AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜೈಲಿನಲ್ಲೂ ಬಿಗ್ ಬಾಸ್ ನೋಡ್ತಾರೆ’: ಈ ಮಾತು ವಿವಾದ ಆಗತ್ತೆ ಎಂದಿದ್ದಕ್ಕೆ ಸುದೀಪ್ ಹೇಳಿದ್ದೇನು?

ಕಿಚ್ಚ ಸುದೀಪ್​ ಅವರು ಸತತ 11ನೇ ಸೀಸನ್​ಗೆ ‘ಬಿಗ್​ ಬಾಸ್​ ಕನ್ನಡ’ ರಿಯಾಲಿಟಿ ಶೋ ನಡೆಸಿಕೊಡುತ್ತಿದ್ದಾರೆ. ಈ ಕಾರ್ಯಕ್ರಮವನ್ನು ಜೈಲಿನ ಒಳಗೆ ಇರುವ ಖೈದಿಗಳು ಕೂಡ ನೋಡುತ್ತಾರೆ. ಆ ಬಗ್ಗೆ ಮಾತನಾಡಿದರೆ ವಿವಾದ ಆಗಬಹುದು ಎಂಬ ಅಭಿಪ್ರಾಯ ಬಂತು. ಆದರೆ ಆ ಮಾತನ್ನು ಕಿಚ್ಚ ಸುದೀಪ್​ ಅವರು ತಳ್ಳಿಹಾಕಿದರು. ಆ ಘಟನೆ ಬಗ್ಗೆ ಇಲ್ಲಿದೆ ಮಾಹಿತಿ..

‘ಜೈಲಿನಲ್ಲೂ ಬಿಗ್ ಬಾಸ್ ನೋಡ್ತಾರೆ’: ಈ ಮಾತು ವಿವಾದ ಆಗತ್ತೆ ಎಂದಿದ್ದಕ್ಕೆ ಸುದೀಪ್ ಹೇಳಿದ್ದೇನು?
ಕಿಚ್ಚ ಸುದೀಪ್
ಮದನ್​ ಕುಮಾರ್​
|

Updated on: Sep 30, 2024 | 5:47 PM

Share

ವಿವಾದಗಳಿಂದಲೇ ಸುದ್ದಿಯಾದ ಚೈತ್ರಾ ಕುಂದಾಪುರ ಅವರ ಈಗ ‘ಬಿಗ್​ ಬಾಸ್ ಕನ್ನಡ ಸೀಸನ್​ 11’ ರಿಯಾಲಿಟಿ ಶೋ ಸ್ಪರ್ಧಿಯಾಗಿ ದೊಡ್ಮನೆಗೆ ಬಂದಿದ್ದಾರೆ. ಮೊದಲ ಸಂಚಿಕೆಯಲ್ಲಿ ಅವರನ್ನು ಸುದೀಪ್​ ಮಾತನಾಡಿಸಿದರು. ತಾವು ಬಿಗ್​ ಬಾಸ್​ ಕಾರ್ಯಕ್ರಮದಲ್ಲಿ ಸ್ಪರ್ಧಿಸಲು ಒಪ್ಪಿಕೊಂಡಿದ್ದು ಹೇಗೆ ಎಂಬುದನ್ನು ಚೈತ್ರಾ ಕುಂದಾಪುರ ವಿವರಿಸಿದರು. ಈ ಮೊದಲು ಅವರು ಜೈಲಿಗೆ ಹೋಗಿದ್ದರು. ಆಗಲೇ ಅವರು ಬಿಗ್​ ಬಾಸ್​ ಕಾರ್ಯಕ್ರಮವನ್ನು ಪೂರ್ತಿಯಾಗಿ ನೋಡಿದ್ದು. ಆ ಕುರಿತು ಮಾತನಾಡುವಾಗ ಜೈಲಿನ ವಿಷಯ ಪ್ರಸ್ತಾಪ ಆಯಿತು.

‘ಮೊದಲು ಇದು ಸ್ಕ್ರಿಪ್ಟೆಡ್​ ಶೋ ಅಂತ ನನಗೆ ಅನಿಸಿತ್ತು. ನಾನು ಬಿಗ್​ ಬಾಸ್​ ಸೀಸನ್​ 10 ನೋಡಿದ್ದ ಜೈಲಿನಲ್ಲಿ. ಆಗ ವರ್ತೂರು ಸಂತೋಷ್​ ಕೂಡ ಜೈಲಿಗೆ ಬಂದಿದ್ದರು. ಅವರು ಬಂದಿದ್ದರಿಂದ ಇದು ಸ್ಕ್ರಿಪ್ಟೆಡ್​ ಅಲ್ಲ ಅಂತ ತಿಳಿಯಿತು. ಕಾಮನ್ ಸೆನ್ಸ್​ ಇರುವವರಿಗೆ ಇದು ಗೊತ್ತಾಗುತ್ತದೆ. ಕಳೆದ ಸೀಸನ್​ ಅನ್ನು ನಾನು ಪೂರ್ತಿಯಾಗಿ ನೋಡಿದ್ದರಿಂದ ಈ ಬಾರಿ ಬಿಗ್​ ಬಾಸ್​ಗೆ ಬರಲು ಒಪ್ಪಿಕೊಂಡೆ’ ಎಂದರು ಚೈತ್ರಾ ಕುಂದಾಪುರ.

‘ಬಿಗ್​ ಬಾಸ್​ಗೆ ಹೊರಗಡೆ ಎಷ್ಟು ಫ್ಯಾನ್ ಫಾಲೋಯಿಂಗ್​ ಇದೆಯೋ ಅದಕ್ಕಿಂತಲೂ ಜಾಸ್ತಿ ಫ್ಯಾನ್​ ಫಾಲೋಯಿಂಗ್​ ಜೈಲಿನ ಒಳಗೂ ಇದೆ ಅಂತ ನನಗೆ ಅನಿಸುತ್ತೆ’ ಎಂದು ಚೈತ್ರಾ ಹೇಳಿದಾಗ, ‘ಇದರ ಬಗ್ಗೆ ಹೇಗೆ ಪ್ರತಿಕ್ರಿಯೆ ನೀಡಬೇಕೋ ನನಗೆ ಗೊತ್ತಿಲ್ಲ’ ಎಂದರು ಸುದೀಪ್​. ‘ಇದು ಕೂಡ ಕಾಂಟ್ರವರ್ಸಿ ಆಗಬಹುದೇನೋ’ ಎಂದು ಚೈತ್ರಾ ಪ್ರತಿಕ್ರಿಯಿಸಿದರು. ‘ಹಾಗೇನೂ ಇಲ್ಲ. ಇದರಲ್ಲಿ ಕಾಂಟ್ರವರ್ಸಿ ಏನಿದೆ? ನಮ್ಮ ಕಾರ್ಯಕ್ರಮವನ್ನು ಎಲ್ಲ ಕಡೆ ಜನರು ನೋಡಿ ಮೆಚ್ಚುತ್ತಿದ್ದಾರೆ. ಅದಕ್ಕೆ ನಮಗೆ ಖುಷಿ ಇದೆ. ಈ ಕಾರ್ಯಕ್ರಮಕ್ಕೂ ಜೈಲಿಗೂ ಇರುವ ಸಂಬಂಧ ಏನು ಅಂತ ನಮಗೂ ಈಗಲೇ ಗೊತ್ತಾಗುತ್ತಿರುವುದು’ ಎಂದರು ಸುದೀಪ್​.

ಇದನ್ನೂ ಓದಿ: ತುಕಾಲಿ ಸಂತು ಪತ್ನಿ ಮಾನಸಾಗೆ ಸವಾಲು ಹಾಕಿ ಬಿಗ್​ ಬಾಸ್​ಗೆ ಬಂದ ನಟಿ ಹಂಸಾ

ಜೈತ್ರಾ ಕುಂದಾಪುರ ಮಾತ್ರವಲ್ಲದೇ ಲಾಯರ್​ ಜಗದೀಶ್​ ಕೂಡ ಈ ಮೊದಲು ಜೈಲಿಗೆ ಹೋಗಿದ್ದರು. ಅವರು ಕೂಡ ಜೈಲಿನಲ್ಲಿ ಇದ್ದಾಗಲೇ ಬಿಗ್​ ಬಾಸ್​ ಕಾರ್ಯಕ್ರಮವನ್ನು ನೋಡಿದ್ದರು. ಈಗ ಅವರು ‘ಬಿಗ್​ ಬಾಸ್​ ಕನ್ನಡ ಸೀಸನ್​ 11’ ಕಾರ್ಯಕ್ರಮದ ಸ್ಪರ್ಧಿಯಾಗಿದ್ದಾರೆ. ಒಟ್ಟು 17 ಮಂದಿ ಈ ಬಾರಿ ಸ್ಪರ್ಧಿಸುತ್ತಿದ್ದಾರೆ. ಸಿನಿಮಾ, ಸೀರಿಯಲ್​, ಕ್ರೀಡೆ, ಸೋಶಿಯಲ್​ ಮೀಡಿಯಾದಲ್ಲಿ ಖ್ಯಾತಿ ಗಳಿಸಿದವರು ದೊಡ್ಮನೆಗೆ ಎಂಟ್ರಿ ಪಡೆದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಪೆಟ್ರೋಲ್ ಖಾಲಿ ವದಂತಿ: ಚಾಮರಾಜನಗರದಲ್ಲಿ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್ ಖಾಲಿ ವದಂತಿ: ಚಾಮರಾಜನಗರದಲ್ಲಿ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್ ಉಳಿಸಲು ವರ್ಕ್ ಫ್ರಂ ಹೋಂ? ಕೋವಿಡ್ ರೂಲ್ಸ್ ಮತ್ತೆ ಜಾರಿ ಸಾಧ್ಯತೆ!
ಪೆಟ್ರೋಲ್ ಉಳಿಸಲು ವರ್ಕ್ ಫ್ರಂ ಹೋಂ? ಕೋವಿಡ್ ರೂಲ್ಸ್ ಮತ್ತೆ ಜಾರಿ ಸಾಧ್ಯತೆ!
ದುರ್ಗಾದೇವಿಗೆ ವೀಳ್ಯದೆಲೆ ಹಾರ ಅಥವಾ ಅಲಂಕಾರದ ಏಕೆ ಮಾಡಬೇಕು?
ದುರ್ಗಾದೇವಿಗೆ ವೀಳ್ಯದೆಲೆ ಹಾರ ಅಥವಾ ಅಲಂಕಾರದ ಏಕೆ ಮಾಡಬೇಕು?
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನಯೋಗ!
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನಯೋಗ!
ರೀಲ್ಸ್​ಗಾಗಿ ಮೊಸಳೆಯ ಬಾಲ ಹಿಡಿದು ಹಿಂಸೆ ನೀಡಿದ ಯುವಕ; ವಿಡಿಯೋ ವೈರಲ್
ರೀಲ್ಸ್​ಗಾಗಿ ಮೊಸಳೆಯ ಬಾಲ ಹಿಡಿದು ಹಿಂಸೆ ನೀಡಿದ ಯುವಕ; ವಿಡಿಯೋ ವೈರಲ್
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು
ಬಸ್​​ನೊಳಗಿಂದ ತಿಂಡಿಗಾಗಿ ದುಡ್ಡು ಕೊಟ್ಟ ಯುವಕನಿಗೆ ವ್ಯಾಪಾರಿ ಮಾಡಿದ್ದೇನು?
ಬಸ್​​ನೊಳಗಿಂದ ತಿಂಡಿಗಾಗಿ ದುಡ್ಡು ಕೊಟ್ಟ ಯುವಕನಿಗೆ ವ್ಯಾಪಾರಿ ಮಾಡಿದ್ದೇನು?
ಹಂಸಲೇಖ, ರವಿಚಂದ್ರನ್ ನಡುವೆ ಆ ಒಂದು ಹಾಡಿಗಾಗಿ ಮೂಡಿತ್ತು ಭಿನ್ನಾಭಿಪ್ರಾಯ
ಹಂಸಲೇಖ, ರವಿಚಂದ್ರನ್ ನಡುವೆ ಆ ಒಂದು ಹಾಡಿಗಾಗಿ ಮೂಡಿತ್ತು ಭಿನ್ನಾಭಿಪ್ರಾಯ
ಬೈಎಲೆಕ್ಷನ್: 2 ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಜಯ ಸಾಧಿಸುತ್ತೆ ಎಂದ ಸುರ್ಜೇವಾ
ಬೈಎಲೆಕ್ಷನ್: 2 ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಜಯ ಸಾಧಿಸುತ್ತೆ ಎಂದ ಸುರ್ಜೇವಾ
ಸ್ಯಾಂಕಿ ಕೆರೆ ಮುಂದೆ 800 ಕೆಜಿ ತೂಕದ ಪುನೀತ್ ಕಂಚಿನ ಪ್ರತಿಮೆ ಲೋಕಾರ್ಪಣೆ
ಸ್ಯಾಂಕಿ ಕೆರೆ ಮುಂದೆ 800 ಕೆಜಿ ತೂಕದ ಪುನೀತ್ ಕಂಚಿನ ಪ್ರತಿಮೆ ಲೋಕಾರ್ಪಣೆ