ಚ ಸುದೀಪ್ ಕೊನೆಯ ಮಾತು ಇದು
Bigg Boss Kannada, Kichcha Sudeep
ಮದನ್​ ಕುಮಾರ್​
|

Updated on: Jan 18, 2026 | 12:52 PM

Share

‘ಬಿಗ್ ಬಾಸ್ ಕನ್ನಡ ಸೀಸನ್ 12’ (BBK 12) ಇಂದು (ಜನವರಿ 18) ಮುಕ್ತಾಯ ಆಗುತ್ತಿದೆ. 112 ದಿನಗಳ ಕಾಲ ನಡೆದ ಈ ಶೋ ತುಂಬಾ ಜನಪ್ರಿಯತೆ ಪಡದುಕೊಂಡಿದೆ. ಕಿಚ್ಚ ಸುದೀಪ್ (Kichcha Sudeep) ಅವರ ನಿರೂಪಣೆಯಲ್ಲಿ ವೀಕ್ಷಕರಿಗೆ ಸಖತ್ ಮನರಂಜನೆ ಸಿಕ್ಕಿದೆ. ಒಟ್ಟು 24 ಸ್ಪರ್ಧಿಗಳು ಈ ಬಾರಿ ಬಿಗ್ ಬಾಸ್ ಮನೆಗೆ ಬಂದು ಹೋಗಿದ್ದಾರೆ. ಅಂತಿಮವಾಗಿ ಗಿಲ್ಲಿ ನಟ (Gilli Nata), ಕಾವ್ಯಾ ಶೈವ, ಅಶ್ವಿನಿ ಗೌಡ, ಧನುಷ್, ಮ್ಯೂಟೆಂಟ್ ರಘು, ರಕ್ಷಿತಾ ಶೆಟ್ಟಿ ಅವರು ಫಿನಾಲೆಗೆ ಬಂದಿದ್ದಾರೆ. ಯಾರು ವಿನ್ ಎಂಬುದನ್ನು ಕಿಚ್ಚ ಸುದೀಪ್ ಅವರು ಇಂದು ರಾತ್ರಿ ಘೋಷಿಸಲಿದ್ದಾರೆ. ಅದಕ್ಕೂ ಮುನ್ನ ಅವರು ಈ ಸೀಸನ್ ಬಗ್ಗೆ ತಮ್ಮ ಕೊನೆಯ ಮಾತುಗಳನ್ನು ಹೇಳಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ಕಿಚ್ಚ ಸುದೀಪ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋಗೆ ವಿದಾಯ ಹೇಳಿದ್ದಾರೆ. ‘ಹೀಗೆ.. ಇಂದಿನ ಸೂರ್ಯಾಸ್ತದ ವೇಳೆಗೆ ಬಿಗ್ ಬಾಸ್ ಕನ್ನಡ ಸೀಸನ್ 12 ಮುಕ್ತಾಯ ಆಗುತ್ತದೆ. ಇದು ಗಮನಾರ್ಹ ಸೀಸನ್. ದೃಶ್ಯ ವೈಭವದಿಂದ ಕೂಡಿದ ಈ ಅದ್ಭುತ ಪಯಣವು ಬಿಗ್ ಬಾಸ್ ಪ್ರತಿ ಸೀಸನ್​​ನಲ್ಲಿ ಹೇಗೆ ಬೆಳವಣಿಗೆ ಕಾಣುತ್ತಿದೆ ಎಂಬುದಕ್ಕೆ ಸಾಕ್ಷಿ ಆಗಿದೆ’ ಎಂದು ಕಿಚ್ಚ ಸದೀಪ್ ಅವರು ಹೇಳಿದ್ದಾರೆ.

‘ಶ್ರದ್ಧೆಯಿಂದ ಕಾರ್ಯಕ್ರಮ ವೀಕ್ಷಿಸಿ ಬೆಂಬಲ ನೀಡಿದ ಎಲ್ಲರಿಗೂ ನನ್ನ ಹೃತ್ಪೂರ್ವಕ ಧನ್ಯವಾದಗಳು. ಎಲ್ಲ ಸ್ಪರ್ಧಿಗಳಿಗೆ ಮತ್ತು ವಿಜೇತರಿಗೆ ನನ್ನ ಅಭಿನಂದನೆಗಳು. ಈ ಅಗಾಧವಾದ ಯಶಸ್ಸಿಗಾಗಿ ತಂತ್ರಜ್ಞರ ತಂಡಕ್ಕೆ ನನ್ನ ಕಡೆಯಿಂದ ದೊಡ್ಡ ಅಭಿನಂಧನೆ. ನೀವೆಲ್ಲ ಇಲ್ಲ ಎಂದರೆ ಬಿಗ್ ಬಾಸ್ ಕಾರ್ಯಕ್ರಮವೇ ಇಲ್ಲ’ ಎಂದಿದ್​ದಾರೆ ಕಿಚ್ಚ ಸುದೀಪ್.

‘ಬಿಗ್ ಬಾಸ್ ಕನ್ನಡ ಸೀಸನ್ 13 ಶುರು ಆಗುವ ತನಕ ಬಿಗ್ ಬಾಸ್ ವಿಶ್ರಾಂತಿ ಪಡೆಯಲಿ ಎಂದು ಈ ಸೂರ್ಯಾಸ್ತದ ವೇಳೆಗೆ ನಾವು ಬಾಗಿಲುಗಳನ್ನು ಗೌರವದಿಂದ ಮುಚ್ಚುತ್ತೇನೆ’ ಎಂದು ಕಿಚ್ಚ ಸುದೀಪ್ ಅವರು ಹೇಳಿದ್ದಾರೆ. ಇನ್​ಸ್ಟಾಗ್ರಾಮ್​ನಲ್ಲಿ ಅವರ ಈ ಪೋಸ್ಟ್ ವೈರಲ್ ಆಗಿದೆ. ಕೇವಲ 4 ಗಂಟೆಯಲ್ಲಿ 13 ಸಾವಿರಕ್ಕೂ ಅಧಿಕ ಕಮೆಂಟ್​ಗಳು ಬಂದಿವೆ. ಬಿಗ್ ಬಾಸ್ ಕಾರ್ಯಕ್ರಮಕ್ಕೆ ಎಷ್ಟು ಜನಪ್ರಿಯತೆ ಎಂಬುದಕ್ಕೆ ಇದೇ ಸಾಕ್ಷಿ.

ಇದನ್ನೂ ಓದಿ: Bigg Boss Kannada Winner: ಗಿಲ್ಲಿ ನಟ ಗೆದ್ದಾಯಿತು; ತೀರ್ಪು ನೀಡಿದ ‘ಬಿಗ್ ಬಾಸ್ ಕನ್ನಡ 12’ ವೀಕ್ಷಕರು

ಬಿಗ್ ಬಾಸ್ ನಿರೂಪಣೆ ಮಾಡುವುದು ಅಷ್ಟು ಸುಲಭವಲ್ಲ. ಎಲ್ಲ ರೀತಿಯ ವ್ಯಕ್ತಿತ್ವ ಇರುವ ಸ್ಪರ್ಧಿಗಳು ನಿಭಾಯಿಸಬೇಕು. ಎಷ್ಟೇ ಬ್ಯುಸಿ ಆಗಿದ್ದರೂ ಕೂಡ ಪ್ರತಿ ವಾರ ತಪ್ಪದೇ ವಾರಾಂತ್ಯದ ಸಂಚಿಕೆ ನಡೆಸಿಕೊಡಬೇಕು. ಸೋಶಿಯಲ್ ಮೀಡಿಯಾದಲ್ಲಿ ಬರುವ ಕೆಲವು ಟೀಕೆಗಳನ್ನೂ ಎದುರಿಸಬೇಕು. ಇವೆಲ್ಲವನ್ನೂ ಕಿಚ್ಚ ಸುದೀಪ್ ಅವರು ನಿಭಾಯಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ