AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಶ್ವಿನಿ ಬಳಸಿದ ಕೆಟ್ಟ ಪದಗಳ ಆಡಿಯೋ ಹಾಕಿದ ಸುದೀಪ್; ಕೇಳೋಕೆ ಸಾಧ್ಯವಿಲ್ಲ

ಬಾಸ್ ಮನೆಯಲ್ಲಿ ಅಶ್ವಿನಿ ಗೌಡ ಅವರು ಉಪವಾಸ ಮಾಡಿದರು. ತಮಗೆ ಅವಮಾನ ಆಗಿದೆ ಎಂದರು. ‘ಮಹಿಳೆಯರಿಗೆ ಅವಮಾನ ಆಗುತ್ತಿಲ್ಲ. ಆ ರೀತಿ ಆದರೆ, ಬಿಗ್ ಬಾಸ್ ಮಧ್ಯ ಬರುತ್ತಾರೆ. ಆ ಬಗ್ಗೆ ಪ್ರಶ್ನೆ ಮಾಡಬೇಡಿ. ಪದೇ ಪದೇ ಇದನ್ನು ಹೇಳಬೇಡಿ’ ಎಂದು ಸುದೀಪ್ ಅವರು ಅಶ್ವಿನಿಗೆ ಹೇಳಿದರು.

ಅಶ್ವಿನಿ ಬಳಸಿದ ಕೆಟ್ಟ ಪದಗಳ ಆಡಿಯೋ ಹಾಕಿದ ಸುದೀಪ್; ಕೇಳೋಕೆ ಸಾಧ್ಯವಿಲ್ಲ
ಅಶ್ವಿನಿ-ಸುದೀಪ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Nov 22, 2025 | 10:35 PM

Share

ಬಿಗ್ ಬಾಸ್ ಮನೆಯಲ್ಲಿ ಈ ವಾರ ಸಾಕಷ್ಟು ಬೆಳವಣಿಗೆಗಳು ನಡೆದವು. ಅದರಲ್ಲಿ ಒಂದು ವಿಷಯ ಪ್ರಮುಖವಾಗಿ ಚರ್ಚೆ ಆಯಿತು. ಅದುವೇ ಅಶ್ವಿನಿ ಹಾಗೂ ರಘು ಜಗಳ ಎಂದರೂ ತಪ್ಪಾಗಲಿಕ್ಕಿಲ್ಲ. ಇಬ್ಬರೂ ಸಾಕಷ್ಟು ಕಿತ್ತಾಡಿಕೊಂಡರು. ಮನೆ ಕೆಲಸ ಮಾಡುವ ವಿಷಯಕ್ಕೆ ಸಂಬಂಧಿಸಿ ಈ ಫೈಟ್ ನಡೆದಿತ್ತು. ಆದರೆ, ಇದು ಸಾಕಷ್ಟು ಅಶಾಂತಿಗೆ ಕಾರಣ ಆಯಿತು. ಅಲ್ಲದೆ, ಅಶ್ವಿನಿ ವುಮನ್ ಕಾರ್ಡ್ ಪ್ಲೇ ಮಾಡಿದರು. ಈಗ ಸುದೀಪ್ ಅವರು ಅಶ್ವಿನಿಗೆ ಪಾಠ ಮಾಡಿದ್ದಾರೆ.

ಈ ವಾರ ಬಿಗ್ ಬಾಸ್ ಮನೆಯಲ್ಲಿ ಅಶ್ವಿನಿ ಗೌಡ ಹಾಗೂ ರಘು ನಡುವೆ ಜಗಳ ಆಯಿತು. ಕೆಲಸ ಮಾಡಿ ಎಂಬ ವಿಷಯಕ್ಕೆ ಜಗಳ ನಡೆಯಿತು. ಈ ವೇಳೆ ರಘು ಅವರ ಧ್ವನಿ ಸ್ವಲ್ಪ ಏರಿಕೆ ಆಗಿತ್ತು. ಆದರೆ, ಇದಕ್ಕೆ ಅಶ್ವಿನಿ ಒಪ್ಪಿಲ್ಲ. 10 ನಿಮಿಷ ಬಿಟ್ಟು ಬರುತ್ತೇನೆ ಎಂದು ಹೇಳಿದರು. ಆದರೆ, ಇದಕ್ಕೆ ರಘು ಅವರು ಒಪ್ಪಿಲ್ಲ. ಇದು ಜಗಳಕ್ಕೆ ಕಾರಣವಾಗಿತ್ತು.

ಈ ವಿಷಯ ವೀಕೆಂಡ್​ನಲ್ಲಿ ಚರ್ಚೆ ಆಗಿದೆ. ಈ ಚರ್ಚೆಯ ವೇಳೆ ಸುದೀಪ್ ಅವರು ಅಶ್ವಿನಿ ಗೌಡ ಬಳಿ ಪ್ರಶ್ನೆ ಒಂದನ್ನು ಮಾಡಿದ್ದರು. ‘ರಘು ಅವರು ಕ್ಯಾಪ್ಟನ್ ಆಗಿದ್ದಾರೆ. ಅದಕ್ಕೆ ಗೌರವ ಕೊಡಬಹುದಿತ್ತಲ್ಲ’ ಎಂದು ಸುದೀಪ್ ಕೇಳಿದರು. ಏಕೆಂದರೆ ಕ್ಯಾಪ್ಟನ್ ಮನೆಯನ್ನು ನೋಡಿಕೊಳ್ಳಲು ಇರುವವರು ಅವರಿಗೆ ಗೌರವ ಕೊಡಬೇಕು ಎಂಬುದು ಸುದೀಪ್ ಅವರ ಅಭಿಪ್ರಾಯ ಆಗಿತ್ತು.

ಇನ್ನು, ಬಿಗ್ ಬಾಸ್ ಮನೆಯಲ್ಲಿ ಅಶ್ವಿನಿ ಗೌಡ ಅವರು ಉಪವಾಸ ಮಾಡಿದರು. ತಮಗೆ ಅವಮಾನ ಆಗಿದೆ ಎಂದರು. ‘ಮಹಿಳೆಯರಿಗೆ ಅವಮಾನ ಆಗುತ್ತಿಲ್ಲ. ಆ ರೀತಿ ಆದರೆ, ಬಿಗ್ ಬಾಸ್ ಮಧ್ಯ ಬರುತ್ತಾರೆ. ಆ ಬಗ್ಗೆ ಪ್ರಶ್ನೆ ಮಾಡಬೇಡಿ. ಪದೇ ಪದೇ ಇದನ್ನು ಹೇಳಬೇಡಿ’ ಎಂದು ಸುದೀಪ್ ಅವರು ಅಶ್ವಿನಿಗೆ ಹೇಳಿದರು.

ಇದನ್ನೂ ಓದಿ: ಎಮೋಷನಲ್ ಬ್ಲಾಕ್​​ಮೇಲ್ ಮಾಡ್ತೀರ? ಮತ್ತೆ ಅಶ್ವಿನಿಗೆ ಕಿಚ್ಚನ ಕ್ಲಾಸ್

ಇನ್ನು, ಅಶ್ವಿನಿ ಬಳಸಿದ ಕೆಟ್ಟ ಪದಗಳ ಆಡಿಯೋಗಳನ್ನು ಹಾಕಿದರು. ‘ಅಮಾವಾಸ್ಯೆ, ಜೋಕರ್, ಕಾರ್ಟೂನ್, ಫ್ರೀ ಪ್ರಾಡಕ್ಟ್, ಯಾವನೋ ನೀನು, ಹೋಗಲೋ, ಮುಚ್ಕೊಂಡು ಮಲ್ಕೊ, ಬೇಜಾನ್ ಐತಿ ಗಾಂಚಲಿ’ ಎಂಬಿತ್ಯಾದಿ ಶಬ್ದ ಬಳಸಿದ್ದರು. ಇದನ್ನು ಸುದೀಪ್ ಅವರು ಹಾಕಿ ಬಿಟ್ಟರು. ಆಗ ಅಶ್ವಿನಿ, ‘ನಾನು ತಪ್ಪು ಮಾಡಿದಾಗ ಒಪ್ಪಿಕೊಂಡಿದ್ದೇನೆ’ ಎಂದು ಹೇಳಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ