AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುದೀಪ್​ ಇಲ್ಲದ ಬಿಗ್​ ಬಾಸ್ ಊಹಿಸಿಕೊಳ್ಳಲು ಸಾಧ್ಯವೇ? ಹೇಗಿರತ್ತೆ ನೋಡಿ ಸ್ಪರ್ಧಿಗಳ ಪರಿಸ್ಥಿತಿ

‘ಕಾರಣಾಂತರಗಳಿಂದ ಸುದೀಪ್ ಅವರು ಕೇವಲ ದೂರವಾಣಿ ಮೂಲಕ ಮಾತ್ರ ಈ ಕಾರ್ಯಕ್ರಮಕ್ಕೆ ಬರುತ್ತಾರೆ’ ಎಂದು ಅಕುಲ್​ ಬಾಲಾಜಿ ಹೇಳುತ್ತಿದ್ದಂತೆಯೇ ದೊಡ್ಮನೆಯ ಸದಸ್ಯರ ಮುಖ ಬಾಡಿಹೋಯಿತು.

ಸುದೀಪ್​ ಇಲ್ಲದ ಬಿಗ್​ ಬಾಸ್ ಊಹಿಸಿಕೊಳ್ಳಲು ಸಾಧ್ಯವೇ? ಹೇಗಿರತ್ತೆ ನೋಡಿ ಸ್ಪರ್ಧಿಗಳ ಪರಿಸ್ಥಿತಿ
ಸುದೀಪ್​ ಇಲ್ಲದ ಬಿಗ್​ ಬಾಸ್ ಊಹಿಸಿಕೊಳ್ಳಲು ಸಾಧ್ಯವೇ? ಹೇಗಿರತ್ತೆ ನೋಡಿ ಸ್ಪರ್ಧಿಗಳ ಪರಿಸ್ಥಿತಿ
TV9 Web
| Edited By: |

Updated on: Sep 04, 2021 | 1:52 PM

Share

ಕನ್ನಡ ಬಿಗ್​ ಬಾಸ್​ ಈವರೆಗೂ 8 ಸೀಸನ್​ಗಳನ್ನು ಯಶಸ್ವಿಯಾಗಿ ಮುಗಿಸಿದೆ. ಪ್ರತಿ ಸೀಸನ್​ನಲ್ಲೂ ಕಿಚ್ಚ ಸುದೀಪ್​ ಅವರು ನಿರೂಪಣೆಯ ಜವಾಬ್ದಾರಿಯನ್ನು ನಿಭಾಯಿಸಿದ್ದಾರೆ. ಅವರ ನಿರೂಪಣೆ ಎಂದರೆ ಅಭಿಮಾನಿಗಳಿಗೆ ಸಖತ್ ಇಷ್ಟ. ಆ ಕಾರಣಕ್ಕಾಗಿಯೇ ವೀಕೆಂಡ್​ನಲ್ಲಿ ಬಿಗ್​ ಬಾಸ್​ ನೋಡುವವರ ಸಂಖ್ಯೆ ದೊಡ್ಡದಿದೆ. ವೀಕ್ಷಕರಿಗೆ ಮಾತ್ರವಲ್ಲದೆ, ಬಿಗ್​ ಬಾಸ್​ ಸ್ಪರ್ಧಿಗಳಿಗೂ ಕೂಡ ಸುದೀಪ್​ ಇದ್ದರೆ ಉತ್ಸಾಹ ಗರಿಗೆದರುತ್ತದೆ. ಒಂದು ವೇಳೆ ಈ ಶೋನಲ್ಲಿ ಸುದೀಪ್​ ಇಲ್ಲದಿದ್ದರೆ ಪರಿಸ್ಥಿತಿ ಹೇಗಿರುತ್ತದೆ? ಬಿಗ್​ ಬಾಸ್​ ಮಿನಿ ಸೀಸನ್​ನ ವೇದಿಕೆಯಲ್ಲಿ ಇಂಥದ್ದೊಂದು ಪ್ರಶ್ನೆ ಹುಟ್ಟಿಕೊಂಡಿತು.

‘ಬಿಗ್​ ಬಾಸ್​ ಕನ್ನಡ ಸೀಸನ್​ 8’ ಮುಗಿದ ಕೂಡಲೇ ಬಿಗ್​ ಬಾಸ್​ ಮಿನಿ ಸೀಸನ್​ ಆರಂಭ ಆಗಿತ್ತು. ಕಲರ್ಸ್​ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಧಾರಾವಾಹಿಗಳ 15 ಸೆಲೆಬ್ರಿಟಿಗಳಿಗೆ ದೊಡ್ಮನೆ ಪ್ರವೇಶಿಸುವ ಅವಕಾಶ ಸಿಕ್ಕಿತ್ತು. 6 ದಿನಗಳ ಕಾಲ ಅವರೆಲ್ಲ ಬಿಗ್​ ಬಾಸ್​ ಮನೆಯಲ್ಲಿ ಕಾಲ ಕಳೆದಿದ್ದಾರೆ. ಅದರ ಫಿನಾಲೆ ಶೋಗೆ ಸುದೀಪ್ ಅವರು ನಿರೂಪಣೆ ಮಾಡುತ್ತಾರೆ ಎಂದು ಮೊದಲೇ ತಿಳಿಸಲಾಗಿತ್ತು. ಆದರೆ ಕೊನೇ ಕ್ಷಣದಲ್ಲಿ ಒಂದು ಚಮಕ್​ ನೀಡಲಾಯಿತು.

‘ಕಾರಣಾಂತರಗಳಿಂದ ಸುದೀಪ್ ಅವರು ಕೇವಲ ದೂರವಾಣಿ ಮೂಲಕ ಮಾತ್ರ ಈ ಕಾರ್ಯಕ್ರಮಕ್ಕೆ ಬರುತ್ತಾರೆ’ ಎಂದು ಅಕುಲ್​ ಬಾಲಾಜಿ ಹೇಳುತ್ತಿದ್ದಂತೆಯೇ ದೊಡ್ಮನೆಯ ಸದಸ್ಯರ ಮುಖ ಬಾಡಿಹೋಯಿತು. ಫಿನಾಲೆ ವೇದಿಕೆಯಲ್ಲಿ ಸುದೀಪ್​ ಅವರನ್ನು ನೋಡಬೇಕು, ಅವರೊಂದಿಗೆ ಮಾತನಾಡಬೇಕು ಎಂದುಕೊಂಡಿದ್ದ ಎಲ್ಲ ಸ್ಪರ್ಧಿಗಳಿಗೂ ತೀವ್ರ ನಿರಾಸೆ ಆಯಿತು. ಆದರೆ ಅದು ಸ್ವಲ್ಪ ಹೊತ್ತು ಮಾತ್ರ. ಸುಮ್ಮನೆ ಪ್ರ್ಯಾಂಕ್​ ಮಾಡಲು ಹೀಗೆ ಹೇಳಲಾಗಿತ್ತು ಎಂಬುದನ್ನು ನಂತರ ತಿಳಿಸಲಾಯಿತು. ಆಗ ಬಿಗ್​ ಬಾಸ್​ ಸ್ಪರ್ಧಿಗಳ ಮುಖ ಅರಳಿತು.

ಬಿಗ್​ ಬಾಸ್​ ಮಿನಿ ಸೀಸನ್​ನ ಫಿನಾಲೆ ಎಪಿಸೋಡ್​ಗಳು ಶನಿವಾರ (ಸೆಪ್ಟೆಂಬರ್​ 4) ಮತ್ತು ಭಾನುವಾರ (ಸೆಪ್ಟೆಂಬರ್​ 5) ಮಧ್ಯಾಹ್ನ 3 ಗಂಟೆಗೆ ಪ್ರಸಾರ ಆಗುತ್ತಿವೆ. ಕಿರಣ್​ ರಾಜ್​, ಕೌಸ್ತುಭ, ಗಗನ್​ ಚಿನ್ನಪ್ಪ, ವೈಷ್ಣವಿ, ನಿರಂಜನ್ ದೇಶಪಾಂಡೆ, ಅಕುಲ್​ ಬಾಲಾಜಿ, ರಮೋಲಾ ಸೇರಿದಂತೆ ಅನೇಕರು ಈ ಮಿನಿ ಸೀಸನ್​ನಲ್ಲಿ ಪಾಲ್ಗೊಂಡಿದ್ದಾರೆ. ಅದ್ದೂರಿ ವೇದಿಕೆಯಲ್ಲಿ ಫಿನಾಲೆ ಕಾರ್ಯಕ್ರಮ ನಡೆದಿದೆ. ಸೀಸನ್​ 8ರ ಸ್ಪರ್ಧಿಗಳು ಈ ಸಂಚಿಕೆಯಲ್ಲಿ ಡ್ಯಾನ್ಸ್​, ಹಾಡಿನ ಮೂಲಕ ಭರ್ಜರಿ ಮನರಂಜನೆ ನೀಡಿದ್ದಾರೆ.

ಇದನ್ನೂ ಓದಿ:

ತಾಯಿ ಚಾಮುಂಡೇಶ್ವರಿ ಆಶೀರ್ವಾದ ಪಡೆದ ಸುದೀಪ್​; ಕಿಚ್ಚನ ದರ್ಶನಕ್ಕೆ ಮುಗಿಬಿದ್ದ ಫ್ಯಾನ್ಸ್​

ಕಿಚ್ಚ ಸುದೀಪ್​ ಜನ್ಮದಿನ: ಬರಬೇಡಿ ಎಂದರೂ ಮನೆ ಬಾಗಿಲಿಗೆ ಬಂದು ಕಾದ ಫ್ಯಾನ್ಸ್​

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್